Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 6:12 - ಕನ್ನಡ ಸಮಕಾಲಿಕ ಅನುವಾದ

12 ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡುವವರೂ ತಮಗೆ ಕ್ರಿಸ್ತ ಯೇಸುವಿನ ಶಿಲುಬೆಯ ನಿಮಿತ್ತ ಹಿಂಸೆಯಾಗಬಾರದೆಂಬುದಕ್ಕಾಗಿಯೇ ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಿಮ್ಮನ್ನು ಒತ್ತಾಯ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೈಹಿಕವಾಗಿ ಪ್ರಶಂಸೆಯನ್ನು ಹೊಂದಬೇಕೆಂದಿರುವವರು ಸುನ್ನತಿ ಮಾಡಿಸಿಕೊಳ್ಳಿರಿ ಎಂಬುದಾಗಿ ನಿಮ್ಮನ್ನು ಒತ್ತಾಯಿಸುತ್ತಾರೆ. ಏಕೆಂದರೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ತಮಗೆ ಹಿಂಸೆಯಾಗಬಾರದೆಂಬುದೇ ಅವರ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಬಾಹ್ಯಾಚಾರಗಳಿಂದ ತಾವು ಒಳ್ಳೆಯವರು ಎನಿಸಿಕೊಳ್ಳಬೇಕೆನ್ನುವವರು ನೀವು ಸುನ್ನತಿಮಾಡಿಸಿಕೊಳ್ಳಬೇಕೆಂದು ಬಲಾತ್ಕಾರ ಮಾಡುತ್ತಿದ್ದಾರೆ. ಕ್ರಿಸ್ತಯೇಸುವಿನ ಶಿಲುಬೆಯ ನಿಮಿತ್ತ ತಮಗೆ ಹಿಂಸೆಬಾಧೆಗಳು ಉಂಟಾಗಬಾರದು ಎಂಬುದೇ ಅವರ ಉದ್ದೇಶವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಬಹಿರಾಚಾರಗಳಿಂದ ಮಾನಪಡೆಯಬೇಕೆಂದಿರುವವರು ಸುನ್ನತಿಮಾಡಿಸಿಕೊಳ್ಳಿರಿ ಎಂಬದಾಗಿ ನಿಮ್ಮನ್ನು ಬಲಾತ್ಕರಿಸುತ್ತಾರೆ. ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದೊಂದೇ ಅವರ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀವು ಸುನ್ನತಿ ಮಾಡಿಸಿಕೊಳ್ಳಬೇಕೆಂದು ಕೆಲವರು ನಿಮ್ಮನ್ನು ಒತ್ತಾಯಿಸುತ್ತಿದ್ದಾರೆ. ತಮ್ಮನ್ನು (ಯೆಹೂದ್ಯರು) ಸ್ವೀಕರಿಸಿಕೊಳ್ಳಲಿ ಎಂಬುದೇ ಅವರ ಉದ್ದೇಶ. ಕ್ರಿಸ್ತನ ಶಿಲುಬೆಯ ದೆಸೆಯಿಂದ ತಾವು ಹಿಂಸೆಗೆ ಒಳಗಾಗಬಹುದೆಂಬ ಭಯದಿಂದ ಅವರು ಹೀಗೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತುಮಿ ಸುನ್ನತ್ ಕರುನ್ ಘೆವ್ಚೆ ಮನುನ್; ಉಲ್ಲಿ ಲೊಕಾ ತುಮ್ಕಾ ಜಬರ್ದಸ್ತಿ ಕರುಕ್ ಲಾಗ್ಲಾತ್, ಅಪ್ನಾಕ್ನಿ ಜುದೆವಾಂಚಿ ಲೊಕಾ ಮಾನುನ್ ಘೆಂವ್ದಿ ಮನ್ತಲಿ ತೆಂಚಿ ಆಶಾ. ಕ್ರಿಸ್ತಾಚ್ಯಾ ಕುರ್ಸಾ ವೈನಾ ಅಪ್ನಿ ತರಾಸಾಕ್ ಗಾವ್ತಾತ್ ಮನ್ತಲ್ಯಾ ಭಿಂಯಾ ವೈನಾ ತೆನಿ ಅಶೆ ಕರುಕ್ ಲಾಗ್ಲಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 6:12
22 ತಿಳಿವುಗಳ ಹೋಲಿಕೆ  

ಆದರೆ ಪ್ರಿಯರೇ, ನಾನು ಸುನ್ನತಿಯಾಗಬೇಕೆಂದು ಇನ್ನೂ ಬೋಧಿಸುವವನಾಗಿದ್ದರೆ, ಈಗಲೂ ನನಗೆ ಹಿಂಸೆಯಾಗುತ್ತಿರುವುದು ಏಕೆ? ಹಾಗಾದರೆ ಶಿಲುಬೆಯ ಸಂದೇಶ ಸಾರುವುದರಿಂದ ಯಾವ ಆತಂಕವೂ ಉಂಟಾಗುತ್ತಿರಲಿಲ್ಲವಲ್ಲಾ?


ಇಂಥ ಉಪದೇಶಗಳು ತಾವೇ ತಂದುಕೊಂಡ ಆರಾಧನೆಯಲ್ಲಿಯೂ ಸುಳ್ಳು ದೀನತ್ವದಲ್ಲಿಯೂ ದೇಹದಂಡನೆಯಲ್ಲಿಯೂ ಜ್ಞಾನದ ತೋರಿಕೆಯುಳ್ಳದ್ದಾಗಿರುವುದು ನಿಜವೇ. ಆದರೆ ಇವು ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸಲು ಪ್ರಯೋಜನವಿಲ್ಲದವುಗಳಾಗಿವೆ.


ಅಂಥಾ ಜನರು ಸುಳ್ಳು ಅಪೊಸ್ತಲರು, ವಂಚಿಸುವ ವರ್ತಕರು, ಕ್ರಿಸ್ತ ಯೇಸುವಿನ ಅಪೊಸ್ತಲರೆಂದು ವೇಷ ಹಾಕಿಕೊಂಡವರೂ ಆಗಿದ್ದಾರೆ.


ಕೆಲವು ಜನರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು ಅಲ್ಲಿಯ ಸಹೋದರರಿಗೆ, “ಮೋಶೆ ಬೋಧಿಸಿದ ಪದ್ಧತಿಯಂತೆ ನೀವು ಸುನ್ನತಿ ಹೊಂದದಿದ್ದರೆ ನೀವು ರಕ್ಷಣೆ ಹೊಂದಲಾರಿರಿ,” ಎಂದು ಬೋಧಿಸತೊಡಗಿದರು.


ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಅವನನ್ನು ಬಲಾತ್ಕಾರ ಮಾಡಲಿಲ್ಲ.


ಯೇಸು ಅವರಿಗೆ, “ನೀವು ಮನುಷ್ಯರ ಮುಂದೆ ನೀತಿಕರಿಸಿಕೊಳ್ಳುವವರು, ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾರೆ. ಮನುಷ್ಯರಲ್ಲಿ ಶ್ರೇಷ್ಠವೆಂದು ಎಣಿಸಿಕೊಳ್ಳುವಂಥದ್ದು ದೇವರ ದೃಷ್ಟಿಯಲ್ಲಿ ಅದು ಅಸಹ್ಯವಾಗಿದೆ.


ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ಬಾಳುತ್ತಿದ್ದಾರೆ. ಅವರ ವಿಷಯದಲ್ಲಿ ನಾನು ನಿಮಗೆ ಹಲವಾರು ಸಾರಿ ತಿಳಿಸಿರುವಂತೆ ಈಗಲೂ ಕಣ್ಣೀರಿನಿಂದ ಹೇಳುತ್ತೇನೆ.


ಪ್ರತಿಯೊಬ್ಬನೂ ಸ್ವಹಿತವನ್ನು ನೋಡದೆ ಪರಹಿತವನ್ನು ಸಹ ನೋಡಲಿ.


ಕೆಲವರು ಅಸೂಯೆಯಿಂದಲೂ ಸ್ಪರ್ಧೆಯ ಮನೋಭಾವನೆಯಿಂದಲೂ ಕ್ರಿಸ್ತನನ್ನು ಸಾರುವುದು ನಿಜ. ಆದರೆ ಇತರರು ಒಳ್ಳೆಯ ಮನೋಭಾವದಿಂದ ಕ್ರಿಸ್ತ ಯೇಸುವನ್ನು ಸಾರುತ್ತಿದ್ದಾರೆ.


ಸುನ್ನತಿ ಮಾಡಿಸಿಕೊಳ್ಳುವ ತಾವಾದರೋ ನಿಯಮವನ್ನು ಕೈಗೊಂಡು ನಡೆಯುವುದಿಲ್ಲ. ಆದರೆ ಅವರು ನಿಮ್ಮ ಶರೀರದ ಸುನ್ನತಿಯಿಂದ ಹೆಚ್ಚಳಪಡುವಂತೆ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.


ಆದರೆ ಅವರು ಸುವಾರ್ತೆಯ ಸತ್ಯದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ, “ನೀನು ಯೆಹೂದ್ಯನಾಗಿದ್ದು, ಯೆಹೂದ್ಯರಂತೆ ಜೀವಿಸದೆ ಯೆಹೂದ್ಯರಲ್ಲದವರಂತೆ ಜೀವಿಸಿ, ಯೆಹೂದ್ಯರಲ್ಲದವರು ಯೆಹೂದ್ಯರಂತೆ ಜೀವಿಸಬೇಕೆಂದು ನೀನು ಒತ್ತಾಯ ಮಾಡುವುದು ಹೇಗೆ?” ಎಂದು ಕೇಳಿದೆ.


ತಮ್ಮನ್ನು ತಾವೇ ಹೊಗಳಿಕೊಳ್ಳುವವರೊಂದಿಗೆ ನಾವು ಹೋಲಿಸಿಕೊಳ್ಳಲು ಯತ್ನಿಸುವುದಿಲ್ಲ. ಏಕೆಂದರೆ, ಅವರು ತಮ್ಮತಮ್ಮೊಳಗೆ ತಮ್ಮನ್ನು ಅಳತೆ ಮಾಡಿಕೊಂಡು ಒಬ್ಬರೊಂದಿಗೊಬ್ಬರು ಹೋಲಿಸಿಕೊಳ್ಳುವುದರಿಂದ ವಿವೇಕವಿಲ್ಲದವರಾಗಿರುತ್ತಾರೆ.


ಆದರೆ ಫರಿಸಾಯರ ಪಂಗಡಕ್ಕೆ ಸೇರಿದ ಕೆಲವು ವಿಶ್ವಾಸಿಗಳು ಎದ್ದು ನಿಂತುಕೊಂಡು, “ಯೆಹೂದ್ಯರಲ್ಲದವರು ಸುನ್ನತಿ ಹೊಂದಬೇಕು ಮತ್ತು ಮೋಶೆಯ ನಿಯಮಕ್ಕೆ ವಿಧೇಯರಾಗಬೇಕು,” ಎಂದರು.


ತಮ್ಮಷ್ಟಕ್ಕೆ ತಾವೇ ಮಾತನಾಡುವವರು ತಮ್ಮ ಸ್ವಂತ ಮಹಿಮೆಯನ್ನು ಹುಡುಕುತ್ತಾರೆ. ಆದರೆ ತನ್ನನ್ನು ಕಳುಹಿಸಿದ ತಂದೆಯ ಮಹಿಮೆಯನ್ನು ಹುಡುಕುವ ಮನುಷ್ಯನು ಸತ್ಯವಂತನು; ಆತನಲ್ಲಿ ಅನೀತಿಯಿಲ್ಲ.


ಇವರು ವಿಧವೆಯರ ಮನೆಗಳನ್ನು ದೋಚಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು,” ಎಂದರು.


ಅದರಂತೆಯೇ, ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ. ಆದರೆ ನೀವು ಒಳಗೆ ಕಪಟದಿಂದಲೂ ಅನ್ಯಾಯದಿಂದಲೂ ತುಂಬಿದವರಾಗಿದ್ದೀರಿ.


“ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡುತ್ತಾರೆ. ಅವರು ತಮ್ಮ ಬಾಹುಗಳ ಮೇಲೆ ದೇವರ ವಾಕ್ಯವುಳ್ಳ ಡಬ್ಬಿಗಳನ್ನು ಮತ್ತು ಹಣೆಯ ಮೇಲೆ ಅಗಲ ಪಟ್ಟಿಗಳನ್ನು ಮಾಡಿ ಉಡುಪುಗಳ ಅಂಚುಗಳನ್ನು ಉದ್ದಮಾಡುತ್ತಾರೆ.


“ನೀವು ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪಗೆ ಮಾಡಿಕೊಳ್ಳಬೇಡಿರಿ, ತಾವು ಉಪವಾಸ ಮಾಡುತ್ತಿದ್ದೇವೆಂದು ಜನರಿಗೆ ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ತಮ್ಮ ಮುಖವನ್ನು ಬಾಡಿಸಿಕೊಂಡಿರುತ್ತಾರೆ. ಅವರು ತಮಗೆ ಬರತಕ್ಕ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


“ಆದ್ದರಿಂದ ನೀನು ದಾನಧರ್ಮ ಮಾಡುವಾಗ, ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳ ಹಾಗೆ ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ತುತೂರಿಯನ್ನು ಊದಿಸಬೇಡ. ಅವರು ತಮ್ಮ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


“ನೀವು ಪ್ರಾರ್ಥನೆ ಮಾಡುವಾಗ, ಕಪಟಿಗಳಂತೆ ಮಾಡಬೇಡಿರಿ. ಅವರು ಜನರಿಗೆ ಕಾಣುವಂತೆ ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮ್ಮ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನೀತಿಯ ನಿಮಿತ್ತವಾಗಿ ಹಿಂಸೆಗೊಳಗಾಗುವವರು ಧನ್ಯರು, ಪರಲೋಕ ರಾಜ್ಯವು ಅವರದು.


“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಸುಣ್ಣ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ. ಆದರೆ ಒಳಗೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು