Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:2 - ಕನ್ನಡ ಸಮಕಾಲಿಕ ಅನುವಾದ

2 ನಾನು ನನಗೆ ದೊರೆತ ಪ್ರಕಟನೆಗೆ ಅನುಸಾರವಾಗಿ ಅಲ್ಲಿಗೆ ಹೋದೆನು. ಅಲ್ಲಿ ಇರುವ ಸಭೆಗೆ ಹೋಗಿ ಯೆಹೂದ್ಯರಲ್ಲದ ಜನರಿಗೆ ನಾನು ಸಾರುವ ಸುವಾರ್ತೆಯ ಬಗ್ಗೆ ವಿವರಿಸಿದೆನು. ಅಲ್ಲಿರುವ ಗಣ್ಯನಾಯಕರಿಗೆ ವೈಯಕ್ತಿಕವಾಗಿ ಅದರ ಬಗ್ಗೆ ವರದಿಮಾಡಿದೆನು. ಏಕೆಂದರೆ ನಾನು ಮಾಡಿದ ಸೇವೆ ಮತ್ತು ಮುಂದೆ ಮಾಡಲಿರುವ ಸೇವೆಯು ನಿಷ್ಫಲವಾಗಬಾರದೆಂಬ ಕಾರಣಕ್ಕಾಗಿ ಹೀಗೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದೈವಪ್ರೇರಣೆಗೆ ಅನುಸಾರವಾಗಿ ಹೋಗಿ, ಅನ್ಯಜನರಲ್ಲಿ ನಾನು ಸಾರುವ ಸುವಾರ್ತೆಯು ಏನೆಂಬುದನ್ನು ಅಲ್ಲಿದ್ದ ಗಣ್ಯರಿಗೆ ಪ್ರತ್ಯೇಕವಾಗಿ ತಿಳಿಸಿದೆನು. ಏಕೆಂದರೆ ನಾನು ಸುವಾರ್ತೆಗಾಗಿ ಪಟ್ಟ ಶ್ರಮವಾಗಲಿ, ಈಗ ಪಡುತ್ತಿರುವ ಶ್ರಮವಾಗಲಿ ನಿಷ್ಫಲವಾಗಬಾರದೆಂದು ತಿಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದೇವಪ್ರೇರಣೆಗೆ ಅನುಸಾರವಾಗಿಯೇ ಅಲ್ಲಿಗೆ ಹೋದೆ. ಅನ್ಯಧರ್ಮೀಯರಿಗೆ ನಾನು ಸಾರುತ್ತಿದ್ದ ಸಂದೇಶ ಏನೆಂಬುದನ್ನು ಅಲ್ಲಿದ್ದ ಕೆಲವು ಗಣ್ಯವ್ಯಕ್ತಿಗಳಿಗೆ ಪ್ರತ್ಯೇಕವಾಗಿ ತಿಳಿಸಿದೆ. ಅದುವರೆಗೆ ನಾನು ಪಟ್ಟ ಶ್ರಮವಾಗಲಿ ಈಗ ಪಡುತ್ತಿರುವ ಶ್ರಮವಾಗಲಿ ವ್ಯರ್ಥವಾಗಬಾರದೆಂಬ ಉದ್ದೇಶದಿಂದ ಹೀಗೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದೈವಪ್ರೇರಣೆಗನುಸಾರವಾಗಿ ಹೋದೆನು. ಅನ್ಯಜನರಲ್ಲಿ ನಾನು ಸಾರುವ ಸುವಾರ್ತೆಯು ಏನೆಂಬದನ್ನು ಅಲ್ಲಿದ್ದವರಿಗೆ ತಿಳಿಸಿದೆನು. ಆದರೆ ನಾನು ಪಡುತ್ತಿರುವ ಪ್ರಯಾಸವಾಗಲಿ ಪಟ್ಟ ಪ್ರಯಾಸವಾಗಲಿ ನಿಷ್ಫಲವಾಗಬಾರದೆಂದು ಮಾನಿಷ್ಠರಿಗೆ ಏಕಾಂತದಲ್ಲಿ ತಿಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ಹೋಗಲೇಬೇಕೆಂದು ದೇವರು ನನಗೆ ತಿಳಿಸಿದ್ದರಿಂದ ವಿಶ್ವಾಸಿಗಳ ನಾಯಕರಾದ ಈ ಜನರ ಬಳಿಗೆ ಹೋದೆನು. ನಾವಷ್ಟೇ ಇದ್ದಾಗ, ಯೆಹೂದ್ಯರಲ್ಲದವರಿಗೆ ಸಾರುವ ಸುವಾರ್ತೆಯನ್ನು ಇವರಿಗೆ ತಿಳಿಸಿದೆನು. ನಾನು ಮೊದಲು ಮಾಡಿದ ಸೇವೆ ಮತ್ತು ಈಗ ಮಾಡುತ್ತಿರುವ ಸೇವೆ ವ್ಯರ್ಥವಾಗಬಾರದೆಂಬ ಉದ್ದೇಶದಿಂದ ಇವರಿಗೆ ಅರ್ಥವಾಗುವಂತೆ ನನ್ನ ಸೇವೆಯ ಬಗ್ಗೆ ತಿಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಖರೆ ಮಿಯಾ ಥೈ ಗೆಲ್ಲೆ ಕಶ್ಯಾಕ್ ಮಟ್ಲ್ಯಾರ್, ಮಾಕಾ ಗಾವಲ್ಲ್ಯಾ ದೆವಾಚ್ಯಾ ಪ್ರೆರನಾಕ್ ಖಾಲ್ತಿ ಹೊವ್ನ್ ಗೆಲ್ಲೊ, ಅನಿ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ ಮಿಯಾ ಸಾಂಗುಕ್ ಲಾಗಲ್ಲೊ; ತ್ಯಾ ಬರ್‍ಯಾ ಖಬ್ರೆಚ್ಯಾ ವಿಶಯಾತ್ ಮಿಯಾ ಥೈತ್ಲ್ಯಾ ಮುಖಂಡಾಚ್ಯಾ ಇದ್ರಾಕ್ ಸೊಡ್ಸುನ್ ಸಾಂಗಟ್ಲೊ. ಕಶ್ಯಾಕ್ ಮಟ್ಲ್ಯಾರ್ ತವ್ಡೆ ಪತರ್ ಮಿಯಾ ಕರಲ್ಲೆ ಕಾಮ್ ಅನಿ ಅತ್ತಾ ಹೊತಲೆ ಕಾಮ್ ಪಾಯ್ದ್ಯಾಕ್ ಪಡಿನಸಲ್ಲೆ ಹೊವ್ಚೆ ನ್ಹಯ್ ಮನ್ತಲೆ ಮಾಕಾ ಪಾಜೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:2
26 ತಿಳಿವುಗಳ ಹೋಲಿಕೆ  

ಅಲ್ಲಿದ್ದ ಸಭೆಯ ನಾಯಕರೂ ಸಹ ನನ್ನ ಸಂದೇಶದ ಬಗ್ಗೆ ನನಗೆ ಏನೂ ಹೇಳಲಿಲ್ಲ. ಅವರು ಎಂಥವರು ಎಂಬುದು ನನಗೆ ಮುಖ್ಯವಲ್ಲ; ಏಕೆಂದರೆ, ದೇವರು ಪಕ್ಷಪಾತಿಯಲ್ಲ.


ನೀವು ಜೀವವಾಕ್ಯವನ್ನು ಹಿಡಿದವರಾಗಿದ್ದರೆ, ಹೀಗೆ ನಾನು ಓಡಿದ ಓಟವೂ ಪ್ರಯಾಸವೂ ವ್ಯರ್ಥವಾಗಲಿಲ್ಲವೆಂದು ತಿಳಿದು ಕ್ರಿಸ್ತನ ಪುನರಾಗಮನ ದಿನದಲ್ಲಿ ಅಭಿಮಾನ ಪಡುವೆನು.


ಈ ಕಾರಣದಿಂದ, ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಶೋಧಿಸುವನೋ ಎಂಬ ಭಯದ ದೆಸೆಯಿಂದ, ನಾನು ಸಹ ಸಹಿಸಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳಿದುಕೊಳ್ಳುವುದಕ್ಕೆ ತಿಮೊಥೆಯನನ್ನು ಕಳುಹಿಸಿದೆನು.


ಸಭೆಯ ಸ್ತಂಭಗಳಂತಿರುವ ನಾಯಕರಾದ ಯಾಕೋಬ, ಪೇತ್ರ ಹಾಗೂ ಯೋಹಾನರು ನನಗೆ ಕೊಡಲಾದ ಕೃಪೆಯನ್ನು ಗ್ರಹಿಸಿಕೊಂಡರು. ಆಗ ಅವರು, ನನಗೂ ಬಾರ್ನಬನಿಗೂ ಅನ್ಯೋನ್ಯತೆಯ ಬಲಗೈಯನ್ನು ಕೊಟ್ಟರು. ಹೀಗೆ ನಾವು ಯೆಹೂದ್ಯರಲ್ಲದವರ ಬಳಿಗೂ ಅವರು ಯೆಹೂದ್ಯರ ಬಳಿಗೂ ಹೋಗುವಂತೆ ತೀರ್ಮಾನವಾಯಿತು.


ಗೊತ್ತುಗುರಿ ಇಲ್ಲದವನ ಹಾಗೆ ನಾನು ಓಡುವುದಿಲ್ಲ, ಗಾಳಿಯನ್ನು ಗುದ್ದುವವನ ಹಾಗೆ ನಾನು ಹೋರಾಡುವುದಿಲ್ಲ.


ನಾವಾದರೋ ಶಿಲುಬೆಗೆ ಹಾಕಲಾದ ಕ್ರಿಸ್ತ ಯೇಸುವನ್ನೇ ಪ್ರಸಂಗಿಸುತ್ತಿದ್ದೇವೆ. ಇದು ಯೆಹೂದ್ಯರಿಗೆ ವಿಘ್ನವೂ ಯೆಹೂದ್ಯರಲ್ಲದವರಿಗೆ ಬುದ್ದಿಹೀನತೆಯಾಗಿದೆ.


ಪಂದ್ಯಗಳಲ್ಲಿ ಎಲ್ಲರೂ ಓಡುತ್ತಾರೆ. ಆದರೆ ಒಬ್ಬನಿಗೆ ಮಾತ್ರ ಬಹುಮಾನ ದೊರೆಯುತ್ತದೆ ಎಂಬುದು ನಿಮಗೆ ತಿಳಿಯದೋ? ಬಹುಮಾನವನ್ನು ಪಡಕೊಳ್ಳಬೇಕೆಂದು ನೀವೂ ಓಡಿರಿ.


ಶಿಲುಬೆಗೆ ಹಾಕಲಾದ ಯೇಸು ಕ್ರಿಸ್ತನನ್ನೇ ಹೊರತು ನಿಮ್ಮಲ್ಲಿ ಬೇರೆ ಯಾವುದನ್ನೂ ತಿಳಿಯದವನಾಗಿರುವೆನೆಂದು ತೀರ್ಮಾನಿಸಿಕೊಂಡೆನು.


ಇದಕ್ಕೆ ಜನರು ಮೌನವಾಗಿದ್ದು, ಯೆಹೂದ್ಯರಲ್ಲದವರ ಮಧ್ಯದಲ್ಲಿ ದೇವರು ತಮ್ಮ ಮೂಲಕ ಮಾಡಿದ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಕುರಿತು ಬಾರ್ನಬ ಮತ್ತು ಪೌಲ ಹೇಳುವುದನ್ನು ಕೇಳಿಸಿಕೊಂಡರು.


ಅವರು ಯೆರೂಸಲೇಮನ್ನು ತಲುಪಿದಾಗ, ಸಭೆಯವರು, ಅಪೊಸ್ತಲರು ಹಾಗೂ ಹಿರಿಯರು ಅವರನ್ನು ಸ್ವಾಗತಿಸಿದರು. ದೇವರು ತಮ್ಮ ಮುಖಾಂತರವಾಗಿ ಮಾಡಿದ್ದನ್ನು ಅವರು ತಿಳಿಸಿದರು.


ನೀವು ಅವನನ್ನು ಪೂರ್ಣ ಆನಂದದಿಂದ ಕರ್ತನಲ್ಲಿ ಸೇರಿಸಿಕೊಳ್ಳಿರಿ ಮತ್ತು ಅಂಥವರನ್ನು ಸನ್ಮಾನಿಸಿರಿ.


ದೇವರು ತಮ್ಮ ಪುತ್ರನನ್ನು ನನ್ನಲ್ಲಿ ಪ್ರಕಟಿಸಿ, ಯೆಹೂದ್ಯರಲ್ಲದವರಲ್ಲಿ ಸುವಾರ್ತೆಯನ್ನು ಸಾರಬೇಕೆಂದು ಮನಸ್ಸು ಮಾಡಿದರು. ಕೂಡಲೇ ದೇವರ ಪುತ್ರ ಆಗಿರುವವರ ಪ್ರಕಟಣೆಯ ತರುವಾಯ ನಾನು ಯಾವ ಮನುಷ್ಯರನ್ನು ವಿಚಾರಿಸಲಿಲ್ಲ.


ಮರುದಿನ ರಾತ್ರಿ ಕರ್ತ ಯೇಸು ಪೌಲನ ಬಳಿಯಲ್ಲಿ ನಿಂತುಕೊಂಡು, “ಧೈರ್ಯದಿಂದಿರು! ನೀನು ಯೆರೂಸಲೇಮಿನಲ್ಲಿ ನನ್ನ ವಿಷಯದಲ್ಲಿ ಸಾಕ್ಷಿ ಕೊಟ್ಟಂತೆಯೇ ರೋಮಿನಲ್ಲಿಯೂ ಸಾಕ್ಷಿಕೊಡತಕ್ಕದ್ದು,” ಎಂದರು.


ಒಂದು ರಾತ್ರಿ ಕರ್ತ ಯೇಸು ದರ್ಶನದಲ್ಲಿ ಪೌಲನೊಂದಿಗೆ ಮಾತನಾಡಿ: “ಭಯಪಡಬೇಡ, ಮಾತನಾಡುತ್ತಲೇ ಇರು, ಸುಮ್ಮನಿರಬೇಡ.


ಆದರೆ ಗಮಲಿಯೇಲ್ ಎಂಬ ಹೆಸರಿನ ಒಬ್ಬ ಫರಿಸಾಯನಿದ್ದನು. ಅವನು ನಿಯಮ ಬೋಧಕನೂ ಎಲ್ಲಾ ಜನರ ಗೌರವಕ್ಕೆ ಪಾತ್ರನೂ ಆಗಿದ್ದನು. ಅವನು ನ್ಯಾಯಸಭೆಯಲ್ಲಿ ಎದ್ದು ನಿಂತುಕೊಂಡು, ಸ್ವಲ್ಪ ಸಮಯ ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಆಜ್ಞಾಪಿಸಿದನು.


“ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದ್ದರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ಸತ್ತ ನೊಣಗಳು ಸುಗಂಧ ತೈಲವನ್ನು ದುರ್ವಾಸನೆಗೆ ಒಳಪಡಿಸುತ್ತದೆ. ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮಾನಗಳನ್ನು ಕೆಡಿಸಿಬಿಡುತ್ತದೆ.


ಇದರಿಂದ ಪೌಲ, ಬಾರ್ನಬರು ಅವರೊಂದಿಗೆ ಭಿನ್ನಾಭಿಪ್ರಾಯವುಳ್ಳವರಾಗಿ ತೀವ್ರ ವಿವಾದವುಂಟಾಯಿತು. ಈ ಪ್ರಶ್ನೆಯ ವಿಷಯದಲ್ಲಿ ಅಪೊಸ್ತಲರನ್ನೂ ಹಿರಿಯರನ್ನೂ ಭೇಟಿಯಾಗಲು, ತಮ್ಮಲ್ಲಿ ಬೇರೆ ಕೆಲವರು ಪೌಲ, ಬಾರ್ನಬರೊಂದಿಗೆ ಯೆರೂಸಲೇಮಿಗೆ ಹೋಗಬೇಕೆಂದು ನಿರ್ಣಯಿಸಲಾಯಿತು.


ಆದ್ದರಿಂದ ದೇವರ ಆಯ್ಕೆಯು ಮನುಷ್ಯನ ಬಯಕೆ ಅಥವಾ ಪ್ರಯತ್ನದಿಂದಾಗಿರದೆ, ದೇವರ ಕರುಣೆಯಿಂದಲೇ ಆಗಿದೆ.


ನನ್ನ ಹೊಗಳಿಕೆಯಲ್ಲಿ ಪ್ರಯೋಜನವಿಲ್ಲದಿದ್ದರೂ ಅದು ಅವಶ್ಯವಾಗಿದೆ. ನಾನು ಈಗ ಕರ್ತ ಯೇಸುವಿನಿಂದ ಹೊಂದಿದ ದರ್ಶನಗಳನ್ನು ಮತ್ತು ಪ್ರಕಟನೆಗಳನ್ನು ಕುರಿತು ಹೇಳುತ್ತೇನೆ.


ಕ್ರಿಸ್ತ ಯೇಸುವಿನ ಕೃಪೆಯಲ್ಲಿ ನಿಮ್ಮನ್ನು ಕರೆದ ದೇವರನ್ನು ನೀವು ಇಷ್ಟು ಬೇಗನೆ ಬಿಟ್ಟು ಬೇರೆ ಸುವಾರ್ತೆಯ ಕಡೆಗೆ ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.


ನಾನು ಅದನ್ನು ಯಾವ ಮನುಷ್ಯನಿಂದಲೂ ಪಡೆಯಲಿಲ್ಲ, ನನಗೆ ಯಾವ ಮನುಷ್ಯನೂ ಉಪದೇಶಿಸಲಿಲ್ಲ, ಆದರೆ ನಾನು ಅದನ್ನು ಕ್ರಿಸ್ತ ಯೇಸುವಿನ ಪ್ರಕಟನೆಯಿಂದಲೇ ಸ್ವೀಕರಿಸಿಕೊಂಡೆನು.


ನೀವು ಚೆನ್ನಾಗಿ ಓಡುತ್ತಿದ್ದಿರಿ. ನೀವು ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ತಡೆದವರು ಯಾರು?


ನಾನು ಒಳ್ಳೆಯ ಹೋರಾಟವನ್ನು ಮಾಡಿದ್ದೇನೆ. ನಾನು ಓಟವನ್ನು ಮುಗಿಸಿದ್ದೇನೆ. ನಾನು ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ.


ಆದಕಾರಣ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಇರುವುದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನೂ ನಾವು ಎಸೆದುಬಿಟ್ಟು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು