Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 2:10 - ಕನ್ನಡ ಸಮಕಾಲಿಕ ಅನುವಾದ

10 ಅವರು ಸೇನಾಧೀಶ್ವರ ಯೆಹೋವ ದೇವರ ಜನರನ್ನು ಅವಮಾನಿಸಿ ಮತ್ತು ಅಪಹಾಸ್ಯ ಮಾಡಿದ್ದರಿಂದಲೇ ಅವರ ಗರ್ವಕ್ಕೋಸ್ಕರ ಇದೇ ಅವರಿಗೆ ಸಿಕ್ಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ಪ್ರಾಂತ್ಯಗಳವರು ಸೇನಾಧೀಶ್ವರನಾದ ಯೆಹೋವನ ಜನರನ್ನು ದೂಷಿಸಿ, ಅವರ ಮೇಲೆ ಉಬ್ಬಿಕೊಂಡು ಬಂದುದ್ದರಿಂದ ಅವರ ಅಹಂಕಾರದ ನಿಮಿತ್ತವೇ ಅವರಿಗೆ ಈ ಗತಿಯಾಗುವುದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ಜನರನ್ನು ದೂಷಿಸಿ ದರ್ಪದ ಮಾತುಗಳನ್ನು ಆಡಿದ್ದರಿಂದಲೆ ಈ ಪ್ರಾಂತ್ಯಗಳ ಗರ್ವಿಷ್ಠ ಜನರಿಗೆ ಶಿಕ್ಷೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆ ಪ್ರಾಂತಗಳವರು ಸೇನಾಧೀಶ್ವರ ಯೆಹೋವನ ಜನರನ್ನು ದೂಷಿಸಿ ಅವರ ಮೇಲೆ ಉಬ್ಬಿಕೊಂಡು ಬಂದದರಿಂದ ಅವರ ಹೆಮ್ಮೆಯ ನಿವಿುತ್ತವೇ ಅವರಿಗೆ ಈ ಗತಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸರ್ವಶಕ್ತನಾದ ಯೆಹೋವನ ಜನರನ್ನು ಮೋವಾಬ್ಯರು ಮತ್ತು ಅಮ್ಮೋನ್ಯರು ಕ್ರೂರವಾಗಿ ಕಂಡು ಅವರನ್ನು ಪರಿಹಾಸ್ಯಮಾಡಿದ್ದರಿಂದಲೂ ಈ ಸಂಗತಿಗಳು ಅವರಲ್ಲಿ ನೆರವೇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 2:10
18 ತಿಳಿವುಗಳ ಹೋಲಿಕೆ  

ಮೋವಾಬಿನ ಗರ್ವವನ್ನು ನಾವು ಕೇಳಿದ್ದೇವೆ. ಆಕೆಗೆ ಬಹಳ ಗರ್ವ. ಆಕೆಯ ಅಹಂಕಾರವು, ಆಕೆಯ ಗರ್ವವು ಮತ್ತು ಆಕೆಗೆ ಕೋಪವು ಸಹ ಉಂಟು. ಆದರೆ ಆಕೆಯ ಕೊಚ್ಚಿಕೊಳ್ಳುವಿಕೆ ಬರಿದಾದದ್ದು.


“ಮೋವಾಬಿನ ಹೆಮ್ಮೆಯನ್ನು ಕುರಿತು, ಅದರ ಮಹಾ ಗರ್ವವನ್ನು ಕುರಿತು, ಅದರ ಡಂಭವನ್ನೂ, ಅಹಂಕಾರವನ್ನೂ, ಬಡಾಯಿಯನ್ನೂ, ಸೊಕ್ಕಿನ ಹೃದಯವನ್ನೂ ಕುರಿತು ಕೇಳಿದ್ದೇವೆ.


“ಮೋವಾಬಿನ ನಿಂದೆಯನ್ನೂ ಅಮ್ಮೋನ್ಯರ ಬೈಗಳವನ್ನೂ ಅವರು ನನ್ನ ಜನರನ್ನೂ ನಿಂದಿಸಿ, ಅವರ ಮೇರೆಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿಕೊಂಡದ್ದನ್ನೂ ನಾನು ಕೇಳಿದ್ದೇನೆ.


ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರಿ. ಏಕೆಂದರೆ, “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ, ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ!”


ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸಮಾಡಿಕೊಂಡವನೇ, ‘ಯಾರು ನನ್ನನ್ನು ನೆಲಕ್ಕೆ ಇಳಿಸಬಲ್ಲವರು?’ ಎಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸರನ್ನು ಸ್ತುತಿಸಿ, ಹೆಚ್ಚಿಸಿ ಘನಪಡಿಸುತ್ತೇನೆ. ಅವರ ಕ್ರಿಯೆಗಳೆಲ್ಲಾ ಸತ್ಯವೇ. ಅವರ ಮಾರ್ಗಗಳು ನ್ಯಾಯವೇ. ಗರ್ವದಲ್ಲಿ ನಡೆಯುವವರನ್ನು ಅವರೇ ತಗ್ಗಿಸಬಲ್ಲರು.


ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ, “ಹಿಬ್ರಿಯರ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನನ್ನ ಸನ್ನಿಧಿಯಲ್ಲಿ ನೀನು ಎಷ್ಟು ಕಾಲ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸುವಂತೆ ನನ್ನ ಜನರನ್ನು ಹೋಗಗೊಡಿಸು.


ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ?


ಅವಳ ಅಶುದ್ಧವು ಅವಳ ನೆರಿಗೆಗೆ ಅಂಟಿಕೊಂಡಿದೆ. ಅವಳು ತನ್ನ ಭವಿಷ್ಯವನ್ನು ಜ್ಞಾಪಕಮಾಡಿಕೊಳ್ಳುವುದಿಲ್ಲ. ಆದ್ದರಿಂದ ಅವಳು ಭಯಂಕರವಾಗಿ ಇಳಿದು ಬಂದಳು. ಅವಳನ್ನು ಆದರಿಸುವವರು ಯಾರೂ ಇಲ್ಲ. “ಓ ಯೆಹೋವ ದೇವರೇ, ನನ್ನ ಸಂಕಟವನ್ನು ನೋಡಿರಿ, ಶತ್ರುವು ಜಯಿಸಿದ್ದಾನೆ.”


ಏಕೆಂದರೆ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ; ನೀವು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶದವರನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಅದರ ಸ್ಥಿತಿಗೆ ಸಂತೋಷಪಟ್ಟದ್ದರಿಂದ,


ಜನರು ಅವರಿಗೆ ಕೇಡು ಮಾಡದಂತೆ ದೇವರು ತಡೆದರು. ಹೌದು, ಅವರಿಗೋಸ್ಕರ ದೇವರು ಅರಸರನ್ನು ಗದರಿಸಿ:


ಯೆಹೋವ ದೇವರ ಸ್ವಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸೊತ್ತಿಗೆ ಕೈಹಾಕುವ ಕೆಟ್ಟ ನೆರೆಯವರಿಗೆ ಕೊಟ್ಟ ಎಚ್ಚರಿಕೆ: “ಈ ನಾಡಿನವರನ್ನು ಅವರವರ ನಾಡಿನಿಂದಲೇ ಸಸಿಯಂತೆ ಕಿತ್ತುಬಿಡುವೆನು. ಯೆಹೂದ ವಂಶವನ್ನು ಅವರ ಮಧ್ಯೆಯಿಂದ ಕಿತ್ತುಬಿಡುವೆನು.


“ ‘ನಾವು ಪರಾಕ್ರಮಶಾಲಿಗಳೂ, ಯುದ್ಧಕ್ಕೆ ಬಲಿಷ್ಠರೂ,’ ಎಂದು ನೀವು ಹೇಳುವುದು ಹೇಗೆ?


ನೀನು ಪ್ರತ್ಯೇಕವಾಗಿ ಎದುರು ನಿಂತ ದಿವಸದಲ್ಲಿ ಪರರು ಅವನ ಸೊತ್ತನ್ನು ತೆಗೆದುಕೊಂಡು ಹೋದ ದಿವಸದಲ್ಲಿ ಪರಕೀಯರು ಅವನ ಬಾಗಿಲುಗಳಲ್ಲಿ ಪ್ರವೇಶಿಸಿ, ಯೆರೂಸಲೇಮಿನ ಸೊತ್ತಿಗಾಗಿ ಚೀಟು ಹಾಕಿದಾಗ ನೀನೂ ಅವರಲ್ಲಿ ಒಬ್ಬನ ಹಾಗಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು