Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 3:15 - ಕನ್ನಡ ಸಮಕಾಲಿಕ ಅನುವಾದ

15 ಕ್ರಿಸ್ತ ಯೇಸುವಿನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ, ಆ ಸಮಾಧಾನಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲಾಗಿದ್ದೀರಿ. ನೀವು ಕೃತಜ್ಞತೆಯುಳ್ಳವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಿಮ್ಮ ಹೃನ್ಮನಗಳು ಕ್ರಿಸ್ತಯೇಸುವಿನ ಶಾಂತಿಸಮಾಧಾನದಿಂದ ತುಂಬಿರಲಿ. ನೀವು ಒಂದೇ‍ ಶರೀರವಾಗಿ ಬಾಳಲು ಕರೆಯಲ್ಪಟ್ಟಿದ್ದೀರಿ; ಕೃತಜ್ಞತೆ ಉಳ್ಳವರಾಗಿ ಜೀವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕ್ರಿಸ್ತನಿಂದಾದ ಸಮಾಧಾನವು ನಿಮ್ಮ ಹೃದಯಗಳಲ್ಲಿ ಯಜಮಾನನಂತಿದ್ದು ತೀರ್ಪುಹೇಳಲಿ; ನೀವು ಒಂದೇ ದೇಹಕ್ಕೆ ಸೇರಿದವರಾದದರಿಂದ ಸಮಾಧಾನದಿಂದಿರುವದಕ್ಕಾಗಿ ಕರೆಯಲ್ಪಟ್ಟಿರಿ. ಇದಲ್ಲದೆ ಕೃತಜ್ಞತೆಯುಳ್ಳವರಾಗಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕ್ರಿಸ್ತನು ನೀಡುವ ಶಾಂತಿಯು ನಿಮ್ಮ ಆಲೋಚನಗಳನ್ನೆಲ್ಲ ತನ್ನ ಹತೋಟಿಯಲ್ಲಿಟ್ಟುಕೊಂಡಿರಲಿ. ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರಾದ್ದರಿಂದ ಶಾಂತಿಯಿಂದಿರಲು ಕರೆಯಲ್ಪಟ್ಟಿದ್ದೀರಿ. ಯಾವಾಗಲು ಕೃತಜ್ಞರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಕ್ರಿಸ್ತ್ ದಿತಲೆ ಶಾಂತ್ಪಾನ್, ತುಮ್ಚ್ಯಾ ಚಿಂತ್ಪಾಕ್ನಿ ಹತೊಟಿತ್ ಥವ್ನ್ ಘೆಂವ್ದಿತ್, ತುಮಿ ಸಗ್ಳೆ ಎಕುಚ್ ಆಂಗಾಕ್ ಮಿಳಲ್ಲೆ ಹೊಲ್ಲ್ಯಾಸಾಟ್ನಿ, ಶಾಂತ್ಪಾನಾನ್ ರ್‍ಹಾವ್ಕ್ ಬಲ್ವುನ್ ಹೊಲ್ಯಾಸಿ, ಸದಾ ಸರ್ವತಾಕ್ ಧನ್ಯಾವಾದ್ ದಿತಲೆ ಹೊವ್ನ್ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 3:15
35 ತಿಳಿವುಗಳ ಹೋಲಿಕೆ  

ನಾನು ಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ. ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಅಂಜದಿರಲಿ.


ದೃಢ ಮನಸ್ಸುಳ್ಳವರನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವೆ, ಏಕೆಂದರೆ ಅವರಿಗೆ ನಿನ್ನಲ್ಲಿ ಭರವಸವಿದೆ.


ನಿರೀಕ್ಷೆಯ ದೇವರು, ನೀವು ಪವಿತ್ರಾತ್ಮನ ಶಕ್ತಿಯಿಂದ ನಿಮ್ಮ ನಿರೀಕ್ಷೆಯನ್ನು ಹೆಚ್ಚಿಸಿ, ನೀವು ನಿಮ್ಮ ವಿಶ್ವಾಸದಿಂದ ಸಕಲ ಸಂತೋಷದಿಂದಲೂ ಸಮಾಧಾನದಿಂದಲೂ ಪ್ರವಾಹಿಸುವಂತೆ ಮಾಡಲಿ.


ಎಲ್ಲವುಗಳಿಗಾಗಿ ಕೃತಜ್ಞತೆ ಸಲ್ಲಿಸಿರಿ. ಏಕೆಂದರೆ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.


ಯೆಹೋವ ದೇವರು ತಮ್ಮ ಜನರಿಗೆ ಬಲವನ್ನು ಕೊಡುವರು; ಯೆಹೋವ ದೇವರು ತಮ್ಮ ಜನರನ್ನು ಸಮಾಧಾನದಿಂದ ಆಶೀರ್ವದಿಸುವರು.


ಹೀಗಿರುವುದರಿಂದ, ವಿಶ್ವಾಸದ ಮೂಲಕ ನೀತಿವಂತರೆಂಬ ನಿರ್ಣಯ ಹೊಂದಿದ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿರುತ್ತದೆ.


ನೀವು ಮಾತಿನಿಂದಾಗಲಿ, ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ, ಕ್ರಿಸ್ತ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.


“ನನ್ನಲ್ಲಿ ನಿಮಗೆ ಸಮಾಧಾನ ಇರುವಂತೆ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿರುವದು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ,” ಎಂದರು.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ತಂದೆಯಾದ ದೇವರಿಗೆ, ಯಾವಾಗಲೂ ಎಲ್ಲಾ ಕಾರ್ಯಗಳಿಗೋಸ್ಕರ ಕೃತಜ್ಞತೆಯನ್ನು ಸಲ್ಲಿಸಿರಿ.


ನೀವು ಸದಾ ಉದಾರಿಗಳಾಗುವಂತೆ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿಯೂ ಸಿರಿವಂತರನ್ನಾಗಿ ಮಾಡುವನು. ನಿಮ್ಮ ಕೊಡುಗೆಯು ನಮ್ಮ ಸೇವೆಯ ಮೂಲಕ ಬೇರೆಯವರಿಗೆ ಮುಟ್ಟಿ, ಅವರು ದೇವರನ್ನು ಕೃತಜ್ಞತೆಯಿಂದ ಸ್ಮರಿಸುವಂತೆ ನಡೆಸುವುದು.


ಒಂದೇ ನಿರೀಕ್ಷೆಗೆ ನೀವು ಕರೆಹೊಂದಿದಂತೆಯೇ ದೇಹವು ಒಂದೇ, ಪವಿತ್ರಾತ್ಮರು ಒಬ್ಬರೇ,


ಏಕೆಂದರೆ ತಿನ್ನುವುದೂ ಕುಡಿಯುವುದೂ ದೇವರ ರಾಜ್ಯವಲ್ಲ. ನೀತಿ, ಸಮಾಧಾನ, ಪವಿತ್ರಾತ್ಮರಲ್ಲಿರುವ ಆನಂದವೂ ಆಗಿದೆ.


ನಾನು ನಿಮಗೆ ಕೃತಜ್ಞತೆಯ ಬಲಿಯನ್ನು ಅರ್ಪಿಸುವೆನು; ಯೆಹೋವ ದೇವರ ಹೆಸರನ್ನು ಕರೆಯುವೆನು.


ಎಲ್ಲದಕ್ಕಿಂತ ಮೊದಲು ಮನುಷ್ಯರೆಲ್ಲರಿಗೋಸ್ಕರವೂ ಅರಸರುಗಳಿಗಾಗಿಯೂ ವಿಜ್ಞಾಪನೆಗಳನ್ನೂ ಪ್ರಾರ್ಥನೆಗಳನ್ನೂ ಬಿನ್ನಹಗಳನ್ನೂ ಕೃತಜ್ಞತಾಸ್ತುತಿಗಳನ್ನೂ ಮಾಡಬೇಕೆಂದು ಪ್ರಬೋಧಿಸುತ್ತೇನೆ.


ನೀವು ಕ್ರಿಸ್ತ ಯೇಸುವಿನಲ್ಲಿ ಬೇರೂರಿದವರಾಗಿಯೂ ಕಟ್ಟಲಾದವರಾಗಿಯೂ ಇದ್ದು, ನಿಮಗೆ ಬೋಧನೆ ನೀಡಿದ ಪ್ರಕಾರ ನಿಮ್ಮ ವಿಶ್ವಾಸದಲ್ಲಿ ಬಲಹೊಂದಿ ಕೃತಜ್ಞತೆಯಿಂದ ತುಂಬಿ ಪ್ರವಾಹಿಸುವವರಾಗಿರಿ.


ಆದ್ದರಿಂದ ನೀವು ದೇವರ ಪ್ರಿಯರಾದ ಮಕ್ಕಳಂತೆ ದೇವರ ಮಾದರಿಯನ್ನು ಅನುಸರಿಸಿ ಬಾಳಿರಿ.


ಇವೆಲ್ಲವೂ ನಿಮ್ಮ ಒಳ್ಳೆಯದಕ್ಕಾಗಿಯೇ. ಇದರಿಂದ ಹೆಚ್ಚಾದ ಜನರಿಗೆ ತಲುಪುತ್ತಿರುವ ಕೃಪೆಯು, ಕೃತಜ್ಞತೆಯಿಂದ ತುಂಬಿ ಹರಿಯುವುದು. ಆಗ ದೇವರ ಮಹಿಮೆಯು ಸ್ಪಷ್ಟವಾಗುವುದು.


ಏಕೆಂದರೆ ಉನ್ನತನೂ, ಮಹೋನ್ನತನೂ, ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ: “ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ, ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


“ಆಮೆನ್! ಸ್ತೋತ್ರ, ಮಹಿಮೆ, ಜ್ಞಾನ, ಕೃತಜ್ಞತೆ, ಗೌರವ, ಶಕ್ತಿ, ಬಲ ನಮ್ಮ ದೇವರಿಗೆ ಯುಗಯುಗಾಂತರಕ್ಕೂ ಉಂಟಾಗಲಿ. ಆಮೆನ್!” ಎಂದು ಹೇಳುತ್ತಿದ್ದರು.


ಹೀಗೆ ದೇಹವೆಲ್ಲಾ ಕ್ರಿಸ್ತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಣೆಹೊಂದಿ, ಪ್ರತಿ ಅಂಗವೂ ತನ್ನ ಕೆಲಸವನ್ನು ಸೂಕ್ತವಾಗಿ ಮಾಡುವಂತೆ ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿ ಹೊಂದುತ್ತದೆ.


ಧನ್ಯವಾದ ಬಲಿಗಳನ್ನು ಅರ್ಪಿಸಿ, ದೇವರ ಕೆಲಸಗಳನ್ನು ಉತ್ಸಾಹದಿಂದ ಸಾರಲಿ.


ತಂದೆಯಾದ ದೇವರಿಗೆ ಹರ್ಷದಿಂದ ಕೃತಜ್ಞತೆಯನ್ನು ಸಲ್ಲಿಸುವಿರಿ. ಬೆಳಕಿನಲ್ಲಿರುವ ದೇವಭಕ್ತರ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ತಂದೆಯು ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದ್ದಾರೆ.


ಕೃತಜ್ಞತೆಯಿಂದ ಅವರ ಬಾಗಿಲುಗಳಿಗೂ, ಕೃತಜ್ಞತಾ ಸ್ತೋತ್ರದಿಂದ ಅವರ ಅಂಗಳಗಳಿಗೂ ಬನ್ನಿರಿ; ಅವರನ್ನು ಕೊಂಡಾಡಿರಿ, ಅವರ ಹೆಸರನ್ನು ಸ್ತುತಿಸಿರಿ.


ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಅದು ದೇವರ ಹೆಸರಿಗೆ ಸಲ್ಲಿಸುವ ಕೃತಜ್ಞತೆಯೆಂಬ ತುಟಿಗಳ ಫಲವೇ ಆಗಿದೆ.


ಆದರೆ ಅವಿಶ್ವಾಸಿಯಾದವರು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ. ಇಂಥಾ ವಿಷಯಗಳಲ್ಲಿ ವಿಶ್ವಾಸಿಯಾದ ಸಹೋದರನಾಗಲೀ, ಸಹೋದರಿಯಾಗಲೀ ಬದ್ಧರಲ್ಲ. ಸಮಾಧಾನದಲ್ಲಿ ಬಾಳುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾರೆ.


ಏಕೆಂದರೆ ದೇವರನ್ನು ಅವರು ತಿಳಿದಿದ್ದರೂ ದೇವರೆಂದು ಮಹಿಮೆ ಪಡಿಸಲಿಲ್ಲ, ದೇವರ ಉಪಕಾರ ಸ್ಮರಿಸಲಿಲ್ಲ. ಆದರೆ ಅವರು ತಮ್ಮ ವಿಚಾರಗಳಲ್ಲಿ ವ್ಯರ್ಥರಾದರು. ವಿವೇಕವಿಲ್ಲದ ಅವರ ಹೃದಯವು ಕತ್ತಲಾಯಿತು.


ಆದರೆ ನಾನು ಸ್ತೋತ್ರದ ಗೀತೆಯಿಂದ ನಿಮಗೆ ಬಲಿ ಅರ್ಪಿಸುವೆನು. ನಾನು ಮಾಡಿದ ಹರಕೆಯನ್ನು ತೀರಿಸುವೆನು. ಆಗ ನಾನು, ‘ರಕ್ಷಣೆಯು ಯೆಹೋವ ದೇವರಿಂದಲೇ ಬರುವುದು,’ ಎಂದು ಹೇಳಿದನು.”


ಇಲ್ಲದಿದ್ದರೆ ಅವರು ನನ್ನ ಸಂಗಡ ಸಮಾಧಾನಮಾಡಿಕೊಳ್ಳುವ ಹಾಗೆ ನನ್ನನ್ನು ಆಶ್ರಯಿಸಲಿ, ನನ್ನೊಡನೆ ಸಮಾಧಾನ ಮಾಡಿಕೊಳ್ಳಲಿ.


ನಾನು ತುಟಿಗಳಿಗೆ ಸ್ತೋತ್ರವನ್ನು ಉಂಟುಮಾಡುವೆನು; ದೂರವಾದವನಿಗೂ ಸಮೀಪವಾದವನಿಗೂ ಸಮಾಧಾನವಿರಲಿ, ಸಮಾಧಾನವಿರಲಿ. ನಾನು ಅವರನ್ನು ಸ್ವಸ್ಥ ಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ರೊಟ್ಟಿ ಒಂದೇ, ಆದ್ದರಿಂದ ನಾವು ಅನೇಕರಿದ್ದರೂ, ಒಂದೇ ದೇಹವಾಗುತ್ತೇವೆ. ಏಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಭಾಗಿಗಳಾಗುತ್ತೇವೆ.


ವಿಶ್ವಾಸದ ಒಳ್ಳೆಯ ಹೋರಾಟವನ್ನು ಮಾಡು. ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ದೇವರು ನಿನ್ನನ್ನು ಕರೆದಿದ್ದಾರೆ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಅರಿಕೆಯನ್ನು ಮಾಡಿದ್ದೀಯಲ್ಲಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು