Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರ ದಿನವು ಬರುತ್ತದೆ. ಓ ಯೆರೂಸಲೇಮೇ, ಆ ದಿನದಲ್ಲಿ ನಿನ್ನ ಐಶ್ವರ್ಯವು ಸೂರೆಯಾಗುವುದು. ಮತ್ತು ಸೂರೆಯಾದದ್ದೆಲ್ಲ ನಿನ್ನ ಗೋಡೆಗಳ ಮಧ್ಯದಲ್ಲಿ ಹಂಚಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಹಾ, ಚೀಯೋನೇ, ಯೆಹೋವನ ನ್ಯಾಯತೀರ್ಪಿನ ದಿನವು ಬರುತ್ತಿದೆ; ಸೂರೆಯಾದ ನಿನ್ನ ಆಸ್ತಿಯು ಆಗ ನಿನ್ನ ಮಧ್ಯದಲ್ಲಿ ಹಂಚಿಕೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಗೋ, ಸರ್ವೇಶ್ವರ ನೇಮಿಸಿದ ದಿನ ಬರುತ್ತಿದೆ. ಆಗ ಜೆರುಸಲೇಮಿನ ಆಸ್ತಿಪಾಸ್ತಿ ಸೂರೆಯಾಗುವುದು. ಮತ್ತು ಸೂರೆಯಾದದ್ದೆಲ್ಲ ಅವರ ಕಣ್ಮುಂದೆ ಪಾಲುಪಾಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಹಾ, [ಚೀಯೋನೇ!] ಯೆಹೋವನು ನೇವಿುಸಿದ ದಿನವು ಬರುತ್ತಿದೆ; ಸೂರೆಯಾದ ನಿನ್ನ ಆಸ್ತಿಯು ಆಗ ನಿನ್ನ ಮಧ್ಯದಲ್ಲಿ ಹಂಚಿಕೆಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನ ನ್ಯಾಯತೀರಿಸುವ ದಿನ ಬಂದಿದೆ. ನೀವು ಸುಲಿದುಕೊಂಡ ಐಶ್ವರ್ಯವು ನಿಮ್ಮ ಪಟ್ಟಣದಲ್ಲಿ ಪಾಲು ಮಾಡಲಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:1
12 ತಿಳಿವುಗಳ ಹೋಲಿಕೆ  

ಇಗೋ, ಯೆಹೋವ ದೇವರ ದಿನವು ಬರುತ್ತದೆ. ಅದು ಭೂಮಿಯನ್ನು ಹಾಳು ಮಾಡುವುದಕ್ಕೂ, ಅಲ್ಲಿಂದ ಪಾಪಿಗಳನ್ನು ನಿರ್ಮೂಲ ಮಾಡುವುದಕ್ಕೂ, ಕಡುಕೋಪದಿಂದಲೂ, ತೀಕ್ಷ್ಣರೋಷದಿಂದಲೂ ಕ್ರೂರವಾಗಿರುವುದು.


ಸೇನಾಧೀಶ್ವರ ಯೆಹೋವ ದೇವರ ದಿನವು ಗರ್ವ ಹಾಗೂ ಅಹಂಭಾವದಿಂದ ತುಂಬಿರುವವರ ಮೇಲೆಯೂ, ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವುದು, ದೇವರು ಅವರನ್ನು ತಗ್ಗಿಸುವರು.


ಅವು ಸೂಚಕಕಾರ್ಯಗಳನ್ನು ನಡೆಸುವ ದೆವ್ವಗಳ ಆತ್ಮಗಳಾಗಿದ್ದು, ಭೂಲೋಕದ ರಾಜರುಗಳನ್ನು ಸರ್ವಶಕ್ತರಾದ ದೇವರ ಮಹಾದಿನದ ಯುದ್ಧಕ್ಕಾಗಿ ಕೂಡಿಸುವುದಕ್ಕಾಗಿ ಹೊರಟವು.


ಕರ್ತದೇವರ ಮಹಿಮೆಯುಳ್ಳ ಮಹಾದಿನವೂ ಬರುವುದಕ್ಕೆ ಮೊದಲು ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


“ಖಂಡಿತವಾಗಿ ಆ ದಿನ ಬರುತ್ತದೆ, ಅದು ಒಲೆಯಂತೆ ಉರಿಯುತ್ತದೆ. ಆಗ ಗರ್ವಿಷ್ಠರೆಲ್ಲರೂ ಕೆಟ್ಟದ್ದನ್ನು ಮಾಡುವವರೆಲ್ಲರೂ ಹುಲ್ಲಿನಂತಿರುವರು. ಬರುವ ಆ ದಿನವು ಅವರನ್ನು ಸುಟ್ಟುಬಿಡುವುದು. ಬೇರನ್ನಾದರೂ, ಕೊಂಬೆಯನ್ನಾದರೂ ಅವರಿಗೆ ಬಿಡದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನೀವು ಗೋಳಾಡಿರಿ. ಏಕೆಂದರೆ, ಯೆಹೋವ ದೇವರ ದಿನವು ಸಮೀಪವಾಯಿತು. ಅದು ಸರ್ವಶಕ್ತರಿಂದ ನಾಶರೂಪವಾಗಿ ಬರುವುದು.


“ಇಗೋ, ಯೆಹೋವ ದೇವರ ಮಹಾ ಭಯಂಕರವಾದ ದಿವಸವು ಬರುವುದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುವೆನು.


ತೀರ್ಮಾನದ ಕಣಿವೆಯಲ್ಲಿ ಗುಂಪು ಗುಂಪುಗಳಾಗಿ ಜನರಿದ್ದಾರೆ! ಏಕೆಂದರೆ ಯೆಹೋವ ದೇವರ ದಿವಸವು ನಿರ್ಣಯದ ತಗ್ಗಿನಲ್ಲಿ ಸಮೀಪವಾಗಿದೆ.


ಯೆಹೋವ ದೇವರ ಭಯಂಕರವಾದ ಮಹಾದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ನೀವು ಚೀಯೋನಿನಲ್ಲಿ ಕೊಂಬು ಊದಿರಿ. ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ. ದೇಶದ ನಿವಾಸಿಗಳೆಲ್ಲರು ನಡುಗಲಿ. ಏಕೆಂದರೆ ಯೆಹೋವ ದೇವರ ದಿವಸವು ಬರುತ್ತದೆ. ಅದು ಸಮೀಪವಾಗಿದೆ.


ಯೆಹೂದವೂ ಸಹ ಯೆರೂಸಲೇಮಿನಲ್ಲಿ ಯುದ್ಧಮಾಡುವುದು. ಸುತ್ತಲಿರುವ ಎಲ್ಲಾ ಜನಾಂಗಗಳ ಸಂಪತ್ತು, ಚಿನ್ನ, ಬೆಳ್ಳಿ ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲಾಗುವುದು.


ಸಾರ್ವಭೌಮ ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಯೆಹೋವ ದೇವರ ದಿನವು ಸಮೀಪವಾಗಿದೆ. ಯೆಹೋವ ದೇವರು ಯಜ್ಞವನ್ನು ಸಿದ್ಧಮಾಡಿದ್ದಾರೆ. ಅವರು ಆಮಂತ್ರಿಸಿದವರನ್ನು ಅವರು ಪವಿತ್ರೀಕರಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು