Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:30 - ಕನ್ನಡ ಸಮಕಾಲಿಕ ಅನುವಾದ

30 ಆದರೆ ಪವಿತ್ರ ವೇದವು ಏನು ಹೇಳುತ್ತದೆ? “ದಾಸಿಯನ್ನೂ, ಅವಳ ಮಗನನ್ನೂ ಹೊರಗೆ ಹಾಕು. ಏಕೆಂದರೆ ದಾಸಿಯ ಮಗನು ಧರ್ಮಪತ್ನಿಯ ಮಗನೊಂದಿಗೆ ಎಂದಿಗೂ ವಾರಸುದಾರನಾಗಬಾರದು.” ಎಂದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆದರೆ ದೇವರ ವಾಕ್ಯವು ಏನು ಹೇಳುತ್ತದೆ? “ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು. ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯಸ್ಥನಾಗಬಾರದು” ಎಂದು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಪವಿತ್ರಗ್ರಂಥ ಹೇಳುವುದಾದರೂ ಏನು? “ದಾಸಿಯನ್ನೂ ಅವಳ ಮಗನನ್ನೂ ಹೊರಕ್ಕೆ ದೂಡು; ದಾಸಿಯ ಮಗನು ಧರ್ಮಪತ್ನಿಯ ಮಗನೊಂದಿಗೆ ಪಾಲುಗಾರನಾಗಕೂಡದು.” ಎಂದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆದರೂ ಶಾಸ್ತ್ರವು ಏನು ಹೇಳುತ್ತದೆ? ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ದಾಸಿಯ ಮಗನು ಧರ್ಮಪತ್ನಿಯ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯನಾಗಬಾರದೆಂದು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದರೆ ಪವಿತ್ರ ಗ್ರಂಥವು ಏನು ಹೇಳುತ್ತದೆ? “ದಾಸಿಯನ್ನು ಮತ್ತು ಅವಳ ಮಗನನ್ನು ಹೊರಗೆ ಹಾಕು; ಸ್ವತಂತ್ರಳಾದ ಸ್ತ್ರೀಯ ಮಗನು ತನ್ನ ತಂದೆಯು ಹೊಂದಿರುವ ಪ್ರತಿಯೊಂದನ್ನು ಪಡೆದುಕೊಳ್ಳುವನು. ಆದರೆ ದಾಸಿಗೆ ಏನೂ ದೊರೆಯುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಖರೆ ಪವಿತ್ರ್ ಪುಸ್ತಕ್ ಕಾಯ್ ಸಾಂಗ್ತಾ? ತೆ ಮನ್ತಾ, ಗುಲಾಮ್ ಬಾಯ್ಕೊಮನ್ಸಿಕ್ ಅನಿ ತಿಚ್ಯಾ ಲೆಕಾಕ್ ಭಾಯ್ರ್ ಘಾಲಾ, ಸ್ವತಂತ್ರ್ ಬಾಯ್ಕೊಮನ್ಸಿಚ್ಯಾ ವಾಂಗ್ಡಾ; ಗುಲಾಮ್ ಬಾಯ್ಕೊಮನ್ಸಿಚ್ಯಾ ಲೆಕಾಕ್ ಬಾಬಾಚ್ಯಾ ಆಸ್ತಿತ್ ವಾಟೊ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:30
11 ತಿಳಿವುಗಳ ಹೋಲಿಕೆ  

ಗುಲಾಮರು ಕುಟುಂಬದಲ್ಲಿ ಶಾಶ್ವತವಾಗಿ ಇರುವುದಿಲ್ಲ. ಆದರೆ ಪುತ್ರನು ಶಾಶ್ವತವಾಗಿ ಇರುತ್ತಾನೆ.


ಅಥವಾ ದೇವರು ನಮ್ಮಲ್ಲಿ ವಾಸವಾಗಿರಲು ನಮಗೆ ಕೊಟ್ಟಿರುವ ಪವಿತ್ರಾತ್ಮ ದೇವರು, ನಾವು ಅವರಿಗೆ ಮಾತ್ರ ಸೇರಿದವರಾಗಿರಬೇಕೆಂದು ಬಲವಾದ ಬಯಕೆ ಉಳ್ಳವರಾಗಿದ್ದಾರೆಂದು ಪವಿತ್ರ ವೇದವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸುತ್ತೀರೋ?


ಆದರೆ ಸಮಸ್ತವೂ ಪಾಪದ ಅಧೀನಕ್ಕೆ ಒಳಗಾಯಿತು ಎಂದು ಪವಿತ್ರ ವೇದ ಸ್ಪಷ್ಟೀಕರಿಸುತ್ತದೆ. ಇದು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬರಿಗೂ ಮಾಡಿದ ವಾಗ್ದಾನವು ಅವರ ನಂಬಿಕೆಯ ಆಧಾರವಾಗಿ ಕೊಡಲಾಗುತ್ತದೆ.


ಯೆಹೂದ್ಯರಲ್ಲದವರನ್ನು ನಂಬಿಕೆಯಿಂದಲೇ ದೇವರು ನೀತಿವಂತರನ್ನಾಗಿ ಮಾಡುವರು ಎಂದು ಪವಿತ್ರ ವೇದವು ಮೊದಲೇ ಕಂಡು, “ನಿನ್ನ ಮೂಲಕ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂಬ ಸುವಾರ್ತೆಯನ್ನು ಅಬ್ರಹಾಮನಿಗೆ, ಮುಂಚಿತವಾಗಿಯೇ ಸಾರಿತು.


ದೇವರು ತಾವು ಮುಂದಾಗಿ ತಿಳಿದುಕೊಂಡ ತಮ್ಮ ಜನರನ್ನು ತ್ಯಜಿಸಲಿಲ್ಲ. ದೇವರ ವಾಕ್ಯವು ಎಲೀಯನನ್ನು ಕುರಿತು ಏನು ಹೇಳುತ್ತದೆಂದು ನಿಮಗೆ ಗೊತ್ತಿಲ್ಲವೋ?


ಏಕೆಂದರೆ ಪವಿತ್ರ ವೇದವು: “ಅಬ್ರಹಾಮನು ದೇವರನ್ನು ನಂಬಿದನು, ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು,” ಎಂದು ಹೇಳುತ್ತದೆ.


ಏಕೆಂದರೆ ದಾಸಿಯಿಂದ ಒಬ್ಬನು, ಧರ್ಮಪತ್ನಿಯಿಂದ ಒಬ್ಬನು ಹೀಗೆ ಅಬ್ರಹಾಮನಿಗೆ ಇಬ್ಬರು ಪುತ್ರರಿದ್ದರೆಂದು ಪವಿತ್ರ ವೇದದಲ್ಲಿ ಬರೆದಿದೆ.


ಹೀಗಿರುವಲ್ಲಿ ಪ್ರಿಯರೇ, ನಾವು ದಾಸಿಯ ಮಕ್ಕಳಲ್ಲ, ಧರ್ಮಪತ್ನಿಯ ಮಕ್ಕಳೇ ಆಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು