Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 1:19 - ಕನ್ನಡ ಸಮಕಾಲಿಕ ಅನುವಾದ

19 ಆಗ ನನ್ನ ಸಂಗಡ ಮಾತನಾಡಿದ ದೂತನಿಗೆ ನಾನು, “ಇದೇನು?” ಎಂದೆನು. ಅದಕ್ಕೆ ಅವನು ನನಗೆ ಉತ್ತರಕೊಟ್ಟು, “ಇವು ಯೆಹೂದ, ಇಸ್ರಾಯೇಲ್, ಯೆರೂಸಲೇಮನ್ನೂ ಚದರಿಸಿದ ಕೊಂಬುಗಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ವಿವರಿಸುವ ದೂತನನ್ನು ಕುರಿತು, “ಇವು ಏನು?” ಎಂದು ನಾನು ಕೇಳಿದ್ದಕ್ಕೆ ಅವನು, “ಇವು ಯೆಹೂದ, ಇಸ್ರಾಯೇಲ್, ಯೆರೂಸಲೇಮನ್ನು ಚದುರಿಸುವ ಕೊಂಬುಗಳು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಈ ಕೊಂಬುಗಳು ಏನನ್ನು ಸೂಚಿಸುತ್ತವೆ?” ಎಂದು ನಾನು ಕೇಳಿದಾಗ ಸೂತ್ರಧಾರಿಯಾದ ದೂತನು: ‘ಇವು ಜೂದ, ಇಸ್ರಯೇಲ್, ಮತ್ತು ಜೆರುಸಲೇಮಿನ ಪ್ರಜೆಗಳನ್ನು ಚದರಿಸಿಬಿಟ್ಟ ಕೊಂಬುಗಳು,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ವಿವರಿಸುವ ದೂತನನ್ನು ಕುರಿತು ಇವು ಏನು ಎಂದು ನಾನು ಕೇಳಿದ್ದಕ್ಕೆ ಅವನು - ಇವು ಯೆಹೂದ ಇಸ್ರಾಯೇಲು ಯೆರೂಸಲೇಮುಗಳನ್ನು ಚದರಿಸಿರುವ ಕೊಂಬುಗಳು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಈ ಕೊಂಬುಗಳೇನು?” ಎಂದು ನಾನು ದೇವದೂತನೊಂದಿಗೆ ವಿಚಾರಿಸಿದೆನು. ಅದಕ್ಕವನು, “ಇವು ಬಲಿಷ್ಠವಾದ ಕೊಂಬುಗಳು (ಬಲಿಷ್ಠವಾದ ಜನಾಂಗಗಳು); ಇಸ್ರೇಲ್, ಯೆಹೂದ ಮತ್ತು ಜೆರುಸಲೇಮಿನ ಜನರನ್ನು ಪರದೇಶಗಳಿಗೆ ಚದರಿಹೋಗುವಂತೆ ಮಾಡಿವೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 1:19
20 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ಪಿತೃಗಳು ನನಗೆ ಸಿಟ್ಟು ಎಬ್ಬಿಸಿದಾಗ ನಾನು ನಿಮ್ಮನ್ನು ಕರುಣಿಸದೆ, ವಿನಾಶವನ್ನು ಬರಮಾಡಲು ಯೋಚಿಸಿದೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆಗ ನಾನು, “ನೀನು ಎಲ್ಲಿಗೆ ಹೋಗುತ್ತೀ?” ಎಂದೆನು. ಅದಕ್ಕೆ ಆತನು ನನಗೆ, “ಯೆರೂಸಲೇಮನ್ನು ಅಳತೆಮಾಡಿ, ಅದರ ಅಗಲವೆಷ್ಟು? ಅದರ ಉದ್ದವೆಷ್ಟು? ಎಂದು ನೋಡುವುದಕ್ಕೆ ಹೋಗುತ್ತೇನೆ,” ಎಂದನು.


ನಾನು, “ಇವರು ಏನು ಮಾಡುವುದಕ್ಕೆ ಬರುತ್ತಾರೆ?” ಎಂದೆನು. ಅದಕ್ಕೆ ಅವರು, “ಯೆಹೂದ್ಯರಲ್ಲಿ ಯಾರೂ ತಲೆಯೆತ್ತದಂತೆ ಅವುಗಳನ್ನು ಚದರಿಸುವ ಕೊಂಬುಗಳು ಅವು. ಆದರೆ ಇವರು ಯೆಹೂದ ದೇಶವನ್ನು ಚದರಿಸಬೇಕೆಂದು ತಲೆಯೆತ್ತಿದ ರಾಷ್ಟ್ರಗಳನ್ನೇ ಚದರಿಸಿ, ಅದರ ಕೊಂಬುಗಳನ್ನು ಕೆಡವಿ ಹಾಕುವುದಕ್ಕೆ ಬಂದಿದ್ದಾರೆ,” ಎಂದು ಹೇಳಿದರು.


ಆಗ ನಾನು, “ನನ್ನ ಒಡೆಯನೇ, ಇವೇನು?” ಎಂದೆನು. ಆಗ ನನ್ನ ಸಂಗಡ ಮಾತನಾಡಿದ ದೇವದೂತನು, “ಇವೇನೆಂದು ನಿನಗೆ ತೋರಿಸುತ್ತೇನೆ,” ಎಂದನು.


ಆಗ ಸುತ್ತಲಿದ್ದ ಜನಾಂಗಗಳವರು ಯೆಹೂದದ ಜನರನ್ನು ನಿರಾಶರನ್ನಾಗಿ ಮಾಡಲು ಮತ್ತು ಕಟ್ಟುವುದನ್ನು ಮುಂದುವರಿಸುವ ವಿಷಯದಲ್ಲಿ ಭಯಪಡಿಸಲು ಮುಂದಿದ್ದರು.


ಸೆರೆಯಿಂದ ಬಂದವರು ಇಸ್ರಾಯೇಲ್ ದೇವರಾದ ಯೆಹೋವ ದೇವರಿಗಾಗಿ ಆಲಯವನ್ನು ಕಟ್ಟುತ್ತಾರೆಂಬುದಾಗಿ ಯೆಹೂದದ ಮತ್ತು ಬೆನ್ಯಾಮೀನನ ಶತ್ರುಗಳು ಕೇಳಿದಾಗ


ಅರ್ತಷಸ್ತನ ದಿವಸಗಳಲ್ಲಿ ಬಿಷ್ಲಾಮನೂ, ಮಿತ್ರದಾತನೂ, ಟಾಬೆಯೇಲನೂ, ಮಿಕ್ಕಾದ ಅವರ ಜೊತೆಗಾರರೂ ಪಾರಸಿಯ ಅರಸನಾದ ಅರ್ತಷಸ್ತನಿಗೆ ಒಂದು ಪತ್ರ ಬರೆದರು. ಬರೆದ ಆ ಪತ್ರವು ಅರಾಮ್ಯ ಭಾಷೆಯಲ್ಲಿಯೂ, ಅರಾಮ್ಯ ಲಿಪಿಯಲ್ಲಿಯೂ ಇತ್ತು.


ನಮ್ಮನ್ನು ಚದುರಿಸಲು ಅವನ ಯುದ್ಧವೀರರು ಮುತ್ತಿಗೆ ಹಾಕಿದಾಗ, ಅವನ ಸ್ವಂತ ಭರ್ಜಿಯಿಂದಲೇ ಅವನ ತಲೆಯನ್ನು ತಿವಿದಿ. ಅವರು ಅಡಗಿಕೊಂಡಿರುವ ಬಡವರನ್ನು ನುಂಗಲು ಬಂದವರೋ ಎಂಬಂತೆ ಬಂದಿದ್ದರಲ್ಲವೇ?


ಏನೂ ಇಲ್ಲದಿದ್ದರಲ್ಲಿ ಸಂತೋಷ ಪಡುವವರೇ, ನೀವು ಹೆಚ್ಚಳ ಪಡುವುದು ಶೂನ್ಯವಾಗಿರುವುದರಲ್ಲಿಯೇ? “ಸ್ವಬಲದಿಂದ ಕೊಂಬುಗಳನ್ನು ತೆಗೆದುಕೊಂಡಿಲ್ಲವೇ?” ಅಂದುಕೊಳ್ಳುತ್ತೀರಿ.


ನದಿಯ ನೀರಿನ ಮೇಲೆ ನಿಂತು ನಾರುಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತರಾಗಿರುವವರ ಮೇಲೆ ಆಣೆಯಿಟ್ಟು, “ಅದು ಒಂದುಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು; ಕೊನೆಗೆ ಪರಿಶುದ್ಧರ ಬಲವನ್ನು ಮುರಿದ ಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.


ಆ ವೇಳೆಯಲ್ಲಿ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಪ್ರದೇಶಗಳ ಅಧಿಪತಿಯಾಗಿದ್ದ ತತ್ತೆನೈಯೂ, ಶೆತರ್ ಬೋಜೆನೈಯೂ, ಅವರ ಜೊತೆಗಾರರೂ ಅವರ ಬಳಿಗೆ ಬಂದು, “ಈ ಆಲಯವನ್ನು ಪುನಃ ಕಟ್ಟಿ ತೀರಿಸುವುದಕ್ಕೆ ನಿಮಗೆ ಅಪ್ಪಣೆ ಕೊಟ್ಟವರು ಯಾರು?” ಎಂದು ಕೇಳಿದರು.


ಆಗ ಕೆನಾನನ ಮಗನಾದ ಚಿದ್ಕೀಯನು, “ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು, ‘ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


‘ಅಹಂಕಾರದಿಂದ ವರ್ತಿಸಬೇಡಿರಿ,’ ಎಂದು ಅಹಂಕಾರಿಗೆ ಹೇಳುತ್ತೇನೆ. ‘ನಿಮ್ಮ ಕೊಂಬು ಎತ್ತಬೇಡಿರಿ,’ ಎಂದು ದುಷ್ಟರಿಗೆ ಹೇಳುವೆನು.


ನಿಮ್ಮ ಕೊಂಬನ್ನು ಪರಲೋಕದ ಕಡೆಗೆ ಎತ್ತಬೇಡಿರಿ. ಹಟಮಾರಿತನದಿಂದ ಮಾತನಾಡಬೇಡಿರಿ,” ಎಂದು ನೀವು ಹೇಳಿದ್ದೀರಿ.


ಮೋವಾಬಿನ ಕೊಂಬು ಕಡಿದು ಹಾಕಲಾಗಿದೆ; ಅದರ ತೋಳು ಮುರಿಯಲಾಗಿದೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ನಾನು ಹತ್ತಿರ ನಿಂತವರಲ್ಲಿ ಒಬ್ಬನ ಬಳಿಗೆ ಬಂದು ಇವೆಲ್ಲವುಗಳ ಸತ್ಯಾರ್ಥವನ್ನು ಕೇಳಿದೆನು. “ಆಗ ಅವನು ಅದನ್ನು ನನಗೆ ಹೇಳಿ ಇವುಗಳ ಅರ್ಥವನ್ನು ನನಗೆ ತಿಳಿಸಿದನು.


ನಾನು ನನ್ನ ಕಣ್ಣುಗಳನ್ನು ಎತ್ತಿದಾಗ, ನಾಲ್ಕು ಕೊಂಬುಗಳನ್ನು ನೋಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು