Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 11:4 - ಕನ್ನಡ ಸಮಕಾಲಿಕ ಅನುವಾದ

4 ನನ್ನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಹತ್ಯೆಗಾಗಿ ಗುರುತಿಸಲಾಗಿರುವ ಮಂದೆಯನ್ನು ಮೇಯಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ದೇವರಾದ ಯೆಹೋವನು ಹೀಗೆ ಅಪ್ಪಣೆಕೊಟ್ಟನು, “ಕೊಯ್ಗುರಿಗಳ ಮಂದೆಯನ್ನು ಕಾಯಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದೇವರಾದ ಸರ್ವೇಶ್ವರ ನನಗೆ ಇಂತೆಂದರು: “ಕೊಯ್ಗುರಿಗಳ ಮಂದೆಯನು ಕಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ದೇವರಾದ ಯೆಹೋವನು ಹೀಗೆ ಅಪ್ಪಣೆಕೊಟ್ಟನು - ಕೊಯ್ಗುರಿಗಳ ಮಂದೆಯನ್ನು ಕಾಯಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನ ದೇವರಾದ ಯೆಹೋವನು ಹೇಳುವುದೇನೆಂದರೆ, “ಕೊಲ್ಲುವದಕ್ಕೋಸ್ಕರವಾಗಿ ಬೆಳೆಸಿದ ಕುರಿಗಳನ್ನು ಪರಾಮರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 11:4
14 ತಿಳಿವುಗಳ ಹೋಲಿಕೆ  

ಆಗ ಹತ್ಯೆಗಾಗಿ ಗುರುತಿಸಲಾಗಿರುವ ಮಂದೆಯನ್ನು, ವಿಶೇಷವಾಗಿ ಬಡವಾದ ಮಂದೆಯನ್ನು ಮೇಯಿಸಿದೆನು. ನಾನು ಎರಡು ಕೋಲುಗಳನ್ನು ತೆಗೆದುಕೊಂಡೆನು. ಒಂದಕ್ಕೆ “ಕೃಪೆ” ಎಂದೂ ಮತ್ತೊಂದಕ್ಕೆ “ಐಕ್ಯ” ಎಂದು ಹೆಸರಿಟ್ಟೆನು. ಹೀಗೆ ಮಂದೆಯನ್ನು ಮೇಯಿಸಿದೆನು.


“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ದೇವರೂ ತಂದೆಯೂ ಆಗಿರುವವರಿಗೆ ಸ್ತೋತ್ರ, ದೇವರು ಕ್ರಿಸ್ತನಲ್ಲಿ ಪರಲೋಕದ ಎಲ್ಲಾ ಆತ್ಮಿಕ ಆಶೀರ್ವಾದಗಳಿಂದ ನಮ್ಮನ್ನು ಆಶೀರ್ವದಿಸಿದ್ದಾರೆ.


ನಾನು ನಿಮಗೆ ಹೇಳುವುದೇನೆಂದರೆ, ದೇವರು ನಂಬಿಗಸ್ತರು ಎಂದು ತೋರಿಸುವುದಕ್ಕಾಗಿ ಕ್ರಿಸ್ತ ಯೇಸು ಯೆಹೂದ್ಯರಿಗೆ ಸೇವಕರಾಗಿ ಬಂದರು. ಹೀಗೆ ದೇವರು ಪಿತೃಗಳಿಗೆ ಕೊಟ್ಟ ವಾಗ್ದಾನಗಳನ್ನು ದೃಢಪಡಿಸಿದರು.


ಯೇಸು ಆಕೆಗೆ, “ನನ್ನನ್ನು ಹಿಡಿಯಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಹೋಗಲಿಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವ ತಂದೆಯ ಬಳಿಗೆ ನಾನು ಹೋಗುತ್ತೇನೆ’ ಎಂದು ತಿಳಿಸು,” ಎಂದರು.


ಯೇಸು ಉತ್ತರವಾಗಿ, “ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ನನ್ನನ್ನು ಕಳುಹಿಸಲಾಗಿದೆ,” ಎಂದರು.


ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗುವಿರಿ. ಏಕೆಂದರೆ ಬೆಟ್ಟಗಳ ತಗ್ಗು ಆಚೆಲಿನವರೆಗೂ ಮುಟ್ಟುವುದು. ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ, ನೀವು ಭೂಕಂಪಕ್ಕೆ ಓಡಿ ಹೋದ ಹಾಗೆ, ಓಡಿಹೋಗುವಿರಿ. ನನ್ನ ದೇವರಾದ ಯೆಹೋವ ದೇವರು ಬರುವರು. ನಿಮ್ಮ ಸಂಗಡ ಪರಿಶುದ್ಧರೆಲ್ಲರು ಸಹ ಬರುವರು.


ಆತನು ಯೆಹೋವ ದೇವರ ಬಲದಲ್ಲಿಯೂ ತನ್ನ ದೇವರಾದ ಯೆಹೋವ ದೇವರ ಹೆಸರಿನ ಘನತೆಯಲ್ಲಿಯೂ ನಿಂತುಕೊಂಡು ತನ್ನ ಮಂದೆಯನ್ನು ಮೇಯಿಸುವನು. ಅವರು ನೆಲೆಯಾಗಿರುವರು, ಆತನ ಘನತೆಯು ಭೂಮಿಯ ಅಂತ್ಯಗಳ ಮಟ್ಟಿಗೂ ತಲುಪುವುದು.


ಹೌದು, ನಿಮಗೋಸ್ಕರ ನಾವು ದಿನವೆಲ್ಲಾ ಮರಣಕ್ಕೆ ಗುರಿಯಾಗಿದ್ದೇವೆ. ವಧಿಸಲಿಕ್ಕಾಗಿರುವ ಕುರಿಗಳಂತೆ ಜನರು ನಮ್ಮನ್ನು ಎಣಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು