Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:1 - ಕನ್ನಡ ಸಮಕಾಲಿಕ ಅನುವಾದ

1 ಅಸಹ್ಯವಾದ, ಮೈಲಿಗೆಯಾದ, ಶ್ರಮೆಪಡಿಸುವ ಪಟ್ಟಣಕ್ಕೆ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಯ್ಯೋ, ಅವಿಧೇಯತೆ ಮಲಿನವೂ ಆದ ದಬ್ಬಾಳಿಕೆ ನಡೆಸುವ ನಗರದ ಗತಿಯನ್ನು ಏನು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದಬ್ಬಾಳಿಕೆ ನಡೆಸುವ, ದಂಗೆಯೇಳುವ ದುಷ್ಟ ನಗರಕ್ಕೆ ಧಿಕ್ಕಾರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಯ್ಯೋ, ಅವಿಧೇಯವೂ ಮಲಿನವೂ ಆದ ಹಿಂಸಕ ನಗರಿಯ ಗತಿಯನ್ನು ಏನು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಜೆರುಸಲೇಮೇ, ನಿನ್ನ ಜನರು ದೇವರಿಗೆ ವಿರುದ್ಧವಾಗಿ ನಡೆದರು. ಇತರರನ್ನು ಹಿಂಸಿಸಿದರು ಮತ್ತು ಪಾಪದಿಂದ ಮಲಿನರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:1
17 ತಿಳಿವುಗಳ ಹೋಲಿಕೆ  

ಏಕೆಂದರೆ, ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಚೀಯೋನ್ ಸುತ್ತಲಿರುವ ಮರಗಳನ್ನು ಕಡಿಯಿರಿ. ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ. ಇದೇ ನೀವು ದಂಡಿಸತಕ್ಕ ಪಟ್ಟಣವು. ಅವಳಲ್ಲಿ ಬರೀ ದಬ್ಬಾಳಿಕೆಯೇ ತುಂಬಿದೆ.


ದ್ರೋಹಮಾಡಿದ್ದೇವೆ, ಯೆಹೋವ ದೇವರಿಗೆ ಸುಳ್ಳಾಡಿದ್ದೇವೆ. ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ. ಬಲಾತ್ಕಾರದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತನಾಡಿದ್ದೇವೆ. ಸುಳ್ಳು ಮಾತುಗಳಿಂದ ಬಸುರಾಗಿ ಅವುಗಳನ್ನು ಹೃದಯದಿಂದ ನುಡಿದಿದ್ದೇವೆ.


ಆದಕಾರಣ ಇಸ್ರಾಯೇಲರ ಪರಿಶುದ್ಧನು ಹೇಳುವುದೇನೆಂದರೆ, “ನೀವು ಈ ಮಾತನ್ನು ತಿರಸ್ಕಾರ ಮಾಡಿ ಬಲಾತ್ಕಾರ, ಕುಯುಕ್ತಿಗಳನ್ನು ನಂಬಿ, ಅವುಗಳನ್ನೇ ಆಧಾರ ಮಾಡಿಕೊಂಡದ್ದರಿಂದ


“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ವಿಧವೆಗೂ, ದಿಕ್ಕಿಲ್ಲದವನಿಗೂ, ಅನ್ಯನಿಗೂ, ಬಡವನಿಗೂ ಹಿಂಸಾಚಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ,’ ” ಎಂಬುದು.


ನಿನ್ನಲ್ಲಿ ತಂದೆಯನ್ನೂ, ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ. ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ. ನಿನ್ನಲ್ಲಿ ದಿಕ್ಕಿಲ್ಲದವನನ್ನೂ, ವಿಧವೆಯನ್ನೂ ಪೀಡಿಸಿದ್ದಾರೆ.


ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತೆಗೆದುಕೊಳ್ಳುತ್ತಾರೆ. ಮನೆಗಳನ್ನೂ ಸಹ ತೆಗೆದುಕೊಳ್ಳುತ್ತಾರೆ. ಮನುಷ್ಯನಿಗೂ ಅವನ ಮನೆಗೂ ಇತರರಿಗೂ ಅವನ ಸ್ವಾಸ್ತ್ಯವನ್ನು ಕಸಿದುಕೊಳ್ಳುತ್ತಾರೆ.


“ಆದರೆ ನಿನ್ನ ಕಣ್ಣುಗಳು, ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ ಅಪರಾಧವಿಲ್ಲದವನ ರಕ್ತ ಚೆಲ್ಲುವುದರ ಮೇಲೆ ಮತ್ತು ಪೀಡೆಯನ್ನೂ, ಬಲಾತ್ಕಾರವನ್ನೂ ಮಾಡುವುದರ ಮೇಲೆಯೇ ಹೊರತು, ಮತ್ಯಾವುದರ ಮೇಲೆಯೂ ಇರುವುದಿಲ್ಲ.”


ಸೇನಾಧೀಶ್ವರ ಯೆಹೋವ ದೇವರ ದ್ರಾಕ್ಷಿತೋಟವು ಇಸ್ರಾಯೇಲಿನ ಮನೆತನವು. ಯೆಹೂದದ ಜನವೋ ದೇವರ ಇಷ್ಟದ ಗಿಡವು. ಅವರು ನ್ಯಾಯವನ್ನು ನಿರೀಕ್ಷಿಸಲು, ಹಿಂಸೆಯೂ, ನೀತಿಯನ್ನು ನಿರೀಕ್ಷಿಸಲು ಗೋಳಾಟವು ಸಿಕ್ಕಿತು.


ಇದಲ್ಲದೆ ಅವನು ಅದರ ರೆಕ್ಕೆ ಪುಕ್ಕಗಳೊಂದಿಗೆ ಕರುಳುಗಳನ್ನೂ ಕಿತ್ತು, ಬಲಿಪೀಠದ ಬಳಿ ಪೂರ್ವ ಭಾಗದಲ್ಲಿ ಬೂದಿಯಿರುವ ಸ್ಥಳದಲ್ಲಿ ಬಿಸಾಡಬೇಕು.


ಸಮಾರ್ಯ ಬೆಟ್ಟದಲ್ಲಿರುವ ಬಾಷಾನಿನ ಹಸುಗಳಂತಿರುವ ಮಹಿಳೆಯರೇ, ನೀವು ಬಡವರನ್ನು ಹಿಂಸಾಚಾರ ಮಾಡಿ, ದರಿದ್ರರನ್ನು ಜಜ್ಜಿ, ನಿಮ್ಮ ಪತಿಗಳಿಗೆ, “ಪಾನವನ್ನು ತರಿಸಿರಿ, ಕುಡಿಯೋಣ,” ಎಂದು ಹೇಳುವವರೇ, ಈ ವಾಕ್ಯವನ್ನು ಕೇಳಿರಿ.


ಅಷ್ಡೋದಿನ ಕೋಟೆಗಳಲ್ಲಿ ಮತ್ತು ಈಜಿಪ್ಟ್ ದೇಶದ ಕೋಟೆಗಳಲ್ಲಿ ಹೀಗೆ ಸಾರಿ ಹೇಳಿರಿ: “ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು, ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂ ಅದರೊಳಗಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ.”


ನೀನು ಇತರ ಜನಾಂಗಗಳ ಹಿಂದೆ ಹೋಗಿ ವ್ಯಭಿಚಾರ ಮಾಡಿದ್ದರಿಂದಲೂ ಅವರ ವಿಗ್ರಹಗಳಿಂದ ನಿನ್ನನ್ನು ಅಪವಿತ್ರ ಪಡಿಸಿಕೊಂಡಿದ್ದರಿಂದಲೂ ಇವುಗಳನ್ನು ನಿನಗೆ ಮಾಡುತ್ತೇನೆ.


ದೇಶದ ಜನರು ಬಲಾತ್ಕಾರದಿಂದ ಸೂರೆಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ, ದರಿದ್ರರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯ ಕೊಡದೆ ವಿದೇಶಿಯರನ್ನು ಬಲಾತ್ಕಾರ ಪಡಿಸಿದ್ದಾರೆ.


ಆದರೆ ಈ ಜನರಿಗೆ ತಿರುಗಿ ಬೀಳುವಂಥ, ಪ್ರತಿಭಟಿಸುವಂಥ ಹೃದಯ ಉಂಟು. ಅವರು ತಿರುಗಿಬಿದ್ದು ಹೋಗಿಬಿಟ್ಟಿದ್ದಾರೆ.


ಅವರ ನೂಲು ವಸ್ತ್ರಕ್ಕಾಗದು. ತಮ್ಮ ಕೆಲಸಗಳಿಂದ ತಮ್ಮನ್ನು ಹೊದ್ದುಕೊಳ್ಳರು. ಅವರ ಕೆಲಸಗಳು ಅಕ್ರಮದ ಕೆಲಸಗಳೇ. ಅವರ ಕೈಗಳಲ್ಲಿ ಹಿಂಸೆಯ ಕ್ರಿಯೆಗಳು ಇವೆ.


ಬುಗ್ಗೆಯು ನೀರನ್ನು ಹರಿಯ ಮಾಡುವಂತೆ, ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ. ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳ ಬರುತ್ತದೆ. ದುಃಖವೂ ಗಾಯಗಳೂ ಯಾವಾಗಲೂ ನನ್ನ ಮುಂದೆ ಇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು