Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 2:13 - ಕನ್ನಡ ಸಮಕಾಲಿಕ ಅನುವಾದ

13 ಅವರು ತನ್ನ ಕೈಯನ್ನು ಉತ್ತರದ ಮೇಲೆ ಚಾಚಿ, ಅಸ್ಸೀರಿಯರನ್ನು ನಾಶಮಾಡಿ ನಿನೆವೆಯನ್ನು ಹಾಳಾಗಿಯೂ ಮರುಭೂಮಿಯಂತೆ ಒಣಗಿದ್ದಾಗಿಯೂ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನು ಉತ್ತರಕ್ಕೆ ಕೈಚಾಚಿ ಅಶ್ಶೂರವನ್ನು ಧ್ವಂಸ ಮಾಡುವನು; ನಿನವೆಯನ್ನು ಹಾಳುಮಾಡಿ ನೀರಿಲ್ಲದ ಮರುಭೂಮಿಯಂತೆ ಒಣಗಿಸಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಸ್ಸೀರಿಯವನ್ನು ಸರ್ವೇಶ್ವರ ತಮ್ಮ ಭುಜಬಲದಿಂದ ಧ್ವಂಸಮಾಡುವರು; ನಿನೆವೆ ಪಟ್ಟಣವನ್ನು ಹಾಳುಬಿದ್ದ ಅವಶೇಷವಾಗಿ, ನೀರಿಲ್ಲದ ಮರುಭೂಮಿಯಾಗಿ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನು ಬಡಗಲಿಗೆ ಕೈಚಾಚಿ ಅಶ್ಶೂರವನ್ನು ಧ್ವಂಸಪಡಿಸುವನು; ನಿನೆವೆಯನ್ನು ಹಾಳುಮಾಡಿ ಮರುಭೂವಿುಯಂತೆ ಒಣಗಿಸಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇವರು ಆಮೇಲೆ ಉತ್ತರಕ್ಕೆ ಮುಖಮಾಡಿ ಅಶ್ಶೂರವನ್ನು ಶಿಕ್ಷಿಸುವನು. ಆತನು ನಿನೆವೆ ಪಟ್ಟಣವನ್ನು ಶಿಕ್ಷಿಸಿದಾಗ ಅದು ನಿರ್ಜನವಾದ ಮರುಭೂಮಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 2:13
19 ತಿಳಿವುಗಳ ಹೋಲಿಕೆ  

ನಿನ್ನನ್ನು ನೋಡುವವರೆಲ್ಲರೂ ನಿನ್ನಿಂದ ಓಡಿಹೋಗಿ ಹೀಗೆ ಹೇಳುವರು, ‘ನಿನೆವೆ ಹಾಳಾಯಿತು, ಅದಕ್ಕೆ ಯಾರು ಚಿಂತೆಪಡುವರು?’ ನಿನ್ನನ್ನು ಆದರಿಸುವವರನ್ನು ನಾನು ಎಲ್ಲಿಂದ ಹುಡುಕಲಿ.”


ನಿನೆವೆಯ ವಿಷಯವಾದ ಪ್ರವಾದನೆ: ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು.


ಆದಕಾರಣ ಸೇನಾಧೀಶ್ವರ ಯೆಹೋವ ದೇವರು ಅವನ ಕೊಬ್ಬಿದ ಯೋಧರಿಗೆ ಕ್ಷಯವನ್ನು ಉಂಟುಮಾಡುವರು, ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಕೆಳಗೆ ಹತ್ತಿಕೊಳ್ಳುವುದು.


ಆದರೆ ಕರ್ತದೇವರು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತಮ್ಮ ಕಾರ್ಯಗಳನ್ನು ನೆರವೇರಿಸಿದ ಮೇಲೆ, “ಅಸ್ಸೀರಿಯದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು, ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿಸುವೆನು.”


ಅಲ್ಲೇ ಬೆಂಕಿ ನಿನ್ನನ್ನು ತಿನ್ನುವುದು; ಖಡ್ಗವು ನಿನ್ನನ್ನು ಕಡಿದುಬಿಡುವುದು; ಹುಲ್ಲು ಮೇಯುವ ಹುಳ ನಿನ್ನನ್ನು ತಿಂದುಬಿಡುವುದು; ಬಹುಮಂದಿಯಾಗು, ಮಿಡತೆಗಳಂತೆ ಬಹುಮಂದಿಯಾಗು, ಗುಂಪು ಮಿಡತೆಗಳಂತೆ


ಅವರು ಅಸ್ಸೀರಿಯ ದೇಶವನ್ನು ಖಡ್ಗದಿಂದಲೂ ನಿಮ್ರೋದನ ದೇಶವನ್ನು ಹಿಡಿದ ಖಡ್ಗದಿಂದಲೂ ಆಳುವರು. ಅಸ್ಸೀರಿಯವು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರದೇಶವನ್ನು ಮುತ್ತಿಗೆ ಹಾಕಿ ಪ್ರಾಂತಗಳಲ್ಲಿ ನಡೆಯುವಾಗ ಆತನು ನಮ್ಮನ್ನು ತಪ್ಪಿಸುವನು.


ಆ ದಿನದಲ್ಲಿ ಯೆಹೋವ ದೇವರು ಉಳಿದ ತಮ್ಮ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೇ ಸಾರಿ ಕೈಹಾಕಿ ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾತ್ ಮತ್ತು ಮೆಡಿಟರೇನಿಯನ್ ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವರು.


“ಅಯ್ಯೋ, ನನ್ನ ಕೋಪದ ಕೋಲಾದ ಅಸ್ಸೀರಿಯವೇ, ನನ್ನ ಕೈಯಲ್ಲಿರುವ ಬೆತ್ತವು ನನ್ನ ಕೋಪವೇ.


ಇದೇ ಸಮಸ್ತ ಭೂಮಿಯ ವಿಷಯ ಆಲೋಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.


ಆಗ ಅಸ್ಸೀರಿಯದ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.


ಹಾಚೋರು ನರಿಗಳ ನಿವಾಸವೂ, ಎಂದೆಂದಿಗೂ ಹಾಳಾದ ಸ್ಥಳವೂ ಆಗುವುದು. ಅಲ್ಲಿ ಯಾವನಾದರೂ ವಾಸಮಾಡುವುದಿಲ್ಲ. ಯಾವ ನರಪುತ್ರನಾದರೂ ಅಲ್ಲಿ ತಂಗುವುದಿಲ್ಲ.


“ನೀನು ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಪ್ರಸಂಗಿಸು, ಏಕೆಂದರೆ ಅವರ ಕೆಟ್ಟತನವು ನನ್ನ ಮುಂದೆ ಏರಿ ಬಂದಿದೆ,” ಎಂಬುದು.


“ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ, ನಾನು ನಿನಗೆ ಹೇಳಿದ ಸಂದೇಶವನ್ನು ಅದರ ನಿವಾಸಿಗಳಿಗೆ ಸಾರು,” ಎಂದು ಹೇಳಿದರು.


“ಯೆಹೂದದ ಮೇಲೆಯೂ ಯೆರೂಸಲೇಮಿನ ಎಲ್ಲಾ ನಿವಾಸಿಗಳ ಮೇಲೆಯೂ ನನ್ನ ಕೈಚಾಚುವೆನು. ಈ ಸ್ಥಳದಲ್ಲಿ ಬಾಳನ ಪೂಜೆಗಳನ್ನು ಮತ್ತು ಉಳಿದಿರುವ ವಿಗ್ರಹಾರಾಧಕ ಯಾಜಕರ ಹೆಸರುಗಳನ್ನು ತೆಗೆದುಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು