Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 10:5 - ಕನ್ನಡ ಸಮಕಾಲಿಕ ಅನುವಾದ

5 ಅವರು ಯುದ್ಧದಲ್ಲಿ ಶತ್ರುವನ್ನು ಕೆಸರಿನ ಬೀದಿಗಳಲ್ಲಿ ತುಳಿಯುವ ಶೂರರ ಹಾಗಿರುವರು. ಯೆಹೋವ ದೇವರು ಅವರ ಸಂಗಡ ಇರುವುದರಿಂದ ಯುದ್ಧಮಾಡುವರು. ಕುದುರೆಗಳ ಮೇಲೆ ಸವಾರಿ ಮಾಡುವ ಶತ್ರುವನ್ನು ನಾಚಿಕೆ ಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇವರು ವೀರರಾಗಿ ರಣರಂಗದೊಳಗೆ ಶತ್ರುಗಳನ್ನು ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ನಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇವರೆಲ್ಲರು ರಣವೀರರಂತೆ ಶತ್ರುಗಳನ್ನು ಬೀದಿಕೆಸರಿನಲ್ಲಿ ತುಳಿದುಬಿಡುವರು. ಸರ್ವೇಶ್ವರ ತಮ್ಮ ಸಂಗಡ ಇದ್ದಾರೆಂದು ಧೈರ್ಯದಿಂದ ಯುದ್ಧಮಾಡುವರು, ಎದುರಿಸುವ ಕುದುರೆ ಸವಾರರನ್ನು ಭ್ರಾಂತಿಗೊಳಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇವರು ವೀರರಾಗಿ ರಣದೊಳಗೆ [ಶತ್ರುಗಳನ್ನು] ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ತಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇವರು ಶತ್ರುಗಳನ್ನು ಜಯಿಸುವರು. ಸೈನಿಕರು ರಸ್ತೆಯ ಧೂಳಿನ ಮೇಲೆ ಮುನ್ನಡೆದು ಯೆಹೋವನು ಅವರೊಂದಿಗಿರುವದರಿಂದ ಅವರು ಅಶ್ವಾರೂಢನಾಗಿರುವ ಶತ್ರುಸೈನ್ಯವನ್ನು ಸದೆಬಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 10:5
40 ತಿಳಿವುಗಳ ಹೋಲಿಕೆ  

ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು. ನಾನು ಇತರ ಜನಾಂಗಗಳ, ರಾಜ್ಯಗಳ ಬಲವನ್ನು ನಾಶಮಾಡುವೆನು. ರಥಗಳನ್ನೂ, ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು. ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಖಡ್ಗದಿಂದ ಬೀಳುವನು.


ಆ ದಿನದಲ್ಲಿ ಯೆಹೋವ ದೇವರು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವರು. ಆ ದಿವಸಗಳಲ್ಲಿ ಅವರಲ್ಲಿ ಅತ್ಯಂತ ಬಲಹೀನನು ದಾವೀದನಂತೆ ಬಲಾಢ್ಯನಾಗುವನು. ದಾವೀದನ ವಂಶವು ದೇವರ ಹಾಗೆಯೂ, ಮುಂದಾಳಾಗಿ ಯೆಹೋವ ದೇವರ ದೂತನ ಹಾಗೆಯೂ ಇರುವುದು.


ನಾನು ನನ್ನ ಬಿಲ್ಲನ್ನು ಬಗ್ಗಿಸುವಂತೆ ಯೆಹೂದವನ್ನು ಬಗ್ಗಿಸುತ್ತೇನೆ. ಎಫ್ರಾಯೀಮಿನಿಂದ ಅದನ್ನು ತುಂಬಿಸುತ್ತೇನೆ. ಚೀಯೋನೇ, ನಿನ್ನ ಪುತ್ರರನ್ನು ಗ್ರೀಕ್ ಪುತ್ರರ ವಿರೋಧವಾಗಿ ಎಬ್ಬಿಸಿ, ನಿನ್ನನ್ನು ಶೂರನ ಖಡ್ಗದಂತೆ ಮಾಡಿದ್ದೇನೆ.


ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳಲ್ಲಿಯೂ ಭರವಸೆಯಿಡುತ್ತಾರೆ; ನಾವಾದರೋ ನಮ್ಮ ಯೆಹೋವ ದೇವರ ಹೆಸರಿನಲ್ಲಿ ಭರವಸೆಯನ್ನಿಡುತ್ತೇವೆ.


ನಾನು ಒಳ್ಳೆಯ ಹೋರಾಟವನ್ನು ಮಾಡಿದ್ದೇನೆ. ನಾನು ಓಟವನ್ನು ಮುಗಿಸಿದ್ದೇನೆ. ನಾನು ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ.


ನಾವು ಹೋರಾಡುವಾಗ ಉಪಯೋಗಿಸುವ ಆಯುಧಗಳು ಲೋಕದವುಗಳಲ್ಲ. ಅವುಗಳಿಗೆ ಕೋಟೆಗಳನ್ನೇ ಕೆಡವಿ ಹಾಕುವ ದೈವಿಕ ಶಕ್ತಿ ಇದೆ.


ಮೋಶೆಯು ಈಜಿಪ್ಟಿನವರ ಸಕಲ ವಿದ್ಯೆಗಳಲ್ಲಿ ತರಬೇತಿ ಹೊಂದಿ, ಮಾತಿನಲ್ಲಿಯೂ ಕೃತ್ಯದಲ್ಲಿಯೂ ಸಮರ್ಥನಾದನು.


ಅದಕ್ಕೆ ಯೇಸು ಅವರಿಗೆ, “ಯಾವ ಘಟನೆ?” ಎಂದು ಕೇಳಲು, ಅವರು ಯೇಸುವಿಗೆ, “ನಜರೇತಿನ ಯೇಸುವಿನ ವಿಷಯಗಳೇ, ಅವರು ಕೃತ್ಯಗಳಲ್ಲಿಯೂ ಮಾತುಗಳಲ್ಲಿಯೂ ದೇವರ ದೃಷ್ಟಿಯಲ್ಲಿಯೂ ಜನರೆಲ್ಲರ ದೃಷ್ಟಿಯಲ್ಲಿಯೂ ಬಹುಶಕ್ತಿವಂತರಾಗಿದ್ದ ಪ್ರವಾದಿಯಾಗಿದ್ದರು.


ಆಗ ಶೋಧಕನು ಯೇಸುವಿನ ಬಳಿ ಬಂದು, “ನೀನು ದೇವರ ಪುತ್ರನಾಗಿದ್ದರೆ, ಈ ಕಲ್ಲುಗಳು ರೊಟ್ಟಿಗಳಾಗುವಂತೆ ಆಜ್ಞಾಪಿಸು,” ಎಂದನು.


ಆ ದಿವಸದಲ್ಲಿ, ಯೆಹೋವ ದೇವರಿಂದಾದ ದೊಡ್ಡ ಕೋಲಾಹಲದಿಂದ ಜನರು ಭಯಭೀತಿಗೆ ಒಳಗಾಗುವರು. ಆಗ ಒಬ್ಬೊಬ್ಬನು ತನ್ನ ತನ್ನ ನೆರೆಯವನ ಕೈಯನ್ನು ಹಿಡಿಯುವನು ಮತ್ತು ಒಬ್ಬರ ಮೇಲೊಬ್ಬರು ಕೈಯೆತ್ತುವರು.


ಆಗ ಯೆಹೋವ ದೇವರು ಹೊರಟು, ಯುದ್ಧದ ದಿವಸದಲ್ಲಿ ಹೋರಾಟ ಮಾಡಿದ ಪ್ರಕಾರವೇ, ಆ ಜನಾಂಗಗಳ ಸಂಗಡ ಅವರು ಹೋರಾಟ ಮಾಡುವರು.


ಆ ದಿನದಲ್ಲಿ, ನಾನು ಅವರ ಕುದುರೆಗಳಿಗೆಲ್ಲಾ ತಬ್ಬಿಬ್ಬನ್ನು ಉಂಟುಮಾಡುವೆನು, ಅದರ ರಾಹುತರನ್ನು ಭ್ರಮೆಗೊಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. ಯೆಹೂದ ವಂಶವನ್ನು ಕಟಾಕ್ಷಿಸಿ ಜನಾಂಗಗಳ ಕುದುರೆಗಳನ್ನೆಲ್ಲಾ ಕುರುಡು ಮಾಡುವೆನು.


ಆಗ ನನ್ನ ಶತ್ರು ಇದನ್ನು ನೋಡುವನು. ಅವನ ಮುಖವನ್ನು ಅವಮಾನದಿಂದ ಮುಚ್ಚಿಕೊಳ್ಳುವನು, “ನಿನ್ನ ಯೆಹೋವ ದೇವರು ಎಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.


ಬಿಲ್ಲು ಹಿಡಿಯುವವನು ಭೂಮಿಯ ಮೇಲೆ ನಿಲ್ಲನು. ಪಾದತ್ವರಿತನು ತಪ್ಪಿಸಿಕೊಳ್ಳನು. ಅಶ್ವಾರೂಢನು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.


ನೀನು ಉತ್ತರ ಭಾಗಗಳ ನಿನ್ನ ಸ್ಥಳದಿಂದ ಬರುವೆ. ನೀನೂ ನಿನ್ನ ಸಂಗಡ ಅನೇಕ ಜನರೂ ಕುದುರೆಗಳನ್ನು ಹತ್ತಿದವರಾಗಿ ಬಲವಾದ ಸೈನ್ಯವಾಗಿಯೂ ಮಹಾ ದಂಡಾಗಿಯೂ ಬರುವೆ.


ನಿನ್ನೊಡನೆ ಹೋರಾಡಿದವರನ್ನು ಹುಡುಕಿದವರೂ ಅವರು ನಿನಗೆ ಕಾಣಿಸರು. ನಿನ್ನ ಸಂಗಡ ಯುದ್ಧ ಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು.


ಈ ಪರ್ವತದಲ್ಲಿ ಯೆಹೋವ ದೇವರ ಕೈ ವಿಶ್ರಮಿಸಿಕೊಳ್ಳುವುದು. ಒಣಹುಲ್ಲನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ತುಳಿತಕ್ಕೆ ಈಡಾಗುವುದು.


ನಾನು ಅವನನ್ನು ಭಕ್ತಿಹೀನ ಜನರಿಗೆ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅಪ್ಪಣೆ ಕೊಡುವೆನು.


ಜನಾಂಗಗಳೇ, ನೀವು ಯುದ್ಧವನ್ನು ಘೋಷಿಸಿರಿ, ಆದರೂ ಚದರಿಹೋಗುವಿರಿ! ಎಲ್ಲಾ ದೂರ ದೇಶದವರೇ ಕಿವಿಗೊಡಿರಿ. ನಡುಕಟ್ಟಿಕೊಳ್ಳಿರಿ, ಆದರೂ ಚದರಿಹೋಗುವಿರಿ! ನಡುಕಟ್ಟಿಕೊಳ್ಳಿರಿ, ಆದರೂ ಚದರಿಹೋಗುವಿರಿ!


ಪರಾಕ್ರಮಶಾಲಿಯೇ, ನಿಮ್ಮ ಖಡ್ಗವನ್ನು ಸೊಂಟಕ್ಕೆ ಬಿಗಿದುಕೊಳ್ಳಿರಿ. ನಿಮ್ಮ ಮಹಿಮೆಯನ್ನೂ ಘನತೆಯನ್ನೂ ಧರಿಸಿಕೊಳ್ಳಿರಿ.


ಅಧಿಕ ಸೈನ್ಯದಿಂದ ಅರಸನು ಜಯಹೊಂದುವುದಿಲ್ಲ; ಪರಾಕ್ರಮಶಾಲಿಯು ಅಧಿಕ ಶಕ್ತಿಯಿಂದ ಬಿಡುಗಡೆಯಾಗುವುದಿಲ್ಲ.


ಅವರನ್ನು ಗಾಳಿಯಿಂದ ಬಡಿಸಿಕೊಂಡು ಹೋಗುವ ಧೂಳಿನಂತೆ ಪುಡಿಪುಡಿ ಮಾಡಿದೆನು; ಬೀದಿಯಲ್ಲಿನ ಕೆಸರು ಎಂಬಂತೆ ತುಳಿದು ಎಸೆದುಬಿಟ್ಟೆನು.


ನಾನು ಅವರನ್ನು ನೆಲದ ಧೂಳಿನಂತೆ ಪುಡಿಪುಡಿ ಮಾಡಿದೆನು; ಬೀದಿಯಲ್ಲಿನ ಕೆಸರು ಎಂಬಂತೆ ತುಳಿದು ಎಸೆದುಬಿಟ್ಟೆನು.


ಆಗ ದೇವರು ಬೇಸರಗೊಂಡಿದ್ದರಿಂದ ಭೂಮಿಯು ನಡುಗಿ ಕದಲಿದವು, ಆಕಾಶಗಳ ಅಸ್ತಿವಾರಗಳು ಸಹ ಕದಲಿದವು.


ಆಗ ಸೇವಕರಲ್ಲಿ ಒಬ್ಬನು ಅವನಿಗೆ ಉತ್ತರವಾಗಿ, “ವಾದ್ಯ ಬಾರಿಸಲು ನಿಪುಣನಾದಂಥ ಬೇತ್ಲೆಹೇಮಿನವನಾದ ಇಷಯನ ಮಗನನ್ನು ಕಂಡೆನು. ಅವನು ಧೈರ್ಯಶಾಲಿಯೂ, ಪರಾಕ್ರಮಶಾಲಿಯೂ, ರಣಶೂರನೂ, ವಾಕ್ಚತುರನೂ, ಸುಂದರನೂ ಆಗಿದ್ದಾನೆ. ಇದಲ್ಲದೆ ಯೆಹೋವ ದೇವರು ಅವನ ಸಂಗಡ ಇದ್ದಾರೆ,” ಎಂದನು.


ಯೆಹೋಶುವನು ಈ ಸಮಸ್ತ ಅರಸರನ್ನೂ, ಅವರ ರಾಜ್ಯವನ್ನೂ ಏಕಕಾಲದಲ್ಲಿ ವಶಪಡಿಸಿಕೊಂಡನು. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದರು.


ಯೆಹೋವ ದೇವರು ಒಬ್ಬ ಮನುಷ್ಯನ ಮಾತನ್ನು ಕೇಳಿದಂಥ ಆ ದಿನಕ್ಕೆ ಸಮಾನವಾದ ದಿನವು ಹಿಂದೆಯೂ ಇಲ್ಲ, ಮುಂದೆಯೂ ಇಲ್ಲ. ಏಕೆಂದರೆ ಯೆಹೋವ ದೇವರು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದರು.


ನೀವು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟಾಗ ಅವರ ಕುದುರೆಗಳನ್ನೂ ರಥಗಳನ್ನೂ ನಿಮಗಿಂತ ಹೆಚ್ಚಾಗಿರುವ ಜನರನ್ನೂ ನೋಡಿದರೆ ಭಯಪಡಬೇಡಿರಿ. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ.


ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವುದನ್ನು ಕಂಡೆನು. ಅವನು ಮಹಾಧ್ವನಿಯಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ, “ಬನ್ನಿರಿ, ದೇವರು ಏರ್ಪಡಿಸುವ ಮಹಾಭೋಜನಕ್ಕೆ ಕೂಡಿಬನ್ನಿರಿ.


ಆದರೆ ಕರ್ತ ಯೇಸು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ, ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರುವಂತೆ ಮಾಡಿದರು. ಯೆಹೂದ್ಯರಲ್ಲದವರೆಲ್ಲರೂ ಸಹ ಅದನ್ನು ಕೇಳುವಂತೆಯೂ ಮಾಡಿದರು. ಇದಲ್ಲದೆ ಕರ್ತ ಯೇಸು ನನ್ನನ್ನು ಸಿಂಹದ ಬಾಯೊಳಗಿಂದ ಸಂರಕ್ಷಿಸಿದರು.


ಅಲೆಕ್ಸಾಂದ್ರಿಯ ನಿವಾಸಿ ಅಪೊಲ್ಲೋಸ ಎಂಬ ಹೆಸರಿನ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದಿದ್ದನು. ಅವನು ವಾಕ್ಚಾತುರ್ಯವುಳ್ಳವನೂ ಪವಿತ್ರ ವೇದದಲ್ಲಿ ಪ್ರವೀಣನೂ ಆಗಿದ್ದನು.


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


ನಿಮ್ಮಿಂದ ನಮ್ಮ ವೈರಿಗಳನ್ನು ದಬ್ಬುವೆವು; ನಿಮ್ಮ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು.


“ಉತ್ತರ ದಿಕ್ಕಿನಿಂದ ಒಬ್ಬನನ್ನು ನಾನು ಎಬ್ಬಿಸಿದ್ದೇ. ಸೂರ್ಯೋದಯದ ಕಡೆಯಿಂದ ಅವನು ನನ್ನ ಹೆಸರನ್ನು ಸ್ಮರಿಸುವನು. ಅವನು ಜೇಡಿ ಮಣ್ಣಿನಂತೆಯೂ, ಕುಂಬಾರನು ಮಣ್ಣನ್ನು ತುಳಿಯುವಂತೆಯೂ ಅಧಿಕಾರಸ್ಥರ ಮೇಲೆ ಅವನು ಬರುವನು.


ಯಾಕೋಬನ ಜನಶೇಷವು ದೇಶದೇಶಗಳೊಳಗೆ ಅನೇಕ ಜನಾಂಗಗಳ ಮಧ್ಯದಲ್ಲಿ, ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವುದು. ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸಲಾರರು,


ಯೇಹುವು, “ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ,” ಎಂದನು. ಅವರು ಅವಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ, ಕುದುರೆಗಳ ಮೇಲೆಯೂ ಸಿಡಿಯಿತು. ಯೇಹುವು ರಥವನ್ನು ಅವಳ ಮೇಲೆ ಓಡಿಸಿದನು.


ಸಹಾಯಕ್ಕಾಗಿ ಈಜಿಪ್ಟನ್ನು ಸೇರಿ, ಅಶ್ವಬಲವನ್ನು, ಆಶ್ರಯಿಸುವವರಿಗೆ ಕಷ್ಟ! ಏಕೆಂದರೆ ರಥಗಳು ಬಹಳವೆಂದೂ, ಅವರ ನಂಬಿಕೆಯು ರಥಗಳ ಮೇಲೆ ಏಕೆಂದರೆ ಅವರು ಅನೇಕರು, ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವುದಿಲ್ಲ. ಇಲ್ಲವೆ ಯೆಹೋವ ದೇವರಿಂದ ಸಹಾಯವನ್ನು ಬಯಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು