Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:7 - ಕನ್ನಡ ಸಮಕಾಲಿಕ ಅನುವಾದ

7 ‘ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವೆ,’ ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ನಾಶವಾಗುವುದಿಲ್ಲ. ಆದರೆ ಅವರು ಬೇಗನೆ ಎದ್ದು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇದರಿಂದ ಯೆರೂಸಲೇಮೇ, ನೀನು ನನಗೆ ನಿಶ್ಚಯವಾಗಿ ಭಯಪಡುವಿ, ಶಿಕ್ಷಣಕ್ಕೆ ಒಳಪಡುವಿ, ನಿನ್ನ ನಿವಾಸವು ನಾಶವಾಗದು, ನಾನು ನಿನಗೆ ವಿಧಿಸಿದ್ದೊಂದೂ ತಗಲದು” ಎಂದು ಅಂದುಕೊಂಡೆನು; ಅವರಾದರೋ ಆತುರಗೊಂಡು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇದರಿಂದಲಾದರೂ ಜೆರುಸಲೇಮ್ ನಗರ ನನಗೆ ಭಯಪಡುವುದು, ನಾನು ಕಲಿಸಿದ ಪಾಠವನ್ನು ಎಂದಿಗೂ ಮರೆಯದು’ ಎಂದುಕೊಂಡೆ. ಆದರೆ ಅದರ ನಿವಾಸಿಗಳು ತಮ್ಮ ನಡತೆಯನ್ನು ಕೆಡಿಸಿಕೊಳ್ಳಲು ಮತ್ತಷ್ಟು ಕಾತರರಾದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 [ಇದರಿಂದ, ಯೆರೂಸಲೇಮೇ,] ನೀನು ನನಗೆ ನಿಶ್ಚಯವಾಗಿ ಭಯಪಡುವಿ, ಶಿಕ್ಷಣೆಗೆ ಒಳಪಡುವಿ, ನಿನ್ನ ನಿವಾಸವು ನಾಶವಾಗದು, ನಾನು ನಿನಗೆ ವಿಧಿಸಿದ್ದೊಂದೂ [ತಗಲದು] ಎಂದು ಅಂದುಕೊಂಡೆನು; ಅವರಾದರೋ ಆತುರಗೊಂಡು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀವು ಇದರಿಂದ ಪಾಠ ಕಲಿಯಬೇಕೆಂದು ಇದನ್ನೆಲ್ಲಾ ಹೇಳುತ್ತಿದ್ದೇನೆ. ನೀವು ನನ್ನನ್ನು ಗೌರವಿಸಿ ನನಗೆ ಭಯಪಡಬೇಕೆಂದು ನಾನು ಈ ವಿಷಯಗಳನ್ನು ತಿಳಿಸುತ್ತಿದ್ದೇನೆ. ನೀವು ಹೀಗೆ ಮಾಡುವುದಾದರೆ ನಿನ್ನ ಮನೆಯು ನಾಶವಾಗದು. ನೀವು ನನ್ನ ನಿಯಮಗಳನ್ನು ಅನುಸರಿಸುವದಾದರೆ ನಾನು ಆಲೋಚಿಸಿರುವ ಪ್ರಕಾರ ನಿಮ್ಮನ್ನು ಶಿಕ್ಷಿಸುವದಿಲ್ಲ.” ಆದರೆ ಆ ದುಷ್ಟ ಜನರು ತಮ್ಮ ಮಾರ್ಗವನ್ನು ಬಿಡದೆ ದುಷ್ಟತನದಲ್ಲಿಯೇ ಮುಂದುವರಿಯುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:7
25 ತಿಳಿವುಗಳ ಹೋಲಿಕೆ  

ಗಿಬೆಯದ ದಿವಸಗಳಲ್ಲಿ ಆದ ಹಾಗೆ ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ. ಆದ್ದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕ ಮಾಡಿಕೊಳ್ಳುವನು. ಅವರ ಪಾಪಕ್ಕೆ ತನ್ನ ದಂಡನೆಯನ್ನು ವಿಧಿಸುವನು.


ಒಂದು ವೇಳೆ ಯೆಹೂದದ ಮನೆತನದವರು ನಾನು ಅವರಿಗೆ ಮಾಡುವುದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ, ಅವರ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು,” ಎಂದನು.


ಅವಳು ಯಾರಿಗೂ ವಿಧೇಯಳಾಗಲಿಲ್ಲ; ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ; ಯೆಹೋವ ದೇವರಲ್ಲಿ ಭರವಸೆ ಇಡಲಿಲ್ಲ; ತನ್ನ ದೇವರ ಸಮೀಪಕ್ಕೆ ಬರಲಿಲ್ಲ.


ಅವರು ಹೇಳಿದ್ದೇನೆಂದರೆ: “ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನೂ, ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಯೆಹೋವ ದೇವರು ನಿಮಗೂ, ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ.


ನಾನು ನಿಮ್ಮನ್ನು ಈ ಸ್ಥಳದಲ್ಲಿ ಎಂದರೆ, ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು.


ಕರ್ತದೇವರು ತಮ್ಮ ವಾಗ್ದಾನದ ವಿಷಯವಾಗಿ ತಡಮಾಡುತ್ತಾರೆಂಬದಾಗಿ ಕೆಲವರು ಎಣಿಸುವ ಪ್ರಕಾರ ಅವರು ತಡಮಾಡುವವರಲ್ಲ. ಆದರೆ ಯಾವನಾದರೂ ನಾಶವಾಗುವುದರಲ್ಲಿ ಅವರು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಡಬೇಕೆಂದು ಅಪೇಕ್ಷಿಸುವವರಾಗಿದ್ದು ನಮ್ಮ ಕಡೆಗೆ ದೀರ್ಘಶಾಂತರಾಗಿದ್ದಾರೆ.


ಆಗ ಯೆರೆಮೀಯನು ಚಿದ್ಕೀಯನಿಗೆ ಹೇಳಿದ್ದೇನೆಂದರೆ, “ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀನು ನಿಶ್ಚಯವಾಗಿ ಬಾಬಿಲೋನಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋದರೆ, ನಿನ್ನ ಪ್ರಾಣವು ಬದುಕುವುದು. ಈ ಪಟ್ಟಣವು ಬೆಂಕಿಯಿಂದ ಸುಡಲಾಗುವುದಿಲ್ಲ. ನೀನೂ, ನಿನ್ನ ಮನೆಯವರೂ ಬದುಕುವಿರಿ.


ನಾನು ಕಿವಿಗೊಟ್ಟು ಕೇಳಿದೆನು. ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ, “ನಾನು ಎಂಥಾ ಕೆಲಸ ಮಾಡಿದ್ದೇನೆ,” ಎಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ. ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ, ಪ್ರತಿಯೊಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.


ಆತನು ನಿಶ್ಚಯವಾಗಿ, “ಅವರು ನನ್ನ ಜನರೇ, ಸುಳ್ಳಾಡದ ಮಕ್ಕಳೇ!” ಎಂದು ಹೇಳಿದನು. ಆದ್ದರಿಂದ ಅವರಿಗೆ ರಕ್ಷಕನಾಗಿದ್ದನು.


ನನ್ನ ದ್ರಾಕ್ಷಿತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿ ಫಲವನ್ನು ಫಲಿಸುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿದ್ದು ಏಕೆ?


ಆದಕಾರಣ ಯೆಹೋವ ದೇವರು ಅಸ್ಸೀರಿಯದ ಅರಸನ ಸೈನ್ಯದ ಅಧಿಪತಿಗಳನ್ನೂ ಅವನ ಮೇಲೆ ಬರಮಾಡಿದರು. ಆ ಅಧಿಪತಿಗಳು ಮನಸ್ಸೆಯ ಮೂಗಿಗೆ ಕೊಂಡಿಗಳನ್ನು ಹಾಕಿ, ಅವನಿಗೆ ಕಂಚಿನ ಸಂಕೋಲೆಗಳಿಂದ ಬಂಧಿಸಿ, ಅವನನ್ನು ಬಾಬಿಲೋನಿಗೆ ಒಯ್ದರು.


ನಿಮ್ಮನ್ನು ನೀವೇ ಕೆಡಿಸಿಕೊಳ್ಳದ ಹಾಗೆ ನಿಮಗಾಗಿ ಕೆತ್ತಿದ ವಿಗ್ರಹವನ್ನು ಮಾಡಿಕೊಳ್ಳಬೇಡಿರಿ. ಎಂದರೆ, ಸ್ತ್ರೀಪುರುಷರ ರೂಪದಲ್ಲಾಗಲಿ,


ದೇವರು ಭೂಮಿಯನ್ನು ನೋಡಲಾಗಿ ಅದು ಕೆಟ್ಟುಹೋಗಿತ್ತು, ಮನುಷ್ಯರೆಲ್ಲರೂ ಭೂಮಿಯ ಮೇಲೆ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು.


ಈ ಆಜ್ಞೆಯ ಗುರಿಯು ಪ್ರೀತಿಯೇ ಆಗಿರುತ್ತದೆ. ಶುದ್ಧ ಹೃದಯ, ಒಳ್ಳೆಯ ಮನಸ್ಸಾಕ್ಷಿ ಹಾಗೂ ನಿಷ್ಕಪಟವಾದ ನಂಬಿಕೆಯಿಂದ ಈ ಪ್ರೀತಿಯು ಹುಟ್ಟುತ್ತದೆ.


ದೇವರು ಅವರ ಕಿವಿಯನ್ನು ತಿದ್ದುವಿಕೆಗಾಗಿ ತೆರೆದು, ಜನರು ದುಷ್ಟತನವನ್ನು ಬಿಟ್ಟು ತಿರುಗಿಕೊಳ್ಳುವಂತೆ ಅವರಿಗೆ ಆಜ್ಞಾಪಿಸುವರು.


ಯೆಹೋವ ದೇವರು ಹೇಳುವುದೇನೆಂದರೆ: ನಾನು ನಿನಗೆ ಬುದ್ಧಿ ಹೇಳಿ, ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಮೆಚ್ಚುಗೆಯಿಂದ ನಿನ್ನನ್ನು ನಡೆಸುವೆನು.


ಬುದ್ಧಿವಾದವನ್ನು ಕೇಳಿ, ಶಿಕ್ಷಣವನ್ನು ಅಂಗೀಕರಿಸು; ಕಡೆಯಲ್ಲಿ ನೀನು ಜ್ಞಾನಿಯಾಗುವೆ.


ಓ ಯೆರೂಸಲೇಮೇ, ನನ್ನ ಪ್ರಾಣವು ನಿನ್ನ ಕಡೆಯಿಂದ ಹೊರಟು ಹೋಗದ ಹಾಗೆ, ನಾನು ನಿಮ್ಮನ್ನು ಹಾಳಾಗಿಯೂ, ನಿವಾಸಿಗಳಿಲ್ಲದ ದೇಶವಾಗಿಯೂ ಮಾಡದ ಹಾಗೆ ಶಿಕ್ಷಣವನ್ನು ತೆಗೆದುಕೋ.”


ಆದರೆ ಅವರು ವಿಧೇಯರಾಗಲಿಲ್ಲ, ಕಿವಿಗೊಟ್ಟು ಕೇಳಲಿಲ್ಲ. ಆದರೆ ವಿಧೇಯರಾಗದ ಹಾಗೆಯೂ, ಉಪದೇಶ ಹೊಂದದ ಹಾಗೆಯೂ ಹಟಮಾರಿಯಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು