Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:12 - ಕನ್ನಡ ಸಮಕಾಲಿಕ ಅನುವಾದ

12 ಆದರೆ ನಿನ್ನ ಮಧ್ಯದಲ್ಲಿ ಸೌಮ್ಯರನ್ನೂ ದೀನರನ್ನೂ ಉಳಿಸುವೆನು. ಇವರು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೀನದರಿದ್ರ ಜನರನ್ನು ನಿನ್ನಲ್ಲಿ ಉಳಿಸುವೆನು; ಅವರು ಯೆಹೋವನ ನಾಮವನ್ನು ಆಶ್ರಯಿಸಿಕೊಳ್ಳುವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ದೀನರೂ ನಮ್ರರೂ ಆದ ಜನರನ್ನು ನಿನ್ನಲ್ಲಿ ಉಳಿಸುವೆನು. ಅವರು ಪ್ರಭುವಿನ ನಾಮದಲ್ಲಿ ಭಯಭಕ್ತಿಯಿಂದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದೀನದರಿದ್ರಜನವನ್ನು ನಿನ್ನಲ್ಲಿ ಉಳಿಸುವೆನು; ಅವರು ಯೆಹೋವನ ನಾಮವನ್ನು ಆಶ್ರಯಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನನ್ನ ಪಟ್ಟಣದೊಳಗೆ ಬರೇ ದೀನದರಿದ್ರರೇ ವಾಸಮಾಡುವರು. ಅವರು ಯೆಹೋವನ ಹೆಸರಿನಲ್ಲಿ ಭರವಸೆ ಇಡುವವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:12
24 ತಿಳಿವುಗಳ ಹೋಲಿಕೆ  

ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡಬೇಕು? “ಯೆಹೋವ ದೇವರು ಚೀಯೋನನ್ನು ಸ್ಥಾಪಿಸಿದ್ದಾರೆ. ಬಾಧೆಪಟ್ಟ ಅವರ ಜನರು ಅದನ್ನು ಆಶ್ರಯಿಸಿಕೊಳ್ಳುವರು.”


ಯೆಹೋವ ದೇವರು ಒಳ್ಳೆಯವರು. ಇಕ್ಕಟ್ಟಿನ ದಿವಸದಲ್ಲಿ ಆಶ್ರಯದಾತರಾಗಿದ್ದಾರೆ. ತಮ್ಮಲ್ಲಿ ನಂಬಿಕೆ ಇಡುವವರನ್ನು ಅವರು ಪರಿಪಾಲಿಸುತ್ತಾರೆ.


“ಆತ್ಮದಲ್ಲಿ ಬಡವರಾಗಿರುವವರು ಧನ್ಯರು, ಪರಲೋಕ ರಾಜ್ಯವು ಅವರದು.


ನಿಮ್ಮೊಳಗೆ ಯೆಹೋವ ದೇವರಿಗೆ ಭಯಪಟ್ಟು, ಅವರ ಸೇವಕನ ಮಾತನ್ನು ಕೇಳಿ, ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಟ್ಟು, ತನ್ನ ದೇವರ ಮೇಲೆ ಆತುಕೊಳ್ಳಲಿ.


ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿ ಅವರಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಕ್ರಿಸ್ತ ಯೇಸುವಿನ ಮೂಲಕ ವಿಶ್ವಾಸವಿಟ್ಟಿದ್ದೀರಿ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರಲಿ.


ಪುನಃ ಪ್ರವಾದಿ ಯೆಶಾಯನು ಹೇಳುವುದೇನೆಂದರೆ: “ಇಷಯನ ವಂಶದಿಂದ ಬೇರು ಒಂದು ಚಿಗುರುವುದು, ಜನಾಂಗಗಳನ್ನು ಆಳುವವರಾಗಿ ಅವರು ಉದಯಿಸುವರು. ಯೆಹೂದ್ಯರಲ್ಲದವರು ಆತನಲ್ಲಿ ನಿರೀಕ್ಷೆ ಇಡುವರು.”


ಈತನ ಹೆಸರಿನಲ್ಲಿಯೇ ಯೆಹೂದ್ಯರಲ್ಲದವರು ನಿರೀಕ್ಷೆ ಇಡುವರು.”


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.


ಅದೇ ದಿವಸದಲ್ಲಿ ಅದು ರದ್ದುಗೊಂಡಿತು. ಆಗ ನನ್ನನ್ನು ನೋಡಿಕೊಳ್ಳುತ್ತಿದ್ದ ಬಡ ಕುರಿ ಮಂದೆಯು, ಅದು ಯೆಹೋವ ದೇವರ ವಾಕ್ಯವೆಂದು ತಿಳಿದುಕೊಂಡಿತು.


ಯೆಹೋವ ದೇವರು ಅವರಿಗೆ ಸಹಾಯಮಾಡಿ ಅವರನ್ನು ಬಿಡಿಸುವರು. ದುಷ್ಟರಿಂದ ಅವರನ್ನು ತಪ್ಪಿಸಿ ಬಿಡಿಸುವರು. ಏಕೆಂದರೆ ಅವರು ದೇವರಲ್ಲಿ ಆಶ್ರಯ ಪಡೆದಿದ್ದಾರೆ.


ಬಡವರಲ್ಲಿ ಬಡವರಾದವರು ಆಹಾರ ಕಂಡುಕೊಳ್ಳುವರು. ಕೊರತೆಯಲ್ಲಿರುವವರು ಸುರಕ್ಷಿತವಾಗಿ ನಿದ್ರಿಸುವರು. ಆದರೆ ನಿನ್ನ ಸಂತಾನದವರೋ ಕ್ಷಾಮದಿಂದ ಹತರಾಗುವರು. ನಿನ್ನಲ್ಲಿ ಉಳಿದವರನ್ನು ಅದು ಹತಮಾಡುವುದು.


ಆಗ ಹತ್ಯೆಗಾಗಿ ಗುರುತಿಸಲಾಗಿರುವ ಮಂದೆಯನ್ನು, ವಿಶೇಷವಾಗಿ ಬಡವಾದ ಮಂದೆಯನ್ನು ಮೇಯಿಸಿದೆನು. ನಾನು ಎರಡು ಕೋಲುಗಳನ್ನು ತೆಗೆದುಕೊಂಡೆನು. ಒಂದಕ್ಕೆ “ಕೃಪೆ” ಎಂದೂ ಮತ್ತೊಂದಕ್ಕೆ “ಐಕ್ಯ” ಎಂದು ಹೆಸರಿಟ್ಟೆನು. ಹೀಗೆ ಮಂದೆಯನ್ನು ಮೇಯಿಸಿದೆನು.


“ಈಗ ನಮ್ಮ ಯೆಹೋವ ದೇವರೇ, ಸ್ವಲ್ಪ ಹೊತ್ತು ನಮಗೆ ದಯೆತೋರಿ ನಮ್ಮ ದಾಸತ್ವದಿಂದ ನಮಗೆ ಬಿಡುಗಡೆ ಕೊಟ್ಟಿದ್ದೀರಿ. ನಮ್ಮ ಕಣ್ಣುಗಳನ್ನು ಬೆಳಗಿಸಿ, ತಮ್ಮ ಪರಿಶುದ್ಧ ಸ್ಥಾನದಲ್ಲಿ ನೆಲೆಗೊಳಿಸುವಂತೆ ಮಾಡಿದ್ದೀರಿ


ಆದರೆ ದೇಶದಲ್ಲಿ ಹತ್ತನೆಯ ಪಾಲು ಉಳಿದಿದ್ದರೂ, ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ. ಅದೇ ರೀತಿಯಾಗಿ ಪವಿತ್ರ ಜನರು ದೇಶದಲ್ಲಿ ಬುಡವಾಗಿ ಉಳಿದಿರುವರು.”


ದೀನರ ಸಂತೋಷವು ಯೆಹೋವ ದೇವರಲ್ಲಿ ಹೆಚ್ಚಾಗುವುವು. ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸುವರು.


“ಯಾವನು ಯೆಹೋವ ದೇವರಲ್ಲಿ ನಂಬಿಕೆ ಇಟ್ಟಿರುವನೋ, ಯಾವನಿಗೆ ಯೆಹೋವ ದೇವರು ಭರವಸೆಯಾಗಿದ್ದಾನೋ, ಆ ಮನುಷ್ಯನು ಧನ್ಯನು.


ಯೆಹೋವ ದೇವರು ಹೇಳುತ್ತಾರೆ, “ಆ ದಿವಸಗಳಲ್ಲಿಯೂ, ಆ ಕಾಲದಲ್ಲಿಯೂ ಇಸ್ರಾಯೇಲಿನ ಅಕ್ರಮವನ್ನು ಹುಡುಕಿದರೂ, ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವುದಿಲ್ಲ. ಏಕೆಂದರೆ ನಾನು ಉಳಿಸುವವರನ್ನು ಮನ್ನಿಸುತ್ತೇನೆ.


“ ‘ಆದರೆ ನಾನು ಕೆಲವರನ್ನು ಉಳಿಸುತ್ತೇನೆ; ಹೇಗೆಂದರೆ, ನೀವು ದೇಶಗಳ ಮತ್ತು ಜನಾಂಗಗಳ ನಡುವೆ ಚದರಿಹೋದಾಗ ನಿಮ್ಮಲ್ಲಿ ಕೆಲವರು ಖಡ್ಗದಿಂದ ತಪ್ಪಿಸಿಕೊಳ್ಳುವಿರಿ.


ಅವರು ಅಸ್ಸೀರಿಯ ದೇಶವನ್ನು ಖಡ್ಗದಿಂದಲೂ ನಿಮ್ರೋದನ ದೇಶವನ್ನು ಹಿಡಿದ ಖಡ್ಗದಿಂದಲೂ ಆಳುವರು. ಅಸ್ಸೀರಿಯವು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರದೇಶವನ್ನು ಮುತ್ತಿಗೆ ಹಾಕಿ ಪ್ರಾಂತಗಳಲ್ಲಿ ನಡೆಯುವಾಗ ಆತನು ನಮ್ಮನ್ನು ತಪ್ಪಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು