Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:7 - ಕನ್ನಡ ಸಮಕಾಲಿಕ ಅನುವಾದ

7 ಅದಕ್ಕೆ ಬದಲಾಗಿ, ಯೆಹೂದ್ಯರಿಗೆ ಸುವಾರ್ತೆ ಸಾರುವುದು ಪೇತ್ರನಿಗೆ ಒಪ್ಪಿಸಿಕೊಟ್ಟಂತೆಯೇ, ಯೆಹೂದ್ಯರಲ್ಲದವರಿಗೆ ಸುವಾರ್ತೆ ಸಾರುವುದು ನನಗೆ ಒಪ್ಪಿಸಲಾಯಿತು ಎಂಬುದನ್ನು ಸಭೆಯ ನಾಯಕರು ಸಹ ಗ್ರಹಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಸುನ್ನತಿಯಾದವರಿಗೆ ಸುವಾರ್ತೆಯನ್ನು ಸಾರುವ ಕೆಲಸವು ಹೇಗೆ ಪೇತ್ರನಿಗೆ ಕೊಡಲ್ಪಟ್ಟಿತೋ, ಹಾಗೆಯೇ ಅನ್ಯಜನರಿಗೆ ಅದನ್ನು ಸಾರುವ ಕಾರ್ಯವನ್ನು ನನಗೆ ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬದಲಾಗಿ, ಯೆಹೂದ್ಯರಿಗೆ ಶುಭಸಂದೇಶವನ್ನು ಸಾರುವ ಸೇವೆಯನ್ನು ಪೇತ್ರನಿಗೆ ವಹಿಸಿಕೊಟ್ಟಂತೆಯೇ ಯೆಹೂದ್ಯರಲ್ಲದವರಿಗೆ ಶುಭಸಂದೇಶವನ್ನು ಸಾರುವ ಸೇವಾಕಾರ್ಯವನ್ನು ದೇವರು ನನಗೆ ವಹಿಸಿಕೊಟ್ಟಿದ್ದಾರೆ ಎಂಬುದನ್ನು ಆ ಗಣ್ಯವ್ಯಕ್ತಿಗಳು ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸುನ್ನತಿಯಾದವರಲ್ಲಿ ಅಪೊಸ್ತಲತನವನ್ನು ನಡಿಸುವದಕ್ಕೋಸ್ಕರ ಪೇತ್ರನನ್ನು ಪ್ರೇರಿಸಿದಾತನು ಅನ್ಯಜನರಲ್ಲಿ ಅದನ್ನು ನಡಿಸುವದಕ್ಕೆ ನನ್ನನ್ನೂ ಪ್ರೇರಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಪೇತ್ರನಂತೆ ನನಗೂ ದೇವರು ವಿಶೇಷವಾದ ಕೆಲಸವನ್ನು ಕೊಟ್ಟಿದ್ದಾನೆಂಬುದನ್ನು ಈ ನಾಯಕರು ತಿಳಿದುಕೊಂಡರು. ಯೆಹೂದ್ಯರಿಗೆ ಸುವಾರ್ತೆಯನ್ನು ತಿಳಿಸಬೇಕೆಂಬ ಕೆಲಸವನ್ನು ದೇವರು ಪೇತ್ರನಿಗೆ ಕೊಟ್ಟನು. ಆದರೆ ಯೆಹೂದ್ಯರಲ್ಲದವರಿಗೆ ಸುವಾರ್ತೆಯನ್ನು ತಿಳಿಸಬೇಕೆಂಬ ಕೆಲಸವನ್ನು ದೇವರು ನನಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆಚ್ಯಾ ಬದ್ಲಾಕ್ ಕಶೆ ಸುನ್ನತ್ ಕರಲ್ಲ್ಯಾಕ್ನಿ ಬರಿ ಖಬರ್ ಪರ್ಗಟ್ ಕರ್‍ತಲೆ ಕಾಮ್ ಪೆದ್ರುಕ್ ಗಾವ್ಲಾ, ತಸೆಚ್ ಸುನ್ನತ್ ಕರಿನಸಲ್ಲ್ಯಾಕ್ನಿ ಬರಿ ಖಬರ್ ಪರ್ಗಟ್ ಕರ್‍ತಲಿ ಕಾಮ್ ಮಾಕಾ ಗಾವ್ಲಾ ಮನುನ್ ತೆನಿ ಸಗ್ಳ್ಯಾನಿ ಒಪ್ಪುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:7
20 ತಿಳಿವುಗಳ ಹೋಲಿಕೆ  

ಆದರೆ ಕರ್ತ ಯೇಸುವು ಅವನಿಗೆ, “ಹೋಗು! ಯೆಹೂದ್ಯರಲ್ಲದವರಿಗೂ ಅವರ ಅರಸುಗಳಿಗೂ ಇಸ್ರಾಯೇಲ್ ದೇಶಕ್ಕೂ ನನ್ನ ಹೆಸರನ್ನು ಪ್ರಸಿದ್ಧಿಪಡಿಸಲು ಅವನು ನಾನು ಆಯ್ದುಕೊಂಡ ಸಾಧನವಾಗಿದ್ದಾನೆ.


ಇದಕ್ಕಾಗಿಯೇ ಸಂದೇಶ ಸಾರುವವನೂ ಅಪೊಸ್ತಲನೂ ಆಗಿರುವ ನಾನು ಯೆಹೂದ್ಯರಲ್ಲದವರಿಗೆ ನಂಬಿಗಸ್ತನಾದ ಸತ್ಯ ಬೋಧಕನಾಗಿ ನೇಮಕವಾದೆನು. ಇದು ಸುಳ್ಳಲ್ಲ, ಸತ್ಯವನ್ನೇ ಹೇಳುತ್ತೇನೆ.


ದೇವರು ನಮ್ಮನ್ನು ಅನುಮೋದಿಸಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿಕೊಟ್ಟಿದ್ದಾರೆ. ಹಾಗಿರುವುದರಿಂದ, ನಾವು ಮನುಷ್ಯರನ್ನು ಮೆಚ್ಚಿಸದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.


ದೇವರು ತಮ್ಮ ಪುತ್ರನನ್ನು ನನ್ನಲ್ಲಿ ಪ್ರಕಟಿಸಿ, ಯೆಹೂದ್ಯರಲ್ಲದವರಲ್ಲಿ ಸುವಾರ್ತೆಯನ್ನು ಸಾರಬೇಕೆಂದು ಮನಸ್ಸು ಮಾಡಿದರು. ಕೂಡಲೇ ದೇವರ ಪುತ್ರ ಆಗಿರುವವರ ಪ್ರಕಟಣೆಯ ತರುವಾಯ ನಾನು ಯಾವ ಮನುಷ್ಯರನ್ನು ವಿಚಾರಿಸಲಿಲ್ಲ.


ಈ ಸುವಾರ್ತೆಯನ್ನು ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಯೆಹೂದ್ಯರಲ್ಲದವರಿಗೆ ಉಪದೇಶಕನಾಗಿಯೂ ದೇವರಿಂದ ನೇಮಕವಾದೆನು.


ಈ ಬೋಧನೆಯು ಭಾಗ್ಯವಂತರಾದ ದೇವರ ಮಹಿಮೆಯ ಸುವಾರ್ತೆಗೆ ಅನುರೂಪವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲಾಗಿದೆ.


ಸಭೆಯ ಸ್ತಂಭಗಳಂತಿರುವ ನಾಯಕರಾದ ಯಾಕೋಬ, ಪೇತ್ರ ಹಾಗೂ ಯೋಹಾನರು ನನಗೆ ಕೊಡಲಾದ ಕೃಪೆಯನ್ನು ಗ್ರಹಿಸಿಕೊಂಡರು. ಆಗ ಅವರು, ನನಗೂ ಬಾರ್ನಬನಿಗೂ ಅನ್ಯೋನ್ಯತೆಯ ಬಲಗೈಯನ್ನು ಕೊಟ್ಟರು. ಹೀಗೆ ನಾವು ಯೆಹೂದ್ಯರಲ್ಲದವರ ಬಳಿಗೂ ಅವರು ಯೆಹೂದ್ಯರ ಬಳಿಗೂ ಹೋಗುವಂತೆ ತೀರ್ಮಾನವಾಯಿತು.


ನಮ್ಮ ಕರ್ತದೇವರ ದೀರ್ಘಶಾಂತಿಯು ನಮ್ಮ ರಕ್ಷಣೆಯ ಕಾರಣಕ್ಕಾಗಿ ಇದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ.


ನಾನು ಇಷ್ಟಪೂರ್ವಕವಾಗಿ ಸುವಾರ್ತೆ ಸಾರಿದರೆ, ನನಗೆ ಬಹುಮಾನವಿರುವುದು. ಇಷ್ಟವಿಲ್ಲದೆ ಮಾಡಿದರೆ, ನನ್ನ ವಶಕ್ಕೆ ಒಪ್ಪಿಸಲಾದ ಕಾರ್ಯಭಾರವನ್ನು ನಾನು ನೆರವೇರಿಸಿದಂತಾಗುತ್ತದೆ.


“ಆದ್ದರಿಂದ ದೇವರ ರಕ್ಷಣೆಯು ಯೆಹೂದ್ಯರಲ್ಲದವರಿಗೆ ಒದಗಿ ಬಂದಿದೆ ಎಂಬುದು ನಿಮಗೆ ತಿಳಿದಿರಲಿ. ಅವರು ಅದಕ್ಕೆ ಕಿವಿಗೊಡುವರು,” ಎಂದನು.


ಆದರೆ ಯೆಹೂದ್ಯರು ಪೌಲನನ್ನು ವಿರೋಧಿಸಿ ದೂಷಿಸಿದಾಗ, ಅವನು ಅವರನ್ನು ಪ್ರತಿಭಟಿಸುವಂತೆ ತನ್ನ ಬಟ್ಟೆಗಳನ್ನು ಝಾಡಿಸಿ, “ನಿಮ್ಮ ರಕ್ತವು ನಿಮ್ಮ ತಲೆಯ ಮೇಲೆ ಇರಲಿ. ನಿಮ್ಮ ವಿನಾಶಕ್ಕೆ ನೀವೇ ಹೊಣೆ. ಅದಕ್ಕೆ ನಾನು ಜವಾಬ್ದಾರನಲ್ಲ, ಇಂದಿನಿಂದ ನಾನು ಶುದ್ಧಮನಸ್ಸುಳ್ಳವನಾಗಿ ಯೆಹೂದ್ಯರಲ್ಲದವರ ಬಳಿಗೆ ಹೋಗುತ್ತೇನೆ,” ಎಂದನು.


ಇದಕ್ಕೆ ಜನರು ಮೌನವಾಗಿದ್ದು, ಯೆಹೂದ್ಯರಲ್ಲದವರ ಮಧ್ಯದಲ್ಲಿ ದೇವರು ತಮ್ಮ ಮೂಲಕ ಮಾಡಿದ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಕುರಿತು ಬಾರ್ನಬ ಮತ್ತು ಪೌಲ ಹೇಳುವುದನ್ನು ಕೇಳಿಸಿಕೊಂಡರು.


ಯೆಹೂದ್ಯರಲ್ಲದವರಾಗಿರುವ ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ನಾನು ಯೆಹೂದ್ಯರಲ್ಲದವರಿಗೆ ಅಪೊಸ್ತಲನಾಗಿರುವಷ್ಟರ ಮಟ್ಟಿಗೆ ನನ್ನ ಸೇವೆಯನ್ನು ಪ್ರಭಾವಗೊಳಿಸುತ್ತೇನೆ.


ಯೇಸುವಿನ ನಾಮದ ಮಹಿಮೆಗಾಗಿ ಯೆಹೂದ್ಯರಲ್ಲದವರಲ್ಲಿಯೂ ನಂಬಿಕೆಯ ವಿಧೇಯತೆ ಉಂಟಾಗುವುದಕ್ಕಾಗಿ ನಾವು ಯೇಸುವಿನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲರಾಗಿರುವುದನ್ನೂ ಹೊಂದಿದೆವು.


ಕ್ರಿಸ್ತ ಯೇಸುವಿನ ಕೃಪೆಯಲ್ಲಿ ನಿಮ್ಮನ್ನು ಕರೆದ ದೇವರನ್ನು ನೀವು ಇಷ್ಟು ಬೇಗನೆ ಬಿಟ್ಟು ಬೇರೆ ಸುವಾರ್ತೆಯ ಕಡೆಗೆ ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.


ಮೂರು ವರ್ಷಗಳ ನಂತರವೇ ನಾನು ಕೇಫನನ್ನು ಪರಿಚಯಮಾಡಿಕೊಳ್ಳಲು ಯೆರೂಸಲೇಮಿಗೆ ಹೋಗಿ ಅವನೊಂದಿಗೆ ಹದಿನೈದು ದಿವಸ ಇದ್ದೆನು.


ಕೇಫನು ಅಂತಿಯೋಕ್ಯ ಎಂಬ ಪಟ್ಟಣಕ್ಕೆ ಬಂದಾಗ ಅವನು ತಪ್ಪುಮಾಡಿದವನಾಗಿ ಇದ್ದುದರಿಂದ, ನಾನು ಅವನನ್ನು ಬಹಿರಂಗವಾಗಿ ಎದುರಿಸಿದೆನು.


ಆದರೆ ಅವರು ಸುವಾರ್ತೆಯ ಸತ್ಯದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ, “ನೀನು ಯೆಹೂದ್ಯನಾಗಿದ್ದು, ಯೆಹೂದ್ಯರಂತೆ ಜೀವಿಸದೆ ಯೆಹೂದ್ಯರಲ್ಲದವರಂತೆ ಜೀವಿಸಿ, ಯೆಹೂದ್ಯರಲ್ಲದವರು ಯೆಹೂದ್ಯರಂತೆ ಜೀವಿಸಬೇಕೆಂದು ನೀನು ಒತ್ತಾಯ ಮಾಡುವುದು ಹೇಗೆ?” ಎಂದು ಕೇಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು