Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 2:3 - ಕನ್ನಡ ಸಮಕಾಲಿಕ ಅನುವಾದ

3 ದೇಶದ ದೀನರೇ, ಅವರ ಆಜ್ಞೆಗಳನ್ನು ಕೈಕೊಂಡು ನಡೆಯುವವರೆಲ್ಲರೇ ಯೆಹೋವ ದೇವರನ್ನು ಹುಡುಕಿರಿ. ನೀತಿಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ. ಒಂದು ವೇಳೆ ಯೆಹೋವ ದೇವರ ಕೋಪದ ದಿವಸದಲ್ಲಿ ಆಶ್ರಯ ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನ ನಿಯಮವನ್ನು ಕೈಕೊಂಡು ನಡೆಯುವ ಲೋಕದ ದೀನರೇ, ನೀವೆಲ್ಲರೂ ಯೆಹೋವನ ನೀತಿಯನ್ನು ಅನುಸರಿಸಿರಿ, ಧರ್ಮವನ್ನು ಅಭ್ಯಾಸಿಸಿರಿ, ನಮ್ರತೆಯನ್ನು ಹೊಂದಿಕೊಳ್ಳಿರಿ; ಬಹುಶಃ ಯೆಹೋವನ ಸಿಟ್ಟಿನ ದಿನದಲ್ಲಿ ನೀವು ಮರೆಯಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಾಡಿನ ದೀನ ಜನರೇ, ಸರ್ವೇಶ್ವರನ ಆಜ್ಞೆಯನ್ನು ಕೈಗೊಂಡು ನಡೆಯುವವರೇ, ನೀವೆಲ್ಲರೂ ಸ್ವಾಮಿಯ ಕಡೆಗೆ ತಿರುಗಿಕೊಳ್ಳಿ. ಒಳ್ಳೆಯದನ್ನು ಮಾಡಿರಿ, ಸ್ವಾಮಿಯ ಮುಂದೆ ನಿಮ್ಮನ್ನೇ ತಗ್ಗಿಸಿಕೊಳ್ಳಿ; ಸರ್ವೇಶ್ವರಸ್ವಾಮಿಯ ಆ ಸಿಟ್ಟಿನ ದಿನದಂದು ಬಹುಶಃ ನೀವು ಸುರಕ್ಷಿತರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನ ನಿಯಮವನ್ನು ಕೈಕೊಂಡ ಲೋಕದ ದೀನರೇ, ನೀವೆಲ್ಲರೂ ಯೆಹೋವನನ್ನು ಆಶ್ರಯಿಸಿರಿ, ಸದ್ಧರ್ಮವನ್ನು ಅಭ್ಯಾಸಿಸಿರಿ, ದೈನ್ಯವನ್ನು ಹೊಂದಿಕೊಳ್ಳಿರಿ; ಯೆಹೋವನ ಸಿಟ್ಟಿನ ದಿನದಲ್ಲಿ ಒಂದು ವೇಳೆ ಮರೆಯಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೀನರೇ, ಯೆಹೋವನ ಬಳಿಗೆ ಬನ್ನಿರಿ. ಆತನ ನಿಯಮಗಳಿಗೆ ಒಳಗಾಗಿರಿ, ಒಳ್ಳೇದನ್ನು ಮಾಡಿರಿ, ದೀನರಾಗಿರಿ. ಯೆಹೋವನು ತನ್ನ ಕೋಪಾಗ್ನಿಯನ್ನು ಪ್ರದರ್ಶಿಸುವ ದಿವಸದಲ್ಲಿ ನೀವು ರಕ್ಷಿಸಲ್ಪಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 2:3
44 ತಿಳಿವುಗಳ ಹೋಲಿಕೆ  

ಭೂಮಿಯ ದೀನರೆಲ್ಲರನ್ನು ರಕ್ಷಿಸುವುದಕ್ಕೂ ನೀವು ಪ್ರಾರಂಭಿಸುವಾಗ ಭೂಮಿಯು ಭಯಗೊಂಡು ಮೌನವಾಯಿತು.


ದೀನರು ಉಂಡು ತೃಪ್ತರಾಗುವರು; ಯೆಹೋವ ದೇವರನ್ನು ಹುಡುಕುವವರು ಅವರನ್ನು ಸ್ತುತಿಸುವರು; ಅಂಥವರ ಹೃದಯವು ಎಂದೆಂದಿಗೂ ಚೈತನ್ಯ ಹೊಂದಲಿ.


ಹೀಗೆ ಮಾಡಿದರೆ, ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ಅನುಕಂಪದಿಂದ ತಮ್ಮ ಉಗ್ರಕೋಪವನ್ನು ತಡೆದು, ನಾವು ನಾಶವಾಗದೆ ಉಳಿಸುವರೇನೋ, ಯಾರು ಬಲ್ಲರು?”


ಯೆಹೋವ ದೇವರನ್ನೂ, ಅವರ ಬಲವನ್ನೂ ಆಶ್ರಯಿಸಿರಿ, ಅವರ ಮುಖವನ್ನು ಯಾವಾಗಲೂ ಹುಡುಕಿರಿ.


ನಿಮಗಾಗಿ ನೀತಿಯ ಬೀಜವನ್ನು ಬಿತ್ತಿರಿ. ಪ್ರೀತಿಯ ಫಲವನ್ನು ಕೊಯ್ಯಿರಿ. ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ. ಏಕೆಂದರೆ ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವವರೆಗೂ ಯೆಹೋವ ದೇವರನ್ನು ಹುಡುಕುವ ಸಮಯ ಇದೇ.


ಏಕೆಂದರೆ ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು. ನೀನು ಖಡ್ಗದಿಂದ ಬೀಳುವುದಿಲ್ಲ. ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ, ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವುದೆಂದು ಯೆಹೋವ ದೇವರು ಹೇಳುತ್ತಾರೆ,’ ” ಎಂಬುದು.


ಯೆಹೋವ ದೇವರ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿ ಭದ್ರವಾಗಿರುತ್ತಾನೆ.


ದೇವರೇ ನನ್ನನ್ನು ಕರುಣಿಸಿರಿ, ನನ್ನನ್ನು ಕರುಣಿಸಿರಿ. ನನ್ನ ಪ್ರಾಣವು ನಿಮ್ಮನ್ನು ಆಶ್ರಯಿಸಿಕೊಂಡಿದೆ; ಆಪತ್ತುಗಳು ದಾಟುವವರೆಗೂ ನಿಮ್ಮ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.


ನೀವು ಕೃಪೆಯಲ್ಲಿ ಬೆಳೆಯಿರಿ ಮತ್ತು ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಅವರಿಗೆ ಈಗಲೂ ಸರ್ವಕಾಲವೂ ಮಹಿಮೆ ಇರಲಿ! ಆಮೆನ್.


ಹಾಗಾದರೆ ನೀನು ನಿನಗೋಸ್ಕರ ದೊಡ್ಡವುಗಳನ್ನು ಹುಡುಕುತ್ತೀಯೋ? ಹುಡುಕಬೇಡ. ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಯೆಹೋವ ದೇವರು ಹೇಳುತ್ತಾರೆ. ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನೀನು ಉಳಿಸಿಕೊಳ್ಳುವಂತೆ ಮಾಡುವೆನು, ಎಂದು ನಿನಗೆ ಹೇಳಿದ್ದಾರೆ,’ ಎಂದನು.”


ಮಹೋನ್ನತ ದೇವರ ಆಶ್ರಯದಲ್ಲಿ ವಾಸಿಸುವವರು ಸರ್ವಶಕ್ತರ ನೆರಳಿನಲ್ಲಿ ವಿಶ್ರಮಿಸುವರು.


ಅದರ ಬದಲು ಸಾತ್ವಿಕವಾದ ಶಾಂತಮನಸ್ಸು ಎಂಬ ಹೃದಯದ ಆಂತರ್ಯದ ಅಲಂಕಾರವೇ ನಿಮ್ಮದಾಗಿರಲಿ. ಇದು ದೇವರ ದೃಷ್ಟಿಗೆ ಬಹು ಅಮೂಲ್ಯವಾದದ್ದಾಗಿದೆ.


ನೀವು ಕ್ರಿಸ್ತ ಯೇಸುವಿನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡಿದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.


ಪ್ರಿಯರೇ, ನೀವು ಹೇಗೆ ನಡೆದುಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿದಂತೆಯೇ ಜೀವಿಸುತಿರುವಿರಿ. ಇದರಲ್ಲಿ ನೀವು ಹೆಚ್ಚೆಚ್ಚಾಗಿ ಮಾಡಬೇಕೆಂದು ನಾವು ಕಡೆಯದಾಗಿ ನಮಗೆ ಕರ್ತ ಆಗಿರುವ ಯೇಸುವಿನಲ್ಲಿ ನಿಮ್ಮನ್ನು ಪ್ರಬೋಧಿಸುತ್ತೇವೆ ಮತ್ತು ಉತ್ತೇಜಿಸುತ್ತೇವೆ.


ಸಾತ್ವಿಕರು ಧನ್ಯರು, ಅವರು ಭೂಮಿಗೆ ಬಾಧ್ಯರಾಗುವರು.


ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ನೀವು ಅವರನ್ನು ನಿಮ್ಮ ಸಾನಿಧ್ಯದಲ್ಲಿಯೇ ಮರೆಮಾಡುತ್ತೀರಿ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ನಿಮ್ಮ ನಿವಾಸದಲ್ಲಿ ಅಡಗಿಸುತ್ತೀರಿ.


ಆದರೆ ಭೂಮಿಯ ಬಡವರಿಗೆ ನೀತಿಯಿಂದ ನ್ಯಾಯತೀರಿಸುವರು. ಭೂಲೋಕದ ದೀನರಿಗೆ ನ್ಯಾಯವಾಗಿ ತೀರ್ಪುಮಾಡುವರು, ಭೂಮಿಯನ್ನು ತಮ್ಮ ಬಾಯಿಯ ಕೋಲಿನಿಂದ ಹೊಡೆಯುವರು. ತಮ್ಮ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವರು.


ಇಸ್ರಾಯೇಲಿನ ಗರ್ವವು ಅವನಿಗೆ ವಿರುದ್ಧವಾಗಿ ಸಾಕ್ಷಿಕೊಡುತ್ತದೆ. ಆದರೂ ಅವರು ತಮ್ಮ ಯೆಹೋವ ದೇವರ ಕಡೆಗೆ ತಿರುಗದೆ ಇದ್ದಾರೆ. ಆತನನ್ನು ಹುಡುಕದೇ ಇದ್ದಾರೆ.


ಸಾರ್ವಭೌಮ ಯೆಹೋವ ದೇವರ ಆತ್ಮರು ನನ್ನ ಮೇಲೆ ಇದ್ದಾರೆ. ಏಕೆಂದರೆ ಯೆಹೋವ ದೇವರು ನನ್ನನ್ನು ಬಡವರಿಗೆ ಶುಭಸಂದೇಶವನ್ನು ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಮುರಿದ ಹೃದಯಗಳನ್ನು ಕಟ್ಟುವುದಕ್ಕೂ, ಬಂಧಿತರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಮತ್ತು ಕೈದಿಗಳಿಗೆ ಕತ್ತಲೆಯಿಂದ ಬಿಡುಗಡೆ ಮಾಡಲು


ಏಕೆಂದರೆ ಯೆಹೋವ ದೇವರು ತಮ್ಮ ಜನರಲ್ಲಿ ಹರ್ಷಿಸುತ್ತಾರೆ. ದೀನರನ್ನು ಜಯದ ಕಿರೀಟದಿಂದ ಅಲಂಕರಿಸುತ್ತಾರೆ.


ನೀವು ಅವರಿಗೆ, ‘ಯೆಹೋವ ದೇವರು ಈಜಿಪ್ಟ್ ದೇಶದಲ್ಲಿ ಈಜಿಪ್ಟಿನವರನ್ನು ಸಂಹರಿಸಿ, ನಮ್ಮ ಮನೆಗಳನ್ನು ಕಾಪಾಡುವುದಕ್ಕಾಗಿ ಇಸ್ರಾಯೇಲರ ಮನೆಗಳನ್ನು ದಾಟಿಹೋದ ಯೆಹೋವ ದೇವರ ಪಸ್ಕ ಬಲಿಯ ಆಚರಣೆಯನ್ನು ನಡೆಸುತ್ತಿದ್ದೇವೆ,’ ಎಂದು ನೀವು ಹೇಳಬೇಕು,” ಎಂದನು. ಆಗ ಜನರು ತಲೆಬಾಗಿಸಿ ಆರಾಧಿಸಿದರು.


ಸಮಸ್ತ ಮಕೆದೋನ್ಯದಲ್ಲಿರುವ ಸಹೋದರರನ್ನೆಲ್ಲಾ ನೀವು ಪ್ರೀತಿಸುತ್ತಿರುವುದು ನಿಜವೆ. ಆದರೂ ಪ್ರಿಯರೇ, ನೀವು ಪ್ರೀತಿಯಲ್ಲಿ ಇನ್ನೂ ಸಮೃದ್ಧಿಯಾಗಬೇಕೆಂದು ನಾವು ನಿಮ್ಮನ್ನು ಉತ್ತೇಜಿಸುತ್ತೇವೆ.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾಲ್ಕನೆಯ, ಐದನೆಯ, ಏಳನೆಯ, ಹತ್ತನೆಯ ತಿಂಗಳಿನ ಉಪವಾಸವು ಯೆಹೂದದ ಮನೆತನದವರಿಗೆ ಸಂತೋಷಕರ, ಸಂಭ್ರಮ ಕಾಲವೂ, ಆನಂದಕರವಾದ ಹಬ್ಬಗಳೂ ಆಗುವುವು. ಆದರೆ ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.”


ಅದಕ್ಕವನು, “ಮಗುವು ಜೀವದಿಂದ ಇರುವಾಗ ಅದು ಬದುಕುವ ಹಾಗೆ ಯೆಹೋವ ದೇವರು ನನಗೆ ದಯಮಾಡುವರೋ ಎಂದು ಉಪವಾಸ ಮಾಡಿ ಅತ್ತೆನು.


ನೀವು ಸತ್ಯತೆ ದೀನತ್ವ ಹಾಗು ನೀತಿಗೋಸ್ಕರ ನಿಮ್ಮ ಘನತೆಯಿಂದ ಜಯದ ಸವಾರಿ ಮಾಡಿರಿ. ನಿಮ್ಮ ಬಲಗೈ ಮಹಾಕೃತ್ಯಗಳನ್ನು ಪ್ರಕಾಶಪಡಿಸಲಿ.


ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ. ನ್ಯಾಯವನ್ನು ಹುಡುಕಿರಿ. ಹಿಂಸೆಪಡುವವರನ್ನು ಉಪಚರಿಸಿರಿ. ಅನಾಥರಿಗೆ ನ್ಯಾಯತೀರಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.


ಯೆಹೋವ ದೇವರ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ಇಸ್ರಾಯೇಲ್ ಮನೆತನದವರ ಸುತ್ತಲೂ ಗೋಡೆಯನ್ನು ಕಟ್ಟಲಿಲ್ಲ, ನೀವು ಪೌಳಿಯ ಒಡಕುಗಳನ್ನೇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು