Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 3:2 - ಕನ್ನಡ ಸಮಕಾಲಿಕ ಅನುವಾದ

2 ಪರಲೋಕದ ಕಾರ್ಯಗಳ ಮೇಲೆಯೇ ನಿಮ್ಮ ಮನಸ್ಸಿಡಿರಿ, ಭೂಸಂಬಂಧವಾದವುಗಳ ಮೇಲೆ ಮನಸ್ಸಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಭೂಲೋಕದಲ್ಲಿರುವಂಥವುಗಳ ಬಗ್ಗೆ ಅಲ್ಲ, ಪರಲೋಕದಲ್ಲಿರುವಂಥವುಗಳ ಬಗ್ಗೆ ಯೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2-3 ನೀವು ಕ್ರಿಸ್ತಯೇಸುವಿನೊಂದಿಗೆ ಮರಣ ಹೊಂದಿರುವುದರಿಂದ ಅವರೊಂದಿಗೆ ನಿಮ್ಮ ಜೀವ ದೇವರಲ್ಲಿ ಮರೆಯಾಗಿದೆ. ನಿಮ್ಮ ಮನಸ್ಸು ಪ್ರಾಪಂಚಿಕ ವಿಷಯಗಳ ಮೇಲೆ ಅಲ್ಲ, ಸ್ವರ್ಗೀಯ ವಿಷಯಗಳ ಮೇಲೆ ಕೇಂದ್ರೀಕೃತವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮೇಲಿರುವಂಥವುಗಳ ಮೇಲೆ ಮನಸ್ಸಿಡಿರಿ, ಭೂಸಂಬಂಧವಾದವುಗಳ ಮೇಲೆ ಇಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಪರಲೋಕದವುಗಳನ್ನು ಮಾತ್ರ ಆಲೋಚಿಸಿ, ಭೂಲೋಕದವುಗಳನ್ನು ಆಲೋಚಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಸರ್ಗಾತ್ ಹೊತ್ತ್ಯಾಚ್ಯಾ ವಿಶಯಾತ್ ಚಿಂತಾ, ಜಗಾತ್ಲ್ಯಾಚೆ ಯವ್ಜುನಕಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 3:2
20 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವ ದೇವರನ್ನು ಹುಡುಕಲು ನಿಮ್ಮ ಹೃದಯವನ್ನೂ, ನಿಮ್ಮ ಪ್ರಾಣವನ್ನೂ ಒಪ್ಪಿಸಿ, ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ದೇವರ ಪರಿಶುದ್ಧ ಪಾತ್ರೆಗಳನ್ನು ಯೆಹೋವ ದೇವರ ನಾಮಕ್ಕಾಗಿ ಕಟ್ಟಲಾಗುವ ಆಲಯದೊಳಗೆ ತರುವ ಹಾಗೆ, ಎದ್ದು ಯೆಹೋವ ದೇವರಾದ ದೇವರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ,” ಎಂದನು.


ನೀವು ಕ್ರಿಸ್ತನೊಂದಿಗೆ ಜೀವಂತವಾಗಿ ಎದ್ದವರಾಗಿದ್ದರೆ, ಮೇಲಿರುವವುಗಳನ್ನೇ ಹುಡುಕಿರಿ. ಅಲ್ಲಿ ಕ್ರಿಸ್ತ ಯೇಸು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.


ಆಗ ಯೇಸು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನಿಂದ ತೊಲಗಿಹೋಗು! ನೀನು ನನಗೆ ಅಡ್ಡಿಯಾಗಿದ್ದೀ; ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ,” ಎಂದರು.


“ಭೂಲೋಕದಲ್ಲಿ ನಿಮಗೋಸ್ಕರ ಆಸ್ತಿಪಾಸ್ತಿಯನ್ನು ಕೂಡಿಸಿಡಬೇಡಿರಿ, ಇಲ್ಲಿ ಅದಕ್ಕೆ ನುಸಿ ಮತ್ತು ಕಿಲುಬು ಹಿಡಿದು ಹಾಳಾಗುವುದು ಇಲ್ಲವೆ ಕಳ್ಳರು ಕನ್ನಾಕೊರೆದು ಕದಿಯುವರು.


ಆದ್ದರಿಂದ ಅನೈತಿಕತೆ, ಅಶುದ್ಧತ್ವ, ಕಾಮಾಭಿಲಾಷೆ, ದುರಾಶೆ, ದೇವರಲ್ಲದವುಗಳನ್ನು ಆರಾಧಿಸುವುದಕ್ಕೆ ಸಮರಾಗಿರುವರು ಲೋಭ ಮುಂತಾದ ನಿಮ್ಮ ಲೌಕಿಕವಾದ ಸ್ವಭಾವಗಳನ್ನು ಸಾಯಿಸಿರಿ.


ಅನಂತರ ಯೇಸು ಜನರಿಗೆ, “ಎಚ್ಚರಿಕೆ! ನೀವು ಎಲ್ಲಾ ಲೋಭದಿಂದ ನಿಮ್ಮನ್ನು ಕಾಪಾಡಿಕೊಳ್ಳಿರಿ; ಏಕೆಂದರೆ ಜೀವನವು ಸಮೃದ್ಧಿಯಾದ ಆಸ್ತಿಗೆ ಆಧಾರವಾದದ್ದಲ್ಲ,” ಎಂದರು.


ಅನ್ಯಾಯದ ಸುಲಿಗೆಯಲ್ಲಿ ಭರವಸೆ ಇಡಬೇಡಿರಿ. ಸೂರೆಮಾಡಿದ್ದರಲ್ಲಿ ಗರ್ವಪಡಬೇಡಿರಿ. ಆಸ್ತಿಯು ಹೆಚ್ಚಾದರೆ ಅದರ ಮೇಲೆ ಮನಸ್ಸಿಡಬೇಡಿರಿ.


“ಆತನು ನನ್ನನ್ನು ಪ್ರೀತಿಸುವುದರಿಂದ ಆತನನ್ನು ಸಂರಕ್ಷಿಸುವೆನು. ಆತನು ನನ್ನ ನಾಮವನ್ನು ಸ್ವೀಕರಿಸಿದ್ದರಿಂದ ಆತನನ್ನು ಕಾಪಾಡುವೆನು.


ಆದ್ದರಿಂದ ಲೌಕಿಕ ಸಂಪತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಾಗಿ ಇರದಿದ್ದರೆ, ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು?


ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ. ಇಲ್ಲಿಂದ ಹೊರಟು ಕ್ರಿಸ್ತನೊಡನೆ ಇರಬೇಕೆಂಬ ಆಶೆಯಿದೆ. ಅದು ಬಹು ಉತ್ತಮವಾಗಿರುವುದು.


ಕಣ್ಣು ಮಿಟುಕಿಸುವುದರಲ್ಲಿ ಐಶ್ವರ್ಯ ಕಣ್ಮರೆಯಾಗುತ್ತದೆ. ಅದು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುವುದು.


ಸುಖ ದಿನದಲ್ಲಿ ಸಂತೋಷವಾಗಿರು. ಆದರೆ ದುಃಖ ದಿನದಲ್ಲಿ ಇದನ್ನು ಯೋಚಿಸು: ದೇವರು ಇವುಗಳನ್ನು ಒಂದರ ಮೇಲೊಂದನ್ನು ಬರಮಾಡುತ್ತಾರೆ. ಹೀಗೆ ಮನುಷ್ಯನು ತನ್ನ ಆಯುಸ್ಸನ್ನು ಕಳೆದ ಮೇಲೆ ಭವಿಷ್ಯವನ್ನು ಗ್ರಹಿಸಲಾರನು.


ಇದಲ್ಲದೆ ನಾನು ನನ್ನ ದೇವರ ಮನೆಯ ಮೇಲೆ ನನಗೆ ಭಕ್ತಿ ಇರುವುದರಿಂದ, ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು, ನನ್ನ ಸ್ವಂತ ಸ್ವತ್ತಿನಿಂದ ಬಂಗಾರವನ್ನೂ, ಬೆಳ್ಳಿಯನ್ನೂ ನನ್ನ ಪವಿತ್ರ ದೇವರ ಮನೆಗೆ ಕೊಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು