Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 10:8 - ಕನ್ನಡ ಸಮಕಾಲಿಕ ಅನುವಾದ

8 ನಾನು ಅವರಿಗೆ ಸಿಳ್ಳುಹಾಕಿ, ಅವರನ್ನು ಕೂಡಿಸುವೆನು. ನಿಶ್ಚಯವಾಗಿ ಅವರನ್ನು ವಿಮೋಚಿಸಿದ್ದೇನೆ. ಅವರು ಹಿಂದಿನಂತೆ ಮುಂದೆಯೂ ಸಮೃದ್ಧಿಯಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಅವರನ್ನು ಸಿಳ್ಳುಹಾಕಿ ಕರೆದು ಕೂಡಿಸುವೆನು. ಅವರನ್ನು ವಿಮೋಚಿಸಿದೆನಲ್ಲಾ; ಅವರು ಹಿಂದೆ ವೃದ್ಧಿಯಾದಂತೆ ಮುಂದೆಯೂ ವೃದ್ಧಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಸಭೆ ಸೇರಿಸುವೆನವರನು ನಿಸ್ಸಂದೇಹವಾಗಿ ವಿಮುಕ್ತಗೊಳಿಸುವೆನವರನು ಕರೆದು ಸನ್ನೆಮಾಡಿ ಹಿಂದಿನಂತೆ ಮುಂದೆಯೂ ಬೆಳೆವರವರು ಸಮೃದ್ಧಿಯಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಅವರನ್ನು ಸಿಳ್ಳುಹಾಕಿ ಕರೆದು ಕೂಡಿಸುವೆನು; ಅವರನ್ನು ವಿಮೋಚಿಸಿದ್ದೇನಲ್ಲಾ; ಅವರು ಹಿಂದೆ ವೃದ್ಧಿಯಾದಂತೆ ಮುಂದೆಯೂ ವೃದ್ಧಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ನಾನು ಸಿಳ್ಳು ಹೊಡೆದು ಎಲ್ಲರನ್ನು ಒಟ್ಟುಗೂಡಿಸುವೆನು. ನಾನು ನಿಜವಾಗಿಯೂ ಅವರನ್ನು ರಕ್ಷಿಸುವೆನು. ಜನರು ಕಿಕ್ಕಿರಿದು ತುಂಬಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 10:8
25 ತಿಳಿವುಗಳ ಹೋಲಿಕೆ  

ಅವರು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಕಟ್ಟಕಡೆಯಿಂದ ಅವರಿಗೆ ಸೀಟಿ ಹಾಕುವರು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು,


ಆ ದಿನದಲ್ಲಿ ಈಜಿಪ್ಟಿನ ನದಿಗಳ ಕಟ್ಟಕಡೆಯಿಂದ ನೊಣಕ್ಕೂ, ಅಸ್ಸೀರಿಯ ದೇಶದ ಜೇನುಹುಳಕ್ಕೂ ಯೆಹೋವ ದೇವರು ಸಿಳ್ಳುಹಾಕುವರು.


ಆದರೆ ನನ್ನ ದಾಸ ದಾವೀದನ ಸಂತಾನವನ್ನೂ ನನ್ನ ಪರಿಚಾರಕರಾದ ಲೇವಿಯರನ್ನೂ ಅಸಂಖ್ಯಾತ ನಕ್ಷತ್ರಗಣದಷ್ಟು ಮತ್ತು ಎಣಿಸಲಾಗದ ಸಮುದ್ರತೀರದ ಮರಳಿನಷ್ಟು ಅಧಿಕಗೊಳಿಸುವೆನು.’ ”


“ಆದರೂ ಇಸ್ರಾಯೇಲ್ ಜನರು ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವರು. ದೇವರು ಯಾವ ಸ್ಥಳದಲ್ಲಿ ಅವರನ್ನು, ‘ನೀವು ನನ್ನ ಜನರಲ್ಲ’ ಎಂದಿದ್ದಾರೋ ಆ ಸ್ಥಳದಲ್ಲಿಯೇ, ‘ನೀವು ಜೀವಸ್ವರೂಪಿಯಾದ ದೇವರ ಮಕ್ಕಳು’ ಎನಿಸಿಕೊಳ್ಳುವ ದಿನ ಬರುವುದು.


ದೇವರಾತ್ಮ ಹಾಗು ವಧುವೂ “ಬಾ” ಎನ್ನುತ್ತಾರೆ, ಕೇಳುವವರು, “ಬಾ” ಎನ್ನಲಿ. ಬಾಯಾರಿದವರು ಬರಲಿ, ಇಷ್ಟವುಳ್ಳವರು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.


“ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.


ನೀನು ನನ್ನೊಡನೆ ಒಡಂಬಡಿಕೆಯನ್ನು ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ನಿನ್ನ ಸೆರೆಯವರನ್ನು ನೀರಿಲ್ಲದ ಬಾವಿಯೊಳಗಿಂದ ಬಿಡುಗಡೆಮಾಡುವೆನು.


ಆದಕಾರಣ ಯೆಹೋವ ದೇವರು ವಿಮೋಚಿಸಿದವರು, ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.


ನಾನು ನಿನ್ನ ದ್ರೋಹಗಳನ್ನು ಮೋಡದಂತೆ ಅಳಿಸಿಬಿಟ್ಟಿದ್ದೇನೆ. ನಿನ್ನ ಪಾಪಗಳನ್ನು ಮುಂಜಾನೆಯ ಮಂಜಿನಂತೆ ಹಾರಿಸಿದ್ದೇನೆ. ನನ್ನ ಕಡೆಗೆ ತಿರುಗಿಕೋ. ಏಕೆಂದರೆ ನಾನು ನಿನ್ನನ್ನು ವಿಮೋಚಿಸಿದ್ದೇನೆ.”


ಯೆಹೂದ ಮತ್ತು ಇಸ್ರಾಯೇಲಿನ ಜನರು ಸಮುದ್ರದ ಮರಳಿನ ಹಾಗೆ ಅಸಂಖ್ಯಾತರಾದರು. ಅವರು ಉಂಡು ಕುಡಿದು ಸುಖದಿಂದ ಇದ್ದರು.


ಆದರೆ ಇಸ್ರಾಯೇಲರ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಹರಡಿಕೊಂಡು ಬಲಗೊಂಡರು, ಅದರಿಂದ ಆ ದೇಶವು ಅವರಿಂದ ತುಂಬಿತು.


ಇದಾದನಂತರ ಯಾರೂ ಎಣಿಸಲಾಗದಂಥ ಮಹಾ ಜನಸಮೂಹವನ್ನು ಕಂಡೆನು. ಅವರು ಪ್ರತಿ ರಾಷ್ಟ್ರ, ಕುಲ, ಜನ ಮತ್ತು ಭಾಷೆಯವರಾಗಿದ್ದು, ಯಜ್ಞದ ಕುರಿಮರಿ ಆಗಿರುವವರ ಮುಂದೆಯೂ ಸಿಂಹಾಸನದ ಮುಂದೆಯೂ ನಿಂತಿದ್ದರು. ಅವರು ಬಿಳಿ ನಿಲುವಂಗಿಗಳನ್ನು ಧರಿಸಿದ್ದವರಾಗಿ, ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.


ಅವು ಬಂದು ಹಾಳಾದ ಕಣಿವೆಗಳಲ್ಲಿಯೂ ಬಂಡೆಗಳ ಬಿರುಕುಗಳಲ್ಲಿಯೂ ಎಲ್ಲಾ ಮುಳ್ಳಿನ ಮೇಲೆಯೂ ಎಲ್ಲಾ ಪೊದೆಗಳಲ್ಲಿಯೂ ಮುತ್ತಿಕೊಳ್ಳುವುವು.


ಬಾಬಿಲೋನಿನಿಂದ ಹೊರಡಿರಿ. ಕಸ್ದೀಯರ ಕಡೆಯಿಂದ ಓಡಿಹೋಗಿರಿ. ಹರ್ಷಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. “ಯೆಹೋವ ದೇವರು ತಮ್ಮ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾರೆ,” ಎಂದು ನೀವು ಹೇಳಿರಿ.


“ಯಾಕೋಬೇ, ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು. ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು. ಬೊಚ್ರದ ಕುರಿಗಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆಯಂತೆಯೂ ಅವರನ್ನು ಒಟ್ಟಾಗಿ ಕೂಡಿಸುವೆನು. ಹುಲ್ಲುಗಾವಲಿನ ಕುರಿಮಂದೆಯಂತೆ, ಸ್ಥಳವು ಜನರಿಂದ ತುಂಬಿ ತುಳುಕುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು