Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:9 - ಕನ್ನಡ ಸಮಕಾಲಿಕ ಅನುವಾದ

9 ಈಗಲಾದರೋ ನೀವು ದೇವರನ್ನು ಅರಿತುಕೊಂಡಿದ್ದೀರಿ. ನಿಜವಾಗಿ ಹೇಳಬೇಕಾದರೆ, ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲಪಾಠಗಳಿಗೆ ಪುನಃ ಗುಲಾಮರಾಗಬೇಕೆಂದು ಅಪೇಕ್ಷಿಸಿ, ಅವುಗಳಿಗೆ ನೀವು ತಿರುಗಿಕೊಳ್ಳುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈಗಲಾದರೋ ನೀವು ದೇವರನ್ನು ತಿಳಿದುಕೊಂಡಿದ್ದೀರಿ, ಅಥವಾ ದೇವರು ನಿಮ್ಮನ್ನು ತಿಳಿದುಕೊಂಡಿದ್ದಾನೆ. ಹೀಗಿರಲಾಗಿ ನೀವು ಬಲವಿಲ್ಲದ, ಕೆಲಸಕ್ಕೆ ಬಾರದ, ದರಿದ್ರವಾದ ಮೂಲತತ್ವಗಳಿಗೆ ಹಿಂತಿರುಗಿ ಅದಕ್ಕೆ ದಾಸರಾಗುವುದಕ್ಕೆ ಏಕೆ ಬಯಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈಗಲಾದರೋ ನಿಜದೇವರನ್ನು ಅರಿತುಕೊಂಡಿದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ, ದುರ್ಬಲ ಹಾಗೂ ದರಿದ್ರವಾದ ಮೂಲಭೂತ ಶಕ್ತಿಗಳಿಗೆ ನೀವು ಮರಳುವುದೇಕೆ? ಪುನಃ ಅವುಗಳಿಗೆ ಗುಲಾಮರಾಗಲು ಇಚ್ಛಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಈಗಲಾದರೋ ನೀವು ದೇವರನ್ನು ತಿಳುಕೊಂಡಿದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ. ಹೀಗಿರಲಾಗಿ ನೀವು ಕೆಲಸಕ್ಕೆ ಬಾರದ ದರಿದ್ರಬಾಲಬೋಧೆಗೆ ಮತ್ತೂ ಅಧೀನರಾಗಬೇಕೆಂದು ಅಪೇಕ್ಷಿಸಿ ಪುನಃ ಅದಕ್ಕೆ ತಿರುಗಿಕೊಳ್ಳುವದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಈಗಲಾದರೋ ಸತ್ಯದೇವರನ್ನು ತಿಳಿದಿದ್ದೀರಿ. ನಿಜವಾಗಿ ಹೇಳಬೇಕಾದರೆ, ನಿಮ್ಮನ್ನು ತಿಳಿದಿರುವಾತನು ದೇವರೇ. ಹೀಗಿರಲಾಗಿ ಮೊದಲು ನೀವು ಅನುಸರಿಸುತ್ತಿದ್ದ ಬಲಹೀನವೂ ನಿರುಪಯುಕ್ತವೂ ಆದ ನಿಯಮಗಳಿಗೆ ನೀವು ಯಾಕೆ ಹಿಂತಿರುಗಬೇಕು? ಅವುಗಳಿಗೆ ಮತ್ತೆ ಗುಲಾಮರಾಗಬೇಕೆಂದಿದ್ದೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅತ್ತಾ ತರಿಬಿ ಖರ್‍ಯಾ ದೆವಾಕ್ ಕಳ್ವುನ್ ಘೆಟ್ಲ್ಯಾಶಿ, ಖರೆ ಸಾಂಗುಚೆ ಹೊಲ್ಯಾರ್ ತುಮ್ಕಾ ಕಳ್ವುನ್ ಘೆಟಲ್ಲೆ ದೆವಾನುಚ್, ಅಶೆ ರ್‍ಹಾತಾನಾ, ತುಮಿ ಅದ್ದಿಚ್ಯಾನ್ ಪಾಳುನ್ಗೆತ್ ಯೆಲ್ಲ್ಯಾ ಬಳ್ ನಸಲ್ಲ್ಯಾ ಅನಿ ಫಾಯ್ದ್ಯಾಕ್ ಪಡಿನಸಲ್ಲ್ಯಾ ನೆಮಾಕ್ನಿ ಕಶ್ಯಾಕ್ ಫಾಟಿ ಪರ್ತುನ್ ಜಾವ್ಚೆ? ತೆಂಕಾ ಅನಿಪರ್ತುನ್ ಗುಲಾಮ್ ಹೊವ್ಚೆ ಮನುನ್ ಕರ್ಲ್ಯಾಸಿ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:9
30 ತಿಳಿವುಗಳ ಹೋಲಿಕೆ  

ಆದರೆ ದೇವರನ್ನು ಪ್ರೀತಿಸುವವರನ್ನು ದೇವರು ತಿಳಿದುಕೊಂಡಿರುತ್ತಾರೆ.


ನೀವು ಇಷ್ಟು ಬುದ್ಧಿಯಿಲ್ಲದವರಾಗಿದ್ದೀರಾ? ನೀವು ಪವಿತ್ರ ಆತ್ಮರಲ್ಲಿ ಪ್ರಾರಂಭಿಸಿ ಈಗ ಮಾನವೀಯವಾಗಿ ಪರಿಪೂರ್ಣರಾಗಬೇಕೆಂದ್ದೀರಾ?


ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು.


ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.


“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.


ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನಹೊಂದಿ ಲೋಕದ ಮಾಲಿನ್ಯಗಳನ್ನು ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.


ಏಕೆಂದರೆ ಮೊದಲಿದ್ದ ಆಜ್ಞೆಯು ನಿರ್ಬಲವೂ ನಿಷ್ಪ್ರಯೋಜಕವೂ ಆಗಿರುವ ಕಾರಣದಿಂದ ಅದು ರದ್ದಾಯಿತು.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.


ನಮ್ಮ ಕರ್ತ ಯೇಸುಕ್ರಿಸ್ತರ ದೇವರೂ ಮಹಿಮೆಯ ತಂದೆಯಾದವರನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳುವಂತೆ ಜ್ಞಾನದ ಮತ್ತು ಪ್ರಕಟಣೆಯ ಆತ್ಮವನ್ನು ನಿಮಗೆ ಅನುಗ್ರಹಿಸಲಿ ಎಂದು ನಿಮಗಾಗಿ ಯಾವಾಗಲೂ ಪ್ರಾರ್ಥನೆ ಮಾಡುವವನಾಗಿದ್ದೇನೆ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.


ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ಆಗ ಮುಖಾಮುಖಿಯಾಗಿ ನೋಡುವೆವು. ಈಗ ಸ್ವಲ್ಪ ಮಾತ್ರ ನನಗೆ ತಿಳಿದಿದೆ. ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ, ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.


ಅದಕ್ಕೆ ಯೆಹೋವ ದೇವರು ಮೋಶೆಗೆ, “ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ಏಕೆಂದರೆ ನನ್ನ ದೃಷ್ಟಿಯಲ್ಲಿ ನಿನಗೆ ದಯೆ ದೊರಕಿತು. ನಾನು ನಿನ್ನನ್ನು ನಿನ್ನ ಹೆಸರಿನಿಂದ ತಿಳಿದಿದ್ದೇನೆ,” ಎಂದರು.


ಅನೇಕ ಸಹೋದರರ ಮಧ್ಯೆ ಜ್ಯೇಷ್ಠಪುತ್ರನೆನಿಸುವಂತೆ ದೇವರು ಯಾರನ್ನು ಮೊದಲು ತಿಳಿದುಕೊಂಡರೋ ಅವರನ್ನು ತಮ್ಮ ಪುತ್ರನ ಹೋಲಿಕೆಗೆ ಸಮಾನರಾಗುವಂತೆ ಮುಂದಾಗಿ ನೇಮಿಸಿದರು.


ಏಕೈಕ ಸತ್ಯ ದೇವರಾಗಿರುವ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವ.


ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.


“ನಾನೇ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ನನ್ನ ಕುರಿಗಳು ನನ್ನನ್ನು ತಿಳಿದಿವೆ.


“ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಬೇರೆ ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾನೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು.


ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, ಯೆಹೋವ ದೇವರ ಮಹಿಮೆಯ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು.


ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ, ‘ಯೆಹೋವ ದೇವರನ್ನು ಅರಿತುಕೊಳ್ಳಿರಿ,’ ಎಂದು ಬೋಧಿಸಬೇಕಾಗಿಲ್ಲ. ಏಕೆಂದರೆ ಚಿಕ್ಕವರಿಂದ ದೊಡ್ಡವರವರೆಗೂ ಎಲ್ಲರೂ ನನ್ನನ್ನು ಅರಿತುಕೊಳ್ಳುವರು. ನಾನು ಅವರ ದುಷ್ಕೃತ್ಯಗಳನ್ನು ಕ್ಷಮಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರ ಪಾಪಗಳನ್ನು ಇನ್ನೆಂದಿಗೂ ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ.”


ಆಗ ನೀನು ಯೆಹೋವ ದೇವರ ಭಯಭಕ್ತಿಯನ್ನು ತಿಳಿದುಕೊಳ್ಳುವೆ; ದೇವರ ಅರಿವನ್ನು ಕಂಡುಕೊಳ್ಳುವೆ.


ನಿಮ್ಮ ಹೆಸರನ್ನು ತಿಳಿದವರು ನಿಮ್ಮಲ್ಲಿ ಭರವಸೆ ಇಡುವರು, ಏಕೆಂದರೆ ಯೆಹೋವ ದೇವರೇ, ನಿಮ್ಮನ್ನು ಹುಡುಕುವವರನ್ನು ನೀವು ಎಂದಿಗೂ ತೊರೆದುಬಿಡುವುದಿಲ್ಲ.


ಯೆಹೋವ ದೇವರು ನೀತಿವಂತರ ಮಾರ್ಗವನ್ನು ಅರಿತಿದ್ದಾರೆ; ಆದರೆ ದುಷ್ಟರ ಮಾರ್ಗವು ನಾಶಕ್ಕೆ ನಡೆಸುವುದು.


ನೀವು ವಾಸಮಾಡುವ ಪರಲೋಕದಿಂದ ಕೇಳಿ, ಪರದೇಶಿಯು ಕೇಳಿದ್ದೆಲ್ಲವನ್ನು ನೆರವೇರಿಸಿರಿ. ಆಗ ಭೂಲೋಕದ ಎಲ್ಲಾ ಜನರೂ ನಿಮ್ಮ ನಾಮವನ್ನು ತಿಳಿದು, ನಿಮ್ಮ ಜನರಾದ ಇಸ್ರಾಯೇಲರಂತೆ ನಿಮಗೆ ಭಯಭಕ್ತಿಯುಳ್ಳವರಾಗಿ, ನಾನು ಕಟ್ಟಿಸಿದ ಈ ಆಲಯವು ನಿಮ್ಮ ಹೆಸರಿನಿಂದ ಕರೆಯಲಾಗಿದೆ ಎಂದು ತಿಳಿದುಕೊಳ್ಳುವರು.


ಸ್ವಸ್ಥಚಿತ್ತರಾಗಿರಿ, ಪಾಪಮಾಡುವುದನ್ನು ನಿಲ್ಲಿಸಿರಿ. ಕೆಲವರಂತೂ ದೇವರನ್ನೇ ಅಲಕ್ಷ್ಯಮಾಡುವವರಾಗಿದ್ದಾರೆ. ನಿಮಗೆ ನಾಚಿಕೆಯಾಗಬೇಕೆಂದು ನಾನು ಇದನ್ನು ಹೇಳುತ್ತೇನೆ.


ನಿಜವಾಗಿ ಹೇಳಬೇಕಾದರೆ, ಯಾರಾದರೂ ನಿಮ್ಮನ್ನು ಗುಲಾಮರನ್ನಾಗಿ ಮಾಡಿಕೊಂಡರೂ, ನಿಮ್ಮನ್ನು ಮರುಳುಗೊಳಿಸಿದರೂ, ತಮ್ಮ ಸ್ವಂತ ಪ್ರಯೋಜನಕ್ಕಾಗಿ ಬಳಸಿಕೊಂಡರೂ, ನಿಮ್ಮ ಕೆನ್ನೆಗೆ ಬಾರಿಸಿದರೂ, ನೀವು ಸಹಿಸಿಕೊಳ್ಳುತ್ತೀರಲ್ಲಾ.


ಅದರಂತೆಯೇ ನಾವು ಬಾಲಕರಾಗಿದ್ದಾಗ ಲೋಕದ ಮೂಲಪಾಠಗಳಿಗೆ ಗುಲಾಮರಾಗಿದ್ದೆವು.


ಆದರೆ, ಹೊಸ ದ್ರಾಕ್ಷಾರಸವನ್ನು ಹೊಸ ಚರ್ಮದ ಚೀಲಗಳಲ್ಲಿ ಹಾಕಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು