Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 12:5 - ಕನ್ನಡ ಸಮಕಾಲಿಕ ಅನುವಾದ

5 ಆ ಯೆಹೂದದ ದೊರೆಗಳು ತಮ್ಮ ಹೃದಯದಲ್ಲಿ ಯೆರೂಸಲೇಮಿನ ನಿವಾಸಿಗಳ ಶಕ್ತಿ ಸಾಮರ್ಥ್ಯ, ತಮ್ಮ ಸೇನಾಧೀಶ್ವರ ಯೆಹೋವ ದೇವರಲ್ಲಿಯೇ ಎಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಯೆಹೂದದ ಕುಲಪತಿಗಳು ತಮ್ಮ ಮನಸ್ಸಿನೊಳಗೆ, ‘ಯೆರೂಸಲೇಮಿನವರು ತಮ್ಮ ದೇವರಾದ ಸೇನಾಧೀಶ್ವರ ಯೆಹೋವನಲ್ಲಿ ಬಲಗೊಂಡು ನಮಗೆ ತ್ರಾಣವಾಗಿದ್ದಾರೆ’ ಅಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಜುದೇಯದ ನಾಯಕರೆಲ್ಲ ತಮ್ಮ ತಮ್ಮೊಳಗೇ: ‘ಜೆರುಸಲೇಮಿನ ನಿವಾಸಿಗಳ ಶಕ್ತಿಸಾಮರ್ಥ್ಯ ಸೇನಾಧೀಶ್ವರ ಸರ್ವೇಶ್ವರನಾದ ದೇವರೇ’ ಎಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಯೆಹೂದದ ಕುಲಪತಿಗಳು ಮನಸ್ಸಿನೊಳಗೆ - ಯೆರೂಸಲೇವಿುನವರು ತಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನಲ್ಲಿ ಬಲಗೊಂಡು ನಮಗೆ ತ್ರಾಣವಾಗಿದ್ದಾರೆ ಅಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೂದದ ಪ್ರಧಾನರು ತಮ್ಮ ಜನರನ್ನು ಹುರಿದುಂಬಿಸುವರು. ‘ಸೇವಾಧೀಶ್ವರನಾದ ಯೆಹೋವನು ನಿಮ್ಮ ದೇವರು. ಆತನೇ ನಮಗೆ ಬಲವನ್ನು ಕೊಡುವಾತನು’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 12:5
28 ತಿಳಿವುಗಳ ಹೋಲಿಕೆ  

ಯೆಹೋವ ದೇವರಲ್ಲಿ ನಾನು ಅವರನ್ನು ಬಲಪಡಿಸುವೆನು. ದೇವರ ಹೆಸರಿನಲ್ಲಿ ಅವರು ಸುರಕ್ಷಿತರಾಗಿ ಬಾಳುವರು,” ಎಂದು ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ಚೀಯೋನಿನೊಳಗಿಂದ ಗರ್ಜಿಸಿ, ಯೆರೂಸಲೇಮಿನೊಳಗಿಂದ ಗುಡುಗುವರು. ಆಕಾಶಗಳೂ ಭೂಮಿಯೂ ನಡುಗುವುವು. ಆದರೆ ಯೆಹೋವ ದೇವರು ತಮ್ಮ ಜನರಿಗೆ ಆಶ್ರಯವೂ, ಇಸ್ರಾಯೇಲರಿಗೆ ರಕ್ಷಣೆಯ ದುರ್ಗವೂ ಆಗಿರುವರು.


ಬಲದಿಂದ ನನಗೆ ಆಯುಧವನ್ನು ಧರಿಸುವಂತೆ ಮಾಡಿ, ನನ್ನ ಮಾರ್ಗವನ್ನು ಸುರಕ್ಷಿತಗೊಳಿಸುವ ದೇವರು ಅವರೇ.


ನನ್ನ ಬಲವಾಗಿರುವ ಯೆಹೋವ ದೇವರಿಗೆ ಸ್ತೋತ್ರವಾಗಲಿ. ದೇವರು ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವಿದ್ಯೆಯನ್ನು ಕಲಿಸಿದ್ದಾರೆ.


ನೀವು ಯುದ್ಧಕ್ಕಾಗಿ ನನಗೆ ಬಲವನ್ನು ಆಯುಧವನ್ನಾಗಿ ನೀಡಿ, ನನ್ನ ಎದುರಾಳಿಗಳನ್ನು ನನಗೆ ಅಧೀನ ಮಾಡಿದ್ದೀರಿ.


ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ ನ್ಯಾಯದ ಆತ್ಮವೂ, ಬಾಗಿಲಿನ ಕಡೆಗೆ ಯುದ್ಧವನ್ನು ತಿರುಗಿಸುವವನಿಗೆ ಪರಾಕ್ರಮವೂ ಆಗಿರುವನು.


“ಆ ದಿವಸದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ, ಸಿವುಡುಗಳಲ್ಲಿರುವ ಬೆಂಕಿಯ ಪಂಜಿನ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ, ಎಡಗಡೆಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನೂ ನುಂಗಿಬಿಡುವರು. ಆದರೆ ಯೆರೂಸಲೇಮಿನವರು ತಿರುಗಿ ತನ್ನ ಸ್ಥಳದಲ್ಲಿ ಯೆರೂಸಲೇಮಿನಲ್ಲಿಯೇ ಸುರಕ್ಷಿತವಾಗಿ ವಾಸಿಸುವರು.


“ನಾನು ಯೆಹೂದ ವಂಶವನ್ನು ಬಲಪಡಿಸಿ, ಯೋಸೇಫ ಗೋತ್ರವನ್ನು ರಕ್ಷಿಸುವೆನು. ಅವರನ್ನು ಕನಿಕರಿಸುವುದರಿಂದ ಅವರನ್ನು ತಿರುಗಿ ಬರಮಾಡುವೆನು. ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಇರುವರು. ಏಕೆಂದರೆ ನಾನೇ ಅವರ ದೇವರಾದ ಯೆಹೋವ ದೇವರಾಗಿದ್ದು, ಅವರಿಗೆ ಉತ್ತರಕೊಡುವೆನು.


ಆಗ ಮಾತ್ರ ನಾನು ಯಾಕೋಬನ ಸಂತಾನದವರನ್ನು ತ್ಯಜಿಸುತ್ತಿದ್ದೆ. ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ, ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.’ ”


ಅವರ ಪ್ರಮುಖನು ಅವರೊಳಗೆ ಇರುವರು. ಅವರನ್ನು ಆಳುವವನು ಅವರ ಮಧ್ಯದಲ್ಲಿಂದ ಹೊರಡುವನು. ನಾನು ಅವನನ್ನು ಹತ್ತಿರ ಬರಮಾಡುವೆನು. ಅವನು ನನಗೆ ಸಮೀಪಿಸುವನು. ಆದರೆ ನನಗೆ ಸಮೀಪಿಸುವುದಕ್ಕೆ ತನ್ನ ಹೃದಯ ನಿಶ್ಚಯಮಾಡಿಕೊಂಡ ಇವನ್ಯಾರು,’ ಎಂದು ಯೆಹೋವ ದೇವರು ಹೇಳುತ್ತಾರೆ.


ಕಂಚಿನ ಬದಲಾಗಿ ನಿನಗೆ ಬಂಗಾರವನ್ನು ತರುವೆನು. ಕಬ್ಬಿಣಕ್ಕೆ ಬದಲಾಗಿ ಬೆಳ್ಳಿಯನ್ನೂ, ಮರಕ್ಕೆ ಬದಲಾಗಿ ಕಂಚನ್ನೂ, ಕಲ್ಲುಗಳಿಗೆ ಬದಲಾಗಿ ಕಬ್ಬಿಣವನ್ನೂ ತರುವೆನು. ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ, ನೀತಿಯನ್ನು ನಿನಗೆ ಅಧಿಕಾರಿಯನ್ನಾಗಿ ಮಾಡುವೆನು.


ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.


ಯೆಹೋವ ದೇವರು ನಿಮ್ಮ ಮೇಲೆ ಗಾಢನಿದ್ರೆಯ ಆತ್ಮವನ್ನು ಹೊಯ್ದು, ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾರೆ. ಪ್ರವಾದಿಗಳನ್ನೂ, ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನು ಮುಚ್ಚಿದ್ದಾರೆ.


ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ, ನಿನ್ನ ಆಲೋಚನಾಪರರನ್ನು ಪ್ರಾರಂಭದಲ್ಲಿದ್ದ ಹಾಗೆಯೂ ತಿರುಗಿ ಒದಗಿಸಿ ಕೊಡುವೆನು. ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ, ನಂಬಿಗಸ್ತಿಕೆಯ ಪಟ್ಟಣವೆಂದೂ ಎನಿಸಿಕೊಳ್ಳುವೆ.”


ನಿನ್ನ ಪ್ರಭುಗಳು ಎದುರುಬೀಳುವವರೂ, ಕಳ್ಳರ ಜೊತೆಗಾರರೂ ಆಗಿದ್ದಾರೆ. ಪ್ರತಿಯೊಬ್ಬನೂ ಲಂಚ ಪ್ರಿಯನೂ, ಬಹುಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ. ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವುದಿಲ್ಲ.


ಸೊದೋಮಿನ ಅಧಿಪತಿಗಳೇ, ನೀವು ಯೆಹೋವ ದೇವರ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳೇ! ನಮ್ಮ ದೇವರ ನಿಯಮಕ್ಕೆ ಕಿವಿಗೊಡಿರಿ.


ದೇವರು ನಮ್ಮ ಆಶ್ರಯವೂ ಬಲವೂ ಆಗಿದ್ದಾರೆ; ಇಕ್ಕಟ್ಟಿನಲ್ಲಿ ವಿಶೇಷ ಸಹಾಯಕರಾಗಿದ್ದಾರೆ.


ನಾನು ಇಸ್ರಾಯೇಲ್ ನಾಯಕರೊಂದಿಗೂ ಸ್ವೇಚ್ಛೆಯಿಂದ ಬಂದ ಜನರೊಂದಿಗೆ ನನ್ನ ಹೃದಯವಿದೆ. ಯೆಹೋವ ದೇವರನ್ನು ಸ್ತುತಿಸಿರಿ.


ಆ ದಿನದಲ್ಲಿ, ನಾನು ಅವರ ಕುದುರೆಗಳಿಗೆಲ್ಲಾ ತಬ್ಬಿಬ್ಬನ್ನು ಉಂಟುಮಾಡುವೆನು, ಅದರ ರಾಹುತರನ್ನು ಭ್ರಮೆಗೊಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. ಯೆಹೂದ ವಂಶವನ್ನು ಕಟಾಕ್ಷಿಸಿ ಜನಾಂಗಗಳ ಕುದುರೆಗಳನ್ನೆಲ್ಲಾ ಕುರುಡು ಮಾಡುವೆನು.


ಯೆಹೂದವೂ ಸಹ ಯೆರೂಸಲೇಮಿನಲ್ಲಿ ಯುದ್ಧಮಾಡುವುದು. ಸುತ್ತಲಿರುವ ಎಲ್ಲಾ ಜನಾಂಗಗಳ ಸಂಪತ್ತು, ಚಿನ್ನ, ಬೆಳ್ಳಿ ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲಾಗುವುದು.


ಆ ದಿನದಲ್ಲಿ ಸೇನಾಧೀಶ್ವರ ಯೆಹೋವ ದೇವರು ತನ್ನ ಜನರಲ್ಲಿ ಉಳಿದವರಿಗೆ ಮಹಿಮೆಯ ಕಿರೀಟವೂ ಮತ್ತು ಸುಂದರವಾದ ಮಕುಟವೂ ಆಗಿರುವರು.


ಯೆಹೋವ ದೇವರಲ್ಲಿ ಮಾತ್ರ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಅವರ ಬಳಿಗೆ ಬರುವರು.” ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಗೆ ಈಡಾಗುವರು, ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು