Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 6:4 - ಕನ್ನಡ ಸಮಕಾಲಿಕ ಅನುವಾದ

4 ಪ್ರತಿಯೊಬ್ಬನು ತನ್ನ ಸ್ವಂತ ಕೆಲಸವನ್ನು ಪರೀಕ್ಷಿಸಿಕೊಳ್ಳಲಿ, ಆಗ ಅವನು ತನ್ನಲ್ಲಿ ಮಾತ್ರ ಸಂತೋಷಪಡುವುದಕ್ಕೆ ಆಸ್ಪದವಾಗುವುದೇ ಹೊರತು ಮತ್ತೊಬ್ಬನಲ್ಲಿ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪ್ರತಿಯೊಬ್ಬನು ತಾನು ಮಾಡಿದ ಕೆಲಸವನ್ನು ಪರೀಕ್ಷಿಸಿಕೊಳ್ಳಲಿ. ಆಗ ಅವನು ತನ್ನ ನಿಮಿತ್ತದಿಂದ ಹೆಚ್ಚಳಪಡಬಹುದೇ ಹೊರತು ಮತ್ತೊಬ್ಬನೊಂದಿಗೆ ಹೋಲಿಸಿಕೊಂಡು ಹೆಚ್ಚಳಪಡಬೇಕಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪ್ರತಿಯೊಬ್ಬನೂ ತನ್ನ ನಡತೆಯನ್ನು ತನ್ನಷ್ಟಕ್ಕೆ ತಾನೇ ಪರಿಶೋಧಿಸಿಕೊಳ್ಳಲಿ. ತನ್ನ ನಡತೆ ಒಳಿತಾಗಿದ್ದರೆ ಹೆಮ್ಮೆಪಡಲಿ. ಆದರೆ ಇತರರೊಂದಿಗೆ ಹೋಲಿಸಿ ಹೆಮ್ಮೆಪಡಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪ್ರತಿಯೊಬ್ಬನು ತಾನು ಮಾಡಿದ ಕೆಲಸವನ್ನು ಪರಿಶೋಧಿಸಲಿ; ಆಗ ಅವನು ತನ್ನ ನಿವಿುತ್ತದಿಂದ ಹೆಚ್ಚಳಪಡುವದಕ್ಕೆ ಆಸ್ಪದವಾಗುವದೇ ಹೊರತು ಮತ್ತೊಬ್ಬರ ನಿವಿುತ್ತದಿಂದಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪ್ರತಿಯೊಬ್ಬನು ತನ್ನ ನಡತೆಯನ್ನು ತಾನೇ ವಿಮರ್ಶಿಸಿಕೊಳ್ಳಲಿ. ಆಗ ತಾನೇನಾದರೂ ಹೆಚ್ಚಳಪಡುವಂತ ಕಾರ್ಯಗಳನ್ನು ಮಾಡಿದ್ದರೆ ಅವನಿಗೆ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಸಗ್ಳ್ಯಾನಿ ತೆಂಚ್ಯಾ ತೆಂಚ್ಯಾ ಕಾಮಾಚಿ ಪರಿಕ್ಷಾ ಕರುನ್ ಬಗುಚೆ, ತನ್ನಾ ತೆನಿ ಅಪ್ನಾಚೆ ಮೊಟೆಪಾನ್ ಬೊಲುಕ್ ಹೊತಾ, ತೆ ಬಿ ಅನಿ ಎಕ್ಲ್ಯಾಚ್ಯಾ ವಾಂಗ್ಡಾ ಅಪ್ನಾಕುಚ್ ಸಮಾ ಕರುನ್ ಘೆಯ್ನಸ್ತಾನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 6:4
17 ತಿಳಿವುಗಳ ಹೋಲಿಕೆ  

ನಂಬಿಕೆಯಲ್ಲಿ ಇದ್ದೀರೋ, ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ. ನಿಮ್ಮನ್ನು ಪರಿಶೋಧಿಸಿಕೊಳ್ಳಿರಿ. ಏನು, ಕ್ರಿಸ್ತ ಯೇಸು ನಿಮ್ಮಲ್ಲಿದ್ದಾರೆಂಬುದರ ಬಗ್ಗೆ ನಿಮಗೆ ನಂಬಿಕೆಯಿಲ್ಲವೋ? ಅವರು ನಿಮ್ಮಲ್ಲಿಲ್ಲದಿದ್ದರೆ, ನೀವು ಪರೀಕ್ಷೆಯಲ್ಲಿ ಉತ್ತೀರ್ಣರಾದವರಲ್ಲ.


ಯೆಹೋವ ದೇವರೇ, ನನ್ನನ್ನು ಶೋಧಿಸಿ, ಪರೀಕ್ಷಿಸಿರಿ; ನನ್ನ ಅಂತರಿಂದ್ರಿಯಗಳನ್ನೂ ನನ್ನ ಹೃದಯವನ್ನೂ ಶೋಧಿಸಿರಿ.


ಆದರೆ ಪ್ರತಿಯೊಬ್ಬರೂ ತಮ್ಮನ್ನು ಪರೀಕ್ಷಿಸಿಕೊಂಡವರಾಗಿ, ಆ ರೊಟ್ಟಿಯನ್ನು ತೆಗೆದುಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.


ಈ ಲೋಕದೊಂದಿಗೂ, ವಿಶೇಷವಾಗಿ ನಮ್ಮ ಮತ್ತು ನಿಮ್ಮ ಸಂಬಂಧದಲ್ಲಿಯೂ, ನಾವು ದೇವರಿಂದ ಹೊಂದಿದ ಪವಿತ್ರತೆ ಮತ್ತು ದೈವಿಕ ನಿಷ್ಕಪಟತ್ವದಿಂದ ಯೋಗ್ಯರಾಗಿ ವರ್ತಿಸಿದ್ದೇವೆ ಎಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಈ ಮನಸ್ಸಾಕ್ಷಿಯ ಹೇಳಿಕೆಯು ನಮಗೆ ಹೆಮ್ಮೆಯ ವಿಷಯವಾಗಿದೆ. ನಾವು ಇದನ್ನು ಈ ಲೋಕದ ಜ್ಞಾನದಿಂದ ಅಲ್ಲ, ದೇವರ ಕೃಪೆಯನ್ನೇ ಆಶ್ರಯಿಸಿ ಮಾಡಿದ್ದೇವೆ.


ಫರಿಸಾಯನು ನಿಂತುಕೊಂಡು: ‘ದೇವರೇ, ಸುಲಿಗೆ ಮಾಡುವವರು, ಅನೀತಿವಂತರು, ವ್ಯಭಿಚಾರಿಗಳು ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ನಾನಲ್ಲ. ಆದ್ದರಿಂದ ನಾನು ನಿನಗೆ ಸ್ತೋತ್ರ ಮಾಡುತ್ತೇನೆ.


ಭ್ರಷ್ಟನು ತನ್ನ ದುಷ್ಕರ್ಮಗಳಿಂದ ದಣಿಯನು, ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು.


ದೇವರು ನನ್ನನ್ನು ಕೊಂದರೂ, ನಾನು ದೇವರ ಮೇಲೆ ನಿರೀಕ್ಷೆಯಿಂದಿರುವೆನು; ನಾನು ನಿಶ್ಚಯವಾಗಿ ನನ್ನ ನಡತೆಯ ಒಳ್ಳೆಯತನವನ್ನು ದೇವರ ಮುಂದೆ ಸ್ಥಾಪಿಸುವೆನು.


ಸುನ್ನತಿ ಮಾಡಿಸಿಕೊಳ್ಳುವ ತಾವಾದರೋ ನಿಯಮವನ್ನು ಕೈಗೊಂಡು ನಡೆಯುವುದಿಲ್ಲ. ಆದರೆ ಅವರು ನಿಮ್ಮ ಶರೀರದ ಸುನ್ನತಿಯಿಂದ ಹೆಚ್ಚಳಪಡುವಂತೆ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.


ನೆಡುವವನೂ ನೀರು ಹಾಕುವವನೂ ಒಂದೇ ಉದ್ದೇಶವುಳ್ಳವರಾಗಿರುತ್ತಾರೆ. ಪ್ರತಿಯೊಬ್ಬನಿಗೆ ಅವನವನ ಶ್ರಮಕ್ಕೆ ತಕ್ಕಂತೆ ಪ್ರತಿಫಲ ದೊರೆಯುವುದು.


ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಬೆಂಕಿಯಿಂದ ತಪ್ಪಿಸಿಕೊಂಡು ಉಳಿದರೆ, ಅವನಿಗೆ ಪ್ರತಿಫಲ ಸಿಕ್ಕುವುದು.


ಹೀಗೆ ನಾನು ಪುನಃ ನಿಮ್ಮ ಬಳಿಗೆ ಬರುವುದರಿಂದ ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮ ಸಂತೋಷವು ನನ್ನ ನಿಮಿತ್ತವಾಗಿ ಅತ್ಯಧಿಕವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು