Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 12:2 - ಕನ್ನಡ ಸಮಕಾಲಿಕ ಅನುವಾದ

2 “ನಾನು ಯೆರೂಸಲೇಮನ್ನು ಸುತ್ತಲಿರುವ ಎಲ್ಲಾ ಜನರಿಗೆ ಅಮಲೇರಿಸಿ ಓಲಾಡಿಸುವ ಪಾತ್ರೆಯಾಗಿ ಮಾಡುತ್ತೇನೆ. ಯೆರೂಸಲೇಮಿಗೂ, ಯೆಹೂದಕ್ಕೂ ವಿರೋಧವಾಗಿ ಮುತ್ತಿಗೆ ಹಾಕುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಆಹಾ! ನಾನು ಯೆರೂಸಲೇಮನ್ನು ಸುತ್ತಣ ಸಕಲ ಜನಾಂಗಗಳಿಗೆ ಅಮಲೇರಿಸಿ ಓಲಾಡಿಸುವ ಬೋಗುಣಿಯನ್ನಾಗಿ ಮಾಡುವೆನು; ಯೆರೂಸಲೇಮಿಗೆ ಮುತ್ತಿಗೆಹಾಕುವಾಗ ಯೆಹೂದಕ್ಕೂ ಇಕ್ಕಟ್ಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನಾನು ಜೆರುಸಲೇಮನ್ನು ಮದ್ಯದ ಬುಡ್ಡಿಯನ್ನಾಗಿ ಮಾಡುವೆನು. ಅದರ ಸುತ್ತಮುತ್ತಲಿರುವ ರಾಷ್ಟ್ರಗಳು ಆ ಬುಡ್ಡಿಯಿಂದ ಕುಡಿದು ಮತ್ತರಾಗಿ, ಅತ್ತಿತ್ತ ಓಲಾಡುವರು. ಜೆರುಸಲೇಮಿಗೆ ಅವರು ಮುತ್ತಿಗೆ ಹಾಕುವಾಗ ಜುದೇಯವೆಲ್ಲವೂ ಇಕ್ಕಟ್ಟಿಗೆ ಒಳಗಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಹಾ! ನಾನು ಯೆರೂಸಲೇಮನ್ನು ಸುತ್ತಣ ಸಕಲ ಜನಾಂಗಗಳಿಗೆ ಅಮಲೇರಿಸಿ ಓಲಾಡಿಸುವ ಬೋಗುಣಿಯನ್ನಾಗಿ ಮಾಡುವೆನು; ಯೆರೂಸಲೇವಿುಗೆ ಮುತ್ತಿಗೆಹಾಕುವಾಗ ಯೆಹೂದಕ್ಕೆ ಇಕ್ಕಟ್ಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನಾನು ಜೆರುಸಲೇಮಿನ ಸುತ್ತಮುತ್ತಲಿರುವ ರಾಷ್ಟ್ರಗಳಿಗೆ ಆಕೆಯನ್ನು ಒಂದು ವಿಷದ ಲೋಟವನ್ನಾಗಿ ಮಾಡುತ್ತೇನೆ. ಆ ರಾಜ್ಯಗಳು ಆ ಪಟ್ಟಣದ ಮೇಲೆ ಬೀಳುವವು. ಆಗ ಇಡೀ ಯೆಹೂದವು ಉರುಲಿನೊಳಗೆ ಬೀಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 12:2
15 ತಿಳಿವುಗಳ ಹೋಲಿಕೆ  

ಯೆಹೂದವೂ ಸಹ ಯೆರೂಸಲೇಮಿನಲ್ಲಿ ಯುದ್ಧಮಾಡುವುದು. ಸುತ್ತಲಿರುವ ಎಲ್ಲಾ ಜನಾಂಗಗಳ ಸಂಪತ್ತು, ಚಿನ್ನ, ಬೆಳ್ಳಿ ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲಾಗುವುದು.


ಯೆಹೋವ ದೇವರ ಕೈಯಲ್ಲಿ ಒಂದು ಪಾತ್ರೆಯು ಇದೆ. ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿ ಇದೆ. ಅದನ್ನು ಅವರು ಹೊಯ್ಯುತ್ತಾರೆ. ಅದರ ಮಡ್ಡಿಯನ್ನು ಸಹ ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.


ಯೆಹೋವ ದೇವರ ಕೈಯಿಂದ ಆತನ ಕೋಪದ ಪಾತ್ರೆಯನ್ನು ಕುಡಿದ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು! ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.


ಆಕೆಯು ನಿಮಗೆ ಕೊಟ್ಟಿದ್ದಕ್ಕೆ ಸರಿಯಾಗಿ ಹಿಂದಕ್ಕೆ ಕೊಡಿರಿ. ಕೃತ್ಯಗಳಿಗೆ ಸರಿಯಾಗಿ ಎರಡರಷ್ಟು ಅವಳಿಗೆ ಕೊಡಿರಿ. ಆಕೆಯ ಬಟ್ಟಲಿನಿಂದಲೇ ಎರಡರಷ್ಟು ಆಕೆಗೆ ಕಲಸಿ ಕೊಡಿರಿ.


ಮಹಾ ಪಟ್ಟಣವು ಮೂರು ಭಾಗಗಳಾಗಿ ಹೋಯಿತು ಮತ್ತು ರಾಷ್ಟ್ರಗಳ ನಗರಗಳು ಬಿದ್ದವು. ಇದಲ್ಲದೆ ಮಹಾ ಬಾಬಿಲೋನಿಗೆ ರೋಷವೆಂಬ ದ್ರಾಕ್ಷಾರಸದ ಬಟ್ಟಲನ್ನು ಕೊಡುವಂತೆ ದೇವರಿಗೆ ಅದು ಜ್ಞಾಪಕಕ್ಕೆ ಬಂತು.


ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರೆಸದೆ ಹಾಕಿದ ಅವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಕುರಿಮರಿಯಾಗಿರುವವರ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ಮಹಿಮೆಯ ಬದಲಾಗಿ ನಾಚಿಕೆಯಿಂದ ನೀನು ತುಂಬಿರುವೆ. ಈಗ ನಿನ್ನ ಸರದಿ, ಕುಡಿದು ಬೆತ್ತಲೆಯಾಗು. ಯೆಹೋವ ದೇವರ ಬಲಗೈಯಲ್ಲಿನ ಪಾತ್ರೆ ನಿನ್ನ ಕಡೆಗೆ ತಿರುಗುವುದು. ನಿನ್ನ ಘನತೆಯನ್ನು ಅವಮಾನವು ಮುಚ್ಚುವುದು.


ಇದಲ್ಲದೆ ನಾನು ಅವಳ ಪ್ರಧಾನರನ್ನೂ, ಅವಳ ಜ್ಞಾನಿಗಳನ್ನೂ, ಅವಳ ಅಧಿಪತಿಗಳನ್ನೂ, ಅವಳ ಅಧಿಕಾರಿಗಳನ್ನೂ, ಅವಳ ಪರಾಕ್ರಮಶಾಲಿಗಳನ್ನೂ ಮತ್ತರಾಗಿ ಮಾಡುತ್ತೇನೆ. ಅವರು ನಿತ್ಯ ನಿದ್ರೆ ಮಾಡುವರು, ಎಚ್ಚರವಾಗುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಎಂಬ ಹೆಸರುಳ್ಳ ರಾಜಾಧಿರಾಜರು ಸಾರುತ್ತಾರೆ.


ಬಾಬಿಲೋನ್ ಯೆಹೋವ ದೇವರ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದ್ದರಿಂದ ಜನಾಂಗಗಳು ಹುಚ್ಚರಾದರು.


ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪಾತ್ರೆಯಲ್ಲಿ ಕುಡಿಯುವುದಕ್ಕೆ ಯಾರಿಗೆ ನ್ಯಾಯ ತೀರ್ವಿಕೆ ಆಗಲಿಲ್ಲವೋ, ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಶಿಕ್ಷಿಸದೆ ಹೋಗಬೇಕು? ನೀವು ಶಿಕ್ಷಿಸದೆ ಹೋಗುವುದಿಲ್ಲ, ನಿಶ್ಚಯವಾಗಿ ಕುಡಿಯುವೆ.


ಆಗ ನಾನು ಪಾತ್ರೆಯನ್ನು ಯೆಹೋವ ದೇವರ ಕೈಯಿಂದ ತೆಗೆದುಕೊಂಡು, ಯೆಹೋವ ದೇವರು ನನ್ನನ್ನು ಕಳುಹಿಸಿದ ಎಲ್ಲಾ ಜನಾಂಗಗಳಿಗೆ ಕುಡಿಸಿದೆನು.


ಇಸ್ರಾಯೇಲಿನ ದೇವರಾದ ಯೆಹೋವ ದೇವರು ನನಗೆ ಹೀಗೆಂದರು: “ಈ ರೌದ್ರದ ದ್ರಾಕ್ಷಾರಸದ ಪಾತ್ರೆಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತೆಗೆದುಕೋ.


ನಾವು ಏಕೆ ಸುಮ್ಮನೆ ಕೂತುಕೊಳ್ಳುತ್ತೇವೆ? ನೀವು ಕೂಡಿಕೊಳ್ಳಿರಿ, ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ನಾಶವಾಗೋಣ. ಏಕೆಂದರೆ, ನಾವು ನಮ್ಮ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ ಕಾರಣ, ನಮ್ಮ ದೇವರಾದ ಯೆಹೋವ ದೇವರು ನಮ್ಮನ್ನು ನಾಶಮಾಡಿ, ನಮಗೆ ವಿಷದ ನೀರನ್ನು ಕುಡಿಯಲು ಕೊಟ್ಟಿದ್ದಾರೆ.


ನಾನು ಜನಾಂಗಗಳನ್ನೆಲ್ಲಾ ಯೆರೂಸಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು. ಪಟ್ಟಣವನ್ನು ಆಕ್ರಮಿಸಿ, ಮನೆಗಳನ್ನು ಸೂರೆಮಾಡಲಾಗುವುದು. ಹೆಂಗಸರು ಅತ್ಯಾಚಾರಕ್ಕೆ ಒಳಗಾಗುವರು. ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು. ಆದರೆ ಉಳಿದ ಜನರೆಲ್ಲರು ಪಟ್ಟಣದಲ್ಲೇ ಉಳಿಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು