Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:9 - ಕನ್ನಡ ಸಮಕಾಲಿಕ ಅನುವಾದ

9 ನೀವು ಸ್ವೀಕರಿಸಿದ ಸುವಾರ್ತೆಯನ್ನಲ್ಲದೆ ಯಾವನಾದರೂ ಬೇರೆ ಸುವಾರ್ತೆಯನ್ನು ನಿಮಗೆ ಸಾರಿದರೆ, ಅವನು ಶಾಪಗ್ರಸ್ತನಾಗಲಿ ಎಂದು ಮೊದಲು ಹೇಳಿದಂತೆಯೇ ಈಗಲೂ ನಾನು ಪುನಃ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾವು ಮೊದಲು ಹೇಳಿದಂತೆಯೇ ಈಗಲೂ ನಾನು ತಿರುಗಿ ಹೇಳುತ್ತೇನೆ. ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀವು ಅಂಗೀಕರಿಸಿದ ಶುಭಸಂದೇಶಕ್ಕೆ ವಿರುದ್ಧವಾದ ಸಂದೇಶವನ್ನು ಸಾರುವವನು ಶಾಪಗ್ರಸ್ತನಾಗಲಿ ಎಂದು ನಾನು ಮೊದಲೇ ಹೇಳಿದಂತೆ, ಮತ್ತೊಮ್ಮೆ ಒತ್ತಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ ಎಂದು ನಾವು ಮೊದಲು ಹೇಳಿದ್ದಂತೆಯೇ ಈಗಲೂ ನಾನು ತಿರಿಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು ನಿಮಗೆ ಇದನ್ನು ಮೊದಲೇ ತಿಳಿಸಿದ್ದರೂ ಈಗ ಮತ್ತೆ ಹೇಳುತ್ತೇನೆ. ನೀವು ಈಗಾಗಲೇ ಸ್ವೀಕರಿಸಿಕೊಂಡಿರುವ ಸತ್ಯಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ಸಾರಿದರೆ ಅವನು ಶಾಪಗ್ರಸ್ತನಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅತ್ತಾ ಸಾಂಗಲ್ಲ್ಯಾ ಸಾರ್ಕೆ ಅನಿಪರ್ತುನ್ ಮಿಯಾ ತುಮ್ಕಾ ಸಾಂಗ್ತಾ: ತುಮಿ ಮಾನುನ್ ಘೆಟಲ್ಲಿ ಬರಿ ಖಬರ್ ಸೊಡುನ್, ಕೊನ್‍ಬಿ ಅನಿಎಕ್ ದುಸ್ರಿ ಖಬರ್ ಸಾಂಗ್ತಾ ಹೊಲ್ಯಾರ್, ತೆಂಚ್ಯಾ ವರ್‍ತಿ ಸರಾಪ್ ಪಡುಂದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:9
13 ತಿಳಿವುಗಳ ಹೋಲಿಕೆ  

ಪ್ರಿಯರೇ, ನೀವು ಕಲಿತುಕೊಂಡ ಬೋಧನೆಗೆ ವಿರೋಧವಾಗಿರುವ ಭೇದಗಳನ್ನೂ ಅಭ್ಯಂತರಗಳನ್ನೂ ಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರಿಂದ ದೂರವಾಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ದೇವರ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ. ಇಲ್ಲವಾದರೆ ದೇವರು ನಿನ್ನನ್ನು ಗದರಿಸಿ ನಿನ್ನನ್ನು ಸುಳ್ಳುಗಾರನೆಂದು ಸಾಬೀತುಪಡಿಸುವರು.


ನಾನು ನಿಮಗೆ ಆಜ್ಞಾಪಿಸುವ ವಾಕ್ಯಕ್ಕೆ ಏನನ್ನೂ ಕೂಡಿಸಬೇಡಿರಿ, ಅದರಿಂದ ಏನನ್ನೂ ತೆಗೆಯಬೇಡಿರಿ. ಆದರೆ ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಕೈಗೊಳ್ಳಬೇಕು.


ನಾನು ನಿಮಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಕಾಪಾಡಿ ಕೈಗೊಳ್ಳಬೇಕು. ಅದಕ್ಕೆ ಏನೂ ಕೂಡಿಸಬಾರದು. ಅದರಿಂದ ಏನನ್ನೂ ತೆಗೆದುಹಾಕಬಾರದು.


ನಾನು ಇದನ್ನು ಯೋಚಿಸಿದಾಗ, ಚಂಚಲಹೃದಯವನ್ನು ತಾಳಿದೆನೋ? ಅಥವಾ, ಒಮ್ಮೆ ಅದು “ಹೌದು, ಹೌದು” ಅದೇ ಕ್ಷಣದಲ್ಲಿ ಅದು “ಅಲ್ಲ, ಅಲ್ಲ” ಎಂದು ನಾನು ಲೋಕ ರೀತಿಯಾಗಿ ಯೋಜನೆಯನ್ನು ತಯಾರಿಸಿದ್ದೇನೋ?


ಕಡೆಯದಾಗಿ ನನ್ನ ಪ್ರಿಯರೇ, ಕರ್ತನಲ್ಲಿ ಆನಂದಿಸಿರಿ. ಬರೆದದ್ದನ್ನೇ ನಿಮಗೆ ಬರೆಯುವುದರಲ್ಲಿ ನನಗೆ ಬೇಸರವಿಲ್ಲ, ಅದು ನಿಮಗೆ ಸುರಕ್ಷಿತವೇ.


ಯಾವಾಗಲೂ ಕರ್ತ ದೇವರಲ್ಲಿ ಆನಂದಿಸಿರಿ, ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿಗೊಡಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ. ಯೆಹೋವ ದೇವರ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನವನ್ನು ಹೇಳುತ್ತಾರೆ.


ಅಲ್ಲಿ ಸ್ವಲ್ಪ ಸಮಯ ಕಳೆದನಂತರ ಅವನು ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಮತ್ತು ಫ್ರುಗ್ಯ ಪ್ರದೇಶದಲ್ಲೆಲ್ಲಾ ಸಂಚರಿಸುತ್ತಾ ಶಿಷ್ಯರಲ್ಲಿ ವಿಶ್ವಾಸವನ್ನು ಬಲಪಡಿಸಿದನು.


ನನ್ನ ಸ್ವಂತ ಜನರಾದ ನನ್ನ ಯೆಹೂದ್ಯ ಸಹೋದರರಿಗಾಗಿ, ಸಾಧ್ಯವಾದರೆ ನಾನೇ ಕ್ರಿಸ್ತ ಯೇಸುವಿನಿಂದ ದೂರಹೋಗಿ ಶಾಪಗ್ರಸ್ತನಾಗಲು ಸಿದ್ಧನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು