Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:8 - ಕನ್ನಡ ಸಮಕಾಲಿಕ ಅನುವಾದ

8 ತತ್ವಜ್ಞಾನವೂ ನಿರರ್ಥಕವೂ ವಂಚನೆಯೂ ಆಗಿರುವ ಮನುಷ್ಯರ ಸಂಪ್ರದಾಯದಿಂದ ನಿಮ್ಮಲ್ಲಿ ಯಾರಾದರೂ ಬಂದು ನಿಮ್ಮನ್ನು ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಅಂಥವರು ಕ್ರಿಸ್ತ ಯೇಸುವನ್ನು ಅನುಸರಿಸದೆ, ಪ್ರಾಪಂಚಿಕ ಬಾಲಬೋಧನೆಗಳನ್ನೂ ಅನುಸರಿಸುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪ್ರಪಂಚದ ಪ್ರಬಲ ಶಕ್ತಿಗಳಿಂದಲೂ ಮಾನವ ವಿವೇಚನೆಯ ಶುಷ್ಕತರ್ಕ ಸಿದ್ಧಾಂತಗಳಿಂದಲೂ ಯಾರೂ ನಿಮ್ಮನ್ನು ಮೋಸಗೊಳಿಸಿ ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಇವುಗಳು ಪ್ರಾಪಂಚಿಕ ಪಾರಂಪರ್ಯಕ್ಕೆ ಮತ್ತು ವಿಶ್ವದ ಮೂಲಭೂತ ಶಕ್ತಿಗಳಿಗೆ ಸಂಬಂಧಿಸಿದವುಗಳೇ ಹೊರತು ಯೇಸುಕ್ರಿಸ್ತರಿಗಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನಬೋಧೆಯಿಂದ ನಿಮ್ಮ ಮನಸ್ಸನ್ನು ಕೆಡಿಸಿ ನಿಮ್ಮನ್ನು ವಶಮಾಡಿಕೊಂಡಾರು, ಎಚ್ಚರಿಕೆಯಾಗಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯಾರೂ ನಿಮ್ಮನ್ನು ಮೋಸಕರವಾದ ಮತ್ತು ನಿರರ್ಥಕವಾದ ತತ್ವಜ್ಞಾನ ಬೋಧನೆಯಿಂದ ತಪ್ಪು ದಾರಿಗೆ ನಡೆಸದಂತೆ ಜಾಗ್ರತೆಯಿಂದಿರಿ. ಆ ತತ್ವಜ್ಞಾನಗಳು ಜನರಿಂದ ಬಂದುವೇ ಹೊರತು ಕ್ರಿಸ್ತನಿಂದಲ್ಲ. ಅವು ಈ ಲೋಕದ ಜನರ ನಿರರ್ಥಕ ತತ್ವಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತುಮ್ಕಾ ಕೊನ್‍ತರಬಿ ಪಸ್ವುನ್ ಫಾಯ್ದ್ಯಾಕ್ ನಸಲ್ಲ್ಯಾ ತತ್ವಜ್ಞಾನಾಂಚ್ಯಾ ಶಿಕಾಪಾಚ್ಯಾ ವಾಟೆಕ್ ಚಲ್ವಿನಸಿ ಸಾರ್ಕೆ ಉಶಾರ್ಕಿನ್ ರ್‍ಹಾವಾ. ತಿ ಹ್ಯಾ ಜಗಾತ್ಲಿ ಫಾಯ್ದ್ಯಾಕ್ ಪಡಿನಸಲ್ಲಿ ಶಿಕಾಪಾ, ಮಾನ್ಸಾಂಚ್ಯಾಕ್ನಾ ಯೆಲ್ಲಿ; ಕ್ರಿಸ್ತಾಕ್ನಾ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:8
38 ತಿಳಿವುಗಳ ಹೋಲಿಕೆ  

ತಿಮೊಥೆಯನೇ, ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡು. ದೇವಭಕ್ತಿಗೆ ಅನುಗುಣವಾಗದ ಹರಟೆ ಮಾತುಗಳಿಗೂ ಜ್ಞಾನದಿಂದ ವಿಚಾರಪಡಿಸುವ ಸುಳ್ಳು ತರ್ಕಗಳಿಗೂ ಒಳಪಡದಿರು.


ಪ್ರಯೋಜನವಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ವಂಚಿಸದಿರಲಿ. ಏಕೆಂದರೆ ಇಂಥವುಗಳ ದೆಸೆಯಿಂದ ದೇವರ ಕೋಪಾಗ್ನಿಯು ಅವರಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.


“ಕುರಿಯ ವೇಷಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆ. ಏಕೆಂದರೆ ಅವರು ಒಳಗೆ ಕ್ರೂರವಾದ ತೋಳಗಳಾಗಿದ್ದಾರೆ.


ಈಗಲಾದರೋ ನೀವು ದೇವರನ್ನು ಅರಿತುಕೊಂಡಿದ್ದೀರಿ. ನಿಜವಾಗಿ ಹೇಳಬೇಕಾದರೆ, ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲಪಾಠಗಳಿಗೆ ಪುನಃ ಗುಲಾಮರಾಗಬೇಕೆಂದು ಅಪೇಕ್ಷಿಸಿ, ಅವುಗಳಿಗೆ ನೀವು ತಿರುಗಿಕೊಳ್ಳುವುದು ಹೇಗೆ?


ಪ್ರಾಪಂಚಿಕ ಬಾಲಬೋಧನೆಗಳಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದೀರಿ. ಹಾಗಾದರೆ ನೀವು ಇನ್ನೂ ಪ್ರಾಪಂಚಿಕ ನಿಯಮಗಳಿಗೆ ಅಧೀನರಾಗಿರುವುದೇಕೆ?


ಆದರೆ ದುಷ್ಟರೂ ಇತರರಂತೆ ನಟಿಸುವ ವೇಷಧಾರಿಗಳೂ ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ಹೆಚ್ಚಾದ ಕೆಟ್ಟತನಕ್ಕೆ ಸಾಗುವರು.


ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳೂ ನಿಮ್ಮ ಶಕುನದವರೂ ನಿಮಗೆ ಮೋಸಮಾಡದಿರಲಿ. ನೀವು ಕೇಳುವ ನಿಮ್ಮ ಕನಸುಗಳಿಗೆ ಕಿವಿಗೊಡಬೇಡಿರಿ.


ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವುದರಿಂದ ನಿಯಮರಹಿತರ ಸೆಳೆಯುವಿಕೆಗೆ ಮರುಳಾಗಿ ನಿಮ್ಮ ಸ್ಥಿರತೆಯಿಂದ ಬಿದ್ದುಹೋಗದಂತೆ ಎಚ್ಚರಿಕೆಯಿಂದಿರಿ.


ವಿಚಿತ್ರವಾದ ವಿವಿಧ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ಏಕೆಂದರೆ ಕೃಪೆಯ ಮೂಲಕ ಹೃದಯವನ್ನು ಬಲಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳಲ್ಲಿ ಮಗ್ನರಾದವರು, ಅವುಗಳಿಂದ ಏನೂ ಪ್ರಯೋಜನ ಹೊಂದಲಿಲ್ಲ.


ಪರಿಪೂರ್ಣ ಪ್ರತಿಫಲವನ್ನು ನೀವು ಹೊಂದುವಂತೆ ನಾವು ಪ್ರಯಾಸಪಟ್ಟು ಮಾಡಿದವುಗಳು ನಷ್ಟವಾಗದಂತೆ ಎಚ್ಚರವಹಿಸಿರಿ.


ಅದರಂತೆಯೇ ನಾವು ಬಾಲಕರಾಗಿದ್ದಾಗ ಲೋಕದ ಮೂಲಪಾಠಗಳಿಗೆ ಗುಲಾಮರಾಗಿದ್ದೆವು.


ನಾವು ದೈವಜ್ಞಾನವನ್ನು ವಿರೋಧಿಸುವ ವಾಗ್ವಾದಗಳನ್ನೂ ಪ್ರತಿಯೊಂದು ನಟನೆಯನ್ನೂ ಧ್ವಂಸಮಾಡುತ್ತೇವೆ. ಪ್ರತಿಯೊಂದು ಯೋಚನೆಗಳನ್ನು ಕ್ರಿಸ್ತ ಯೇಸುವಿಗೆ ವಿಧೇಯವಾಗುವಂತೆ ಸೆರೆಹಿಡಿಯುವವರು ಆಗಿದ್ದೇವೆ.


ಕೆಲವರು ತಾವು ದರ್ಶನ ಕಂಡದ್ದರ ಬಗ್ಗೆ ಬಹಳ ಮಾತನಾಡಿ, ತಮ್ಮ ನಿರರ್ಥಕವಾದ ಪ್ರಾಪಂಚಿಕ ಬುದ್ಧಿಯಿಂದ ಉಬ್ಬಿಕೊಳ್ಳುತ್ತಾರೆ. ಇಂಥವರು ಕಪಟ ದೀನತೆಯಲ್ಲಿಯೂ ದೂತರ ಆರಾಧನೆಯಲ್ಲಿಯೂ ಆನಂದಿಸುವವರಾಗಿರುತ್ತಾರೆ. ಇವರು ನಿಮ್ಮ ಬಳಿಗೆ, ನೀವು ಪ್ರತಿಫಲಹೊಂದದೆ ಇರುವಂತೆ ಅಡ್ಡಿಮಾಡಲು ಅವಕಾಶಕೊಡಬೇಡಿರಿ.


ನಿಮ್ಮ ಪೂರ್ವಿಕರಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿಹೋಗುವ ಬೆಳ್ಳಿ, ಬಂಗಾರದಿಂದಲ್ಲ.


ಪ್ರಿಯರೇ, ನೀವು ಕಲಿತುಕೊಂಡ ಬೋಧನೆಗೆ ವಿರೋಧವಾಗಿರುವ ಭೇದಗಳನ್ನೂ ಅಭ್ಯಂತರಗಳನ್ನೂ ಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರಿಂದ ದೂರವಾಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನೀವಾದರೋ ಕ್ರಿಸ್ತನನ್ನು ಆ ರೀತಿಯಾಗಿ ಅರಿತುಕೊಳ್ಳಲಿಲ್ಲ.


ಇದಲ್ಲದೆ ನಾನು ನನ್ನ ಪಿತೃಗಳ ಸಂಪ್ರದಾಯಗಳಲ್ಲಿ ಅತ್ಯಂತ ಅಭಿಮಾನವುಳ್ಳವನಾಗಿ ಸಮಕಾಲಿಕರಾದ ನನ್ನ ಜನರೊಳಗೆ ಅನೇಕರಿಗಿಂತ ಯೆಹೂದ್ಯ ವಿಶ್ವಾಸದಲ್ಲಿ ಎಷ್ಟೋ ಪ್ರಗತಿಯನ್ನು ಹೊಂದಿದವನಾಗಿದ್ದೆನು.


ನಾಯಿಗಳಂತೆ ವರ್ತಿಸುವವರಿಗೆ ಎಚ್ಚರಿಕೆ. ದುಷ್ಟಕಾರ್ಯಮಾಡುವವರಿಗೆ ಎಚ್ಚರಿಕೆ, ಸುಳ್ಳು ಸುನ್ನತಿಗಾಗಿ ವಾಗ್ವಾದಿಸುವವರಿಗೆ ಎಚ್ಚರಿಕೆ.


ಈಜಿಪ್ಟ್ ದೇಶದ ದಾಸತ್ವದ ಮನೆಯೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದ ಯೆಹೋವ ದೇವರನ್ನು ಮರೆಯದ ಹಾಗೆ ನೋಡಿಕೊಳ್ಳಿರಿ.


ಆಗ ಯೇಸು ಅವರಿಗೆ, “ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ಬಗ್ಗೆ ಎಚ್ಚರಿಕೆ ವಹಿಸಿ ಜಾಗರೂಕರಾಗಿರಿ,” ಎಂದು ಹೇಳಿದರು.


ಆದರೆ ಜನರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಏಕೆಂದರೆ ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಒಪ್ಪಿಸುವರು. ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು.


ಈ ಶಾಸನಗಳು ಮಾನವ ಆಜ್ಞೆಗಳ ಹಾಗೂ ಬೋಧನೆಗಳ ಅನುಸಾರವಾಗಿ ಬಳಕೆಯಿಂದ ಅಳಿದುಹೋಗುತ್ತವೆ!


ನೀವು, ಹಿಂದೆ ಇಹಲೋಕದ ಮಾರ್ಗಕ್ಕೆ ಅನುಸಾರವಾಗಿ ನಡೆದುಕೊಂಡು, ವಾಯುಮಂಡಲದ ಅಧಿಪತಿಯ ಆತ್ಮನಿಗನುಸಾರವಾಗಿದ್ದೀರಿ. ಆ ದುರಾತ್ಮವು ಈಗ ಅವಿಧೇಯತೆಯ ಮಕ್ಕಳಲ್ಲಿ ಕಾರ್ಯಮಾಡುತ್ತಿದೆ.


ಆದರೆ ಎಪಿಕೂರಿಯರು ಹಾಗೂ ಸ್ತೋಯಿಕರು ಎಂಬ ತತ್ವಜ್ಞಾನಿಗಳಲ್ಲಿ ಸಹ ಕೆಲವರು ಅವನೊಂದಿಗೆ ವಾಗ್ವಾದ ಮಾಡಲು ಪ್ರಾರಂಭಿಸಿ, “ಈ ಬಾಯಿಬಡುಕ ಏನು ಹೇಳಬೇಕೆಂದಿದ್ದಾನೆ?” ಎಂದರು. ಇನ್ನೂ ಕೆಲವರು, “ಅವನು ವಿದೇಶದ ದೇವರುಗಳ ಬಗ್ಗೆ ಪ್ರಸ್ತಾಪಿಸುವಂತೆ ತೋರುತ್ತದೆ,” ಎಂದರು. ಏಕೆಂದರೆ ಅವನು ಯೇಸುವನ್ನು ಮತ್ತು ಪುನರುತ್ಥಾನವನ್ನು ಕುರಿತ ಸುವಾರ್ತೆ ಸಾರುತ್ತಿದ್ದನು.


ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ, ಅವರಲ್ಲಿ ಕೆಲವರು ಪರಿಹಾಸ್ಯ ಮಾಡಿದರು. ಇತರರು, “ನಾವು ಇನ್ನೊಮ್ಮೆ ಈ ವಿಷಯದ ಮೇಲೆ ನೀನು ಮಾತನಾಡುವುದನ್ನು ಕೇಳುತ್ತೇವೆ,” ಎಂದರು.


ದ್ರಾಕ್ಷಿತೋಟಗಳನ್ನು ಹಾಳುಮಾಡುವ ನರಿಗಳನ್ನೂ ನರಿಮರಿಗಳನ್ನೂ ಹಿಡಿಯಿರಿ. ನಮ್ಮ ದ್ರಾಕ್ಷಿತೋಟಗಳಲ್ಲಿ ಹೂಗಳು ಅರಳಿವೆ.


ಆದರೆ ಈ ನಿಮ್ಮ ಸ್ವಾತಂತ್ರ್ಯವು ಬಲಹೀನರಿಗೆ ವಿಘ್ನವಾಗದಂತೆ ಜಾಗರೂಕರಾಗಿರಿ.


ಆದಕಾರಣ ದೃಢವಾಗಿ ನಿಂತಿದ್ದೇವೆಂದು ಭಾವಿಸುವ ನೀವು ಬೀಳದಿರುವಂತೆ ನೋಡಿಕೊಳ್ಳಿರಿ.


ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರಿಕೆ.


ಇಂಥ ಉಪದೇಶಗಳು ತಾವೇ ತಂದುಕೊಂಡ ಆರಾಧನೆಯಲ್ಲಿಯೂ ಸುಳ್ಳು ದೀನತ್ವದಲ್ಲಿಯೂ ದೇಹದಂಡನೆಯಲ್ಲಿಯೂ ಜ್ಞಾನದ ತೋರಿಕೆಯುಳ್ಳದ್ದಾಗಿರುವುದು ನಿಜವೇ. ಆದರೆ ಇವು ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸಲು ಪ್ರಯೋಜನವಿಲ್ಲದವುಗಳಾಗಿವೆ.


ಪ್ರಿಯರೇ, ದೇವರನ್ನು ಬಿಟ್ಟುಹೋಗುವ ಅವಿಶ್ವಾಸಯುಳ್ಳ ದುಷ್ಟ ಹೃದಯವು ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಿಂದ ನೋಡಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು