Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 2:13 - ಕನ್ನಡ ಸಮಕಾಲಿಕ ಅನುವಾದ

13 ಎಲ್ಲಾ ಮನುಷ್ಯರೇ, ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಅವರು ತಮ್ಮ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಎದ್ದು ಹೊರಟಿದ್ದಾನೆ; ನರಮಾನವರೇ, ನೀವೆಲ್ಲಾ ಆತನ ಮುಂದೆ ಮೌನವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರ ತಮ್ಮ ಪರಿಶುದ್ಧಾಲಯದಿಂದ ಹೊರಬರುತ್ತಿದ್ದಾರೆ. ನರಮಾನವರೇ, ಅವರ ಶ್ರೀಸನ್ನಿಧಿಯಲ್ಲಿ ನೀವೆಲ್ಲರು ಮೌನತಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಎದ್ದು ಹೊರಟಿದ್ದಾನೆ; ನರಪ್ರಾಣಿಗಳೇ, ನೀವೆಲ್ಲಾ ಆತನ ಮುಂದೆ ಮೌನವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಎಲ್ಲರೂ ಮೌನವಾಗಿರಿ. ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಹೊರಬರುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 2:13
26 ತಿಳಿವುಗಳ ಹೋಲಿಕೆ  

ಆದರೆ ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ. ಅವರ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.


ಸಾರ್ವಭೌಮ ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಯೆಹೋವ ದೇವರ ದಿನವು ಸಮೀಪವಾಗಿದೆ. ಯೆಹೋವ ದೇವರು ಯಜ್ಞವನ್ನು ಸಿದ್ಧಮಾಡಿದ್ದಾರೆ. ಅವರು ಆಮಂತ್ರಿಸಿದವರನ್ನು ಅವರು ಪವಿತ್ರೀಕರಿಸಿದ್ದಾರೆ.


ದೇವರು ತಮ್ಮ ಪರಿಶುದ್ಧ ಸ್ಥಳದಲ್ಲಿ ದಿಕ್ಕಿಲ್ಲದವರಿಗೆ ತಂದೆ, ವಿಧವೆಯರಿಗೆ ರಕ್ಷಕರಾಗಿದ್ದಾರೆ.


ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ: ನಾನು ಬೇಟೆ ಹಿಡಿಯಲಿಕ್ಕೆ ಏಳುವ ದಿವಸದವರೆಗೂ ನನಗೆ ಕಾದುಕೊಳ್ಳಿರಿ.” ಏಕೆಂದರೆ ಜನಾಂಗಗಳನ್ನು ಕೂಡಿಸುವುದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವುದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ನನ್ನ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವುದಕ್ಕೂ ತೀರ್ಮಾನಿಸಿಕೊಂಡಿದ್ದೇನೆ. ಏಕೆಂದರೆ ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸಲಾಗುವುದು.


ಆಗ ಯೆಹೋವ ದೇವರು ಪ್ರತಿಕ್ರಿಯೆಯನ್ನು ಪ್ರಕಟಿಸಿದರು. ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆ ಸಂರಕ್ಷಿಸಲಾದರು.


ಎಲೈ, ಮನುಷ್ಯನೇ, ದೇವರಿಗೆ ಎದುರಾಗಿ ಮಾತನಾಡಲು ನೀನು ಯಾರು? “ರೂಪಿಸಿರುವುದು ರೂಪಿಸಿದವನಿಗೆ, ‘ಏಕೆ ನನ್ನನ್ನು ಹೀಗೆ ರೂಪಿಸಿದೆ?’ ” ಎಂದು ಪ್ರಶ್ನಿಸಬಹುದೋ?


ಯೆಹೋವ ದೇವರ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು ಬಲವನ್ನು ಧರಿಸಿಕೋ. ಹಿಂದಿನ ಜನಾಂಗಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?


“ಶಾಂತವಾಗಿರಿ, ನಾನೇ ದೇವರಾಗಿದ್ದೇನೆಂದು ತಿಳಿದುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ಉನ್ನತನಾಗಿರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ; ಯೆಹೋವ ದೇವರು ತಮ್ಮ ಪರಲೋಕ ಸಿಂಹಾಸನದಲ್ಲಿ ಇದ್ದಾರೆ. ಅವರು ಭೂಮಿಯಲ್ಲಿ ಪ್ರತಿಯೊಬ್ಬರನ್ನು ಗಮನಿಸುತ್ತಾರೆ; ಅವರ ಕಣ್ಣುಗಳು ಮಾನವರೆಲ್ಲರನ್ನು ಪರಿಶೋಧಿಸುತ್ತವೆ.


ಪರಲೋಕದ ನಿಮ್ಮ ಪರಿಶುದ್ಧ ನಿವಾಸದೊಳಗಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿಮ್ಮ ಜನರಾದ ಇಸ್ರಾಯೇಲರನ್ನೂ, ನೀವು ನಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಪ್ರಕಾರ, ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ಈ ದೇಶವನ್ನೂ ಆಶೀರ್ವದಿಸಿರಿ,” ಎಂದು ಹೇಳಬೇಕು.


ನಿಯಮವು ಏನೇ ಹೇಳುವುದಾದರೂ ಅದು ನಿಯಮಕ್ಕೆ ಒಳಪಟ್ಟಿರುವವರಿಗೇ ಅನ್ವಯವಾಗುವುದೆಂದು ನಾವು ಬಲ್ಲೆವು. ಹೀಗೆ ಎಲ್ಲರ ಬಾಯಿ ಮುಚ್ಚಿಹೋಗುವುದು ಮತ್ತು ಲೋಕವೆಲ್ಲಾ ದೇವರ ತೀರ್ಪಿಗೆ ಒಳಗಾಗಿರುವುದು.


“ಆದ್ದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ, ಅವರಿಗೆ ಹೇಳತಕ್ಕದ್ದೇನೆಂದರೆ, “ ‘ಯೆಹೋವ ದೇವರು ಉನ್ನತದಿಂದ ಗರ್ಜಿಸಿ, ತಮ್ಮ ಪರಿಶುದ್ಧ ನಿವಾಸದೊಳಗಿಂದ ತಮ್ಮ ಶಬ್ದವನ್ನು ಕೊಡುವರು. ತಮ್ಮ ನಿವಾಸದ ಮೇಲೆ ಗಟ್ಟಿಯಾಗಿ ಗರ್ಜಿಸಿ, ದ್ರಾಕ್ಷಿ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವರು.


ಆಕಾಶದಿಂದ ಕೆಳಗೆ ನೋಡಿರಿ, ನಿಮ್ಮ ಪವಿತ್ರವೂ ಮಹಿಮೆಯೂ ಆದ ನಿಮ್ಮ ಸಿಂಹಾಸನದಿಂದ ದೃಷ್ಟಿಸಿ ನೋಡಿರಿ. ನಿಮ್ಮ ಆಸಕ್ತಿಯೂ, ನಿಮ್ಮ ಪರಾಕ್ರಮವೂ, ನಿಮ್ಮ ಹೃದಯದ ಘೋಷವೂ, ನಮ್ಮ ವಿಷಯವಾದ ನಿಮ್ಮ ಕರುಣೆ ಕನಿಕರಗಳೂ ಎಲ್ಲಿ? ಬಿಗಿಹಿಡಿದುಕೊಂಡಿದ್ದೀರೋ?


ಏಕೆಂದರೆ ಉನ್ನತನೂ, ಮಹೋನ್ನತನೂ, ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ: “ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ, ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿಕೊಂಡು, ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ, ಸುಳ್ಳಿನ ಸಂತತಿಯೂ ಅಲ್ಲವೋ?


ಆಗ ಯಾಜಕರೂ ಲೇವಿಯರೂ ಎದ್ದು ಜನರನ್ನು ಆಶೀರ್ವದಿಸಿದರು. ದೇವರು ಅವರ ಪ್ರಾರ್ಥನೆಯನ್ನು ಕೇಳಿದರು. ಅವರ ಪ್ರಾರ್ಥನೆಯು ದೇವರ ಪರಿಶುದ್ಧ ನಿವಾಸ ಸ್ಥಾನವಾದ ಪರಲೋಕಕ್ಕೆ ತಲುಪಿತು.


ದ್ವೀಪಗಳೇ, ನನ್ನ ಮುಂದೆ ಮೌನದಿಂದಿರಿ. ರಾಷ್ಟ್ರಗಳು ತಮ್ಮ ಬಲವನ್ನು ನವೀಕರಿಸಲಿ! ಅವರು ನನ್ನ ಸಮೀಪಕ್ಕೆ ಬಂದು ಮಾತನಾಡಲಿ. ನ್ಯಾಯಸ್ಥಾನಕ್ಕೆ ಸಮೀಪಕ್ಕೆ ಒಟ್ಟಾಗಿ ಬರೋಣ.


ಇದಲ್ಲದೆ ನೀವು, “ಇದು ಯೆಹೋವ ದೇವರು ಹೇಳಿದ ವಾಕ್ಯವು ಅಲ್ಲ ಎಂದು ನಾವು ತಿಳಿದುಕೊಳ್ಳುವುದು ಹೇಗೆ?” ಎಂದು ನೀವು ನಿಮ್ಮ ಹೃದಯದಲ್ಲಿ ಆಲೋಚಿಸಬಹುದು.


ಒಬ್ಬ ಪ್ರವಾದಿಯು ಯೆಹೋವ ದೇವರ ಹೆಸರಿನಲ್ಲಿ ಮುಂತಿಳಿಸಿದ ಮಾತು ಸಂಭವಿಸದೆ ಹೋದರೆ ಅಥವಾ ನಿಜವಾಗದಿದ್ದರೆ, ಅದು ಯೆಹೋವ ದೇವರ ಮಾತು ಅಲ್ಲವೆಂದು ನೀವು ತಿಳಿದುಕೊಳ್ಳಬೇಕು. ಆ ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ, ಆದ್ದರಿಂದ ನೀವು ಅವನಿಗೆ ಭಯಪಡಬಾರದು.


ದೇಶಗಳು ಇನ್ನೊಮ್ಮೆ ಅವರನ್ನು ತೆಗೆದುಕೊಂಡು ಅವನ ಸ್ಥಳಕ್ಕೆ ಅವರನ್ನು ಬರಮಾಡುವರು. ಆಗ ಇಸ್ರಾಯೇಲಿನ ಮನೆತನದವರು ಯೆಹೋವ ದೇವರ ದೇಶದಲ್ಲಿ, ಆ ಜನಾಂಗದವರನ್ನು ಗಂಡು ಹೆಣ್ಣುಗಳನ್ನಾಗಿ ದಾಸದಾಸಿಯರನ್ನಾಗಿ ಇಟ್ಟುಕೊಳ್ಳುವರು. ತಮ್ಮನ್ನು ಸೆರೆಹಿಡಿದವರನ್ನು ಸೆರೆಹಿಡಿಯುವರು. ತಮ್ಮನ್ನು ದಬ್ಬಾಳಿಕೆಗಾರರ ಮೇಲೆ ಅಧಿಕಾರ ನಡೆಸುವರು.


ಆ ದಿನದಲ್ಲಿ ಈಜಿಪ್ಟಿನವರು ಹೆಂಗಸರ ಹಾಗೆ ಇರುವರು. ಸೇನಾಧೀಶ್ವರ ಯೆಹೋವ ದೇವರು ಅದರ ಮೇಲೆ ಎತ್ತಿದ ಕೈಯನ್ನು ಬೀಸುತ್ತಿರುವುದರಿಂದ ಅವರು ಹೆದರಿ ಭಯಪಡುವರು.


ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಜೀವದಾಣೆ,” “ನಿಶ್ಚಯವಾಗಿ ಮೋವಾಬು ಸೊದೋಮಿನ ಅಮ್ಮೋನ್ಯರು ಗೊಮೋರದ ಹಾಗೆ ಆಗುವುದು. ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಳಿಗಳುಳ್ಳಂಥ ನಿತ್ಯವಾಗಿ ಹಾಳಾದ ಸ್ಥಳವಾಗುವರು. ನನ್ನ ಜನರಲ್ಲಿ ಉಳಿದವರು ಅವರನ್ನು ಸುಲಿದುಕೊಳ್ಳುವರು. ನನ್ನ ಜನರಲ್ಲಿ ಮಿಕ್ಕಾದವರು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.”


“ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳೇ ಅದನ್ನು ಪೂರೈಸುವುವು. ಆಗ ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆಂದು ತಿಳಿಯುವಿರಿ.


ದೂರದಲ್ಲಿರುವವರು ಬಂದು ಯೆಹೋವ ದೇವರ ಆಲಯವನ್ನು ಕಟ್ಟುವುದಕ್ಕೆ ಸಹಾಯ ಮಾಡುವರು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆಂದು ನೀವು ತಿಳಿಯುವಿರಿ. ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಜಾಗ್ರತೆಯಾಗಿ ಕಿವಿಗೊಟ್ಟರೆ, ಇದು ನೆರವೇರುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು