Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 3:11 - ಕನ್ನಡ ಸಮಕಾಲಿಕ ಅನುವಾದ

11 ಯೆಹೂದ್ಯರು ಯೆಹೂದ್ಯರಲ್ಲದವರು, ಸುನ್ನತಿ ಹೊಂದಿದವರು, ಸುನ್ನತಿ ಹೊಂದದವರು, ನಾಗರಿಕ, ಅನಾಗರಿಕ, ಆಳು, ಸ್ವತಂತ್ರರು ಎಂಬ ಭೇದವಿಲ್ಲ. ಆದರೆ ಕ್ರಿಸ್ತ ಯೇಸುವೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ, ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇದನ್ನು ಧರಿಸಿಕೊಂಡಿರುವದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿಕೊಂಡವರು ಸುನ್ನತಿಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ; ಮ್ಲೇಚ್ಫ ಹೂಣ ಎಂಬ ಹೆಸರುಗಳಿಲ್ಲ; ಆಳು ಒಡೆಯ ಎಂಬ ಭೇದವಿಲ್ಲ. ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈ ಹೊಸ ಜೀವನದಲ್ಲಿ ಗ್ರೀಕರ ಮತ್ತು ಯೆಹೂದ್ಯರ ಮಧ್ಯದಲ್ಲಾಗಲಿ, ಸುನ್ನತಿಯನ್ನು ಮಾಡಿಸಿಕೊಂಡಿರುವ ಮತ್ತು ಮಾಡಿಸಿಕೊಂಡಿಲ್ಲದ ಜನರ ಮಧ್ಯದಲ್ಲಾಗಲಿ ಪರದೇಶದವರ ಅಥವಾ ಅನಾಗರೀಕರ ಮಧ್ಯದಲ್ಲಾಗಲಿ, ಗುಲಾಮರ ಅಥವಾ ಸ್ವತಂತ್ರರಾದ ಜನರ ಮಧ್ಯದಲ್ಲಾಗಲಿ ಯಾವ ಭೇದವೂ ಇಲ್ಲ. ಎಲ್ಲಾ ವಿಶ್ವಾಸಿಗಳಲ್ಲಿಯೂ ಕ್ರಿಸ್ತನಿದ್ದಾನೆ. ಅವರಿಗೆ ಕ್ರಿಸ್ತನೊಬ್ಬನೇ ಅಗತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಹ್ಯಾ ನ್ಹವ್ಯಾ ಜಿವನಾತ್ ಗ್ರಿಕ್ ಅನಿ ಜುದೆವಾಂಚ್ಯಾ ಮದ್ದಿ, ನಾತರ್ ಸುನ್ನತ್ ಕರುನ್ ಘೆಟಲ್ಲ್ಯಾಚ್ಯಾ ಅನಿ ಕರುನ್ ಘೆವ್ಕ್ ನಸಲ್ಲ್ಯಾಚ್ಯಾ ಮದ್ದಿ ಹೊಂವ್ದಿತ್, ನಾತರ್ ವಳಕ್ ನತ್ತೊ ಅನಿ ವಳಕ್ ಹೊತ್ತೊ, ಸ್ವತಂತ್ರ್ ಅನಿ ಗುಲಾಮ್, ಹೆಂಚ್ಯಾ ಮದ್ದಿ ಹೊಂವ್ದಿತ್ ಕಸ್ಲೊಬಿ ಭೆದ್ ಭಾವ್ ನಾ, ಕ್ರಿಸ್ತುಚ್ ಸಗ್ಳೆ ಅನಿ ಸಗ್ಳ್ಯಾಕ್ಡೆ ರ್‍ಹಾತಲೊಬಿ ತೊಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 3:11
54 ತಿಳಿವುಗಳ ಹೋಲಿಕೆ  

ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ಒಂದೇ ದೇಹವಾಗುವಂತೆ, ನಾವೆಲ್ಲರೂ ಒಬ್ಬರೇ ಆತ್ಮದಿಂದ ಸ್ನಾನ ಮಾಡಿಸಿಕೊಂಡೆವು. ನಮ್ಮೆಲ್ಲರಿಗೂ ಒಬ್ಬ ಆತ್ಮವನ್ನು ಪಾನವಾಗಿ ಕೊಡಲಾಗಿದೆ.


ಈ ವಿಷಯದಲ್ಲಿ ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವೂ ಇಲ್ಲ. ಎಲ್ಲರಿಗೂ ಕರ್ತ ಆಗಿರುವ ಒಬ್ಬರೇ ಕರ್ತ; ಅವರು ತಮ್ಮನ್ನು ಕರೆಯುವವರೆಲ್ಲರನ್ನು ಹೇರಳವಾಗಿ ಆಶೀರ್ವದಿಸುತ್ತಾರೆ.


ಸುವಾರ್ತೆಯ ಮೂಲಕ ಯೆಹೂದ್ಯರಲ್ಲದವರೂ ಸಹ ಇಸ್ರಾಯೇಲರೊಂದಿಗೆ ವಾರಸುದಾರರೂ ಒಂದೇ ದೇಹದ ಅವಯವಗಳೂ ಕ್ರಿಸ್ತ ಯೇಸುವಿನಲ್ಲಿ ದೇವರ ವಾಗ್ದಾನದ ಸಹಪಾಲುಗಾರರೂ ಆಗಿರಬೇಕೆಂಬುದೇ ಈ ರಹಸ್ಯ.


ಎಲ್ಲವನ್ನು ಎಲ್ಲಾ ವಿಧದಲ್ಲಿಯೂ ತುಂಬಿಸುವ ದೇವರಿಂದ ಕ್ರಿಸ್ತನ ದೇಹವಾಗಿರುವ ಸಭೆಯು ಪರಿಪೂರ್ಣ ಉಳ್ಳದ್ದಾಗಿದೆ.


ದೇವರು ಯೆಹೂದ್ಯರಿಗೆ ಮಾತ್ರ ದೇವರೋ? ದೇವರು ಯೆಹೂದ್ಯರಲ್ಲದವರಿಗೂ ಸಹ ದೇವರಾಗಿರುವುದಿಲ್ಲವೋ? ಹೌದು, ಯೆಹೂದ್ಯರಲ್ಲದವರಿಗೂ ಸಹ ದೇವರಾಗಿದ್ದಾರೆ.


ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಸುನ್ನತಿ ಆಗದಿದ್ದರೂ ಯಾವ ವ್ಯತ್ಯಾಸವಿರುವುದಿಲ್ಲ. ಆದರೆ ಪ್ರೀತಿಯಿಂದ ಕಾರ್ಯ ನಡೆಸುವ ನಂಬಿಕೆಯು ಮಾತ್ರ ಪ್ರಯೋಜನವಾಗಿರುತ್ತದೆ.


ಹೀಗೆ ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣವಾಗಿರಲಿ. ಆಗ ನೀವು ನನ್ನನ್ನು ಕಳುಹಿಸಿದ್ದೀರಿ ಎಂದೂ ನನ್ನನ್ನು ಪ್ರೀತಿಸಿದಂತೆ ಇವರನ್ನು ನೀವು ಪ್ರೀತಿಸಿದ್ದೀರಿ ಎಂದೂ ಲೋಕವು ತಿಳಿದುಕೊಳ್ಳುವುದು.


ಕ್ರಿಸ್ತ ಯೇಸುವಿನೊಂದಿಗೆ ನಾನೂ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತ ಯೇಸುವೇ ನನ್ನಲ್ಲಿ ಜೀವಿಸುತ್ತಾರೆ. ನನ್ನನ್ನು ಪ್ರೀತಿಸಿ ನನಗೋಸ್ಕರ ತಮ್ಮನ್ನೇ ಒಪ್ಪಿಸಿಕೊಟ್ಟ ದೇವಪುತ್ರ ಆಗಿರುವವರ ನಂಬಿಕೆಯಲ್ಲಿಯೇ ಈಗ ನಾನು ಈ ಶರೀರದಲ್ಲಿ ಜೀವಿಸುತ್ತಿದ್ದೇನೆ.


ಸುನ್ನತಿಯಿದ್ದರೂ ಪ್ರಯೋಜನವಿಲ್ಲ, ಸುನ್ನತಿಯಿಲ್ಲದಿದ್ದರೂ ಪ್ರಯೋಜನವಿಲ್ಲ. ದೇವರ ಆಜ್ಞೆಗಳನ್ನು ಕೈಗೊಳ್ಳುವುದೇ ಪ್ರಯೋಜನಕರ.


ಆಗ ಉಳಿದಿರುವ ಜನರಲ್ಲಿ ಯೆಹೂದ್ಯರಲ್ಲದವರೂ ನನ್ನ ಹೆಸರೆತ್ತಿ ಕರೆಯುವವರೂ ಸಹ ಕರ್ತದೇವರನ್ನು ಹುಡುಕುವರು,’


ಯೆಹೋವ ದೇವರು ತಮ್ಮ ಪವಿತ್ರ ಬಾಹುವನ್ನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತೋರಿಸಿಕೊಂಡಿದ್ದಾನೆ ಮತ್ತು ಭೂಮಿಯ ಅಂತ್ಯದವರೆಗೂ ನಮ್ಮ ದೇವರ ರಕ್ಷಣೆಯನ್ನು ಕಾಣುವರು.


ಆತನೇ ಈಗ ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವಲ್ಲವೇ, ನನ್ನ ರಕ್ಷಣೆಯು ಭೂಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಸರ್ವಜನಾಂಗಗಳಿಗೂ ಬೆಳಕನ್ನಾಗಿ ಮಾಡುವೆನು.”


ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


“ಆ ದಿವಸದಲ್ಲಿ ಅನೇಕ ಜನಾಂಗಗಳು ಯೆಹೋವ ದೇವರನ್ನು ಅಂಟಿಕೊಂಡು ನನ್ನ ಜನರಾಗುವರು, ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆಂದು ತಿಳಿದುಕೊಳ್ಳುವೆ.


ಆಗ ಅವರು ಎದೋಮಿನ ಮಿಕ್ಕ ಭಾಗವನ್ನೂ, ನನ್ನ ಹೆಸರಿನಿಂದ ಕರೆಯಲಾಗುವ ಎಲ್ಲಾ ಜನಾಂಗಗಳನ್ನೂ ಸ್ವಾಧೀನ ಮಾಡಿಕೊಳ್ಳುವೆನು, ಎಂಬುದಾಗಿ ಇದನ್ನು ಮಾಡುವವರಾದ ಯೆಹೋವ ದೇವರು ಹೇಳುತ್ತಾರೆ.


ಅನೇಕ ಜನಾಂಗಗಳು ಬಂದು ಹೀಗೆಂದು ಹೇಳುವರು, “ಬನ್ನಿರಿ, ಯೆಹೋವ ದೇವರ ಪರ್ವತಕ್ಕೂ ಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ. ಅವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು. ನಾವು ಅವರ ದಾರಿಗಳಲ್ಲಿ ನಡೆಯುವೆವು. ಚೀಯೋನಿನಿಂದ ದೇವರ ನಿಯಮವೂ ಯೆರೂಸಲೇಮಿನಿಂದ ದೇವರ ವಾಕ್ಯವೂ ಹೊರಡುವುವು.”


ನೀವು ಕ್ರಿಸ್ತ ಯೇಸುವಿನಲ್ಲಿ ಪರಿಪೂರ್ಣರಾಗಿದ್ದೀರಿ. ಅವರೇ ಎಲ್ಲಾ ಆಳಿಕೆಗೂ, ಅಧಿಕಾರಕ್ಕೂ ಶಿರಸ್ಸಾಗಿದ್ದಾರೆ.


ಗ್ರೀಕರಿಗೂ ಗ್ರೀಕರಲ್ಲದವರಿಗೂ ಜ್ಞಾನಿಗಳಿಗೂ ಮೂಢರಿಗೂ ನಾನು ಸಾಲಗಾರನಾಗಿದ್ದೇನೆ.


“ನಾನೇ ದ್ರಾಕ್ಷಿಯ ಬಳ್ಳಿ, ನೀವು ಕವಲುಬಳ್ಳಿಗಳು. ನೀವು ನನ್ನಲ್ಲಿ ಮತ್ತು ನಾನು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಬಹಳ ಫಲಕೊಡುವಿರಿ. ಏಕೆಂದರೆ ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.


ಸರ್ಪವು ಪೌಲನ ಕೈಗೆ ಸುತ್ತಿಕೊಂಡಿರುವುದನ್ನು ದ್ವೀಪ ನಿವಾಸಿಗಳು ಕಂಡಾಗ, “ನಿಶ್ವಯವಾಗಿ ಈ ಮನುಷ್ಯನು ಕೊಲೆಗಾರನಾಗಿರಬೇಕು. ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯವು ಅವನನ್ನು ಜೀವಿಸಲಿಕ್ಕೆ ಬಿಡಲಿಲ್ಲ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಆ ದ್ವೀಪದ ನಿವಾಸಿಗಳು ನಮಗೆ ಅಸಾಧಾರಣವಾದ ದಯೆತೋರಿಸಿದರು. ಆಗ ಮಳೆ ಬರುತ್ತಿದ್ದು ಬಹಳ ಚಳಿಯಿದ್ದುದರಿಂದ ಅವರು ಬೆಂಕಿಹೊತ್ತಿಸಿ ನಮ್ಮನ್ನು ಬರಮಾಡಿಕೊಂಡರು.


ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ಅವನು ನನ್ನ ವಾಕ್ಯವನ್ನು ಕೈಗೊಳ್ಳುವನು. ನನ್ನ ತಂದೆಯು ಅವನನ್ನು ಪ್ರೀತಿಸುವರು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಿವಾಸಮಾಡಿಕೊಳ್ಳುವೆವು.


ನಾನು ದೇಶದಲ್ಲಿ ಆಕೆಯನ್ನು ನನಗಾಗಿ ಬಿತ್ತಿಕೊಳ್ಳುವೆನು. ‘ನನ್ನ ಪ್ರಿಯರಲ್ಲ’ ಎಂದು ಕರೆದವರಿಗೆ, ನಾನು ನನ್ನ ಪ್ರೀತಿಯನ್ನು ತೋರಿಸುವೆನು. ನಾನು, ‘ನೀವು ನನ್ನ ಜನರಲ್ಲ’ ಎಂದು ಹೇಳಿದವರನ್ನು, ‘ನೀವು ನನ್ನ ಜನರು,’ ಎಂದು ಹೇಳುವೆನು. ಅವರು, ‘ನೀವು ನಮ್ಮ ದೇವರು’ ” ಎಂದು ಹೇಳುವರು.


ದೇವರ ಪ್ರೀತಿಯು ನಮ್ಮ ಮೇಲೆ ಅಪಾರವಾಗಿದೆ; ಯೆಹೋವ ದೇವರ ಸತ್ಯತೆಯು ಯುಗಯುಗಕ್ಕೂ ಇರುತ್ತದೆ. ಯೆಹೋವ ದೇವರನ್ನು ಸ್ತುತಿಸಿರಿ.


ಕ್ರಿಸ್ತ ಯೇಸುವಿನ ಬೋಧನೆಯಲ್ಲಿ ಬಾಳದೆ ಅದನ್ನು ಅತಿಕ್ರಮಿಸುವವರಿಗೆ ದೇವರಿಲ್ಲ. ಕ್ರಿಸ್ತ ಯೇಸುವಿನ ಬೋಧನೆಯಲ್ಲಿ ಬಾಳುವವರಿಗೆ ತಂದೆ ಮತ್ತು ಪುತ್ರ ಇಬ್ಬರೂಇರುತ್ತಾರೆ.


ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.


ದಾಸನಾಗಲಿ, ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತ ಯೇಸುವಿನಿಂದ ಹೊಂದುವನೆಂದು ನೀವು ತಿಳಿದಿದ್ದೀರಿ.


ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಲಿ. ನೀವು ಪ್ರೀತಿಯಲ್ಲಿ ಬೇರೂರಿ ನೆಲೆಗೊಂಡು ನಿಂತು


ನಾನು ಭಾಷೆಯ ಅರ್ಥವನ್ನು ಗ್ರಹಿಸದಿದ್ದರೆ, ಮಾತಾಡುವವನಿಗೆ ನಾನು ಅನ್ಯದೇಶದವನಂತಿರುವೆನು, ಮಾತನಾಡುವವನು ನನಗೆ ಅನ್ಯದೇಶದವನಂತಿರುವನು.


ಓ ಯೆಹೋವ ದೇವರೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಜಗದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಬರುವುವು. “ನಮ್ಮ ಪೂರ್ವಜರು ನಿಶ್ಚಯವಾಗಿ ಸುಳ್ಳಾದದ್ದನ್ನು ಪಾರಂಪರ್ಯವಾಗಿ ಹೊಂದಿದ್ದಾರೆ. ಅವು ವ್ಯರ್ಥವೇ. ಅವುಗಳಲ್ಲಿ ಏನೂ ಪ್ರಯೋಜನವಿಲ್ಲ.


ನೀವು ಅದನ್ನು ನಿಮಗೂ ನಿಮ್ಮ ಮಧ್ಯದಲ್ಲಿ ತಂಗುವಂಥವರಿಗೂ ನಿಮ್ಮ ಮಧ್ಯದಲ್ಲಿ ಮಕ್ಕಳನ್ನು ಪಡೆದಂತ ವಿದೇಶಿಯರಿಗೂ ಚೀಟುಹಾಕಿ ಬಾಧ್ಯವಾಗಿ ವಿಭಾಗಿಸಿ ಹಂಚಬೇಕು. ಅವರು ನಿಮಗೆ ಇಸ್ರಾಯೇಲಿನ ಮಕ್ಕಳೊಳಗೆ ಹುಟ್ಟಿದವರೆಂದು ಪರಿಗಣಿಸಬೇಕು. ಅವರಿಗೆ ಇಸ್ರಾಯೇಲಿನ ಗೋತ್ರಗಳೊಳಗೆ ಬಾಧ್ಯತೆಯಾಗಬೇಕು.


ದೇವರ ನೀತಿಯು ನಂಬುವವರೆಲ್ಲರಿಗೆ ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಡುವುದರ ಮೂಲಕ ಲಭಿಸುತ್ತದೆ. ಇಲ್ಲಿ ಯಾವ ಭೇದವೂ ಇರುವುದಿಲ್ಲ.


ಕ್ರಿಸ್ತ ಯೇಸು ತಾವೇ ನಮ್ಮ ಸಮಾಧಾನವಾಗಿದ್ದು, ಎರಡು ಗುಂಪಿನವರನ್ನು ಒಂದು ಮಾಡಿ, ಅಗಲಿಸಿದ ವೈರತ್ವದ ಅಡ್ಡಗೋಡೆಯನ್ನು ತಮ್ಮ ಶರೀರದ ಮೂಲಕ ಕೆಡವಿಹಾಕಿದರು.


ಹೀಗೆ ಕ್ರಿಸ್ತ ಯೇಸು ತಮ್ಮ ದೇಹವನ್ನು ಶಿಲುಬೆಯಲ್ಲಿ ಸಮರ್ಪಿಸಿದ್ದರಿಂದ ನಿಯಮದ ಆಜ್ಞೆಗಳುಳ್ಳ ಶಾಸನಗಳನ್ನು ರದ್ದುಗೊಳಿಸಿದರು. ಈ ರೀತಿಯಾಗಿ ಇವೆರಡೂ ಗುಂಪಿನವರಿಂದ ಒಬ್ಬ ನೂತನ ಮಾನವತ್ವವನ್ನು ತಮ್ಮಲ್ಲಿ ಸೃಷ್ಟಿಸಿ ಸಮಾಧಾನವನ್ನು ಉಂಟುಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು