Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 1:11 - ಕನ್ನಡ ಸಮಕಾಲಿಕ ಅನುವಾದ

11 ಮಾರುಕಟ್ಟೆಗಳ ಜಿಲ್ಲೆಯಲ್ಲಿ ವಾಸಿಸುವವರೇ, ಗೋಳಾಡಿರಿ. ಏಕೆಂದರೆ ವರ್ತಕರ ಜನರೆಲ್ಲಾ ಸಂಹಾರವಾದರು. ಬೆಳ್ಳಿಯ ವ್ಯಾಪಾರಿಗಳೆಲ್ಲರೂ ನಾಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆರುಸಲೇಮ್ ಜಿಲ್ಲೆಯ ಮಾರುಕಟ್ಟೆಯಲ್ಲಿ ವಾಸಿಸುವವರೇ, ಕೂಗಿರಿ, ಏಕೆಂದರೆ ಎಲ್ಲಾ ವರ್ತಕರ ಜನರೆಲ್ಲಾ ಹಾಳಾದರು, ಬೆಳ್ಳಿಯ ವ್ಯಾಪಾರಿಗಳೆಲ್ಲರೂ ನಾಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ಪಟ್ಟಣದ ಸಂತೆಬೀದಿಗಳಲ್ಲಿ ವಾಸಮಾಡುವವರು ಅತ್ತು ಪ್ರಲಾಪಿಸಲಿ; ವ್ಯಾಪಾರಸ್ಥರೆಲ್ಲರೂ ಸತ್ತುಹೋಗಿರುವರು; ಅಕ್ಕಸಾಲಿಗರೆಲ್ಲರೂ ಕಣ್ಮರೆಯಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಒರಳ ಕೇರಿಯವರೇ, ಕಿರಚಿರಿ, ಎಲ್ಲಾ ಸಾಹುಕಾರರು ಹಾಳಾದರು, ಹೊರೆಬೆಳ್ಳಿಯವರೆಲ್ಲರು ನಾಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಗರದ ಕೆಳಗಿನ ಭಾಗದಲ್ಲಿರುವವರೇ, ನೀವು ಅಳುವಿರಿ. ಯಾಕೆಂದರೆ ನಿಮ್ಮಲ್ಲಿರುವ ಧನಿಕರೂ ವ್ಯಾಪಾರಸ್ತರೂ ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 1:11
16 ತಿಳಿವುಗಳ ಹೋಲಿಕೆ  

ಧನಿಕರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.


ಮನುಷ್ಯಪುತ್ರನೇ, ಕೂಗು ಮತ್ತು ಗೋಳಾಡು. ಏಕೆಂದರೆ ಅದು ನನ್ನ ಜನರ ಮೇಲೆಯೂ, ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಇರುವುದು. ಖಡ್ಗದ ಮುಖಾಂತರ ಅಂಜಿಕೆಯು ನನ್ನ ಜನರ ಮೇಲೆ ಬರುವುದು. ಆದ್ದರಿಂದ ನಿನ್ನ ಎದೆಯನ್ನು ಬಡಿದುಕೋ.


ಕುರುಬರೇ, ಗೋಳಿಟ್ಟು ಕೂಗಿರಿ. ಮಂದೆಯಲ್ಲಿನ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ. ಏಕೆಂದರೆ ನಿಮ್ಮನ್ನು ಕೊಲ್ಲುವುದಕ್ಕೂ, ಚದರಿಸುವುದಕ್ಕೂ ದಿನಗಳು ತುಂಬಿ ಇವೆ. ಆಗ ನೀವು ಒಡೆದುಹೋದ ಅಂದವಾದ ಪಾತ್ರೆಯಂತೆ ಬೀಳುವಿರಿ.


ಯೇಸು ಪಾರಿವಾಳ ಮಾರುವವರಿಗೆ, “ಇವುಗಳನ್ನು ತೆಗೆದುಕೊಂಡು ಹೋಗಿರಿ, ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯನ್ನಾಗಿ ಮಾಡಬೇಡಿರಿ,” ಎಂದರು.


ಯಾಜಕರೇ, ಗೋಣಿತಟ್ಟು ಕಟ್ಟಿಕೊಂಡು ಗೋಳಾಡಿರಿ. ಬಲಿಪೀಠದ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟಿನಲ್ಲಿ ರಾತ್ರಿಯೆಲ್ಲಾ ಕಳೆಯಿರಿ. ಏಕೆಂದರೆ, ಧಾನ್ಯ ಸಮರ್ಪಣೆಯೂ ಪಾನಾರ್ಪಣೆಯೂ ನಿಮ್ಮ ದೇವರ ಆಲಯದಿಂದ ನಿಂತುಹೋಗಿವೆ.


ಅಮಲೇರಿದವರೇ, ಎಚ್ಚೆತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾರಸದ ನಿಮಿತ್ತ ಗೋಳಾಡಿರಿ; ಏಕೆಂದರೆ, ಅದು ನಿಮ್ಮ ಬಾಯಿಗೆ ಇನ್ನು ದೊರಕುವುದಿಲ್ಲ.


ಇಗೋ, ನಾಶನದಿಂದ ಅವರು ತಪ್ಪಿಸಿಕೊಂಡರೂ ಈಜಿಪ್ಟ್ ಅವರನ್ನು ಕೂಡಿಸುವುದು. ಮೋಫ್ ಪಟ್ಟಣವು ಅವರನ್ನು ಹೂಳುವುದು. ಅವರ ಬೆಳ್ಳಿಯ ಬೊಕ್ಕಸಗಳು ಮುಳ್ಳು ಪೊದೆಗಳ ಪಾಲಾಗುವುವು. ಮುಳ್ಳುಗಿಡಗಳು ಅವರ ಗುಡಾರಗಳನ್ನು ಆವರಿಸಿಕೊಂಡಿರುವುದು.


ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ. ಪ್ರಲಾಪಿಸಿರಿ, ಗೋಳಾಡಿರಿ. ಯೆಹೋವ ದೇವರ ಉಗ್ರಕೋಪದ ಉರಿಯು ನಮ್ಮಿಂದ ಹಿಂದಿರುಗಲಿಲ್ಲ.


ದುಷ್ಟರು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟಿದ್ದರೂ, ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿಕೊಂಡಿದ್ದರೂ,


ಅವರು ಕೂಡಿಸಿಟ್ಟಿದ್ದನ್ನು ನೀತಿವಂತರು ಹಂಚಿಕೊಳ್ಳುವರು; ಅವರ ಬೆಳ್ಳಿಯನ್ನು ನಿರ್ದೋಷಿಗಳು ಹಂಚಿಕೊಳ್ಳುವರು.


ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವ ದೇವರ ವಾಕ್ಯವು ನಿನಗೆ ವಿರುದ್ಧವಾಗಿದೆ, “ನಿನ್ನಲ್ಲಿ ನಿವಾಸಿಯೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು,” ಎಂದು ಅವರು ಹೇಳುತ್ತಾರೆ.


ಯೆರೂಸಲೇಮಿನಲ್ಲಿಯೂ, ಯೆಹೂದದಲ್ಲಿಯೂ ಇರುವ ಪ್ರತಿಯೊಂದು ಪಾತ್ರೆಯು ಸೇನಾಧೀಶ್ವರ ಯೆಹೋವ ದೇವರಿಗೆ ಪರಿಶುದ್ಧವಾಗಿರುವುವು. ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಅವುಗಳಲ್ಲಿ ಬೇಯಿಸುವರು. ಆ ದಿವಸದಲ್ಲಿ, ಕಾನಾನ್ಯನು ಸೇನಾಧೀಶ್ವರ ಯೆಹೋವ ದೇವರ ಆಲಯದಲ್ಲಿ ಇನ್ನು ಮೇಲೆ ಇರುವುದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು