Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 6:1 - ಕನ್ನಡ ಸಮಕಾಲಿಕ ಅನುವಾದ

1 ಪ್ರಿಯರೇ, ಒಬ್ಬ ಮನುಷ್ಯನು ಯಾವುದಾದರೊಂದು ಪಾಪದಲ್ಲಿ ಸಿಕ್ಕಿಬಿದ್ದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕ ಆತ್ಮದಿಂದ ಪುನಃ ಸ್ಥಾಪಿಸಿರಿ. ಆದರೆ ನೀನು ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಹೋದರರೇ, ನಿಮ್ಮಲ್ಲಿ ಯಾರಾದರೂ ತಪ್ಪಿತಸ್ಥರಾಗಿದ್ದರೆ, ಆಧ್ಯಾತ್ಮಿಕ ಜೀವಿಗಳಾದ ನೀವು ಅಂಥವನನ್ನು ನಯವಿನಯದಿಂದ ತಿದ್ದಿ ಸರಿಯಾದ ದಾರಿಗೆ ತರಬೇಕು. ಆದರೆ ನೀನೂ ಅವನಂತೆ ಪಾಪಪ್ರಚೋದನೆಗೆ ಒಳಗಾಗದಂತೆ ಎಚ್ಚರಿಕೆಯಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವದೋ ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮನಿಂದ ನಡಿಸಿಕೊಳ್ಳುವ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀನಾದರೋ ದುಷ್ಪ್ರೇರಣೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಹೋದರ ಸಹೋದರಿಯರೇ, ನಿಮ್ಮ ಸಭೆಯಲ್ಲಿ ಯಾವನಾದರೂ ತಪ್ಪು ಮಾಡಿದರೆ, ಆತ್ಮಿಕರಾದ ನೀವು ಅವನ ಬಳಿಗೆ ಹೋಗಿ ಸೌಮ್ಯತೆಯಿಂದ ಅವನನ್ನು ತಿದ್ದಿ ಸರಿಪಡಿಸಬೇಕು. ಆದರೆ ಎಚ್ಚರಿಕೆಯಿಂದಿರಿ! ನೀವು ಸಹ ಶೋಧನೆಗೊಳಗಾಗಿ ಪಾಪಕ್ಕೆ ಬೀಳುವ ಸಾಧ್ಯವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತುಮ್ಚ್ಯಾ ಮದ್ದಿ ಕೊನ್‍ ತರ್ಬಿ ಎಕ್ಲೊ ಕಸ್ಲ್ಯಾಬಿ ಚುಕೆತ್ ಪಡಲ್ಲೊ ಗಾವ್ಲ್ಯಾರ್, ಆತ್ಮಿಕ್ ರಿತಿಚೆ ತುಮಿ ಜಾವ್ನ್ ತೆಂಕಾ ಸಮಾ ಕರುಚೆ. ಖರೆ ತುಮಿ ಶಾಂತ್ಪಾನಾನ್ ನಾತರ್ ಸಮಾಧಾನಾನ್ ತೆ ಕರುಚೆ, ಅನಿ ತುಮ್ಚ್ಯಾ ವರ್‍ತಿ ಎಕ್ ನದರ್ ರ್‍ಹಾಂವ್ದಿತ್ ಕಶ್ಯಾಕ್ ಮಟ್ಲ್ಯಾರ್ ತುಮಿ ಪರಿಕ್ಷಾತ್ ಪಡ್ತಲೆ ನಕ್ಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 6:1
41 ತಿಳಿವುಗಳ ಹೋಲಿಕೆ  

ವಿಶ್ವಾಸದಲ್ಲಿ ಬಲವುಳ್ಳವರಾದ ನಾವು ನಮ್ಮ ಸುಖವನ್ನು ನೋಡಿಕೊಳ್ಳದೆ, ಬಲಹೀನರ ಬಲಹೀನತೆಗಳನ್ನು ಸಹಿಸಿಕೊಳ್ಳಬೇಕು.


ಆದರೂ ಅಂಥವರನ್ನು ವೈರಿಯೆಂದು ಎಣಿಸದೆ, ಜೊತೆ ವಿಶ್ವಾಸಿಯೆಂದು ಭಾವಿಸಿ ಬುದ್ಧಿಹೇಳಿರಿ.


ವಿರೋಧಿಸುವವರ ಮನಸ್ಸನ್ನು ತಾಳ್ಮೆಯಿಂದ ತಿದ್ದುವವನಾಗಿದ್ದರೆ, ದೇವರು ಒಂದು ವೇಳೆ ಅಂಥವರಿಗೆ ಸತ್ಯದ ತಿಳುವಳಿಕೆಗೆ ನಡೆಸುವ ಪಶ್ಚಾತ್ತಾಪವನ್ನು ಕೊಡುವ ನಿರೀಕ್ಷೆ ಇರುವುದು.


ಮರಣಕರವಲ್ಲದ ಪಾಪವನ್ನು ಮಾಡುವ ಸಹೋದರ ಅಥವಾ ಸಹೋದರಿಯನ್ನು ಯಾರಾದರೂ ಕಂಡರೆ, ಆ ಸಹೋದರ ಅಥವಾ ಸಹೋದರಿಯರಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಅವರಿಗೆ ಜೀವವನ್ನು ದಯಪಾಲಿಸುವರು. ಮರಣಕರವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಆದರೆ ಮರಣಕರವಾದ ಪಾಪವೂ ಉಂಟು. ಈ ಮರಣಕರವಾದ ಪಾಪದ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ.


ಈಗ ಅವನನ್ನು ನೀವು ಕ್ಷಮಿಸಿ ಸಂತೈಸಿರಿ. ಇಲ್ಲವಾದರೆ, ಅವನು ದುಃಖದಲ್ಲಿ ಮುಳುಗಿ ಹೋದಾನು.


“ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿರಿ.” ಹೀಗೆ ಮಾಡಿದರೆ ಕುಂಟ ಕಾಲು ಉಳುಕಿಹೋಗದೆ ವಾಸಿಯಾಗುವುದು.


ಆದರೆ ಕ್ರಿಸ್ತ ಯೇಸುವನ್ನು ನಿಮ್ಮ ಹೃದಯಗಳಲ್ಲಿ “ಕರ್ತದೇವರು” ಎಂದು ಪ್ರತಿಷ್ಠೆ ಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವದಿಂದಲೂ ಗೌರವದಿಂದಲೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧವಾಗಿರಿ.


ಅಂಥವನ ಅಭಿಪ್ರಾಯಗಳ ಬಗ್ಗೆ ವಾಗ್ವಾದ ಮಾಡಬೇಡಿರಿ. ವಿಶ್ವಾಸದಲ್ಲಿ ಬಲಹೀನನಾಗಿರುವವನನ್ನು ಸ್ವೀಕರಿಸಿಕೊಳ್ಳಿರಿ.


ಕಳೆದುಹೋದದ್ದನ್ನು ನಾನೇ ಹುಡುಕುವೆನು. ದಾರಿ ತಪ್ಪಿದ್ದನ್ನು ನಾನೇ ಮತ್ತೆ ತರುವೆನು, ಮುರಿದ ಅಂಗವನ್ನು ನಾನೇ ಕಟ್ಟುವೆನು. ದುರ್ಬಲವಾದುದನ್ನು ಬಲಗೊಳಿಸುವೆನು, ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸುವೆನು. ನಾನು ನ್ಯಾಯದಿಂದ ಮಂದೆಯನ್ನು ಮೇಯಿಸುವೆನು.


ಆದಕಾರಣ ದೃಢವಾಗಿ ನಿಂತಿದ್ದೇವೆಂದು ಭಾವಿಸುವ ನೀವು ಬೀಳದಿರುವಂತೆ ನೋಡಿಕೊಳ್ಳಿರಿ.


ಶಿಸ್ತಿನ ಬೆತ್ತವನ್ನು ಹಿಡಿದು ಬಿಗಿಯಲು ನಿಮ್ಮ ಬಳಿ ಬರಲೋ? ಅಥವಾ ಪ್ರೀತಿ ಸೌಮ್ಯದಿಂದ ಬರಲೋ? ನಿಮಗೆ ಯಾವುದು ಇಷ್ಟ?


ಏಕೆಂದರೆ ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವುದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ, ಅವನು ಪರಿಪೂರ್ಣನೂ ತನ್ನ ಇಡೀ ದೇಹವನ್ನೇ ಸ್ವಾಧೀನದಲ್ಲಿಟ್ಟುಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.


ನಾನು ನಿಮ್ಮ ಬಳಿಯಲ್ಲಿ ಮುಖಾಮುಖಿಯಾಗಿ ಮಾತನಾಡುವಾಗ, “ಮೃದುವಾಗಿಯೂ” ನಿಮ್ಮಿಂದ ದೂರವಿರುವಾಗ “ಕಠಿಣನಾಗಿಯೂ ವರ್ತಿಸುವವನು” ಎಂತಲೂ ನೀವು ತಿಳಿದಿದ್ದೀರಿ. ಅಂಥ ಪೌಲನೆಂಬ, ನಾನು ಕ್ರಿಸ್ತ ಯೇಸುವಿನ ದೀನತ್ವದಿಂದಲೂ ಸಾತ್ವಿಕತೆಯಿಂದಲೂ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ:


ಆದರೆ ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ,’ ಎಂಬುದರ ಅರ್ಥವನ್ನು ಕಲಿತುಕೊಳ್ಳಿರಿ. ಏಕೆಂದರೆ ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು.


ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ, ಆತ್ಮನ ವರಗಳನ್ನು ಹೊದಿದವನೆಂದಾಗಲಿ ಭಾವಿಸುವುದಾದರೆ, ನಾನು ನಿಮಗೆ ಬರೆದಿರುವ ಸಂಗತಿಗಳು ಕರ್ತದೇವರ ಆಜ್ಞೆಗಳೆಂದು ಸ್ಪಷ್ಟವಾಗಿ ತಿಳಿದುಕೊಳ್ಳಲಿ.


ಗಂಡ ಹೆಂಡತಿ ಪರಸ್ಪರ ಸಮ್ಮತಿಯಿಂದ ಸ್ವಲ್ಪಕಾಲ ಪ್ರಾರ್ಥನೆಗಾಗಿ ಅಗಲಿರಬಹುದಷ್ಟೇ. ಇಲ್ಲದಿದ್ದರೆ, ಸೈತಾನನು ನಿಮ್ಮ ಸಂಯಮ ಇಲ್ಲದಿರುವುದನ್ನು ನೋಡಿ ನಿಮ್ಮನ್ನು ಶೋಧಿಸದಂತೆ ಒಂದುಗೂಡಬೇಕು.


ಆದರೆ ಆತ್ಮಿಕ ಮನುಷ್ಯನು ಎಲ್ಲವನ್ನೂ ವಿವೇಚಿಸಿಕೊಳ್ಳುತ್ತಾನೆ. ಆದರೆ ಅವನಿಗೆ ಬೇರೆ ಯಾರೂ ತೀರ್ಪುಮಾಡಲಾಗದು.


ಮಾಂಸಭಾವದ ಮನಸ್ಸು ಮರಣಕರವಾದದ್ದು, ಪವಿತ್ರಾತ್ಮ ದೇವರ ಮೇಲೆ ಮನಸ್ಸಿಡುವುದು ಜೀವವೂ ಸಮಾಧಾನವೂ ಆಗಿರುತ್ತದೆ.


ನಾನು ಸಾತ್ವಿಕನೂ ದೀನ ಹೃದಯದವನೂ ಆಗಿರುವುದರಿಂದ ನೀವು ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ. ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.


ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಜ್ಞಾನದಿಂದ ಬರುವ ದೀನತ್ವದಲ್ಲಿ ತನ್ನ ಕ್ರಿಯೆಗಳನ್ನು ಒಳ್ಳೆಯ ಜೀವನದಿಂದ ತೋರಿಸಲಿ.


ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂಬಂತೆ ಅವರನ್ನು ಜ್ಞಾಪಕಮಾಡಿಕೊಳ್ಳಿರಿ. ಕಷ್ಟ ಅನುಭವಿಸುವವರ ಸಂಗಡ ನೀವು ಸಹ ಕಷ್ಟ ಅನುಭವಿಸುವವರೆಂಬಂತೆ ನೆನೆಸಿರಿ.


ಸಾತ್ವಿಕತೆ, ಸಂಯಮ ಇಂಥವುಗಳೇ. ಇವುಗಳಿಗೆ ವಿರೋಧವಾಗಿ ಯಾವ ನಿಯಮವೂ ಇಲ್ಲ.


ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು, ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇದ್ದು, ಸ್ನಾನ ಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಕಂಡನು.


ಪ್ರಿಯರೇ, ನೀವು ದೇವರಾತ್ಮರಿಗೆ ತಕ್ಕಂತೆ ಬಾಳುವವರಾಗಿ ನಾನು ನಿಮ್ಮ ಸಂಗಡ ಮಾತನಾಡುತ್ತಾ ಇಲ್ಲ. ನೀವು ಇನ್ನೂ ಕ್ರಿಸ್ತ ಯೇಸುವಿನಲ್ಲಿ ಕೂಸುಗಳೂ ಪ್ರಾಪಂಚಿಕರೂ ಆಗಿರುವಿರೆಂದು ಭಾವಿಸಿ ನಿಮ್ಮ ಸಂಗಡ ಮಾತನಾಡಬೇಕಾಯಿತು.


ಆಗ ಪೇತ್ರನು, “ಹುಂಜ ಕೂಗುವುದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ನಿರಾಕರಿಸುವೆ,” ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.


ಆಗ ಪೇತ್ರನು ಹೊರಾಂಗಣದಲ್ಲಿ ಕುಳಿತಿರಲು, ಒಬ್ಬ ದಾಸಿಯು ಅವನ ಬಳಿಗೆ ಬಂದು, “ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು,” ಎಂದಳು.


ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ. ಅವರು ನನ್ನನ್ನು ಗದರಿಸಲಿ, ಅದು ನನ್ನ ತಲೆಗೆ ಅಭಿಷೇಕ; ನನ್ನ ತಲೆ ಅದನ್ನು ಬೇಡವೆನ್ನದಿರಲಿ; ಆದರೂ ನನ್ನ ಪ್ರಾರ್ಥನೆ ಯಾವಾಗಲೂ ದುಷ್ಟರ ಕಾರ್ಯಗಳಿಗೆ ವಿರೋಧವಾಗಿಯೇ ಇರುವುದು.


ಪ್ರಿಯರೇ, ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ. ಆಮೆನ್.


ಪ್ರಿಯರೇ, ನೀವು ಹೇಗೆ ನಡೆದುಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿದಂತೆಯೇ ಜೀವಿಸುತಿರುವಿರಿ. ಇದರಲ್ಲಿ ನೀವು ಹೆಚ್ಚೆಚ್ಚಾಗಿ ಮಾಡಬೇಕೆಂದು ನಾವು ಕಡೆಯದಾಗಿ ನಮಗೆ ಕರ್ತ ಆಗಿರುವ ಯೇಸುವಿನಲ್ಲಿ ನಿಮ್ಮನ್ನು ಪ್ರಬೋಧಿಸುತ್ತೇವೆ ಮತ್ತು ಉತ್ತೇಜಿಸುತ್ತೇವೆ.


ಅದಕ್ಕಾಗಿ ನೀವು ನಿಮ್ಮ ಪ್ರೀತಿಯನ್ನು ಮೊದಲು ಇದ್ದಂತೆ ಈಗಲೂ ಅವನ ಮೇಲೆ ತೋರಿಸಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು