Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:18 - ಕನ್ನಡ ಸಮಕಾಲಿಕ ಅನುವಾದ

18 “ನೇಮಕವಾದ ಹಬ್ಬಗಳ ನಷ್ಟಕ್ಕಾಗಿರುವ ನಿಮ್ಮ ದುಃಖವನ್ನು ನಿಮ್ಮಿಂದ ನಾನು ತೆಗೆದುಬಿಡುವೆನು. ಅವು ನಿನಗೆ ಭಾರವಾಗಿಯೂ ನಿಂದೆಯಾಗಿಯೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವಮಾನವು ನಮ್ಮ ಪಟ್ಟಣದ ಮೇಲೆ ಹೊರೆಯಾಗಿ ಕಾಡುತ್ತಿದೆ ಎಂದು ತಿಳಿದು ಹಬ್ಬ ಉತ್ಸವಗಳಿಗೆ ದೂರವಾಗಿ ಶೋಕಿಸುತ್ತಿರುವ ನಿನ್ನವರನ್ನು ಒಟ್ಟಿಗೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ತಡೆದುಬಿಡುವನು ಸರ್ವವಿನಾಶವನು ದೂರಮಾಡುವನು ನಿನ್ನಿಂದ ನಿಂದೆ ಅಪಮಾನವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅಯ್ಯೋ, ಅವಮಾನವು ನಮ್ಮ ಪಟ್ಟಣದ ಮೇಲೆ ಹೊರೆಯಾಗಿ ಕೂತಿದೆ ಎಂದು ಮಹೋತ್ಸವಕ್ಕೆ ದೂರವಾಗಿ ಶೋಕಿಸುತ್ತಿರುವ ನಿನ್ನವರನ್ನು ಒಟ್ಟಿಗೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಿನ್ನ ನಾಚಿಕೆಯನ್ನು ತೆಗೆದುಬಿಡುವನು. ನಿನ್ನನ್ನು ಹಿಂಸಿಸುವ ಜನರನ್ನು ನಿಲ್ಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:18
18 ತಿಳಿವುಗಳ ಹೋಲಿಕೆ  

“ ‘ನಾನು ನಿಮ್ಮನ್ನು ಇತರ ಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.


ಚೀಯೋನಿನ ಮಾರ್ಗಗಳು ದುಃಖಿಸುತ್ತವೆ. ಏಕೆಂದರೆ ಆಕೆಯ ನಿರ್ಧರಿತ ಹಬ್ಬಗಳಿಗೆ ಯಾರೂ ಬರಲಿಲ್ಲ. ಆಕೆಯ ಎಲ್ಲಾ ಬಾಗಿಲುಗಳು ಹಾಳು ಬಿದ್ದಿವೆ. ಆಕೆಯ ಯಾಜಕರು ನರಳುತ್ತಾರೆ. ಆಕೆಯ ಕನ್ಯೆಯರು ದುಃಖಿಸುತ್ತಾರೆ. ಆಕೆಯು ಕಹಿ ವೇದನೆಯಲ್ಲಿದ್ದಾಳೆ.


ಆ ಕಾಲದಲ್ಲಿ ನಾನು ನಿಮ್ಮನ್ನು ಒಟ್ಟುಗೂಡಿಸುವೆನು. ಆ ಸಮಯದಲ್ಲಿ ನಾನು ಮನೆಗೆ ನಿಮ್ಮನ್ನು ಕರೆದುಕೊಂಡು ಬರುವೆನು. ನಾನು ನಿಮ್ಮ ಸೌಭಾಗ್ಯವನ್ನು ನಿಮ್ಮ ಕಣ್ಣೆದುರಿಗೆ ಪುನಃಸ್ಥಾಪಿಸಿ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆಯನ್ನೂ ಉಂಟುಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಪರಿಶುದ್ಧ ದಿವಸದಲ್ಲಿಯೂ, ಯೆಹೋವ ದೇವರ ಹಬ್ಬಗಳ ದಿವಸದಲ್ಲಿಯೂ ನೀನು ಏನು ಮಾಡುತ್ತೀ?


ಆಗ ಯೆಹೂದದ ಜನರು ಮತ್ತು ಇಸ್ರಾಯೇಲ್ ಜನರು ಒಟ್ಟುಗೂಡಿಕೊಂಡು ತಮಗೆ ಒಬ್ಬ ನಾಯಕನನ್ನು ನೇಮಕ ಮಾಡಿಕೊಂಡು, ದೇಶದೊಳಗಿಂದ ಹೊರಗೆ ಬರುವರು. ಏಕೆಂದರೆ ಇಜ್ರೆಯೇಲಿನ ಆ ದಿನವು ಮಹಾದಿನವಾಗಿರುವುದು.


ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳನ್ನು ಸ್ವಂತ ದೇಶಕ್ಕೆ ತರುವೆನು. ಅವುಗಳನ್ನು ಇಸ್ರಾಯೇಲಿನ ಪರ್ವತಗಳ ಮೇಲೆ ಹಳ್ಳಗಳಲ್ಲಿ ನಿವಾಸಿಗಳುಳ್ಳ ಎಲ್ಲಾ ದೇಶಗಳಲ್ಲಿಯೂ ಮೇಯಿಸುವೆನು.


ಯೆರೂಸಲೇಮು ಕಷ್ಟದ ಮತ್ತು ಸಂಕಟದ ದಿನಗಳಲ್ಲಿ ಪೂರ್ವದಿನಗಳಲ್ಲಿ ತನಗಿದ್ದ ಸಂಪತ್ತೆಲ್ಲವನ್ನು ಜ್ಞಾಪಕ ಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ, ಅವಳಿಗೆ ಯಾರೂ ಸಹಾಯ ಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ನಾಶನದ ವಿಷಯವಾಗಿ ಅಪಹಾಸ್ಯ ಮಾಡಿದರು.


“ಆದರೆ ನಾನು ನನ್ನ ಮಂದೆಯ ಶೇಷವನ್ನು, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ, ಅವರನ್ನು ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು. ಅವರು ಪೀಳಿಗೆಯಾಗಿ ಹೆಚ್ಚುವರು.


ನಿಮ್ಮ ಬೆಳಕನ್ನೂ ನಿಮ್ಮ ಸತ್ಯವನ್ನೂ ಕಳುಹಿಸಿರಿ; ಅವು ನನ್ನನ್ನು ನೀವು ವಾಸಿಸುವ ನಿಮ್ಮ ಪರಿಶುದ್ಧ ಪರ್ವತಕ್ಕೆ ನನ್ನನ್ನು ಬರಮಾಡಲಿ.


“ಯೆರೂಸಲೇಮಿನ ಪಟ್ಟಣದ ಮಧ್ಯೆ ಹಾದು ಹೋಗಿ, ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು,” ಎಂದರು.


ನಾವು ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು