Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:15 - ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರು ನಿನ್ನ ಶಿಕ್ಷೆಗಳನ್ನು ದೂರಮಾಡಿ ನಿನ್ನ ಶತ್ರುವನ್ನು ತೆಗೆದುಹಾಕಿದ್ದಾರೆ. ಇಸ್ರಾಯೇಲಿನ ಅರಸನಾದ ಯೆಹೋವ ದೇವರು ನಿನ್ನ ಮಧ್ಯದಲ್ಲಿ ಇದ್ದಾರೆ. ಇನ್ನು ಮೇಲೆ ನಿನಗೆ ಯಾವ ಕೇಡಿನ ಭಯವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿನಗೆ ವಿಧಿಸಿದ ದಂಡನೆಯನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ತಪ್ಪಿಸಿಹನು ಸರ್ವೇಶ ನಿನಗೆ ವಿಧಿಸಿರುವ ದಂಡನೆಗಳನು ತಳ್ಳಿ ಹೊರಗಟ್ಟಿಹನು ನಿನ್ನ ಶತ್ರುಗಳನು ಇಸ್ರಯೇಲಿನ ರಾಜನಾದ ಸರ್ವೇಶ ಇಹನು ನಿನ್ನ ಮಧ್ಯೆ ನೀನಿರುವೆ ಇನ್ನೆಂದಿಗೂ ಕೇಡಿಗಂಜದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಿನಗೆ ವಿಧಿಸಿದ ದಂಡನೆಗಳನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯಾಕೆಂದರೆ ನಿನ್ನ ಯೆಹೋವನು ನಿನ್ನ ಶಿಕ್ಷೆಯನ್ನು ನಿಲ್ಲಿಸಿದ್ದಾನೆ. ನಿನ್ನ ವೈರಿಗಳ ಬಲವಾದ ಬುರುಜುಗಳನ್ನು ನಾಶಮಾಡಿದ್ದಾನೆ. ಇಸ್ರೇಲಿನ ರಾಜನೇ, ನಿನ್ನ ದೇವರು ನಿನ್ನೊಂದಿಗಿದ್ದಾನೆ. ನಿನಗೆ ಕೆಟ್ಟದ್ದು ಸಂಭವಿಸುತ್ತದೆಂದು ನೀನು ಚಿಂತಿಸದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:15
48 ತಿಳಿವುಗಳ ಹೋಲಿಕೆ  

ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ, ನಿನ್ನ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, “ನಾನು ನಿನ್ನ ಕೈಯೊಳಗಿಂದ ತತ್ತರಿಸುವಂಥ ಪಾತ್ರೆಯನ್ನೂ, ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ. ಇನ್ನು ಮೇಲೆ ನೀನು ಅದನ್ನು ತಿರುಗಿ ಕುಡಿಯುವುದೇ ಇಲ್ಲ.


ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವುದಿಲ್ಲ. ನಾನು ನನ್ನ ಆತ್ಮವನ್ನು ಇಸ್ರಾಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ನೀತಿಯುಳ್ಳ ಯೆಹೋವ ದೇವರು ಅವಳ ಮಧ್ಯದಲ್ಲಿ ಇದ್ದಾರೆ. ಅವರು ಅನ್ಯಾಯ ಮಾಡುವುದಿಲ್ಲ; ಪ್ರತಿ ಬೆಳಿಗ್ಗೆ ತಮ್ಮ ನ್ಯಾಯತೀರ್ಪನ್ನು ಬೆಳಕಿಗೆ ತರುತ್ತಾರೆ; ಅವರು ತಪ್ಪುವವರಲ್ಲ. ಆದರೆ ಅನ್ಯಾಯವಂತನು ನಾಚಿಕೆಯನ್ನು ಅರಿಯನು.


ನಾನು ಇಸ್ರಾಯೇಲರನ್ನು ಅವರ ದೇಶದಲ್ಲಿ ನೆಡುವೆನು. ನಾನು ಅವರಿಗೆ ಕೊಟ್ಟಿರುವ ದೇಶದಿಂದ ಇನ್ನು ಮುಂದೆ ಯಾರೂ ಅವರನ್ನು ಕಿತ್ತುಹಾಕರು,” ಎಂದು ನಿಮ್ಮ ದೇವರಾದ ಯೆಹೋವ ದೇವರು ಹೇಳುತ್ತಾರೆ.


ಅದಕ್ಕೆ ನತಾನಯೇಲನು, “ಗುರುವೇ, ನೀವು ದೇವಪುತ್ರ; ಇಸ್ರಾಯೇಲಿನ ಅರಸ ನೀವೇ,” ಎಂದನು.


ಅದರಲ್ಲಿ ಜನರು ವಾಸವಾಗಿರುವರು. ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು. ಆದರೆ ಯೆರೂಸಲೇಮು ಭದ್ರವಾಗಿರುವುದು.


ಆ ದಿವಸದಲ್ಲಿ, ಅವಳ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವಾಗ, ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಚಲಿಸಲಾಗದ ಕಲ್ಲಾಗಿ ಮಾಡುತ್ತೇನೆ. ಅದನ್ನು ತೆಗೆದುಹಾಕಲು ಪ್ರಯತ್ನಿಸುವವರೆಲ್ಲರು ತಮ್ಮನ್ನು ತಾವೇ ಗಾಯಗೊಳಿಸಿಕೊಳ್ಳುತ್ತಾರೆ.


ಬಲಾತ್ಕಾರವೂ, ನಿನ್ನ ದೇಶದೊಳಗೆ ಹಾಳಾದದ್ದೂ, ನಾಶವೂ, ನಿನ್ನ ಮೇರೆಗಳಲ್ಲಿ ಕೇಳಿಬರುವುದಿಲ್ಲ. ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ, ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿಡುವೆ.


ಏಕೆಂದರೆ ಯೆಹೋವ ದೇವರು ನಮ್ಮ ನ್ಯಾಯಾಧಿಪತಿಯಾಗಿದ್ದಾರೆ. ಯೆಹೋವ ದೇವರು ನಮಗೆ ಆಜ್ಞೆಕೊಡುವವರು. ಯೆಹೋವ ದೇವರೇ, ನಮ್ಮ ರಾಜ. ಯೆಹೋವ ದೇವರೇ ನಮ್ಮನ್ನು ರಕ್ಷಿಸುವವರು.


ನಿಮ್ಮ ಕೋಪವನ್ನೆಲ್ಲಾ ತೆಗೆದುಬಿಟ್ಟಿದ್ದೀರಿ. ನಿಮ್ಮ ಬೇಸರದಿಂದ ತಿರುಗಿಕೊಂಡಿದ್ದೀರಿ.


ಆಗ ಪರಲೋಕದಲ್ಲಿ ಮಹಾಧ್ವನಿಯನ್ನು ಕೇಳಿದೆನು. ಅದು, “ರಕ್ಷಣೆಯೂ ಶಕ್ತಿಯೂ ರಾಜ್ಯವೂ ಈಗ ನಮ್ಮ ದೇವರದಾದವು. ದೇವರ ಕ್ರಿಸ್ತ ಆಗಿರುವವರ ಅಧಿಕಾರವು ಈಗ ಸ್ಥಾಪಿತವಾಯಿತು. ಹಗಲಿರುಳು ನಮ್ಮ ಸಹೋದರರ ಮೇಲೆ, ನಮ್ಮ ದೇವರ ಮುಂದೆ ದೂರು ಹೇಳುವ ದೂರುಗಾರನನ್ನು ತಳ್ಳಲಾಗಿದೆ.


ಆದ್ದರಿಂದ, “ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು, ದೇವರ ಆಲಯದಲ್ಲಿ ಹಗಲಿರುಳೂ ದೇವರನ್ನು ಸೇವೆಮಾಡುವರು. ಸಿಂಹಾಸನದ ಮೇಲೆ ಕೂತಿದ್ದವರು ಅವರನ್ನು ಆವರಿಸಿ ಸಂರಕ್ಷಿಸಿದರು.


ಪಿಲಾತನು ಒಂದು ಫಲಕದ ಮೇಲೆ ಶಿರೋನಾಮವನ್ನು ಬರೆಸಿ, ಅದನ್ನು ಶಿಲುಬೆಯ ಮೇಲಿಟ್ಟಿದ್ದನು. ಅದೇನಂದರೆ: ಯೆಹೂದ್ಯರ ಅರಸನಾದ ನಜರೇತಿನ ಯೇಸು.


“ಚೀಯೋನ್ ಪುತ್ರಿಯೇ, ಭಯಪಡಬೇಡ, ಇಗೋ, ನಿನ್ನ ಅರಸ ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾರೆ,” ಎಂಬ ಮಾತು ನೆರವೇರಿತು.


ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ.


ನಿನ್ನ ದೇವರಾದ ಯೆಹೋವ ದೇವರು ನಿನ್ನೊಂದಿಗಿದ್ದಾರೆ. ನಿನ್ನನ್ನು ರಕ್ಷಿಸಲು ಶಕ್ತರಾಗಿದ್ದಾರೆ. ನಿನ್ನಲ್ಲಿ ಬಹಳವಾಗಿ ಹರ್ಷಾನಂದಗೊಳ್ಳುವರು. ತಮ್ಮ ಪ್ರೀತಿಯ ನಿಮಿತ್ತ ಅವರು ಇನ್ನು ಮುಂದೆ ನಿನ್ನನ್ನು ಖಂಡಿಸುವುದಿಲ್ಲ, ಆದರೆ ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವರು.”


ಲೆಬನೋನಿನ ಮೇಲೆ ಮಾಡಿದ ಬಲಾತ್ಕಾರವು ನಿನ್ನನ್ನು ಚಕಿತಗೊಳಿಸುವುದು. ಮೃಗಗಳ ನಾಶವು ನಿನ್ನನ್ನು ಹೆದರಿಸುವುದು. ಏಕೆಂದರೆ ನೀನು ಮನುಷ್ಯರ ರಕ್ತ ಸುರಿಸಿದ್ದೀ; ನೀನು ನಾಡುಗಳನ್ನು, ಪಟ್ಟಣಗಳನ್ನು, ಅವುಗಳಲ್ಲಿರುವ ಎಲ್ಲವುಗಳನ್ನು ನಾಶಮಾಡಿದ್ದೀ.


ಆಗ ನನ್ನ ಶತ್ರು ಇದನ್ನು ನೋಡುವನು. ಅವನ ಮುಖವನ್ನು ಅವಮಾನದಿಂದ ಮುಚ್ಚಿಕೊಳ್ಳುವನು, “ನಿನ್ನ ಯೆಹೋವ ದೇವರು ಎಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.


ಆಗ ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ವಾಸಿಸುವ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ ಎಂದು ನೀವು ತಿಳಿದುಕೊಳ್ಳುವಿರಿ. ಯೆರೂಸಲೇಮು ಪರಿಶುದ್ಧವಾಗಿರುವುದು. ವಿದೇಶಿಯರು ಅದನ್ನೆಂದಿಗೂ ಆಕ್ರಮಿಸರು.


“ಸುತ್ತಲೂ ಹದಿನೆಂಟು ಸಾವಿರ ಅಳತೆಗಳು. “ಆ ದಿನದಿಂದ ಆ ಪಟ್ಟಣದ ಹೆಸರು, ‘ಯೆಹೋವ ದೇವರ ನೆಲೆ’ ” ಎಂಬುದೇ ಆಗಿರುವುದು.


ಯೆರೂಸಲೇಮಿನಲ್ಲಿ ಉಲ್ಲಾಸಿಸಿ, ನನ್ನ ಜನರಲ್ಲಿ ಸಂತೋಷ ಪಡುವೆನು. ಅದರಲ್ಲಿ ಅಳುವ ಧ್ವನಿಯೂ, ಪ್ರಲಾಪದ ಧ್ವನಿಯೂ ಇನ್ನು ಕೇಳಿಬರುವುದಿಲ್ಲ.


ನೀನು ನೀತಿಯಲ್ಲಿ ನೆಲೆಗೊಂಡಿರುವೆ. ಬಾಧೆಯಿಂದ ದೂರವಾಗಿರುವೆ. ನೀನು ಭೀತಿಯಿಂದ ಭಯಪಡುವುದಿಲ್ಲ, ಏಕೆಂದರೆ ಅದು ನಿನ್ನ ಸಮೀಪಕ್ಕೆ ಬಾರದು.


ಅವರು ಮರಣವನ್ನು ಜಯದಲ್ಲಿ ನುಂಗಿಬಿಡುವರು. ಸಾರ್ವಭೌಮ ಯೆಹೋವ ದೇವರು ಎಲ್ಲಾ ಮುಖಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವರು. ತಮ್ಮ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕುವರು. ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.


ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು, “ದೇವರು ನನ್ನ ನಿಂದೆಯನ್ನು ತೆಗೆದುಬಿಟ್ಟಿದ್ದಾರೆ,” ಎಂದಳು.


ಆತನ ತೊಡೆಯ ಮೇಲಣ ವಸ್ತ್ರದಲ್ಲಿ: ರಾಜಾಧಿರಾಜನೂ ಕರ್ತರ ಕರ್ತನೂ. ಎಂಬ ಹೆಸರು ಬರೆದಿದೆ.


ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ, ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು. ಏಕೆಂದರೆ ನೀನು ಮಾನವರ ರಕ್ತ ಸುರಿಸಿದ್ದಿ. ನಾಡುಗಳನ್ನು, ಪಟ್ಟಣಗಳನ್ನು, ಅವುಗಳಲ್ಲಿ ಇರುವುದೆಲ್ಲವನ್ನು ನಾಶಮಾಡಿದ್ದೀ.


ಯೆಹೋವ ದೇವರು ವಿಮೋಚಿಸಿದವರು ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.


ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು. ನಾನು ಕೇಳಿರುವಂತೆಯೇ ತೀರ್ಪು ಮಾಡುತ್ತೇನೆ. ನನ್ನ ತೀರ್ಪು ನ್ಯಾಯವಾದದ್ದು. ಏಕೆಂದರೆ ನಾನು ನನ್ನ ಚಿತ್ತವನ್ನಲ್ಲ, ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ನೆರವೇರಿಸಲು ಅಪೇಕ್ಷಿಸುತ್ತೇನೆ.


“ಪರಲೋಕವೇ ಸಂಭ್ರಮಿಸಿರಿ, ಪರಿಶುದ್ಧರೇ, ಅಪೊಸ್ತಲರೇ ಹಾಗೂ ಪ್ರವಾದಿಗಳೇ ಆಕೆಯ ನಿಮಿತ್ತ ಹರ್ಷಗೊಳ್ಳಿರಿ! ಏಕೆಂದರೆ ಆಕೆ ನಿಮಗೆ ತೀರ್ಪುಮಾಡಿದ್ದಕ್ಕೆ ಸರಿಯಾಗಿ ದೇವರು ಆಕೆಗೆ ತೀರ್ಪುಮಾಡಿದ್ದಾರೆ!”


ಯೆಹೋವ ದೇವರ ಭಯವು ಶುದ್ಧವಾಗಿದ್ದು, ಎಂದೆಂದಿಗೂ ಶಾಶ್ವತವಾಗಿದೆ. ಯೆಹೋವ ದೇವರ ತೀರ್ಪುಗಳು ಸತ್ಯವಾಗಿದ್ದು, ಅವೆಲ್ಲವೂ ನೀತಿಯುಳ್ಳದ್ದಾಗಿವೆ.


ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ. ಏಕೆಂದರೆ, ಇಸ್ರಾಯೇಲಿನ ಪರಿಶುದ್ಧರು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವರಾಗಿದ್ದಾರೆ.”


“ ‘ಯೆಹೋವ ದೇವರು ಅವುಗಳಲ್ಲಿದ್ದರೂ ಈ ಎರಡು ಜನಾಂಗಗಳೂ ಈ ಎರಡು ರಾಜ್ಯಗಳೂ ನನ್ನ ವಶವಾಗುವುವು. ಎಂದೂ ನೀನು ಹೇಳಿದ್ದರಿಂದ ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ.


ಇಸ್ರಾಯೇಲು ತನ್ನನ್ನು ಉಂಟುಮಾಡಿದ ದೇವರಲ್ಲಿ ಸಂತೋಷಿಸಲಿ; ಚೀಯೋನಿನ ಜನರು ತಮ್ಮ ಅರಸರಲ್ಲಿ ಉಲ್ಲಾಸಿಸಲಿ.


ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ, ಒಟ್ಟಾಗಿ ಹಾಡಿರಿ. ಏಕೆಂದರೆ ಯೆಹೋವ ದೇವರು ತನ್ನ ಪ್ರಜೆಗಳನ್ನು ಸಂತೈಸಿದ್ದಾರೆ. ಆತನು ಯೆರೂಸಲೇಮನ್ನು ವಿಮೋಚಿಸಿದ್ದಾರೆ.


ದೂರದೇಶದಿಂದ ನನ್ನ ಜನರು ಕೂಗುವ ಮೊರೆಯಿದು: “ಯೆಹೋವ ದೇವರು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ?” ಎಂಬುದೇ ಆದರೂ ಅವರು ತಮ್ಮ ವಿಗ್ರಹಗಳಿಂದಲೂ, ವಿಚಿತ್ರವಾದ ವ್ಯರ್ಥತ್ವಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಏಕೆ?


ಅಲ್ಲದೆ ಇನ್ನು ಮೇಲೆ ನೀನು ಇತರ ಜನಾಂಗಗಳ ನಿಂದೆಯನ್ನು ಕೇಳಿಸಿಕೊಳ್ಳದಂತೆ ನಾನು ಮಾಡುವೆನು; ನೀನು ಇನ್ನು ಮೇಲೆ ಜನಾಂಗಗಳಿಂದ ಅವಮಾನ ಅನುಭವಿಸುವುದಿಲ್ಲ. ನೀನು ನಿನ್ನ ಜನಾಂಗವನ್ನು ಇನ್ನೆಂದಿಗೂ ಬೀಳಿಸುವುದಿಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು