Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:10 - ಕನ್ನಡ ಸಮಕಾಲಿಕ ಅನುವಾದ

10 ನಾನು ಈಗ ಯಾರ ಅನುಮೋದವನ್ನು ಗಳಿಸಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸಲು ಪ್ರಯತಿಸುತ್ತಿದ್ದೇನೋ? ಇನ್ನೂ ಮನುಷ್ಯರನ್ನೇ ಮೆಚ್ಚಿಸುವವನಾಗಿದ್ದರೆ, ನಾನು ಕ್ರಿಸ್ತ ಯೇಸುವಿನ ದಾಸನಾಗಿರಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದರಿಂದ ನಾನು ಯಾರನ್ನು ಒಲಿಸಿಕೊಳ್ಳಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮಾನವರ ಮೆಚ್ಚುಗೆಯನ್ನು ಗಳಿಸಿಕೊಳ್ಳಲು ಯತ್ನಿಸುತ್ತಿಲ್ಲ; ನಾನಿನ್ನೂ ಜನರ ಮೆಚ್ಚುಗೆಯನ್ನು ಗಳಿಸುವವನೇ ಆಗಿದ್ದರೆ ಕ್ರಿಸ್ತಯೇಸುವಿನ ದಾಸನಾಗಿರಲು ಸಾಧ್ಯವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮನುಷ್ಯರು ನನ್ನನ್ನು ಸ್ವೀಕರಿಸಿಕೊಳ್ಳುವಂತೆ ಮಾಡುವುದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೆಂದು ನೀವು ಭಾವಿಸುತ್ತೀರೋ? ಇಲ್ಲ! ನಾನು ದೇವರನ್ನೇ ಮೆಚ್ಚಿಸಲು ಪ್ರಯತ್ನಿಸುತ್ತಿದ್ದೇನೆ. ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೋ? ನಾನು ಮನುಷ್ಯರನ್ನು ಮೆಚ್ಚಿಸಬೇಕೆಂದಿದ್ದರೆ ಯೇಸು ಕ್ರಿಸ್ತನ ಸೇವಕನಾಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತಸೆ ಜಾಲ್ಯಾರ್ ಅತ್ತಾ, ಕೊನಾಕ್ ಮಿಯಾ ಹೆ ಬರೆ ದಿಸಿ ಸಾರ್ಕೆ ಕರುಕ್ ಲಾಗ್ಲಾ ಮನುನ್ ತುಮ್ಕಾ ದಿಸ್ತಾ ಮಾನ್ಸಾಕ್ ಕಾಯ್ ದೆವಾಕ್? ಮಿಯಾ ಮಾನ್ಸಾಂಚ್ಯಾಕ್ನಾ ಹೊಗ್ಳುನ್ ಘೆವ್ಚೆ ಮನುನ್ ತುಮಿ ಚಿಂತಲ್ಲ್ಯಾಸಿ ಕಾಯ್? ಅನಿಬಿ ಮಿಯಾ ಮಾನ್ಸಾಂಚ್ಯಾಕ್ನಾ ಹೊಗ್ಳುನ್ ಘೆವ್ಚೆ ಹೊಲ್ಯಾರ್ ಮಿಯಾ ಕ್ರಿಸ್ತಾಚೊ ಸೆವಕ್ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:10
20 ತಿಳಿವುಗಳ ಹೋಲಿಕೆ  

ದೇವರು ನಮ್ಮನ್ನು ಅನುಮೋದಿಸಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿಕೊಟ್ಟಿದ್ದಾರೆ. ಹಾಗಿರುವುದರಿಂದ, ನಾವು ಮನುಷ್ಯರನ್ನು ಮೆಚ್ಚಿಸದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.


ಪೇತ್ರ ಮತ್ತು ಇತರ ಅಪೊಸ್ತಲರು ಉತ್ತರವಾಗಿ, “ನಾವು ಮನುಷ್ಯರಿಗೆ ವಿಧೇಯರಾಗಿರುವುದಕ್ಕಿಂತ ದೇವರಿಗೆ ವಿಧೇಯರಾಗಿರಬೇಕಲ್ಲ!


ಯಜಮಾನರನ್ನು ಮೆಚ್ಚಿಸುವವರಂತೆ ಕಣ್ಣಿಗೆ ಕಾಣುವಾಗ ಮಾತ್ರ ಅವರಿಗೆ ಸೇವೆಮಾಡದೆ, ಕ್ರಿಸ್ತನ ದಾಸರಿಗೆ ತಕ್ಕಂತೆ ಮನಃಪೂರ್ವಕವಾಗಿ ದೇವರ ಚಿತ್ತವನ್ನು ನೆರವೇರಿಸಿರಿ.


ವ್ಯಭಿಚಾರಿಗಳೇ, ಇಹಲೋಕ ಸ್ನೇಹವು ದೇವರೊಂದಿಗಿರುವ ಶತ್ರುತ್ವ ಎಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರಬೇಕೆಂಬುವವನು ದೇವರಿಗೆ ಶತ್ರುವಾಗಿದ್ದಾನೆ.


ಅವರು ತಮ್ಮ ಶಿಷ್ಯರನ್ನು ಹೆರೋದ್ಯರೊಂದಿಗೆ ಯೇಸುವಿನ ಬಳಿಗೆ ಕಳುಹಿಸಿ, “ಬೋಧಕರೇ, ನೀವು ಸತ್ಯವಂತರು, ದೇವರ ಮಾರ್ಗವನ್ನು ಸತ್ಯದಿಂದಲೇ ಬೋಧಿಸುವವರು, ನೀವು ಯಾರನ್ನೂ ಲಕ್ಷ್ಯ ಮಾಡುವವರಲ್ಲ, ನೀವು ಮುಖದಾಕ್ಷಿಣ್ಯ ಮಾಡುವವರೂ ಅಲ್ಲ ಎಂದು ನಮಗೆ ಗೊತ್ತಿದೆ.


ಸೇವಕರೇ, ಭೂಮಿಯಲ್ಲಿ ನಿಮ್ಮ ಯಜಮಾನರಾಗಿರುವವರು ನೋಡುತ್ತಿರುವಾಗ ಮಾತ್ರ ಸೇವೆ ಮಾಡುವವರಾಗದೆ, ಕರ್ತ ಯೇಸುವಿಗೆ ಭಯಪಡುವವರಾಗಿ ಸರಳ ಹೃದಯದಿಂದ ಕೆಲಸಮಾಡಿ, ಅವರಿಗೆ ವಿಧೇಯರಾಗಿರಿ.


ಆದರೆ, ಆಂತರ್ಯದಲ್ಲಿ ಯೆಹೂದ್ಯನಾಗಿರುವವನೇ ಯೆಹೂದ್ಯನು. ಹಾಗೆಯೇ ಸುನ್ನತಿಯು ಆತ್ಮನಿಂದ ಹೃದಯದಲ್ಲಿ ಆಗುವಂಥದ್ದಾಗಿದೆ. ಇದು ಲಿಖಿತ ನಿಯಮದಿಂದ ಆಗುವಂಥದಲ್ಲ. ಅಂಥವನಿಗೆ ಮೆಚ್ಚುಗೆಯು ಮನುಷ್ಯರಿಂದ ಬರುವಂಥದಲ್ಲ, ದೇವರಿಂದಲೇ ಬರುವಂಥದ್ದಾಗಿದೆ.


ದೇವರಿಂದ ಹುಟ್ಟಿದವನು ಪಾಪವನ್ನು ಅಭ್ಯಾಸ ಮಾಡಲಾರನು, ಏಕೆಂದರೆ ದೇವರ ಬೀಜವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪ ಅಭ್ಯಾಸ ಮಾಡುವುದು ಅವನಿಗೆ ಅಸಾಧ್ಯ.


ನಾವು ಇಷ್ಟು ಹೊತ್ತು ನಿಮ್ಮ ಮುಂದೆ ಪ್ರತಿವಾದ ಮಾಡುತ್ತಿದ್ದೇವೆಂದು ನೆನಸುತ್ತೀರೋ? ಹಾಗೆ ಅಲ್ಲ; ಪ್ರಿಯರೇ, ನಾವು ಮಾಡುವುದೆಲ್ಲವೂ ನಿಮ್ಮ ಭಕ್ತಿವೃದ್ಧಿಗಾಗಿ ದೇವರ ದೃಷ್ಟಿಯಲ್ಲಿ ಕ್ರಿಸ್ತ ಯೇಸುವಿನಲ್ಲಿ ಇರುವವರಂತೆ ಮಾತನಾಡುವವರಾಗಿದ್ದೇವೆ.


ಯಾರು ಸ್ವಾರ್ಥಿಗಳಾಗಿದ್ದು ಸತ್ಯವನ್ನು ಅನುಸರಿಸದೆ ಅನೀತಿಯನ್ನು ಅನುಸರಿಸುತ್ತಾರೋ ಅವರ ವಿರುದ್ಧ ದೇವರಿಗೆ ಕೋಪವೂ ಆಕ್ರೋಶವೂ ಬರುತ್ತವೆ.


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನಾಗುವುದಕ್ಕೆ ಕರೆಹೊಂದಿದವನೂ ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಗೊಂಡವನೂ ಆಗಿರುವ ಪೌಲನು ಬರೆಯುವ ಪತ್ರ.


ನಾನಂತೂ ಎಲ್ಲರನ್ನೂ, ಎಲ್ಲದರಲ್ಲೂ ಮೆಚ್ಚಿಸಲು ಶ್ರಮಿಸುವವನಾಗಿದ್ದೇನೆ. ಏಕೆಂದರೆ, ನಾನು ನನ್ನ ಸ್ವಂತ ಹಿತವನ್ನೇ ಹುಡುಕದೆ, ಅನೇಕರು ರಕ್ಷಣೆ ಹೊಂದಬೇಕೆಂದು ಇತರರ ಹಿತಕ್ಕಾಗಿ ಶ್ರಮಿಸುವವನಾಗಿದ್ದೇನೆ.


ಇದು ರಾಜ್ಯಪಾಲನ ಕಿವಿಗೆ ಬಿದ್ದರೆ, ನೀವು ತಪ್ಪಿಸಿಕೊಳ್ಳುವ ಹಾಗೆ ನಾವು ಅವನನ್ನು ಸಮಾಧಾನಪಡಿಸುವೆವು,” ಎಂದರು.


ಸೌಲನ ಸೇವಕರಲ್ಲಿ ಎದೋಮ್ಯನಾದ ದೋಯೇಗನೆಂಬ ಹೆಸರುಳ್ಳ ಒಬ್ಬನು ಆ ದಿವಸ ಅಲ್ಲಿ ಯೆಹೋವ ದೇವರ ಆಲಯದ ಮುಂದೆ ಉಳಿದುಕೊಂಡಿದ್ದನು. ಅವನು ಸೌಲನ ಹಿಂಡು ಕಾಯುವವರಲ್ಲಿ ಮುಖ್ಯಸ್ಥನಾಗಿದ್ದನು.


ಅವನು ಟೈರ್ ಮತ್ತು ಸೀದೋನಿನ ಜನರೊಂದಿಗೆ ಬಹು ಕೋಪವುಳ್ಳವನಾಗಿದ್ದನು. ಈಗ ಅವರೆಲ್ಲರೂ ಒಂದಾಗಿ ಅವನ ಬಳಿ ಬಂದು ಅರಸನ ನಂಬಿಗಸ್ತ ಸೇವಕನಾದ ಬ್ಲಾಸ್ತ ಎಂಬುವನ ಬೆಂಬಲವನ್ನು ಪಡೆದುಕೊಂಡು, ಸಂಧಾನ ಮಾಡಿಕೊಳ್ಳಲು ಅರಸನನ್ನು ಕೇಳಿಕೊಂಡರು. ಏಕೆಂದರೆ ಅವರ ಆಹಾರ ಧಾನ್ಯಗಳು ಅರಸನ ಸೀಮೆಯಿಂದ ಬರುತ್ತಿದ್ದವು.


“ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ.


ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು, ಕ್ರಿಸ್ತ ಯೇಸುವಿನಲ್ಲಿರುವ ಫಿಲಿಪ್ಪಿಯ ದೇವರ ಪರಿಶುದ್ಧರೆಲ್ಲರಿಗೂ, ಅವರೊಂದಿಗಿರುವ ಮೇಲ್ವಿಚಾರಕರಿಗೂ ಸಭಾಸೇವಕರಿಗೂ ಬರೆಯುವ ಪತ್ರ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು