Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:15 - ಕನ್ನಡ ಸಮಕಾಲಿಕ ಅನುವಾದ

15 “ನಾವಂತೂ ಹುಟ್ಟು ಯೆಹೂದ್ಯರು, ಪಾಪಿಗಳೆಂದು ಕರೆಯಲಾಗುವ ಯೆಹೂದ್ಯರಲ್ಲದವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾವಂತೂ ಜನ್ಮತ ಯೆಹೂದ್ಯರು “ಪಾಪಿಗಳೆನಿಸಿಕೊಂಡ ಅನ್ಯಜನರಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಾವಂತೂ ಹುಟ್ಟು ಯೆಹೂದ್ಯರು. ಪಾಪಿಗಳೆಂದು ಕರೆಯಲಾಗುವ ಅನ್ಯಧರ್ಮೀಯರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾವಂತೂ ಹುಟ್ಟು ಯೆಹೂದ್ಯರು, ಪಾಪಿಗಳೆನಿಸಿಕೊಂಡ ಅನ್ಯಜನರಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾವಂತೂ ಹುಟ್ಟು ಯೆಹೂದ್ಯರು. ನಾವು ಪಾಪಿಗಳೆನಿಸಿಕೊಂಡಿರುವ ಅನ್ಯಜನರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜಲ್ಮಾನಿ ಅಮಿ ಜುದೆವ್, ಅನಿ ತೆನಿ ಸಾಂಗ್ತಲ್ಯಾ ಸಾರ್ಕೆ ಜುದೆವ್ ನ್ಹಯ್ ಹೊತ್ತೆ ಪಾಪಿ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:15
14 ತಿಳಿವುಗಳ ಹೋಲಿಕೆ  

ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸ ಹೋದವರೂ ವಿವಿಧ ಆಶೆಗಳಿಗೂ ಭೋಗಗಳಿಗೂ ದಾಸರಾಗಿದ್ದೆವು. ಕೆಟ್ಟತನ ಹಾಗೂ ಮತ್ಸರಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ದ್ವೇಷಿಸುವವರೂ ಆಗಿದ್ದೆವು.


ಹಿಂದೊಮ್ಮೆ ನಾವೆಲ್ಲರೂ ಅವರೊಂದಿಗೆ ನಮ್ಮ ದೇಹದ ಆಶೆಗಳ ಪ್ರಕಾರ ಜೀವಿಸುತ್ತಿದ್ದಾಗ ಮನಸ್ಸಿನ ಹಾಗೂ ಶರೀರದ ಆಶೆಗಳನ್ನು ನೆರವೇರಿಸುತ್ತಾ ನಡೆದು, ಉಳಿದವರಂತೆ ಸ್ವಾಭಾವಿಕವಾಗಿ ದೇವರ ಕೋಪಕ್ಕೆ ಗುರಿಯಾದವರಾಗಿದ್ದೆವು.


ಹಾಗಾದರೆ ಏನು? ಯೆಹೂದ್ಯರಾದ ನಾವು ಯೆಹೂದ್ಯರಲ್ಲದವರಿಗಿಂತಲೂ ಶ್ರೇಷ್ಠರೋ? ಎಂದಿಗೂ ಇಲ್ಲವಲ್ಲ. ಯೆಹೂದ್ಯರಾಗಲಿ, ಯೆಹೂದ್ಯರಲ್ಲದವರಾಗಲಿ ಎಲ್ಲರೂ ಪಾಪದ ಶಕ್ತಿಗೆ ಒಳಗಾದವರೆಂದು ನಾವು ಈಗಾಗಲೇ ತೋರಿಸಿದ್ದೇವೆ.


ಮಾಂಸದಲ್ಲಿ ಭರವಸೆ ಇಡಲು ನನಗೆ ಸಾಕಷ್ಟು ಕಾರಣಗಳಿವೆ. ಬೇರೆ ಯಾವನಾದರೂ ಮಾನವೀಯ ಪ್ರಯತ್ನಗಳಲ್ಲಿ ಭರವಸೆ ಇಡಬಹುದೆಂದು ಭಾವಿಸುವುದಾದರೆ, ನಾನು ಅದಕ್ಕಿಂತಲೂ ಹೆಚ್ಚಾಗಿ ಹೇಳಬಹುದು:


ಆದ್ದರಿಂದ ಆ ಬಾಧ್ಯತೆಯು ಕೃಪೆಯಿಂದಲೇ, ನಂಬಿಕೆಯ ಮೂಲಕ ದೊರಕುತ್ತದೆ. ಈ ವಾಗ್ದಾನವು ನಿಯಮದ ಸಂತತಿಯವರಿಗೆ ಮಾತ್ರವಲ್ಲ ಅಬ್ರಹಾಮನಲ್ಲಿ ಇದ್ದ ನಂಬಿಕೆ ಇರುವವರ ಸಂತತಿಯವರೆಲ್ಲರಿಗೂ ಶಾಶ್ವತವಾಗಿ ದೊರಕುವುದು. ಏಕೆಂದರೆ ಅವನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.


“ಆಗ ಕರ್ತ ಯೇಸುವು, ‘ಹೋಗು, ನಾನು ಯೆಹೂದ್ಯರಲ್ಲದವರ ಬಳಿಗೆ ನಿನ್ನನ್ನು ದೂರಪ್ರದೇಶಗಳಿಗೆ ಕಳುಹಿಸುವೆನು,’ ಎಂದು ನನಗೆ ಹೇಳಿದರು.”


ಫರಿಸಾಯರು ಇದನ್ನು ಕಂಡು, “ನಿಮ್ಮ ಬೋಧಕನು ಸುಂಕದವರ ಮತ್ತು ಅಪಖ್ಯಾತಿಯ ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಯೇಸುವಿನ ಶಿಷ್ಯರನ್ನು ಕೇಳಿದರು.


ಯೆಹೋವ ದೇವರು ನಿನಗೆ, ‘ಹೋಗು ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ, ಅವರು ತೀರಿ ಹೋಗುವವರೆಗೂ ಅವರ ಸಂಗಡ ಯುದ್ಧಮಾಡಬೇಕು,’ ಎಂದು ಆಜ್ಞಾಪಿಸಿದರು.


‘ಮನುಷ್ಯಪುತ್ರನಾದ ನಾನು ಪಾಪಿಷ್ಠರ ಕೈಗೆ ಒಪ್ಪಿಸಿದವನಾಗಿ, ಶಿಲುಬೆಗೆ ಹಾಕಲಾಗಿ ಮೂರನೆಯ ದಿನದಲ್ಲಿ ತಿರುಗಿ ಜೀವಂತನಾಗಿ ಏಳುವೆನು,’ ಎಂದು ನಿಮಗೆ ಹೇಳಿದ್ದನ್ನು ನೀವು ನೆನಪುಮಾಡಿಕೊಳ್ಳಿರಿ,” ಎಂದರು.


“ಆದರೆ, ನಾವು ಕ್ರಿಸ್ತ ಯೇಸುವಿನಲ್ಲಿ ನೀತಿವಂತರಾಗಲು ಪ್ರಯತ್ನಿಸುವ ನಾವೂ ಪಾಪಿಗಳಾಗಿ ಇರುವುದಾದರೆ, ಕ್ರಿಸ್ತ ಯೇಸು ಪಾಪಕ್ಕೆ ಪ್ರೋತ್ಸಾಹ ನೀಡಿದ ಹಾಗಾಗುವುದೋ? ಎಂದಿಗೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು