Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 2:2 - ಕನ್ನಡ ಸಮಕಾಲಿಕ ಅನುವಾದ

2 ತೀರ್ಪು ಕಾರ್ಯಗತಗೊಳ್ಳುವ ಮುಂಚೆ ಮತ್ತು ಆ ದಿನವು ಗಾಳಿ ಬೀಸಿದ ಹೊಟ್ಟಿನಂತೆ ಹಾರಿಹೋಗುವುದಕ್ಕಿಂತ ಮುಂಚೆ ಯೆಹೋವ ದೇವರ ಉಗ್ರಕೋಪವು ನಿಮ್ಮ ಮೇಲೆ ಬರುವ ಮುಂಚೆ, ಯೆಹೋವ ದೇವರ ಕೋಪದ ದಿನವು ನಿಮ್ಮ ಮೇಲೆ ಬರುವ ಮುಂಚೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ಕಾಲವು ಹೊಟ್ಟಿನಂತೆ ಹಾರಿಹೋಗುತ್ತದಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಕಾಲವು ಹೊಟ್ಟಿನಂತೆ ಹಾರಿಹೋಗುವ ಮೊದಲು, ಸರ್ವೇಶ್ವರಸ್ವಾಮಿಯ ಉಗ್ರಕೋಪವು ನಿಮ್ಮ ಮೇಲೆ ಎರಗುವ ಮುಂಚೆ, ಅವರ ಸಿಟ್ಟಿನ ದಿನ ನಿಮ್ಮನ್ನು ಮುಟ್ಟುವುದಕ್ಕೆ ಮುನ್ನ ಸೇರ ಬನ್ನಿ, ಕೂಡಿ ಬನ್ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಕಾಲವು ಹೊಟ್ಟಿನಂತೆ ಹಾರಿಹೋಗುತ್ತದಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀವು ಒಣಗಿ, ಸತ್ತ ಹೂವಿನೋಪಾದಿಯಾಗುವ ಮೊದಲೇ ನಿಮ್ಮ ಜೀವಿತವನ್ನು ಮಾರ್ಪಡಿಸಿರಿ. ಬಿಸಿಲೇರಿದಾಗ ಹೂವು ಬಾಡಿಹೋಗಿ ಒಣಗುತ್ತದೆ. ಅದೇ ಪ್ರಕಾರ ಯೆಹೋವನು ತನ್ನ ಕೋಪವನ್ನು ಪ್ರದರ್ಶಿಸುವಾಗ ನೀವು ಹಾಗೆ ಆಗುವಿರಿ. ಆದ್ದರಿಂದ ಯೆಹೋವನ ಕೋಪದ ದಿನವು ನಿಮ್ಮ ಮೇಲೆ ಬರುವುದಕ್ಕಿಂತ ಮೊದಲೇ ನಿಮ್ಮ ಜೀವಿತವನ್ನು ಬದಲಾಯಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 2:2
22 ತಿಳಿವುಗಳ ಹೋಲಿಕೆ  

ಅವರ ರೌದ್ರದ ಎದುರಿಗೆ ಯಾರು ನಿಲ್ಲುವರು? ಅವರ ರೋಷಾಗ್ನಿಯಲ್ಲಿ ಯಾರು ನಿಂತುಕೊಳ್ಳುವರು? ಅವರ ಕೋಪಾಗ್ನಿ ಬೆಂಕಿಯ ಹಾಗೆ ಸುರಿಸಲಾಗಿದೆ; ಬಂಡೆಗಳು ಆತನ ಮುಂದೆ ಕೆಡವಲಾಗಿವೆ.


ಆದ್ದರಿಂದ ಅವರು ಪ್ರಾತಃಕಾಲದ ಮಂಜಿನ ಹಾಗೆಯೂ, ಬೇಗನೆ ಮಾಯವಾಗುವ ಇಬ್ಬನಿಯ ಹಾಗೆಯೂ, ಸುಳಿಗಾಳಿಯು ಕಣದಿಂದ ಬಡಿದುಕೊಂಡು ಹೋಗುವ ಹೊಟ್ಟಿನ ಹಾಗೆಯೂ, ಚಿಮಿಣಿಯಿಂದ ಹೊರಡುವ ಹೊಗೆಯ ಹಾಗೆಯೂ ಇರುವರು.


ಯೆಹೋವ ದೇವರು ತಮ್ಮ ರೋಷವನ್ನು ತೀರಿಸಿದ್ದಾರೆ. ಅವರು ತಮ್ಮ ಉಗ್ರವಾದ ಕೋಪವನ್ನು ಸುರಿದಿದ್ದಾರೆ. ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.


ಪ್ರಚಂಡ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ, ಅವರು ದೂರಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರಗಾಳಿಯಿಂದ ಸುತ್ತಿ ಆಡುವ ಧೂಳಿನಂತೆಯೂ ಓಡಿಹೋಗುವರು.


ಆದರೆ ದುಷ್ಟರು ಹಾಗಲ್ಲ! ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನ ಹಾಗೆಯೇ ಇದ್ದಾರೆ.


ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ: ನಾನು ಬೇಟೆ ಹಿಡಿಯಲಿಕ್ಕೆ ಏಳುವ ದಿವಸದವರೆಗೂ ನನಗೆ ಕಾದುಕೊಳ್ಳಿರಿ.” ಏಕೆಂದರೆ ಜನಾಂಗಗಳನ್ನು ಕೂಡಿಸುವುದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವುದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ನನ್ನ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವುದಕ್ಕೂ ತೀರ್ಮಾನಿಸಿಕೊಂಡಿದ್ದೇನೆ. ಏಕೆಂದರೆ ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸಲಾಗುವುದು.


ಯೆಹೋವ ದೇವರ ರೌದ್ರದಿನದಂದು ಅವರ ಬೆಳ್ಳಿಯಾದರೂ ಅವರ ಬಂಗಾರವಾದರೂ ಅವರನ್ನು ರಕ್ಷಿಸಲಾರವು.” ಅವರ ಅಸೂಯೆಯ ಬೆಂಕಿಯು ದೇಶವನ್ನೆಲ್ಲಾ ನುಂಗುವುದು. ಏಕೆಂದರೆ ದೇಶದ ನಿವಾಸಿಗಳನ್ನೆಲ್ಲಾ ಬೇಗ ನಿರ್ಮೂಲ ಮಾಡಿಬಿಡುವರು.


ಅವರು ಗಾಳಿಯ ಮುಂದೆ ಹುಲ್ಲಿನ ಹಾಗೆ ಆದದ್ದು ಎಷ್ಟು ಸಾರಿ? ಬಿರುಗಾಳಿಯು ಹೊಡಕೊಂಡು ಹೋಗುವ ಹೊಟ್ಟಿನ ಹಾಗೆ ಕೊಚ್ಚಿಕೊಂಡು ಹೋದದ್ದು ಎಷ್ಟು ಸಾರಿ?


ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.


ನಾನೇ ಯೆಹೋವ ದೇವರು, ನಾನೇ ಮಾತನಾಡುತ್ತೇನೆ. ನಾನು ಆಡುವ ಮಾತು ನೆರವೇರುವುದು; ಅದು ಇನ್ನು ನಿಧಾನವಾಗುವುದಿಲ್ಲ. ದ್ರೋಹಿಗಳಾದ ಮನೆತನದವರೇ, ನಿಮ್ಮ ದಿವಸಗಳಲ್ಲಿ ನಾನು ನುಡಿದದ್ದನ್ನು ನಡೆಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ಆತನು ತನ್ನ ಹೃದಯದ ಆಲೋಚನೆಗಳನ್ನು ನಡೆಸಿ ತೀರಿಸುವವರೆಗೂ ಯೆಹೋವ ದೇವರ ಕೋಪವು ತಿರುಗುವುದಿಲ್ಲ. ಅಂತ್ಯ ದಿವಸಗಳಲ್ಲಿ ನೀವು ಅದನ್ನು ಸಂಪೂರ್ಣವಾಗಿ ಗ್ರಹಿಸುವಿರಿ.


“ದೇವರನ್ನು ಮರೆತು ಬಿಡುವವರೇ, ಇದನ್ನು ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ. ಇಲ್ಲವಾದರೆ ಎಚ್ಚರಿಕೆಯಾಗಿರಿ. ನನ್ನ ಕೈಯಿಂದ ಬಿಡಿಸುವವರು ಯಾರೂ ಇರುವುದಿಲ್ಲವೆಂಬುದನ್ನು ಗ್ರಹಿಸಿಕೊಳ್ಳಿರಿ.


ಯೆಹೋವ ದೇವರು ಬೇಸರಗೊಂಡು, ನೀವು ನಿಮ್ಮ ಮಾರ್ಗದಲ್ಲಿ ನಾಶವಾಗದಂತೆ ಅವರ ಮಗನನ್ನು ಮುದ್ದಿಸಿರಿ. ಏಕೆಂದರೆ ದೇವರ ರೋಷವು ಕ್ಷಣಮಾತ್ರದಲ್ಲಿ ಜ್ವಾಲಿಸುವುದು. ದೇವರ ಆಶ್ರಯ ಪಡೆಯುವವರೆಲ್ಲಾ ಧನ್ಯರು.


ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ; ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲದಿದ್ದರೆ ನನ್ನ ಉಗ್ರವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು