Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 1:6 - ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರನ್ನು ಅನುಸರಿಸದೆ ಹಿಂತಿರುಗಿ ಹೋಗುವವರನ್ನು ಯೆಹೋವ ದೇವರನ್ನು ಹುಡುಕದೆಯೂ ವಿಚಾರಿಸದೆಯೂ ಇರುವವರನ್ನೂ ಕಡಿದುಬಿಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನನ್ನು ಆಶ್ರಯಿಸದೆ, ಯೆಹೋವನ ದರ್ಶನವನ್ನು ಬಯಸದೇ, ಯೆಹೋವನ ಮಾರ್ಗ ಬಿಟ್ಟವರನ್ನೂ ಧ್ವಂಸ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನನಗೆ ಬೆನ್ನು ತೋರಿಸಿ, ನನ್ನ ದರ್ಶನವನ್ನು ಬಯಸದೆ, ನನ್ನ ಮಾರ್ಗಬಿಟ್ಟವರನ್ನು ಧ್ವಂಸಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನನ್ನು ಆಶ್ರಯಿಸದೆ ಯೆಹೋವನ ದರ್ಶನವನ್ನು ಬಯಸದೆ ಯೆಹೋವನ ಮಾರ್ಗಬಿಟ್ಟವರನ್ನೂ ಧ್ವಂಸಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕೆಲವರು ಯೆಹೋವನಾದ ನನ್ನಿಂದ ತೊಲಗಿಹೋದರು. ನನ್ನನ್ನು ಹಿಂಬಾಲಿಸುವುದನ್ನು ನಿಲ್ಲಿಸಿಬಿಟ್ಟರು. ಅವರು ಯೆಹೋವನನ್ನು ಸಹಾಯಕ್ಕಾಗಿ ಬೇಡುವಂತದ್ದನ್ನು ನಿಲ್ಲಿಸಿದರು. ಅವರನ್ನು ನಾನು ಅವರ ಸ್ಥಳಗಳಿಂದ ತೆಗೆದುಹಾಕುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 1:6
27 ತಿಳಿವುಗಳ ಹೋಲಿಕೆ  

“ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು, ತಮಗೆ ನೀರು ಹಿಡಿಯಲಾರದ ಒಡಕ ತೊಟ್ಟಿಗಳನ್ನೂ ಕೆತ್ತಿದ್ದಾರೆ.


ಅಯ್ಯೋ ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ! ದುಷ್ಟ ಸಂತತಿಯೇ, ಭ್ರಷ್ಟರಾದ ಮಕ್ಕಳೇ! ಯೆಹೋವ ದೇವರನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧರನ್ನು ತಿರಸ್ಕರಿಸಿದ್ದಾರೆ ಅವರಿಂದ ದೂರವಾಗಿದ್ದಾರೆ.


ನೀನು ನನ್ನನ್ನು ಬಿಟ್ಟುಬಿಟ್ಟಿದ್ದೀ,” ಎಂದು ಯೆಹೋವ ದೇವರು ಹೇಳುತ್ತಾರೆ. “ನೀನು ಹಿಂಜಾರಿದೆ. ಆದ್ದರಿಂದ ನನ್ನ ಕೈಯನ್ನು ನಿನಗೆ ವಿರೋಧವಾಗಿ ಚಾಚಿ, ನಿನ್ನನ್ನು ನಾಶಮಾಡುವೆನು. ನಿನಗೆ ಅನುಕಂಪ ತೋರಿಸುವುದರಲ್ಲಿ ದಣಿದಿದ್ದೇನೆ.


ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡೆಯಲ್ಲವೋ?


ನನ್ನ ಜನರು ನನ್ನ ಕಡೆಯಿಂದ ಹಿಂಜಾರಬೇಕೆಂದು ತೀರ್ಮಾನಿಸಿದ್ದಾರೆ. ಅವರು ನನ್ನನ್ನು ಸರ್ವೋನ್ನತ ದೇವರು ಎಂದು ಕರೆದರೂ ನಾನು ಅವರನ್ನು ಯಾವುದೇ ರೀತಿಯಲ್ಲಿ ಉನ್ನತೀಕರಿಸುವುದಿಲ್ಲ.


ಇದೆಲ್ಲಾ ಆದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಪೂರ್ಣಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ,” ಎಂದು ಯೆಹೋವ ದೇವರು ನುಡಿಯುತ್ತಾರೆ.


ಆದರೂ ಜನರು ತಮ್ಮನ್ನು ಶಿಕ್ಷಿಸಿದ ದೇವರ ಕಡೆಗೆ ತಿರುಗದೆಯೂ, ಸೇನಾಧೀಶ್ವರ ಯೆಹೋವ ದೇವರನ್ನು ಹುಡುಕದೆಯೂ ಇದ್ದರು.


ಇಂತಹ ಮಹಾ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದು ಹೇಗೆ? ಈ ರಕ್ಷಣೆಯನ್ನು ನಮಗೆ ಕರ್ತ ಆಗಿರುವ ಯೇಸುವೇ ಮೊದಲು ತಿಳಿಸಿದ್ದಾರೆ. ಅವರಿಂದ ಕೇಳಿಸಿಕೊಂಡವರೂ ನಮಗೆ ಆ ರಕ್ಷಣೆಯನ್ನು ದೃಢಪಡಿಸಿದ್ದಾರೆ.


“ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡತಡೆಯನ್ನು ಇಡುವೆನು, ಅವನು ಸಾಯುವನು. ನೀನು ಅವನನ್ನು ಎಚ್ಚರಿಸದೆ ಇದ್ದುದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು. ಅವನು ಮಾಡಿರುವ ಸುಕೃತ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಸಾವಿಗೆ ನೀನೇ ಹೊಣೆಯಾಗುವೆ.


ಆದರೆ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು, ದುಷ್ಟರ ಸಂಗಡ ದೇವರು ತೊಲಗಿಸಲಿ. ಇಸ್ರಾಯೇಲರ ಮೇಲೆ ಸಮಾಧಾನವಿರಲಿ.


ದುಷ್ಟನು ತನ್ನ ಗರ್ವದಲ್ಲಿ ದೇವರನ್ನು ಹುಡುಕುವುದಿಲ್ಲ; ಅವನ ಎಲ್ಲ ಯೋಚನೆಗಳಲ್ಲಿಯೂ ದೇವರಿಗೆ ಸ್ಥಳವೇ ಇಲ್ಲ.


“ನಾನು ಸೌಲನನ್ನು ಅರಸನಾಗಿ ಮಾಡಿದ್ದರಿಂದ ದುಃಖಪಡುತ್ತೇನೆ. ಏಕೆಂದರೆ ಅವನು ನನ್ನನ್ನು ಹಿಂಬಾಲಿಸುವುದನ್ನು ಬಿಟ್ಟು, ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ,” ಎಂದರು. ಅದಕ್ಕೆ ಸಮುಯೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವ ದೇವರಿಗೆ ಮೊರೆಯಿಟ್ಟನು.


ಅವರೆಲ್ಲರೂ ಒಲೆಯ ಹಾಗೆ ಬಿಸಿಯಾಗಿದ್ದಾರೆ. ಅವರು ತಮ್ಮ ನ್ಯಾಯಾಧಿಪತಿಗಳನ್ನು ನುಂಗಿಬಿಡುತ್ತಾರೆ. ಅವರ ಅರಸರೆಲ್ಲರು ಬಿದ್ದು ಹೋಗಿದ್ದಾರೆ. ಅವರಲ್ಲಿ ಒಬ್ಬನಾದರೂ ನನ್ನನ್ನು ಕರೆಯುವುದಿಲ್ಲ.


ಅವರ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿರುತ್ತವೆ; ಬುದ್ಧಿಯಿಂದ ನಡೆಯುವುದನ್ನೂ ಒಳ್ಳೆಯದನ್ನು ಮಾಡುವುದನ್ನೂ ಅವರು ಬಿಟ್ಟಿದ್ದಾರೆ.


ಅರ್ಥಮಾಡಿಕೊಳ್ಳುವವನು ಒಬ್ಬನೂ ಇಲ್ಲ. ದೇವರನ್ನು ಹುಡುಕುವವನು ಒಬ್ಬನೂ ಇಲ್ಲ.


“ಆದರೂ ಯಾಕೋಬೇ, ನೀನು ನನ್ನನ್ನು ಪ್ರಾರ್ಥಿಸಲಿಲ್ಲ. ಇಸ್ರಾಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡಿದ್ದೀ!


ನಿಮ್ಮನ್ನು ತಿಳಿಯದವರ ಮೇಲೆಯೂ, ನಿಮ್ಮ ಹೆಸರನ್ನು ಅರಿಯದ ದೇಶಗಳ ಮೇಲೆಯೂ, ನಿಮ್ಮ ಕೋಪವನ್ನು ಸುರಿದುಬಿಡಿರಿ. ಏಕೆಂದರೆ, ಅವರು ಯಾಕೋಬ್ಯರನ್ನು ನುಂಗಿಬಿಟ್ಟಿದ್ದಾರೆ. ಹೌದು, ಅವರನ್ನು ನುಂಗಿದ್ದಲ್ಲದೆ, ಅವರ ಸ್ವದೇಶವನ್ನು ಸಹ ನಾಶಮಾಡಿದ್ದಾರೆ.


ಇಸ್ರಾಯೇಲಿನ ಗರ್ವವು ಅವನಿಗೆ ವಿರುದ್ಧವಾಗಿ ಸಾಕ್ಷಿಕೊಡುತ್ತದೆ. ಆದರೂ ಅವರು ತಮ್ಮ ಯೆಹೋವ ದೇವರ ಕಡೆಗೆ ತಿರುಗದೆ ಇದ್ದಾರೆ. ಆತನನ್ನು ಹುಡುಕದೇ ಇದ್ದಾರೆ.


“ಆದರೆ, ನೀವು ದೇವರಿಂದ ತಿರುಗಿಕೊಂಡು ನಿಮ್ಮಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರಿಕೊಂಡು ಅವರೊಂದಿಗೆ ಮದುವೆ ಮಾಡಿಕೊಟ್ಟರೆ, ನೀವು ಅವರ ಬಳಿಗೂ ಅವರು ನಿಮ್ಮ ಬಳಿಗೂ ಪ್ರವೇಶಿಸಿದರೆ,


ಏಕೆಂದರೆ ನಾನು ಯೆಹೋವ ದೇವರ ಮಾರ್ಗಗಳನ್ನು ಅನುಸರಿಸಿದ್ದೇನೆ, ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ.


ಯಾವನಾದರೂ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಹುಡುಕದೆ ಹೋದರೆ; ಹಿರಿಯನಾದರೂ, ಕಿರಿಯನಾದರೂ, ಪುರುಷನಾದರೂ, ಸ್ತ್ರೀಯಾದರೂ ಸಾಯಬೇಕೆಂದು ಒಡಂಬಡಿಕೆ ಮಾಡಿಕೊಂಡರು.


ಅವನ ಶತ್ರುಗಳಾದ ಪೂರ್ವದಿಂದ ಅರಾಮ್ಯರನ್ನು ಮುಂದೆಯೂ, ಪಶ್ಚಿಮದಿಂದ ಫಿಲಿಷ್ಟಿಯರನ್ನು ಹಿಂದೆಯೂ ಒಟ್ಟುಗೂಡಿಸುವರು. ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿಬಿಡುವರು. ಏಕೆಂದರೆ, ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.


ಅವಳು ಯಾರಿಗೂ ವಿಧೇಯಳಾಗಲಿಲ್ಲ; ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ; ಯೆಹೋವ ದೇವರಲ್ಲಿ ಭರವಸೆ ಇಡಲಿಲ್ಲ; ತನ್ನ ದೇವರ ಸಮೀಪಕ್ಕೆ ಬರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು