Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:10 - ಕನ್ನಡ ಸಮಕಾಲಿಕ ಅನುವಾದ

10 ಗೆಬ ಮೊದಲುಗೊಂಡು ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೂ ದೇಶವೆಲ್ಲಾ ಅರಾಬಾದ ಹಾಗೆ ಮಾರ್ಪಡುವುದು. ಯೆರೂಸಲೇಮ್ ತನ್ನ ಸ್ಥಳದಲ್ಲಿ ಬೆನ್ಯಾಮೀನನ ಬಾಗಿಲು ಮೊದಲುಗೊಂಡು, ಮೊದಲನೆಯ ಬಾಗಿಲಿನ ಸ್ಥಳದವರೆಗೂ, ಮೂಲೆ ಬಾಗಿಲಿನವರೆಗೂ, ಹನನೇಲನ ಗೋಪುರ ಮೊದಲುಗೊಂಡು ಅರಸನ ದ್ರಾಕ್ಷಿ ಆಲೆಗಳವರೆಗೂ ಎತ್ತರದಲ್ಲಿ ನಿವಾಸವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ದೇಶವು ಗೆಬದಿಂದ ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವುದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿನಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷಿಯ ಆಲೆಗಳವರೆಗೂ ಎತ್ತರದಲ್ಲಿ ನಿಂತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಉತ್ತರದಲ್ಲಿರುವ ಗೆಬದಿಂದ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ನಾಡೆಲ್ಲ ಸಮತಟ್ಟಾಗಿರುವುದು. ಜೆರುಸಲೇಮ್ ನಗರ ಮಾತ್ರ ಸುತ್ತಮುತ್ತಲಿನ ಪ್ರದೇಶಗಳಿಗಿಂತ ಎತ್ತರವಾಗಿ ನಿಲ್ಲುವುದು. ಒಂದು ಕಡೆ ಬೆನ್ಯಾಮಿನ್ ಬಾಗಿಲಿನಿಂದ ಪೂರ್ವಕಾಲದ ಮೂಲೆಯ ಬಾಗಿಲ ತನಕವೂ ಹನನೇಲಿನ ಗೋಪುರದಿಂದ ಅರಸನ ದ್ರಾಕ್ಷೆಯ ಆಲೆಗಳ ಪರಿಯಂತವೂ ಹರಡಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ದೇಶವು ಗೆಬದಿಂದ ಯೆರೂಸಲೇವಿುಗೆ ತೆಂಕಲಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷೆಯ ಆಲೆಗಳ ಪರಿಯಂತ ಇದ್ದ ಕಡೆಯೇ ಎತ್ತರದಲ್ಲಿ ನಿಂತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ಸಮಯದಲ್ಲಿ ಜೆರುಸಲೇಮಿನ ಸುತ್ತಮುತ್ತ ಇರುವ ಜಾಗವು ನಿರ್ಜನವಾಗಿದ್ದು ಅರಾಬಾ ಮರುಭೂಮಿಯಂತಿರುವದು. ದೇಶವು ಗೆಬದಿಂದ ಹಿಡಿದು ನೆಗೆವ್‌ನಲ್ಲಿರುವ ರಿಮ್ಮೋನ್ ತನಕ ಮರುಭೂಮಿಯಂತಿರುವದು. ಆದರೆ ಜೆರುಸಲೇಮ್ ನಗರವು ತಿರುಗಿ ಕಟ್ಟಲ್ಪಡುವದು. ಬೆನ್ಯಾಮೀನ್ ದ್ವಾರದಿಂದ ಮೂಲೇ ದ್ವಾರ ಅಥವಾ ಮೊದಲನೇ ದ್ವಾರದ ತನಕ ಮತ್ತು ಹನನೇಲ್ ಬುರುಜಿನಿಂದ ಹಿಡಿದು ಅರಸನ ದ್ರಾಕ್ಷಿತೊಟ್ಟಿಯ ತನಕ ಹೊಸದಾಗಿ ಕಟ್ಟಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:10
28 ತಿಳಿವುಗಳ ಹೋಲಿಕೆ  

“ಆ ದಿವಸದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ, ಸಿವುಡುಗಳಲ್ಲಿರುವ ಬೆಂಕಿಯ ಪಂಜಿನ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ, ಎಡಗಡೆಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನೂ ನುಂಗಿಬಿಡುವರು. ಆದರೆ ಯೆರೂಸಲೇಮಿನವರು ತಿರುಗಿ ತನ್ನ ಸ್ಥಳದಲ್ಲಿ ಯೆರೂಸಲೇಮಿನಲ್ಲಿಯೇ ಸುರಕ್ಷಿತವಾಗಿ ವಾಸಿಸುವರು.


ಲೆಬಾವೋತ್, ಶಿಲ್ಹೀಮ್, ಆಯಿನ್, ರಿಮ್ಮೋನ್ ಎಂಬವುಗಳೇ ಪಟ್ಟಣಗಳೆಲ್ಲಾ ಇಪ್ಪತ್ತೊಂಬತ್ತು ಮತ್ತು ಅವುಗಳ ಗ್ರಾಮಗಳು.


ಆಗ ಅವನು ಬೆನ್ಯಾಮೀನನ ಬಾಗಿಲಲ್ಲಿ ಇರುವಾಗ, ಅಲ್ಲಿ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನಾದ ಇರೀಯನೆಂಬ ಪಹರೆಯ ನಾಯಕನು ಇದ್ದನು. ಇವನು ಪ್ರವಾದಿಯಾದ ಯೆರೆಮೀಯನನ್ನು, “ನೀನು ಕಸ್ದೀಯರ ಪಕ್ಷಕ್ಕೆ ಸೇರುತ್ತೀ,” ಎಂದು ಹೇಳಿ ಹಿಡಿದನು.


“ಯೆಹೋವ ದೇವರು ಮತ್ತೆ ಹೀಗೆ ಹೇಳಿದ್ದು, “ ‘ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ. ಅವನ ನಿವಾಸಗಳನ್ನು ಕರುಣಿಸುತ್ತೇನೆ. ಪಟ್ಟಣವು ಅದರ ದಿನ್ನೆಯ ಮೇಲೆ ಕಟ್ಟಲಾಗುವುದು. ಅರಮನೆಯು ತಕ್ಕ ಸ್ಥಳದಲ್ಲಿ ನೆಲೆಯಾಗಿರುವುದು.


ಆಗ ಅರಸನಾದ ಆಸನು ಯೆಹೂದರಲ್ಲಿ ಒಬ್ಬನನ್ನೂ ಬಿಡದೆ ಎಲ್ಲರನ್ನೂ ಕರೆಯಿಸಿ, ಬಾಷನು ಕಟ್ಟಿಸುತ್ತಾ ಇದ್ದ ರಾಮ ಪಟ್ಟಣದ ಕಲ್ಲುಗಳನ್ನೂ, ಅದರ ತೊಲೆಗಳನ್ನೂ ತೆಗೆದುಕೊಂಡುಹೋಗಿ ಅವುಗಳಿಂದ ಬೆನ್ಯಾಮೀನನ ಗಿಬೆಯ ಮತ್ತು ಮಿಚ್ಪೆ ಎಂಬ ನಗರಗಳನ್ನು ಕಟ್ಟಿಸಿದನು.


“ಓಡಿಹೋಗಿ ಈ ಯೌವನಸ್ಥನಿಗೆ, ‘ಯೆರೂಸಲೇಮು, ಅದರಲ್ಲಿರುವ ಮನುಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾಗಿರುವುದು. ಯೆರೂಸಲೇಮು ಗೋಡೆ ಇಲ್ಲದ ಊರುಗಳಂತೆ ಇರುವುದು.


ಆಗ ಅರಸನು ಮನೆಯಲ್ಲಿರುವ ಕಂಚುಕಿಯಾದ ಕೂಷ್ಯನಾದ ಎಬೆದ್ಮೆಲೆಕನು ಅವರು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದರೆಂದು ಕೇಳಿದಾಗ, ಅರಸನು ಬೆನ್ಯಾಮೀನನ ಬಾಗಿಲಲ್ಲಿ ಕೂತಿರಲಾಗಿ,


ಆಗ ಮಹಾಯಾಜಕನಾದ ಎಲ್ಯಾಷೀಬನೂ, ಅವನ ಕುಟುಂಬದ ಯಾಜಕರೂ ಕುರಿ ಬಾಗಿಲನ್ನು ಕಟ್ಟಿ, ಅದನ್ನು ಪ್ರತಿಷ್ಠಿಸಿ, ಅದಕ್ಕೆ ಕದಗಳನ್ನು ಇಟ್ಟರು. ಅಲ್ಲಿಂದ ಶತ ಗೋಪುರದವರೆಗೆ ಗೋಡೆ ಕಟ್ಟಿ ಅದನ್ನೂ ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಬುರುಜಿನವರೆಗೂ ಕಟ್ಟಿದರು.


ಆದರೆ ಆರುನೂರು ಮಂದಿ ತಿರುಗಿಕೊಂಡು ಮರುಭೂಮಿಯಲ್ಲಿರುವ ರಿಮ್ಮೋನ್ ಬೆಟ್ಟಕ್ಕೆ ಓಡಿಹೋಗಿ, ರಿಮ್ಮೋನ್ ಗುಡ್ಡದಲ್ಲಿ ನಾಲ್ಕು ತಿಂಗಳು ವಾಸವಾಗಿದ್ದರು.


ಆದರೆ ಕೆಲವರು ತಿರುಗಿಕೊಂಡು ಮರುಭೂಮಿಯಲ್ಲಿರುವ ರಿಮ್ಮೋನ್ ಬಂಡೆಗೆ ಓಡಿಹೋದರು. ಅದರಲ್ಲಿ ಐದು ಸಾವಿರ ಜನರನ್ನು ಹೆದ್ದಾರಿಗಳಲ್ಲಿ ಹಕ್ಕಲಾರಿಸಿ ಕೊಂದುಹಾಕಿದರು. ಉಳಿದವರನ್ನು ಗಿದೋಮಿನವರೆಗೆ ಹಿಂದಟ್ಟಿ ಅವರಲ್ಲಿ ಎರಡು ಸಾವಿರ ಮನುಷ್ಯರನ್ನು ವಧಿಸಿದರು.


ಆ ದಿನದಲ್ಲಿ, ಬಿದ್ದುಹೋದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಮುರಿದ ಗೋಡೆಗಳನ್ನು ಸರಿಪಡಿಸುತ್ತೇನೆ. ಮತ್ತು ಅದರ ಅವಶೇಷಗಳನ್ನು ಪುನಃಸ್ಥಾಪಿಸಿ ಮತ್ತು ಅದನ್ನು ಮೊದಲಿನಂತೆ ಪುನಃ ನಿರ್ಮಿಸುವೆನು.


ಅವರು ಕಣಿವೆಯನ್ನು ದಾಟಿದ್ದಾರೆ; ಗಿಬೆಯದಲ್ಲಿ ಇಳುಕೊಂಡಿದ್ದಾರೆ. ರಾಮಾ ಜನತೆ ಹೆದರುತ್ತಿದೆ; ಸೌಲನ ಗಿಬೆಯದ ಜನತೆ ಓಡಿಹೋಗಿದೆ.


ಆ ಅಂತ್ಯಕಾಲದಲ್ಲಿ, ಯೆಹೋವ ದೇವರ ಮಂದಿರದ ಪರ್ವತವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಎಲ್ಲಾ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು.


ಎಫ್ರಾಯೀಮ್ ಬಾಗಿಲ ಮೇಲೆಯೂ, ಯೆಷಾನಾ ಬಾಗಿಲ ಮೇಲೆಯೂ, ಮೀನು ಬಾಗಿಲ ಮೇಲೆಯೂ ಹಾದು, ಹನನೇಲ್ ಗೋಪುರವನ್ನೂ, ಶತ ಗೋಪುರವನ್ನೂ ದಾಟಿ, ಕುರಿ ಬಾಗಿಲವರೆಗೆ ಬಂದು ಸೆರೆಮನೆಯ ಬಾಗಿಲ ಬಳಿಯಲ್ಲಿ ನಿಂತರು.


ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೋವಾಹಾಜನ ಮೊಮ್ಮಗನೂ, ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ ಷೆಮೆಷ್ ಊರಿನ ಬಳಿಯಲ್ಲಿ ವಶಪಡಿಸಿಕೊಂಡನು. ಅನಂತರ ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು, ಎಫ್ರಾಯೀಮಿನ ಬಾಗಿಲು ಮೊದಲುಗೊಂಡು, ಮೂಲೆಯ ಬಾಗಿಲವರೆಗೂ, 180 ಮೀಟರ್ ಉದ್ದದ ಯೆರೂಸಲೇಮಿನ ಗೋಡೆಯನ್ನು ಕೆಡವಿಬಿಟ್ಟನು.


ಮೆರಾರೀಯ ಉಳಿದ ಮಕ್ಕಳಿಗೂ, ಜೆಬುಲೂನನ ಗೋತ್ರದಿಂದ ರಿಮ್ಮೋನೋ, ಅದರ ಉಪನಗರಗಳೂ, ತಾಬೋರ್, ಅದರ ಉಪನಗರಗಳೂ;


ಅವರ ಸುತ್ತಲಿನ ಗ್ರಾಮಗಳು ಯಾವುವೆಂದರೆ: ಏಟಾಮ್, ಆಯಿನ್, ರಿಮ್ಮೋನ್, ತೋಕೆನ್, ಆಷಾನ್ ಎಂಬ ಐದು ಪಟ್ಟಣಗಳು.


ಆಗ ಸಭೆಯವರೆಲ್ಲರೂ ರಿಮ್ಮೋನ್ ಗುಡ್ಡದಲ್ಲಿರುವ ಬೆನ್ಯಾಮೀನ್ಯರ ಸಂಗಡ ಮಾತನಾಡಿ, ಅವರಿಗೆ ಸಮಾಧಾನವನ್ನು ಸಾರಲು ಕೆಲವರನ್ನು ಕಳುಹಿಸಿದರು.


ಇದಲ್ಲದೆ ಬೆನ್ಯಾಮೀನನ ಗೋತ್ರದಲ್ಲಿ ಗಿಬ್ಯೋನನ್ನೂ ಗೆಬಾನನ್ನೂ


ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಅಹಜ್ಯನ ಮೊಮ್ಮಗನೂ ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ ಷೆಮೆಷ್ ಬಳಿಯಲ್ಲಿ ವಶಪಡಿಸಿಕೊಂಡನು. ಅನಂತರ ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು, ಎಫ್ರಾಯೀಮಿನ ಬಾಗಿಲು ಮೊದಲುಗೊಂಡು ಮೂಲೆಯ ಬಾಗಿಲವರೆಗೂ, ಆರುನೂರು ಅಡಿ ಉದ್ದದ ಯೆರೂಸಲೇಮಿನ ಗೋಡೆಯನ್ನು ಕೆಡವಿಬಿಟ್ಟನು.


ಆಗ ಪಷ್ಹೂರನು ಪ್ರವಾದಿಯಾದ ಯೆರೆಮೀಯನನ್ನು ಹೊಡೆದು, ಅವನನ್ನು ಯೆಹೋವ ದೇವರ ಆಲಯದ ಬಳಿಯಲ್ಲಿದ್ದ ಬೆನ್ಯಾಮೀನನ ಮೇಲ್ಭಾಗದಲ್ಲಿದ್ದ ಬಾಗಿಲಲ್ಲಿದ್ದ ಮರದ ಉಪಕರಣಕ್ಕೆ ಕಟ್ಟಿದರು.


ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆ ಬಾಗಿಲ ಬಳಿಯಲ್ಲಿಯೂ, ತಗ್ಗಿನ ಬಾಗಿಲ ಬಳಿಯಲ್ಲಿಯೂ, ಕೋಟೆಯ ಮೂಲೆಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು.


ಅಂತ್ಯಕಾಲದಲ್ಲಿ, ಯೆಹೋವ ದೇವರ ಮಂದಿರದ ಪರ್ವತವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು, ಆಗ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಚೀಯೋನಿಗೆ ನಾನು ತಿರುಗಿಕೊಂಡು, ನಾನು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು. ಆಗ ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೇನಾಧೀಶ್ವರ ಯೆಹೋವ ದೇವರ ಪರ್ವತವು ಪರಿಶುದ್ಧ ಪರ್ವತವೆಂದೂ ಕರೆಯಿಸಿಕೊಳ್ಳುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು