Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 13:1 - ಕನ್ನಡ ಸಮಕಾಲಿಕ ಅನುವಾದ

1 “ಆ ದಿವಸದಲ್ಲಿ ದಾವೀದನ ಮನೆತನದವರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಅವರ ಪಾಪದಿಂದ ಮತ್ತು ಅಶುದ್ಧತೆಯಿಂದ ಶುದ್ಧೀಕರಿಸಲು ಒಂದು ಬುಗ್ಗೆಯು ತೆರೆಯಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸೇನಾಧೀಶ್ವರ ಸರ್ವೇಶ್ವರ ಹೀಗೆ ಹೇಳುತ್ತಾರೆ: “ಆ ದಿನದಂದು ದಾವೀದ ವಂಶದವರಿಗೆ ಮತ್ತು ಜೆರುಸಲೇಮಿನವರಿಗೆ ಪಾಪದ ಅಶುದ್ಧತೆಯನ್ನು ಪರಿಹರಿಸಬಲ್ಲ ಒಂದು ಬುಗ್ಗೆ ಕಾಣಿಸಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ದಿನದಲ್ಲಿ ಪಾಪವನ್ನೂ ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ ಯೆರೂಸಲೇವಿುನವರಿಗೂ ತೆರೆದಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆದರೆ ಆ ಸಮಯದಲ್ಲಿ ಜೆರುಸಲೇಮಿನಲ್ಲಿ ವಾಸಿಸುವ ಜನರಿಗೂ ದಾವೀದನ ಕುಟುಂಬದವರಿಗೂ ಒಂದು ಹೊಸ ಬುಗ್ಗೆಯ ನೀರು ಚಿಮ್ಮುವದು. ಆ ಬುಗ್ಗೆಯು ಜನರ ಪಾಪಗಳನ್ನು ತೊಳೆದು ಶುದ್ಧಮಾಡುವದಕ್ಕಾಗಿ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 13:1
34 ತಿಳಿವುಗಳ ಹೋಲಿಕೆ  

ನನ್ನ ಎಲ್ಲಾ ಅಪರಾಧಗಳಿಂದ ನನ್ನನ್ನು ತೊಳೆದುಬಿಡಿರಿ; ನನ್ನ ಪಾಪದಿಂದ ನನ್ನನ್ನು ಶುದ್ಧಮಾಡಿರಿ.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೂ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಿಂದಲೂ ನೀವು ತೊಳೆದು, ಶುದ್ಧೀಕರಣ ಹೊಂದಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ಮರುದಿನ ಯೇಸು ತನ್ನ ಕಡೆಗೆ ಬರುತ್ತಿರುವುದನ್ನು ಯೋಹಾನನು ಕಂಡು, “ಇಗೋ, ಲೋಕದ ಪಾಪವನ್ನು ತೆಗೆದುಹಾಕುವ ದೇವರ ಕುರಿಮರಿ,


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ, ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.


ಕ್ರಿಸ್ತ ಯೇಸುವೇ ನೀರಿನಿಂದಲೂ ರಕ್ತದಿಂದಲೂ ಬಂದವರು. ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದರು, ಇದಕ್ಕೆ ಸಾಕ್ಷಿಕೊಡುವವರು ಪವಿತ್ರಾತ್ಮ ದೇವರೇ, ಏಕೆಂದರೆ ಪವಿತ್ರಾತ್ಮ ದೇವರು ಸತ್ಯವಾಗಿದ್ದಾರೆ.


ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.


ಇಸ್ರಾಯೇಲಿನ ನಿರೀಕ್ಷೆಯಾದ ಓ ಯೆಹೋವ ದೇವರೇ, ನಿಮ್ಮನ್ನು ತೊರೆದುಬಿಟ್ಟವರೆಲ್ಲರೂ ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಯೆಹೋವ ದೇವರಿಂದ ತೊಲಗಿ ಹೋದವರನ್ನು ಧೂಳಿನಲ್ಲಿ ಬರೆಯಲಾಗುತ್ತದೆ.


ಅದು ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯಾಗಿರುವ ಕ್ರಿಸ್ತ ಯೇಸುವಿನ ಅಮೂಲ್ಯ ರಕ್ತದಿಂದಲೇ.


ಆ ದಿವಸದಲ್ಲಿ, ಅವಳ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವಾಗ, ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಚಲಿಸಲಾಗದ ಕಲ್ಲಾಗಿ ಮಾಡುತ್ತೇನೆ. ಅದನ್ನು ತೆಗೆದುಹಾಕಲು ಪ್ರಯತ್ನಿಸುವವರೆಲ್ಲರು ತಮ್ಮನ್ನು ತಾವೇ ಗಾಯಗೊಳಿಸಿಕೊಳ್ಳುತ್ತಾರೆ.


ಹಿಸ್ಸೋಪಿನಿಂದ ನನ್ನನ್ನು ಶುಚಿಮಾಡಿರಿ, ಆಗ ನಾನು ಶುದ್ಧನಾಗುವೆನು. ನನ್ನನ್ನು ತೊಳೆಯಿರಿ, ಆಗ ಹಿಮಕ್ಕಿಂತ ಬೆಳ್ಳಗಾಗುವೆನು.


ಅಲ್ಲದೆ ನಾನು ನಿಮ್ಮನ್ನು ನಿಮ್ಮ ಅಶುದ್ಧತ್ವಗಳಿಂದಲೂ ಸಹ ರಕ್ಷಿಸುವೆನು. ಬೆಳೆ ಬೆಳೆಯಲೆಂದು ಹೇಳಿ ಅದನ್ನು ಹೆಚ್ಚಿಸುವೆನು, ಕ್ಷಾಮವನ್ನು ನಿಮ್ಮ ಮೇಲೆ ಬರಮಾಡುವುದಿಲ್ಲ.


“ಮನುಷ್ಯಪುತ್ರನೇ, ಯಾವಾಗ ಇಸ್ರಾಯೇಲರ ಮನೆತನದವರು ಸ್ವಂತ ದೇಶದಲ್ಲಿ ವಾಸಿಸಿದರೋ, ಆಗ ಅವರು ಅದನ್ನು ತಮ್ಮ ಸ್ವಂತ ಮಾರ್ಗಗಳಿಂದಲೂ ದುಷ್ಕಾರ್ಯಗಳಿಂದಲೂ ಅಶುದ್ಧಗೊಳಿಸಿದರು. ಅವರ ಆ ದುಷ್ಕಾರ್ಯಗಳು ನನ್ನ ಮುಂದೆ ಮುಟ್ಟಾಗಿರುವವಳ ಅಶುದ್ಧತ್ವದ ಹಾಗಿತ್ತು.


ಯೆಹೋವ ದೇವರು ನ್ಯಾಯತೀರ್ಪಿನ ಆತ್ಮದಿಂದಲೂ, ದಹಿಸುವ ಆತ್ಮದಿಂದಲೂ ಚೀಯೋನಿನ ಪುತ್ರಿಯರ ಕಲ್ಮಷವನ್ನು ತೊಳೆದು, ಯೆರೂಸಲೇಮಿನ ಮೇಲಿನ ರಕ್ತದ ಕಲೆಗಳನ್ನು ತೆಗೆದುಹಾಕುವರು.


“ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು, ತಮಗೆ ನೀರು ಹಿಡಿಯಲಾರದ ಒಡಕ ತೊಟ್ಟಿಗಳನ್ನೂ ಕೆತ್ತಿದ್ದಾರೆ.


‘ಏಕೆಂದರೆ, ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯನಿಗೆ ಯೆಹೋವ ದೇವರ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ, ನೀನು ಅಂಥವರನ್ನು ಕೋಳದಲ್ಲಿಯೂ, ಸೆರೆಯಲ್ಲಿಯೂ ಇಡುವ ಹಾಗೆಯೂ, ಯೆಹೋವ ದೇವರು ಯಾಜಕನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕನಾಗಿ ಇಟ್ಟಿದ್ದಾರೆ.


ಅವರು ಯಾವುದರಿಂದ ನನಗೆ ವಿರೋಧವಾಗಿ ಪಾಪ ಮಾಡಿದರೋ, ಆ ಅಕ್ರಮದಿಂದೆಲ್ಲಾ ಅವರನ್ನು ಶುದ್ಧಮಾಡುವೆನು. ಅವರು ಯಾವವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದಾರೋ, ಆ ಅಕ್ರಮಗಳನ್ನೆಲ್ಲಾ ಮನ್ನಿಸುವೆನು.


ಆ ಮನುಷ್ಯನು ನನ್ನನ್ನು ಮತ್ತೆ ಆಲಯದ ಬಾಗಿಲಿನ ಕಡೆಗೆ ಕರೆದುಕೊಂಡು ಹೋದನು. ಇಗೋ, ಆಲಯದ ಹೊಸ್ತಿಲಿನ ಕೆಳಗಿನಿಂದ ನೀರು ಹೊರಟು ಪೂರ್ವದ ಕಡೆಗೆ ನೀರು ಹರಿಯಿತು, ಏಕೆಂದರೆ ಆಲಯದ ಮುಂಭಾಗದಲ್ಲಿ ನೀರು ಇತ್ತು. ಆ ನೀರು ಆಲಯದ ದಕ್ಷಿಣಕ್ಕೆ ಕೆಳಗಡೆ ಹರಿಯಿತು.


ಮತ್ತು ಉಳಿದ ಕುಲಗಳೆಲ್ಲಾ ಪ್ರತ್ಯೇಕವಾಗಿಯೂ, ಅವರ ಹೆಂಡತಿಯರು ಪ್ರತ್ಯೇಕವಾಗಿಯೂ ಗೋಳಾಡುವರು.”


ನೀರು ಹೆಚ್ಚಾಗಿರುವ ಬುಗ್ಗೆಯಾಗಲಿ, ಹಳ್ಳವಾಗಲಿ ಶುದ್ಧವಾಗಿರುವುದು. ಅವುಗಳೊಳಗಿಂದ ಹೆಣಗಳನ್ನು ಎತ್ತಿದವರು ಅಶುದ್ಧರಾಗುವರು.


ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.


ನಿನ್ನ ಮಂತ್ರತಂತ್ರವನ್ನು ನಾಶಮಾಡುವೆನು; ಕಣಿ ಹೇಳುವವರು ನಿನಗೆ ಇನ್ನು ಇರುವುದಿಲ್ಲ.


ಏಕೆಂದರೆ ಕೆಲವೊಮ್ಮೆ ದೇವದೂತನು ಇಳಿದುಬಂದು ನೀರನ್ನು ಕಲಕುತ್ತಿದ್ದನು. ನೀರು ಕಲಕಿದೊಡನೆ ಮೊದಲು ಯಾರು ನೀರಿನೊಳಗೆ ಹೆಜ್ಜೆಯಿಡುತ್ತಿದ್ದರೋ ಅವರಿಗೆ ಯಾವ ರೋಗವಿದ್ದರೂ ಅದು ಗುಣವಾಗುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು