Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 10:11 - ಕನ್ನಡ ಸಮಕಾಲಿಕ ಅನುವಾದ

11 ಅವರು ಕಷ್ಟವೆಂಬ ಕಡಲನ್ನು ದಾಟುವರು. ಸಮುದ್ರದಲ್ಲಿ ತೆರೆಗಳನ್ನು ಬಡಿಯುವರು. ನೈಲ್ ನದಿಯ ಅಗಾಧಗಳೆಲ್ಲಾ ಒಣಗುವುವು. ಅಸ್ಸೀರಿಯದ ಗರ್ವವು ತಗ್ಗಿಹೋಗುವುದು. ಈಜಿಪ್ಟಿನ ರಾಜದಂಡವು ಗತಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಕಷ್ಟವೆಂಬ ಕಡಲನ್ನು ದಾಟಿ ಬರುವರು, ಅಲ್ಲಕಲ್ಲೋಲವಾದ ಸಮುದ್ರವನ್ನು ಭೇದಿಸಿಬಿಡುವರು, ನೈಲ್ ನದಿಯೆಲ್ಲಾ ತಳದ ತನಕ ಒಣಗುವುದು. ಅಶ್ಶೂರದ ಗರ್ವವು ತಗ್ಗಿಸಲ್ಪಡುವುದು, ಐಗುಪ್ತದ ರಾಜದಂಡವು ತಪ್ಪಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದಾಟಿಬರುವರವರು ಕಷ್ಟವೆಂಬ ಕಡಲನು ಛೇದಿಸಿಬಿಡುವೆನು ಅಲ್ಲಕಲ್ಲೋಲ ಸಮುದ್ರವನು. ತಳದ ತನಕ ಒಣಗಿಹೋಗುವುದು ನೈಲ್ ನದಿಯು ಕುಗ್ಗಿಹೋಗುವುದು ಅಸ್ಸೀರಿಯಾದ ಗರ್ವವು ತಪ್ಪಿಹೋಗುವುದು ಈಜಿಪ್ಟಿನ ರಾಜದರ್ಪವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ಕಷ್ಟವೆಂಬ ಕಡಲನ್ನು ದಾಟಿ ಬರುವರು, ಅಲ್ಲಕಲ್ಲೋಲವಾದ ಸಮುದ್ರವನ್ನು ಭೇದಿಸಿಬಿಡುವರು, ನೈಲ್‍ನದಿಯೆಲ್ಲಾ ತಳದ ತನಕ ಒಣಗುವದು, ಅಶ್ಶೂರದ ಗರ್ವವು ತಗ್ಗಿಸಲ್ಪಡುವದು, ಐಗುಪ್ತದ ರಾಜದಂಡವು ತಪ್ಪಿಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇದು ಹಿಂದಿನ ಕಾಲದಲ್ಲಿ ದೇವರು ಅವರನ್ನು ಈಜಿಪ್ಟಿನಿಂದ ಬಿಡಿಸಿ ತಂದಂತೆ ಇರುವದು. ಆತನು ಸಮುದ್ರದ ತೆರೆಗಳನ್ನು ಬಡಿದು ಅದು ಇಬ್ಭಾಗವಾಗುವಂತೆ ಮಾಡಿದನು. ಜನರು ಸಂಕಟದ ಸಮುದ್ರದ ಮಧ್ಯದಲ್ಲಿ ದಾಟಿಹೋದರು. ಯೆಹೋವನು ಹೊಳೆಗಳನ್ನು ಬತ್ತಿಸಿಬಿಡುವನು. ಆತನು ಅಶ್ಯೂರ್ಯದ ಜಂಬವನ್ನೂ ಈಜಿಪ್ಟಿನ ಬಲವನ್ನೂ ಮುರಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 10:11
25 ತಿಳಿವುಗಳ ಹೋಲಿಕೆ  

“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನಾನು ಮೂರ್ತಿಗಳನ್ನು ನಾಶಮಾಡುವೆನು. ಮತ್ತು ನೋಫಿನ ವಿಗ್ರಹಗಳನ್ನು ಕೊನೆಗೊಳಿಸುವೆನು. ಈಜಿಪ್ಟ್ ದೇಶದ ರಾಜಕುಮಾರ ಇನ್ನು ಮುಂದೆ ಇರುವುದಿಲ್ಲ, ನಾನು ಈಜಿಪ್ಟ್ ದೇಶದಲ್ಲಿ ಭಯವನ್ನು ಉಂಟುಮಾಡುವೆನು.


ನೀನು ಜಲರಾಶಿಯನ್ನು ದಾಟಿಹೋಗುವಾಗ, ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ, ಅವು ನಿನ್ನನ್ನು ಮುಳುಗಿಸುವುದಿಲ್ಲ; ಬೆಂಕಿಯಲ್ಲಿ ನಡೆಯುವಾಗ, ನೀನು ಸುಟ್ಟುಹೋಗುವುದಿಲ್ಲ; ಜ್ವಾಲೆಯು ನಿನ್ನನ್ನು ದಹಿಸದು.


ಆರನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು.


ಅವರು ತನ್ನ ಕೈಯನ್ನು ಉತ್ತರದ ಮೇಲೆ ಚಾಚಿ, ಅಸ್ಸೀರಿಯರನ್ನು ನಾಶಮಾಡಿ ನಿನೆವೆಯನ್ನು ಹಾಳಾಗಿಯೂ ಮರುಭೂಮಿಯಂತೆ ಒಣಗಿದ್ದಾಗಿಯೂ ಮಾಡುವರು.


ಸಮುದ್ರವನ್ನೂ, ದೊಡ್ಡ ಅಗಾಧದ ನೀರನ್ನೂ ಬತ್ತಿಸಿ, ವಿಮುಕ್ತರಾದವರು, ಹಾದು ಹೋಗುವುದಕ್ಕೆ ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ?


ಅಸ್ಸೀರಿಯವನ್ನು ನನ್ನ ದೇಶದಲ್ಲಿ ಮುರಿದುಬಿಡುವೆನು. ನನ್ನ ಪರ್ವತಗಳ ಮೇಲೆ ಅವರನ್ನು ತುಳಿದುಬಿಡುವೆನು. ಅವನ ನೊಗವು ನನ್ನ ಜನರ ಮೇಲಿಂದ ತೊಲಗಿ, ಅವರ ಭಾರವು ಅವರ ಭುಜಗಳ ಮೇಲಿನಿಂದ ತೊಲಗುವುದು.”


ಸಮುದ್ರವೇ, ನಿನಗೆ ಏನಾಯಿತು? ಏಕೆ ಓಡಿ ಹೋಗುತ್ತೀ? ಯೊರ್ದನ್ ನದಿಯೇ, ಏಕೆ ಹಿಂದಿರುಗುತ್ತೀ?


ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್ ನದಿ ಹಿಂದಿರುಗಿತು.


ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಸಂತೋಷದಿಂದ ಏಳು ದಿವಸ ಆಚರಿಸಿದರು. ಏಕೆಂದರೆ ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವುದಕ್ಕೆ ಅಸ್ಸೀರಿಯ ದೇಶದ ಅರಸನ ಹೃದಯವನ್ನು, ಅವರ ಕಡೆಗೆ ಮನಪರಿವರ್ತಿಸಿದ್ದರಿಂದ ಯೆಹೋವ ದೇವರು ಅವರನ್ನು ಸಂತೋಷಪಡಿಸಿದರು.


ಎಲೀಯನಿಂದ ಬಿದ್ದ ಹೊದಿಕೆಯನ್ನು ತೆಗೆದುಕೊಂಡು ನೀರನ್ನು ಹೊಡೆದು, “ಎಲೀಯನ ದೇವರಾದ ಯೆಹೋವ ದೇವರು ಎಲ್ಲಿ?” ಎಂದನು. ಅವನು ಹಾಗೆ ನೀರನ್ನು ಹೊಡೆದ ತರುವಾಯ, ಅದು ಬಲಗಡೆಗೂ ಎಡಗಡೆಗೂ ವಿಭಾಗವಾದದ್ದರಿಂದ, ಎಲೀಷನು ದಾಟಿಹೋದನು.


ಆದರೆ ಎಲೀಯನು ತನ್ನ ಹೊದಿಕೆಯನ್ನು ತೆಗೆದು ಮಡಿಸಿಕೊಂಡು, ನೀರನ್ನು ಹೊಡೆದನು. ಆಗ ಆ ನೀರು ಈ ಕಡೆ, ಆ ಕಡೆ ವಿಭಾಗವಾದುದರಿಂದ ಅವರಿಬ್ಬರೂ ಒಣಭೂಮಿಯ ಮೇಲೆ ದಾಟಿಹೋದರು.


ಯೆಹೋವ ದೇವರ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು ಬಲವನ್ನು ಧರಿಸಿಕೋ. ಹಿಂದಿನ ಜನಾಂಗಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?


ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಕಾಡುಮೃಗಗಳನ್ನೂ ಪಶುಗಳನ್ನೂ ನೆನಪಿಗೆ ತಂದುಕೊಂಡು, ಭೂಲೋಕದ ಮೇಲೆ ಗಾಳಿಬೀಸುವಂತೆ ಮಾಡಲಾಗಿ, ನೀರು ತಗ್ಗಿತು.


ಆ ದಿನದಲ್ಲಿ ಈಜಿಪ್ಟಿನವರು ಹೆಂಗಸರ ಹಾಗೆ ಇರುವರು. ಸೇನಾಧೀಶ್ವರ ಯೆಹೋವ ದೇವರು ಅದರ ಮೇಲೆ ಎತ್ತಿದ ಕೈಯನ್ನು ಬೀಸುತ್ತಿರುವುದರಿಂದ ಅವರು ಹೆದರಿ ಭಯಪಡುವರು.


ಅಗಾಧಕ್ಕೆ, ‘ಒಣಗಿಸಿಬಿಡುವೆನು,’ ‘ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು,’ ಎಂದು ಅನ್ನುವವನೂ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು