Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:7 - ಕನ್ನಡ ಸಮಕಾಲಿಕ ಅನುವಾದ

7 ಆದರೆ ಅದು ಒಂದು ವಿಶಿಷ್ಟ ದಿವಸವಾಗಿರುವುದು. ಯೆಹೋವ ದೇವರಿಗೆ ಮಾತ್ರ ತಿಳಿದಿರುವ ಒಂದು ದಿನ ಇರುವುದು. ಅದು ಹಗಲೂ ಅಲ್ಲ, ರಾತ್ರಿಯೂ ಅಲ್ಲ. ಆದರೆ, ಸಾಯಂಕಾಲದ ಸಮಯದಲ್ಲಿ ಬೆಳಕು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದು ಯೆಹೋವನಿಗೆ ತಿಳಿದಿರುವುದು, ಅದು ಹಗಲೂ ಅಲ್ಲ, ಇರುಳೂ ಅಲ್ಲ, ಆದರೆ ಸಂಜೆಯ ವೇಳೆಯಲ್ಲಿ ಬೆಳಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹಗಲಿರುಳು ಎನ್ನದೆ ನಿರಂತರವೂ ಬೆಳಕಾಗುವುದು. ಸಂಜೆಯು ಸಹ ಪ್ರಾಕಾಶಮಯವಾಗಿರುವುದು. ಆದರೆ ಇದು ಯಾವಾಗ ಸಂಭವಿಸುವುದೆಂಬುದು ಸರ್ವೇಶ್ವರಸ್ವಾಮಿಗೆ ಮಾತ್ರ ತಿಳಿದಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದು ಯೆಹೋವನಿಗೆ ಗೊತ್ತು, ಅದು ಹಗಲೂ ಅಲ್ಲ, ಇರುಳೂ ಅಲ್ಲ, ಆದರೆ ಸಂಜೆಯ ವೇಳೆಯಲ್ಲಿ ಬೆಳಕಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:7
26 ತಿಳಿವುಗಳ ಹೋಲಿಕೆ  

ಇನ್ನು ರಾತ್ರಿ ಇರುವುದಿಲ್ಲ. ದೀಪದ ಬೆಳಕೂ ಸೂರ್ಯನ ಬೆಳಕೂ ಅವಶ್ಯವಿಲ್ಲ. ಕರ್ತದೇವರೇ ಅವರಿಗೆ ಬೆಳಕನ್ನು ಕೊಡುವರು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ಪಟ್ಟಣವನ್ನು ಬೆಳಗಿಸಲು ಸೂರ್ಯನಾಗಲಿ, ಚಂದ್ರನಾಗಲಿ ಅವಶ್ಯವಿಲ್ಲ. ಏಕೆಂದರೆ ದೇವರ ಮಹಿಮೆಯೇ ಅದಕ್ಕೆ ಬೆಳಕಾಗಿತ್ತು. ಕುರಿಮರಿಯಾದಾತನೇ ಅದರ ದೀಪವು.


ರಾತ್ರಿಯಲ್ಲಿ ಕಳ್ಳನು ಬರುವಂತೆ ಕರ್ತ ಯೇಸುವಿನ ದಿನವು ಬರುವುದೆಂದು ನೀವೇ ಚೆನ್ನಾಗಿ ಬಲ್ಲಿರಿ.


ಆದರೆ ದಾನಿಯೇಲನೇ ನೀನು, ಅಂತ್ಯಕಾಲದವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆದಿರುವ ಆ ಗ್ರಂಥಕ್ಕೆ ಮುದ್ರೆ ಹಾಕು. ಅನೇಕರು ಅತ್ತಿತ್ತ ಓಡಾಡುವರು, ಜ್ಞಾನವು ಹೆಚ್ಚಾಗುವುದು,” ಎಂದು ಹೇಳಿದನು.


ಇಷ್ಟೇ ಅಲ್ಲದೆ ಯೆಹೋವ ದೇವರು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ, ಏಳು ದಿನಗಳ ಬೆಳಕಿನಂತಾಗುವುದು.


ಏಕೆಂದರೆ ದೇವರು ನೇಮಿಸಿದ ಒಬ್ಬರ ಮುಖಾಂತರ ಇಡೀ ಜಗತ್ತಿಗೆ ನೀತಿಗನುಸಾರವಾಗಿ ನ್ಯಾಯತೀರ್ಪು ಮಾಡುವ ಒಂದು ದಿನವನ್ನು ನೇಮಕ ಮಾಡಿದ್ದಾರೆ. ಇದನ್ನು ಎಲ್ಲರಿಗೂ ಖಚಿತ ಪಡಿಸಲೆಂದೇ ಆ ಒಬ್ಬರನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾರೆ.”


ಎಂದು ನಿತ್ಯತ್ವವನ್ನು ತಿಳಿದಿರುವವರೂ ಇವುಗಳನ್ನೆಲ್ಲಾ ಮಾಡುವವರೂ ಆಗಿರುವ ದೇವರು ಹೇಳುತ್ತಾರೆ.


ಅದಕ್ಕೆ ಯೇಸು: “ತಂದೆ ತಮ್ಮ ಸ್ವಂತ ಅಧಿಕಾರದಿಂದ ನೇಮಿಸಿದ ಸಮಯವನ್ನಾಗಲಿ, ಕಾಲವನ್ನಾಗಲಿ, ತಿಳಿಯುವುದು ನಿಮ್ಮ ಕೆಲಸವಲ್ಲ.


“ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ತಂದೆಗೆ ಹೊರತು ಯಾವ ಮನುಷ್ಯನಿಗಾಗಲಿ, ಪರಲೋಕದಲ್ಲಿರುವ ದೂತರಿಗಾಗಲಿ, ಪುತ್ರನಿಗಾಗಲಿ ತಿಳಿಯದು.


“ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ತಂದೆಗೆ ಹೊರತು ಯಾವ ಮನುಷ್ಯನಿಗಾಗಲಿ, ಪರಲೋಕದಲ್ಲಿರುವ ದೂತರಿಗಾಗಲಿ, ಮನುಷ್ಯಪುತ್ರನಾದ ನನಗೂ ತಿಳಿಯದು.


ಅಯ್ಯೋ, ಈ ದಿನವು ಘೋರವಾದದ್ದು, ಅದಕ್ಕೆ ಎಣೆ ಇಲ್ಲ; ಅದು ಯಾಕೋಬ್ಯರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.’


ನಿರ್ದೋಷಿಗಳು ತಮ್ಮ ದಿವಸಗಳನ್ನು ಯೆಹೋವ ದೇವರ ಪರಾಮರಿಕೆಯಲ್ಲಿ ಕಳೆಯುವರು. ನಿರಪರಾಧಿಯ ಬಾಧ್ಯತೆಯು ಯುಗಯುಗಕ್ಕೂ ಇರುವುದು.


ಅದರ ಹೆಬ್ಬಾಗಿಲುಗಳು ಒಂದು ದಿನವೂ ಮುಚ್ಚುವುದೇ ಇಲ್ಲ. ಇರುಳಂತೂ ಇರುವುದೇ ಇಲ್ಲ.


ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮಾನವರೊಂದಿಗೆ ಇದೆ. ದೇವರು ಅವರೊಡನೆ ವಾಸಮಾಡುವರು. ಮಾನವರು ದೇವರಿಗೆ ಪ್ರಜೆಯಾಗಿರುವರು. ದೇವರು ತಾವೇ ಅವರ ಸಂಗಡ ಇರುವರು.


ಮತ್ತೊಬ್ಬ ದೇವದೂತನು ಆಕಾಶದ ಮಧ್ಯದಲ್ಲಿ ಹಾರುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ರಾಷ್ಟ್ರ, ಹಿನ್ನಲೆ, ಭಾಷೆ ಹಾಗೂ ಪ್ರಜೆಗಳವರಿಗೂ ಸಾರಿ ಹೇಳುವುದಕ್ಕೆ ನಿತ್ಯ ಸುವಾರ್ತೆಯು ಅವನಲ್ಲಿತ್ತು.


ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”


ದೇವರು ಒಬ್ಬ ಮನುಷ್ಯನಿಂದ ಎಲ್ಲಾ ದೇಶಗಳನ್ನು ಸೃಷ್ಟಿಸಿ, ಜನರು ಇಡೀ ಭೂಲೋಕವನ್ನು ತುಂಬಿಕೊಳ್ಳುವಂತೆ ಮಾಡಿದರು; ಅವರವರು ಇರತಕ್ಕ ಕಾಲಾವಧಿಯನ್ನೂ ವಾಸಿಸಲು ನಿರ್ದಿಷ್ಟ ಸ್ಥಳಗಳನ್ನೂ ನೇಮಿಸಿದ್ದಾರೆ.


ಆಮೇಲೆ ಇಸ್ರಾಯೇಲರು ತಿರುಗಿಕೊಂಡು ಅವರ ದೇವರಾದ ಯೆಹೋವ ದೇವರನ್ನು ಮತ್ತು ಅವರ ಅರಸನಾದ ದಾವೀದನನ್ನು ಹುಡುಕಿಕೊಂಡು, ಅಂತ್ಯ ದಿವಸಗಳಲ್ಲಿ ಯೆಹೋವ ದೇವರನ್ನೂ, ಆತನ ಒಳ್ಳೆಯತನವನ್ನೂ ಭಯಭಕ್ತಿಯಿಂದ ಪಡೆಯುವರು.


ನನ್ನ ಪರಿಶುದ್ಧ ಪರ್ವತದಲ್ಲಿ ಯಾರೂ ಕೇಡುಮಾಡುವುದಿಲ್ಲ, ಯಾರೂ ಹಾಳುಮಾಡುವುದಿಲ್ಲ. ಏಕೆಂದರೆ ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, ಯೆಹೋವ ದೇವರ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು.


ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.


ಆಮೇಲೆ ಸೇನಾಧೀಶ್ವರ ಯೆಹೋವ ದೇವರು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಹಿರಿಯರ ಮುಂದೆ ಮಹಿಮೆಯಿಂದ ಆಳುವಾಗ, ಚಂದ್ರನಿಗೆ ಅವಮಾನವಾಗುವುದು, ಸೂರ್ಯನು ನಾಚಿಕೆ ಪಡುವನು.


ನೀವು ಏನು ಸಾರಬೇಕೋ ಅದನ್ನು ಈಗ ತನ್ನಿರಿ ಹೌದು, ಒಟ್ಟಿಗೆ ಅವರು ಆಲೋಚಿಸಲಿ ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಪ್ರಾರಂಭದಿಂದ ಇದನ್ನು ತಿಳಿಸಿದವರು ಯಾರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲ. ನನ್ನ ಹೊರತಾಗಿ ನೀತಿಯುಳ್ಳ ದೇವರೂ, ರಕ್ಷಕನೂ ಇಲ್ಲವೇ ಇಲ್ಲ.


ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ದಬ್ಬಾಳಿಕೆಗೆ ಒಳಗಾದವನ ಪ್ರಾಣವನ್ನು ತೃಪ್ತಿಪಡಿಸಿದರೆ, ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವುದು. ನಿನ್ನ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು.


“ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ, “ಆ ದಿನದಲ್ಲಿ,” ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು