Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:12 - ಕನ್ನಡ ಸಮಕಾಲಿಕ ಅನುವಾದ

12 ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮುಂಚೆ ಪೇತ್ರನು ಯೆಹೂದ್ಯರಲ್ಲದವರೊಡನೆ ಊಟಮಾಡುತ್ತಿದ್ದನು. ಅವರು ಬಂದ ಮೇಲೆ ಯೆಹೂದ್ಯರಿಗೆ ಅವನು ಭಯಪಟ್ಟು ಯೆಹೂದ್ಯರಲ್ಲದವರಿಂದ ತನ್ನನ್ನು ಪ್ರತ್ಯೇಕಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮೊದಲು ಅವನು ಅನ್ಯಜನರೊಂದಿಗೆ ಊಟ ಮಾಡುತ್ತಿದ್ದನು. ಅವರು ಬಂದ ಮೇಲೆ ಸುನ್ನತಿಯವರಾದ ಅವರಿಗೆ ಅವನು ಭಯಪಟ್ಟು, ಅನ್ಯಜನರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯಕೋಬನ ಕಡೆಯಿಂದ ಕೆಲವು ಸಹೋದರರು ಬರುವುದಕ್ಕೆ ಮುಂಚೆ ಆತನು ಅನ್ಯಧರ್ಮೀಯರೊಡನೆ ಊಟಮಾಡುತ್ತಿದ್ದನು. ಆದರೆ ಅವರು ಬಂದ ಮೇಲೆ ಸುನ್ನತಿ ಪರವಾದಿಗಳಿಗೆ ಅಂಜಿ ಅನ್ಯಧರ್ಮೀಯರಿಂದ ದೂರವಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯಾಕಂದರೆ ಯಾಕೋಬನ ಕಡೆಯಿಂದ ಕೆಲವರು ಬರುವದಕ್ಕೆ ಮುಂಚೆ ಅವನು ಅನ್ಯಜನರ ಸಂಗಡ ಊಟಮಾಡುತ್ತಿದ್ದನು; ಅವರು ಬಂದ ಮೇಲೆ ಸುನ್ನತಿಯವರಾದ ಅವರಿಗೆ ಅವನು ಭಯಪಟ್ಟು ಅನ್ಯಜನರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಡೆದ ಸಂಗತಿ ಏನೆಂದರೆ: ಪೇತ್ರನು ಮೊದಲು ಅಂತಿಯೋಕ್ಯಕ್ಕೆ ಬಂದಾಗ ಅವನು ಯೆಹೂದ್ಯರಲ್ಲದವರೊಂದಿಗೆ ಊಟಮಾಡಿದನು ಮತ್ತು ಅನ್ಯೋನ್ಯತೆಯಿಂದಿದ್ದನು. ಆ ಬಳಿಕ ಯಾಕೋಬನಿಂದ ಕಳುಹಿಸಲ್ಪಟ್ಟಿದ್ದ ಕೆಲವು ಯೆಹೂದ್ಯರು ಬಂದರು. ಆಗ, ಪೇತ್ರನು ಯೆಹೂದ್ಯರಲ್ಲದವರೊಂದಿಗೆ ಊಟಮಾಡುವುದನ್ನು ನಿಲ್ಲಿಸಿದನು. ಪೇತ್ರನು ತನ್ನನ್ನು ಯೆಹೂದ್ಯರಲ್ಲದವರಿಂದ ಬೇರ್ಪಡಿಸಿಕೊಂಡನು. ಯೆಹೂದ್ಯರಲ್ಲದವರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಂಬಿಕೊಂಡಿದ್ದ ಯೆಹೂದ್ಯರಿಗೆ ಅವನು ಹೆದರಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜಾಕೊಬಾನ್ ಧಾಡುನ್ ದಿಲ್ಲಿ ಉಲ್ಲಿ ಲೊಕಾ ಥೈ ಯೆವ್ನ್ ಪಾವುಚ್ಯಾ ಅದ್ದಿ ಪೆದ್ರು ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ವಾಂಗ್ಡಾ ಬಸುನ್ ಜೆವಾನ್ ಕರುಕ್ ಲಾಗಲ್ಲೊ , ಖರೆ ತೆನಿ ಯೆಲ್ಲ್ಯಾ ತನ್ನಾ ಸುನ್ನತ್ ಕರುಕ್ ಪಾಜೆ ಮನುನ್ ಜಬರ್ದಸ್ತಿ ಕರ್‍ತಲ್ಯಾಂಚ್ಯಾ ಭಿಂಯಾನ್, ಜುದೆವ್ ನ್ಹಯ್ ಹೊತ್ತ್ಯಾ ಲೊಕಾನಿಕ್ನಾ ತೊ ಧುರ್ ರ್‍ಹಾಲೊ ಅನಿ ಎಗ್ಳೊ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:12
16 ತಿಳಿವುಗಳ ಹೋಲಿಕೆ  

ಪೇತ್ರನು ಅವರಿಗೆ: “ಯೆಹೂದ್ಯನು ಯೆಹೂದ್ಯರಲ್ಲದವರೊಂದಿಗೆ ಸೇರಿ, ಅವರನ್ನು ಭೇಟಿ ಮಾಡುವುದಾಗಲಿ ನಮ್ಮ ಯೆಹೂದಿ ನಿಯಮಕ್ಕೆ ವಿರೋಧವಾದದ್ದು ಎಂದು ನಿಮಗೆಲ್ಲರಿರೂ ತಿಳಿದೇ ಇದೆ. ಆದರೆ ಯಾವ ಮನುಷ್ಯನನ್ನೂ ಅಶುದ್ಧನು ಇಲ್ಲವೆ ನಿಷಿದ್ಧವಾದವನು ಎಂದು ಕರೆಯಬಾರದು ಎಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ.


ಫರಿಸಾಯರು ಮತ್ತು ನಿಯಮ ಬೋಧಕರು, “ಈತನು ಪಾಪಿಗಳನ್ನು ಸ್ವೀಕರಿಸಿ ಅವರೊಂದಿಗೆ ಊಟಮಾಡುತ್ತಾನೆ,” ಎಂದು ಗೊಣಗುಟ್ಟಿದರು.


ಸುವಾರ್ತೆಯ ಮೂಲಕ ಯೆಹೂದ್ಯರಲ್ಲದವರೂ ಸಹ ಇಸ್ರಾಯೇಲರೊಂದಿಗೆ ವಾರಸುದಾರರೂ ಒಂದೇ ದೇಹದ ಅವಯವಗಳೂ ಕ್ರಿಸ್ತ ಯೇಸುವಿನಲ್ಲಿ ದೇವರ ವಾಗ್ದಾನದ ಸಹಪಾಲುಗಾರರೂ ಆಗಿರಬೇಕೆಂಬುದೇ ಈ ರಹಸ್ಯ.


ಸಭೆಯ ಸ್ತಂಭಗಳಂತಿರುವ ನಾಯಕರಾದ ಯಾಕೋಬ, ಪೇತ್ರ ಹಾಗೂ ಯೋಹಾನರು ನನಗೆ ಕೊಡಲಾದ ಕೃಪೆಯನ್ನು ಗ್ರಹಿಸಿಕೊಂಡರು. ಆಗ ಅವರು, ನನಗೂ ಬಾರ್ನಬನಿಗೂ ಅನ್ಯೋನ್ಯತೆಯ ಬಲಗೈಯನ್ನು ಕೊಟ್ಟರು. ಹೀಗೆ ನಾವು ಯೆಹೂದ್ಯರಲ್ಲದವರ ಬಳಿಗೂ ಅವರು ಯೆಹೂದ್ಯರ ಬಳಿಗೂ ಹೋಗುವಂತೆ ತೀರ್ಮಾನವಾಯಿತು.


ಸಕಲ ವಿಧವಾದ ಕೆಟ್ಟತನಗಳಿಗೆ ದೂರವಾಗಿರಿ.


ಹೀಗೆ ಕ್ರಿಸ್ತ ಯೇಸು ತಮ್ಮ ದೇಹವನ್ನು ಶಿಲುಬೆಯಲ್ಲಿ ಸಮರ್ಪಿಸಿದ್ದರಿಂದ ನಿಯಮದ ಆಜ್ಞೆಗಳುಳ್ಳ ಶಾಸನಗಳನ್ನು ರದ್ದುಗೊಳಿಸಿದರು. ಈ ರೀತಿಯಾಗಿ ಇವೆರಡೂ ಗುಂಪಿನವರಿಂದ ಒಬ್ಬ ನೂತನ ಮಾನವತ್ವವನ್ನು ತಮ್ಮಲ್ಲಿ ಸೃಷ್ಟಿಸಿ ಸಮಾಧಾನವನ್ನು ಉಂಟುಮಾಡಿದರು.


‘ನಿನ್ನಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ. ಏಕೆಂದರೆ ನಿನಗಿಂತ ಪರಿಶುದ್ಧನಾಗಿದ್ದೇನೆ,’ ಎಂದು ಹೇಳುವರು. ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ, ದಿನವೆಲ್ಲಾ ಉರಿಯುವ ಬೆಂಕಿಯಾಗಿಯೂ ಇದ್ದಾರೆ.


“ನೀನು ಯಾರಿಗೆ ಹೆದರಿ, ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸ ಮಾಡಿರುವೆ. ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ, ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?


ಖಂಡಿತವಾಗಿಯೂ ಮನುಷ್ಯನ ಭಯವು ಒಂದು ಉರುಲಾಗಿರುವುದು; ಯೆಹೋವ ದೇವರಲ್ಲಿ ಭರವಸವಿಡುವವನು, ಸಂರಕ್ಷಣೆ ಹೊಂದುವನು.


ಸುಮ್ಮನಿರಬೇಕೆಂದು ಪೇತ್ರನು ಅವರಿಗೆ ಕೈಸನ್ನೆ ಮಾಡಿ ಕರ್ತದೇವರು ಹೇಗೆ ತನ್ನನ್ನು ಸೆರೆಮನೆಯಿಂದ ಬಿಡಿಸಿ ಹೊರಗೆ ಕರೆದುಕೊಂಡು ಬಂದರು ಎಂಬುದನ್ನು ವಿವರಿಸಿದನು. “ಇದನ್ನು ಯಾಕೋಬನಿಗೆ ಹಾಗೂ ಸಹೋದರರಿಗೆ ತಿಳಿಸಿರಿ,” ಎಂದು ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.


ಆದರೆ ಅವರು ಸುವಾರ್ತೆಯ ಸತ್ಯದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ, “ನೀನು ಯೆಹೂದ್ಯನಾಗಿದ್ದು, ಯೆಹೂದ್ಯರಂತೆ ಜೀವಿಸದೆ ಯೆಹೂದ್ಯರಲ್ಲದವರಂತೆ ಜೀವಿಸಿ, ಯೆಹೂದ್ಯರಲ್ಲದವರು ಯೆಹೂದ್ಯರಂತೆ ಜೀವಿಸಬೇಕೆಂದು ನೀನು ಒತ್ತಾಯ ಮಾಡುವುದು ಹೇಗೆ?” ಎಂದು ಕೇಳಿದೆ.


ಆದರೆ, ಹೊಸ ದ್ರಾಕ್ಷಾರಸವನ್ನು ಹೊಸ ಚರ್ಮದ ಚೀಲಗಳಲ್ಲಿ ಹಾಕಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು