Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 11:17 - ಕನ್ನಡ ಸಮಕಾಲಿಕ ಅನುವಾದ

17 “ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಕಷ್ಟ! ಖಡ್ಗವು ಅವನ ತೋಳಿನ ಮೇಲೆಯೂ, ಅವನ ಬಲಗಣ್ಣಿನ ಮೇಲೆಯೂ ಇರುವುದು. ಅವನ ತೋಳು ಪೂರ್ತಿಯಾಗಿ ಒಣಗುವುದು. ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮಂದೆಯನ್ನು ಕಾಯದೆ ಬಿಟ್ಟು ಬಿಟ್ಟ ಕುರುಬನ ಗತಿಯನ್ನು ಏನು ಹೇಳಲಿ? ಖಡ್ಗವು ಅವನ ತೋಳಿಗೂ, ಬಲಗಣ್ಣಿಗೂ ತಾಗುವುದು; ಅವನ ತೋಳು ತೀರಾ ಒಣಗಿಹೋಗುವುದು. ಅವನ ಬಲಗಣ್ಣು ಪೂರಾ ಮೊಬ್ಬಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಮಂದೆಕಾಯದ ಕುರುಬನಿಗೆ ಧಿಕ್ಕಾರ! ತಾಕುವುದು ಅವನ ತೋಳಿಗೂ ಬಲಗಣ್ಣಿಗೂ ಖಡ್ಗ ತೀರಾ ಬತ್ತಿಹೋಗಲಿ ಅವನ ತೋಳು ಪೂರಾ ಮಬ್ಬಾಗಲಿ ಅವನ ಬಲಗಣ್ಣು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮಂದೆಯನ್ನು ಕಾಯದೆ ಬಿಟ್ಟುಬಿಟ್ಟ ತರವಲ್ಲದ ಕುರುಬನ ಗತಿಯನ್ನು ಏನುಹೇಳಲಿ! ಖಡ್ಗವು ಅವನ ತೋಳಿಗೂ ಬಲಗಣ್ಣಿಗೂ ತಾಕುವದು; ಅವನ ತೋಳು ತೀರಾ ಒಣಗಿಹೋಗುವದು, ಅವನ ಬಲಗಣ್ಣು ಪೂರಾ ಮೊಬ್ಬಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಕೆಲಸಕ್ಕೆ ಬಾರದ ಕುರುಬನೇ, ನೀನು ನನ್ನ ಕುರಿಗಳನ್ನು ತೊರೆದುಬಿಟ್ಟೆ. ಅವನನ್ನು ಶಿಕ್ಷಿಸಿರಿ! ಖಡ್ಗದಿಂದ ಅವನ ಬಲಗೈಯನ್ನು ಕತ್ತರಿಸಿಹಾಕಿರಿ, ಮತ್ತು ಬಲಗಣ್ಣನ್ನು ಕಿತ್ತುಹಾಕಿರಿ. ಆಗ ಅವನ ಬಲಗೈ ಅಪ್ರಯೋಜಕವಾಗುವದು, ಬಲಗಣ್ಣು ದೃಷ್ಟಿಹೀನವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 11:17
28 ತಿಳಿವುಗಳ ಹೋಲಿಕೆ  

“ನನ್ನ ಹುಲ್ಲುಗಾವಲಿನ ಕುರಿಗಳನ್ನು ಹಾಳು ಮಾಡಿ ಚದರಿಸುವ ಕುರುಬರಿಗೆ ಕಷ್ಟ!” ಎಂದು ಯೆಹೋವ ದೇವರು ಹೇಳುತ್ತಾರೆ.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುತ್ತಿರುವ ಮೂರ್ಖ ಪ್ರವಾದಿಗಳೇ ನಿಮಗೆ ಕಷ್ಟ!


ಹಾಗಾದರೆ, ವಿಗ್ರಹಗಳಿಗೆ ನೈವೇದ್ಯ ಮಾಡಿದ ಆಹಾರ ಪದಾರ್ಥಗಳನ್ನು ತಿನ್ನುವುದರ ವಿಷಯ: “ಲೋಕದಲ್ಲಿ ವಿಗ್ರಹವು ಏನೂ ಅಲ್ಲ. ಒಬ್ಬ ದೇವರೇ ಹೊರತು ಬೇರೆ ದೇವರಿಲ್ಲ,” ಎಂದು ನಮಗೆ ಗೊತ್ತಿದೆ.


“ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸಿ ಅವರಿಗೆ ಹೇಳು: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬರಿಗೆ ಕಷ್ಟ! ಕುರುಬರು ಮಂದೆಗಳನ್ನು ಮೇಯಿಸಬಾರದೋ?


“ಕುರುಡರಾದ ಮಾರ್ಗದರ್ಶಕರೇ! ನಿಮಗೆ ಕಷ್ಟ, ‘ಯಾವನಾದರೂ ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಎನ್ನುತ್ತೀರಿ. ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಅದನ್ನು ಕೊಟ್ಟುಬಿಡಬೇಕು,’ ಎನ್ನುತ್ತೀರಿ.


ಸುಳ್ಳಿನ ಕನಸುಗಳನ್ನು ಪ್ರವಾದಿಸಿ, ತಮ್ಮ ಸುಳ್ಳುಗಳಿಂದಲೂ ತಮ್ಮ ನಿರರ್ಥಕವಾದ ವಿಚಾರಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆ ಕೊಡಲಿಲ್ಲ. ಆದ್ದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವುದೇ ಇಲ್ಲ,” ಎಂದು ಯೆಹೋವ ದೇವರು ನುಡಿಯುತ್ತಾರೆ.


ಹಾಗಾದರೆ ಏನು? ಇಸ್ರಾಯೇಲ್ ಹುಡುಕಿದ್ದನ್ನು ಹೊಂದಲಿಲ್ಲ. ಆದರೆ ಅವರಲ್ಲಿ ಆಯ್ಕೆಯಾದವರು ಹೊಂದಿದರು, ಮಿಕ್ಕವರು ಕಠಿಣ ಹೃದಯಿಗಳಾದರು.


“ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ದೇವರು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣ ಮಾಡಿದರು.”


ಯೇಸು, “ಕುರುಡರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನಾನು ನ್ಯಾಯತೀರ್ಪು ಮಾಡುವುದಕ್ಕಾಗಿ ಈ ಲೋಕಕ್ಕೆ ಬಂದಿದ್ದೇನೆ,” ಎಂದರು.


“ಆದರೆ ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಮನುಷ್ಯರ ಮುಂದೆ ಪರಲೋಕ ರಾಜ್ಯವನ್ನು ಮುಚ್ಚುತ್ತೀರಿ. ನೀವೂ ಪ್ರವೇಶಿಸುವುದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಬಿಡುವುದಿಲ್ಲ.


ಯೆಹೋವ ದೇವರು ಹೀಗೆ ಹೇಳುತ್ತಾನೆ: “ಯೆಹೂದದ ಅರಸನ ಮನೆಗೆ ಇಳಿದು ಹೋಗಿ, ಅಲ್ಲಿ ಈ ವಾಕ್ಯವನ್ನು ಹೇಳು:


ದೇವರನ್ನು ರೂಪಿಸಿದವರೂ ಇಲ್ಲವೆ ಕೆತ್ತಿದ ವ್ಯರ್ಥವಾದ ವಿಗ್ರಹವನ್ನು ಎರಕ ಹೊಯ್ಯುವವರು ಎಂಥವರು?


ಯೆಹೋವ ದೇವರು ನಿಮ್ಮ ಮೇಲೆ ಗಾಢನಿದ್ರೆಯ ಆತ್ಮವನ್ನು ಹೊಯ್ದು, ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾರೆ. ಪ್ರವಾದಿಗಳನ್ನೂ, ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನು ಮುಚ್ಚಿದ್ದಾರೆ.


ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು, ಸುಳ್ಳು ಬೋಧಿಸುವ ಪ್ರವಾದಿಯು ಬಾಲವಾಗಿರುವನು.


ಅರಸನಾದ ಯಾರೊಬ್ಬಾಮನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿ ದೇವರ ಮನುಷ್ಯನು ಹೇಳಿದ ಮಾತನ್ನು ಕೇಳಿದಾಗ, ಅವನು ಪೀಠದ ಬಳಿಯಿಂದ ತನ್ನ ಕೈಚಾಚಿ, “ಅವನನ್ನು ಹಿಡಿಯಿರಿ,” ಎಂದನು. ಆಗ ಅವನಿಗೆ ವಿರೋಧವಾಗಿ ಚಾಚಿದ ಅವನ ಕೈ ಹಿಂದಕ್ಕೆ ಎಳೆದುಕೊಳ್ಳದ ಹಾಗೆ ಒಣಗಿ ಹೋಯಿತು.


ನಿನ್ನ ಮನೆಯಲ್ಲಿ ಯಾರೂ ಪೂರ್ಣಾಯುಷ್ಯವನ್ನು ಮುಟ್ಟದಹಾಗೆ, ನಿನ್ನ ತೋಳನ್ನೂ ನಿನ್ನ ತಂದೆಯ ಮನೆಯವರ ತೋಳನ್ನೂ ನಾನು ಛೇದಿಸುವ ದಿನಗಳು ಬರುವುವು.


ವಿಗ್ರಹಗಳು ವ್ಯರ್ಥವಾಗಿ ಮಾತನಾಡುವವು. ಶಕುನಗಾರರು ಸುಳ್ಳು ದರ್ಶನವನ್ನು ಕಾಣುವರು. ಮೋಸವಾದ ಕನಸುಗಳನ್ನು ತಿಳಿಸಿದ್ದಾರೆ. ವ್ಯರ್ಥವಾಗಿ ಆದರಿಸುತ್ತಾರೆ, ಆದ್ದರಿಂದ ಕುರಿಗಳಂತೆ ಚದರಿದ್ದಾರೆ, ಕುರುಬನಿಲ್ಲದೆ ಕಂಗೆಟ್ಟಿದ್ದಾರೆ.


ಯೆಹೋವ ದೇವರು ನನಗೆ, “ಇನ್ನು ಬುದ್ಧಿಹೀನವಾದ ಕುರುಬನ ಆಯುಧಗಳನ್ನು ತೆಗೆದುಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು