Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 11:9 - ಕನ್ನಡ ಸಮಕಾಲಿಕ ಅನುವಾದ

9 ಆಗ ನಾನು, “ನಾನು ನಿಮ್ಮನ್ನು ಮೇಯಿಸುವುದಿಲ್ಲ, ಸಾಯುವಂಥದ್ದು ಸಾಯಲಿ, ಕೆಡುವಂಥದ್ದು ಕೆಡಲಿ, ಮಿಕ್ಕಾದವುಗಳು ಒಂದರ ಮಾಂಸವನ್ನು ಒಂದು ತಿನ್ನಲಿ,” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ, “ನಾನು ನಿಮ್ಮನ್ನು ಮೇಯಿಸೆನು; ಸಾಯುವುದು ಸಾಯಲಿ, ಹಾಳಾಗುವುದು ಹಾಳಾಗಲಿ, ಉಳಿದವುಗಳು ಒಂದರ ಮಾಂಸವೊಂದನ್ನು ತಿನ್ನಲಿ ಅಂದುಕೊಂಡೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ನಾನು: “ಇನ್ನು ಮೇಲೆ ನಾನು ನಿಮ್ಮನ್ನು ಮೇಯಿಸೆನು. ಸಾಯಬೇಕಾದವು ಸಾಯಲಿ, ಹಾಳಾಗಬೇಕಾದವು ಹಾಳಾಗಿಹೋಗಲಿ, ಉಳಿದವುಗಳು ಒಂದನ್ನೊಂದು ಕಚ್ಚಿ ಕಬಳಿಸಿಬಿಡಲಿ,” ಎಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ನಾನು - ನಿಮ್ಮನ್ನು ಮೇಯಿಸೆನು; ಸಾಯುವದು ಸಾಯಲಿ, ಹಾಳಾಗುವದು ಹಾಳಾಗಲಿ, ಉಳಿದವುಗಳು ಒಂದರ ಮಾಂಸವನ್ನೊಂದು ತಿನ್ನಲಿ ಅಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ನಾನು, “ಸರಿ, ನಾನು ನಿಮ್ಮನ್ನು ಇನ್ನು ನೋಡಿಕೊಳ್ಳುವದಿಲ್ಲ. ಹೋಗಿಬಿಡುತ್ತೇನೆ” ಅಂದೆನು. ಸಾಯಲು ಮನಸ್ಸುಳ್ಳವುಗಳನ್ನು ಸಾಯಲುಬಿಟ್ಟೆನು. ನಾಶವಾಗಲು ಮನಸ್ಸುಳ್ಳವುಗಳನ್ನು ನಾಶವಾಗಲು ಬಿಟ್ಟೆನು. ಅಳಿಯದೆ ಉಳಿದವುಗಳು ಪರಸ್ಪರ ನಾಶಮಾಡಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 11:9
22 ತಿಳಿವುಗಳ ಹೋಲಿಕೆ  

ಅವನು ಬಂದು ಈಜಿಪ್ಟ್ ದೇಶವನ್ನು ಹೊಡೆದು, ಮರಣಕ್ಕೆ ಇರುವವರನ್ನು ಮರಣಕ್ಕೂ, ಸೆರೆಗೆ ಇರುವವರನ್ನು ಸೆರೆಗೂ, ಖಡ್ಗಕ್ಕೆ ಇರುವವರನ್ನು ಖಡ್ಗಕ್ಕೂ ಒಪ್ಪಿಸುವನು.


ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ, ಮೈಲಿಗೆಯಾದವನು ತನ್ನನ್ನು ಇನ್ನೂ ಮೈಲಿಗೆ ಮಾಡಿಕೊಳ್ಳಲಿ. ನೀತಿವಂತನು ಇನ್ನೂ ನೀತಿಯನ್ನು ಮಾಡಲಿ. ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ!” ಎಂದನು.


ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮ ನಡುವೆ ಇರುತ್ತದೆ. ಕತ್ತಲು ನಿಮ್ಮನ್ನು ಕವಿಯುವುದಕ್ಕೆ ಮುಂಚೆ, ನಿಮಗೆ ಬೆಳಕಿರುವಾಗಲೇ ನಡೆಯಿರಿ. ಕತ್ತಲಿನಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯದು.


ಆದ್ದರಿಂದ, ‘ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ,’ ಎಂದು ನಾನು ನಿಮಗೆ ಹೇಳಿದೆನು. ಏಕೆಂದರೆ ನೀವು ನನ್ನನ್ನು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ,” ಎಂದು ಹೇಳಿದರು.


ಯೇಸು ತಿರುಗಿ ಅವರಿಗೆ, “ನಾನು ಹೊರಟುಹೋಗುತ್ತೇನೆ. ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪದಲ್ಲೇ ನೀವು ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ,” ಎಂದರು.


“ಆದ್ದರಿಂದ, ದೇವರ ರಾಜ್ಯವು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನರಿಗೆ ಕೊಡಲಾಗುವುದು ಎಂದು ನಾನು ನಿಮಗೆ ಹೇಳುತ್ತೇನೆ.


ಯೇಸು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು, ಅದರ ಹತ್ತಿರಕ್ಕೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ. ಆಗ ಯೇಸು, ಆ ಮರಕ್ಕೆ, “ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ,” ಎಂದರು. ತಕ್ಷಣವೇ ಅಂಜೂರದ ಮರವು ಒಣಗಿ ಹೋಯಿತು.


ಅವರನ್ನು ಬಿಡಿರಿ, ಅವರು ಕುರುಡರಿಗೆ ದಾರಿತೋರಿಸುವ ಕುರುಡರು. ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಹಳ್ಳಕ್ಕೆ ಬೀಳುವರು,” ಎಂದು ಹೇಳಿದರು.


ಆದ್ದರಿಂದ ನಿಮ್ಮ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು. ಮಕ್ಕಳು ಅವರ ತಂದೆಗಳನ್ನು ತಿನ್ನುವರು. ಹೀಗೆ ನಿಮ್ಮಲ್ಲಿ ನ್ಯಾಯತೀರ್ಪನ್ನು ನಡಿಸುವೆನು. ನಿಮ್ಮಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.


ಈ ಕಾರಣ ನಿಮ್ಮನ್ನು ಮತ್ತು ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ನಗರವನ್ನು ನನ್ನೆದುರಿನಿಂದ ಎತ್ತಿ ಎಸೆದುಬಿಡುವೆನು.


“ಪ್ರವಾದಿಯಾಗಲಿ, ಯಾಜಕನಾಗಲಿ, ಈ ಜನರಲ್ಲಿ ಯಾರೇ ಆಗಲಿ, ‘ಯೆಹೋವ ದೇವರು ದಯಪಾಲಿಸಿರುವ ಹೊರೆ ಏನು?’ ಎಂದು ನಿನ್ನನ್ನು ಕೇಳಿದರೆ, ನೀನು ಅವರಿಗೆ ಹೀಗೆಂದು ಹೇಳು: ‘ನೀವೇ, ಯೆಹೋವ ದೇವರ ಹೊರೆ. ನಿಮ್ಮನ್ನು ಆತನು ಎಸೆದುಬಿಡುವನು.’


ಅವರು ತಮ್ಮ ಪುತ್ರಪುತ್ರಿಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಮುತ್ತಿಗೆಯಲ್ಲಿಯೂ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.’


ನನ್ನ ಜನರು ಜ್ಞಾನಹೀನರಾಗಿ ಅಳಿದು ಹೋಗುತ್ತಿದ್ದಾರೆ. “ಏಕೆಂದರೆ ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ. ನಾನು ಸಹ ಯಾಜಕ ವರ್ಗದಿಂದ ನಿಮ್ಮನ್ನು ವರ್ಜಿಸಿ ಬಿಡುತ್ತೇನೆ. ಏಕೆಂದರೆ ನೀವು ದೇವರ ನಿಯಮವನ್ನು ಮರೆತುಬಿಟ್ಟಿದ್ದೀರಿ, ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


ಯೆಹೋವ ದೇವರು ಹೀಗೆ ಹೇಳುತ್ತಾರೆ, ಸಮಸ್ತ ದೇಶದಲ್ಲಿ ಮೂರರಲ್ಲಿ ಎರಡು ಪಾಲು ಹತರಾಗಿ ನಾಶವಾಗುವರು. ಆದರೆ ಮೂರನೆಯ ಪಾಲು, ಅದರಲ್ಲಿ ಉಳಿಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು