Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 3:22 - ಕನ್ನಡ ಸಮಕಾಲಿಕ ಅನುವಾದ

22 ಸೇವಕರೇ, ಭೂಮಿಯಲ್ಲಿ ನಿಮ್ಮ ಯಜಮಾನರಾಗಿರುವವರು ನೋಡುತ್ತಿರುವಾಗ ಮಾತ್ರ ಸೇವೆ ಮಾಡುವವರಾಗದೆ, ಕರ್ತ ಯೇಸುವಿಗೆ ಭಯಪಡುವವರಾಗಿ ಸರಳ ಹೃದಯದಿಂದ ಕೆಲಸಮಾಡಿ, ಅವರಿಗೆ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದಾಸರೇ, ಈ ಲೋಕದಲ್ಲಿರುವ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿರಿ, ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಹಾಗೆ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಕೆಲಸಮಾಡದೆ, ಕರ್ತನಿಗೆ ಭಯಪಡುವ ಪ್ರಾಮಾಣಿಕವಾದ ಹೃದಯದಿಂದ ಕೆಲಸ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದಾಸ್ಯದಲ್ಲಿರುವವರೇ, ಎಲ್ಲಾ ವಿಷಯಗಳಲ್ಲೂ ನಿಮ್ಮ ನಿಮ್ಮ ಧಣಿಗಳಿಗೆ ವಿಧೇಯರಾಗಿರಿ. ಧಣಿಗಳನ್ನು ಮೆಚ್ಚಿಸುವ ಸಲುವಾಗಿ ಮುಖದಾಕ್ಷಿಣ್ಯದ ಸೇವೆಮಾಡಬೇಡಿ. ಪ್ರಭುವಿಗೆ ಭಯಪಟ್ಟು ಪ್ರಾಮಾಣಿಕತೆಯಿಂದ ದುಡಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದಾಸತ್ವದಲ್ಲಿರುವವರೇ, ಈ ಲೋಕದಲ್ಲಿನ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿರಿ; ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆ ಮಾಡದೆ ಕರ್ತನಿಗೆ ಭಯಪಡುವವರಾಗಿ ಸರಳಮನಸ್ಸಿನಿಂದ ಕೆಲಸಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಸೇವಕರೇ, ಎಲ್ಲಾ ಕಾರ್ಯಗಳಲ್ಲಿಯೂ ನಿಮ್ಮ ಯಜಮಾನರಿಗೆ ವಿಧೇಯರಾಗಿರಿ. ಅವರ ಮೆಚ್ಚಿಕೆಯನ್ನು ಗಳಿಸುವುದಕ್ಕಾಗಿ ಅವರ ಕಣ್ಣೆದುರಿನಲ್ಲಿ ಮಾತ್ರ ಸೇವೆ ಮಾಡದಿರಿ. ನೀವು ಪ್ರಭುವಿಗೆ ಭಯಪಡುವುದರಿಂದ ನಿಮ್ಮ ಯಜಮಾನರಿಗೆ ಯಥಾರ್ಥವಾಗಿ ಸೇವೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಸೆವಕಾನು, ಸಗ್ಳ್ಯಾ ಕಾಮಾತ್ನಿ ಹ್ಯಾ ಜಗಾಚ್ಯಾ ತುಮ್ಚ್ಯಾ ಯಜಮಾನಾಕ್ನಿ ಖಾಲ್ತಿ ಹೊವ್ನ್ ಚಲಾ, ತೆಂಕಾ ಬರೆ ದಿಸುಕ್ ತೆಂಚ್ಯಾ ಇದ್ರಾಕ್ ಯೆವ್ಡೆಚ್ ಕಾಮ್ ಕರ್‍ತಲೆ ಹೊವ್ನ್ ರ್‍ಹಾವ್ನಕಾಶಿ. ಫುರಾ ಮನಾನ್ ಸೆವಾ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 3:22
22 ತಿಳಿವುಗಳ ಹೋಲಿಕೆ  

ನಾನು ಈಗ ಯಾರ ಅನುಮೋದವನ್ನು ಗಳಿಸಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸಲು ಪ್ರಯತಿಸುತ್ತಿದ್ದೇನೋ? ಇನ್ನೂ ಮನುಷ್ಯರನ್ನೇ ಮೆಚ್ಚಿಸುವವನಾಗಿದ್ದರೆ, ನಾನು ಕ್ರಿಸ್ತ ಯೇಸುವಿನ ದಾಸನಾಗಿರಲಾರೆ.


ದೇವರು ನಮ್ಮನ್ನು ಅನುಮೋದಿಸಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿಕೊಟ್ಟಿದ್ದಾರೆ. ಹಾಗಿರುವುದರಿಂದ, ನಾವು ಮನುಷ್ಯರನ್ನು ಮೆಚ್ಚಿಸದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.


ಮಕ್ಕಳೇ, ಎಲ್ಲಾ ವಿಧಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ. ಏಕೆಂದರೆ ಇದು ಕರ್ತ ಯೇಸುವಿಗೆ ಬಹು ಮೆಚ್ಚಿಕೆಯಾಗಿದೆ.


“ನನ್ನನ್ನು ನೀವು, ‘ಕರ್ತದೇವರೇ, ಕರ್ತದೇವರೇ,’ ಎಂದು ಕರೆದು ನಾನು ಹೇಳುವವುಗಳನ್ನು ನೀವು ಮಾಡದೆ ಇರುವುದು ಏಕೆ?


ಬಹು ಕನಸುಗಳೂ ಬಹು ಮಾತುಗಳೂ ವ್ಯರ್ಥವಾದವುಗಳು. ಆದ್ದರಿಂದ ನೀನು ದೇವರಿಗೆ ಭಯಪಡು.


ಇನ್ನು ಮೇಲೆ ಅವನು ದಾಸನಾಗದೆ, ದಾಸನಿಗಿಂತ ಮೇಲಾಗಿ ಪ್ರಿಯ ಸಹೋದರನಂತಾಗಬೇಕು. ಅವನು ವಿಶೇಷವಾಗಿ ನನಗೆ ಬಹು ಪ್ರಿಯನಾಗಿದ್ದಾನೆ. ಆದರೂ ಓನೇಸಿಮನು ನಿನಗೆ ಮಾನವ ರೀತಿಯಲ್ಲಿಯೂ ಕರ್ತ ಯೇಸುವಿನಲ್ಲಿಯೂ ಒಬ್ಬ ಸಹೋದರನಾಗಿ ಇನ್ನು ಎಷ್ಟೋ ಪ್ರಿಯನಾಗಿರಬೇಕಲ್ಲವೇ.


ಪ್ರಿಯರೇ, ಇಂಥಾ ವಾಗ್ದಾನಗಳು ನಮಗಿರುವುದರಿಂದ ನಮ್ಮ ದೇಹಾತ್ಮಗಳನ್ನು ಮಲಿನಗೊಳಿಸುವ ಎಲ್ಲಾ ವಿಷಯಗಳಿಂದ ನಮ್ಮನ್ನು ಶುದ್ಧಮಾಡಿ, ದೇವರ ಮೇಲಿನ ಭಯಭಕ್ತಿಯಿಂದ ನಮ್ಮ ಪವಿತ್ರತೆಯನ್ನು ಪರಿಪೂರ್ಣಗೊಳಿಸೋಣ.


ಪ್ರತಿದಿನವೂ ದೇವಾಲಯದಲ್ಲಿ ಒಮ್ಮನಸ್ಸಿನಿಂದ ಸಭೆ ಕೂಡಿಬರುವುದನ್ನು ಕ್ರಮವಾಗಿ ಮುಂದುವರೆಸಿದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಆನಂದದಿಂದಲೂ ಸರಳ ಹೃದಯದಿಂದಲೂ ಊಟಮಾಡುತ್ತಿದ್ದರು.


ನಾನು ಸಹ ಮತ್ತೊಬ್ಬ ಅಧಿಕಾರಿಯ ಕೈಕೆಳಗಿರುವವನು, ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ, ‘ಹೋಗು,’ ಎಂದರೆ ಅವನು ಹೋಗುತ್ತಾನೆ, ಮತ್ತೊಬ್ಬನಿಗೆ ‘ಬಾ,’ ಎಂದರೆ ಅವನು ಬರುತ್ತಾನೆ. ನನ್ನ ಸೇವಕನಿಗೆ, ‘ಇದನ್ನು ಮಾಡು,’ ಎಂದರೆ ಅವನು ಮಾಡುತ್ತಾನೆ,” ಎಂದು ಹೇಳಿ ಕಳುಹಿಸಿದನು.


ಏಕೆಂದರೆ ನಾನು ಸಹ ಮತ್ತೊಬ್ಬ ಅಧಿಕಾರಿಯ ಕೈಕೆಳಗಿರುವವನು, ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ, ‘ಹೋಗು’ ಎಂದರೆ ಅವನು ಹೋಗುತ್ತಾನೆ. ಮತ್ತೊಬ್ಬನಿಗೆ, ‘ಬಾ’ ಎಂದರೆ ಅವನು ಬರುತ್ತಾನೆ. ನನ್ನ ಸೇವಕನಿಗೆ, ‘ಇದನ್ನು ಮಾಡು,’ ಎಂದರೆ ಅವನು ಮಾಡುತ್ತಾನೆ,” ಎಂದು ಹೇಳಿದನು.


“ಕಣ್ಣು ದೇಹಕ್ಕೆ ದೀಪವಾಗಿದೆ. ನಿನ್ನ ಕಣ್ಣು ಒಳ್ಳೆಯದಾಗಿದ್ದರೆ, ನಿನ್ನ ದೇಹವೆಲ್ಲಾ ಬೆಳಕಾಗಿರುವುದು.


“ಮಗನು ತಂದೆಯನ್ನೂ, ದಾಸನು ಯಜಮಾನನನ್ನೂ ಸನ್ಮಾನಿಸುತ್ತಾನೆ. ಹಾಗಾದರೆ ನಾನು ತಂದೆಯಾಗಿದ್ದರೆ ನನ್ನ ಸನ್ಮಾನವೆಲ್ಲಿ? ನಾನು ಯಜಮಾನನಾಗಿದ್ದರೆ ನನಗೆ ತೋರಿಸುವ ಭಯಭಕ್ತಿಯೆಲ್ಲಿ?” “ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರು ನೀವೇ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಆದರೆ ನೀವು, ‘ನಿಮ್ಮ ಹೆಸರನ್ನು ಯಾವುದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆ?’ ಎಂದು ಕೇಳುತ್ತೀರಿ.”


ಈಗ ನಾವು ಎಲ್ಲಾ ವಿಷಯವನ್ನೂ ಕೇಳಿ ಮುಗಿಯಿತು. ದೇವರಿಗೆ ಭಯಪಡು ಮತ್ತು ದೇವರ ಆಜ್ಞೆಗಳನ್ನು ಪಾಲಿಸು. ಇದೇ ಮನುಷ್ಯನ ಪ್ರಮುಖ ಕರ್ತವ್ಯ.


ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನು ನೋಡುವ ಪ್ರಕಾರ, ಮತ್ತು ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರು, ನಮ್ಮನ್ನು ಕರುಣಿಸುವವರೆಗೆ ನಿರೀಕ್ಷೆಯಿಂದ ನೋಡುತ್ತಿರುವುದು.


ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು, ನಾಲ್ವತ್ತು ಬೆಳ್ಳಿನಾಣ್ಯ ಮೌಲ್ಯದ ರೊಟ್ಟಿಯನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು. ಅವರ ಸೇವಕರು ಸಹ ಜನರ ಮೇಲೆ ದೊರೆತನ ನಡೆಸುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹಾಗೆ ಮಾಡಲಿಲ್ಲ.


ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನಾಗಿದ್ದೇನೆ.


ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ, ಬಹುಕಾಲ ಬದುಕಿದರೂ ದೇವರಿಗೆ ಹೆದರಿ ದೈವಭಕ್ತಿಯುಳ್ಳವರಿಗೆ ಒಳ್ಳೆಯದಾಗುವುದೆಂದು ನಾನು ಬಲ್ಲೆನು.


ನಾನು ಅವರಿಗೆ, “ನೀವು ಮಾಡುವುದು ಒಳ್ಳೆಯದಲ್ಲ. ಇತರ ದೇಶದವರಾದ ನಮ್ಮ ಶತ್ರುಗಳ ನಿಂದೆಗೆ ಗುರಿಯಾಗದಂತೆ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು