Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 2:8 - ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, “ನಿಮ್ಮನ್ನು ಸುಲಿದುಕೊಂಡ ಜನಾಂಗಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ. ಏಕೆಂದರೆ ನಿಮ್ಮನ್ನು ಮುಟ್ಟುವವನು ಯೆಹೋವ ದೇವರ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಿಮ್ಮನ್ನು ತಾಕುವವನು ನನ್ನ ಕಣ್ಣು ಗುಡ್ಡೆಯನ್ನು ತಾಕುವವನಾಗಿದ್ದಾನೆ. ಆದಕಾರಣ ತನ್ನ ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ತಮ್ಮ ಮಹಿಮೆಯನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನು ಸೂರೆಮಾಡಿದ ರಾಷ್ಟ್ರಗಳಿಗೆ ಕೊಡುವ ಎಚ್ಚರಿಕೆ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿಮ್ಮನ್ನು ತಾಕುವವನು ಯೆಹೋವನ ಕಣ್ಣುಗುಡ್ಡನ್ನು ತಾಕುವವನಾಗಿದ್ದಾನೆ. ಆದಕಾರಣ [ತನ್ನ] ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇದು ಸರ್ವಶಕ್ತನಾದ ಯೆಹೋವನ ನುಡಿ. “ನಿಮ್ಮ ವಸ್ತುಗಳನ್ನು ಕದ್ದುಕೊಂಡ ಜನಾಂಗಗಳಿಗೆ ಆತನು ನನ್ನನ್ನು ಕಳುಹಿಸಿದನು. ನಿಮಗೆ ಗೌರವವನ್ನು ತರುವುದಕ್ಕಾಗಿ ಆತನು ನನ್ನನ್ನು ಕಳುಹಿಸಿದನು. ಯಾಕೆಂದರೆ, ನಿಮಗೆ ಹಾನಿ ಮಾಡಿದರೆ ಅದು ದೇವರ ಕಣ್ಣುಗುಡ್ಡೆಗೆ ಹಾನಿ ಮಾಡಿದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 2:8
50 ತಿಳಿವುಗಳ ಹೋಲಿಕೆ  

ನಿಮ್ಮ ಕಣ್ಣುಗುಡ್ಡೆಯ ಹಾಗೆ ನನ್ನನ್ನು ಕಾಪಾಡಿರಿ, ನಿಮ್ಮ ರೆಕ್ಕೆಗಳ ನೆರಳಿನಲ್ಲಿ ನನ್ನನ್ನು ಮರೆಮಾಡಿರಿ.


ದೇವರು ಬರಿದಾದ ಮರುಭೂಮಿಯಲ್ಲಿ ಇಸ್ರಾಯೇಲರನ್ನು ಕಂಡು ನಡೆಸಿದರು. ದೇವರು ಇಸ್ರಾಯೇಲರನ್ನು ರಕ್ಷಿಸಿ, ಉಪದೇಶಿಸಿ, ತಮ್ಮ ಕಣ್ಣುಗುಡ್ಡೆಯಂತೆ ಕಾಪಾಡಿದರು.


ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಸಹಾಯಕ ‘ಪವಿತ್ರಾತ್ಮರು’ ಎಲ್ಲವನ್ನೂ ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.


ನಿಮ್ಮನ್ನು ಸಂಕಟ ಪಡಿಸುವವರಿಗೆ ದೇವರು ಪ್ರತಿಯಾಗಿ ಸಂಕಟವನ್ನೂ ಮತ್ತು


“ಅದಕ್ಕೆ ನಾನು ಉತ್ತರವಾಗಿ ಅವರಿಗೆ, ‘ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ನೀವು ಈ ನನ್ನ ಸಹೋದರರಲ್ಲಿ ಅತ್ಯಲ್ಪನಾದವನೊಬ್ಬನಿಗೆ, ಮಾಡಿದ್ದು ನನಗೇ ಮಾಡಿದಂತಾಯಿತು,’ ಎನ್ನುವೆನು.


ತಂದೆಯು ಮಗನನ್ನು ಲೋಕ ರಕ್ಷಕರನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ನೋಡಿದ್ದೇವೆ ಮತ್ತು ಅದಕ್ಕೆ ನಾವು ಸಾಕ್ಷಿ ಹೇಳುತ್ತೇವೆ.


ನೀವು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ.


“ಇಗೋ, ನಾನು ನನ್ನ ದೂತನನ್ನು ಕಳುಹಿಸುತ್ತೇನೆ. ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು. ನೀವು ಹುಡುಕುವ ಕರ್ತರು ಫಕ್ಕನೆ ತಮ್ಮ ಆಲಯಕ್ಕೆ ಬರುವರು. ನೀವು ಇಷ್ಟಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


“ಮೋವಾಬಿನ ನಿಂದೆಯನ್ನೂ ಅಮ್ಮೋನ್ಯರ ಬೈಗಳವನ್ನೂ ಅವರು ನನ್ನ ಜನರನ್ನೂ ನಿಂದಿಸಿ, ಅವರ ಮೇರೆಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿಕೊಂಡದ್ದನ್ನೂ ನಾನು ಕೇಳಿದ್ದೇನೆ.


ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ, ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು. ಏಕೆಂದರೆ ನೀನು ಮಾನವರ ರಕ್ತ ಸುರಿಸಿದ್ದಿ. ನಾಡುಗಳನ್ನು, ಪಟ್ಟಣಗಳನ್ನು, ಅವುಗಳಲ್ಲಿ ಇರುವುದೆಲ್ಲವನ್ನು ನಾಶಮಾಡಿದ್ದೀ.


ಆಗ ನನ್ನ ಶತ್ರು ಇದನ್ನು ನೋಡುವನು. ಅವನ ಮುಖವನ್ನು ಅವಮಾನದಿಂದ ಮುಚ್ಚಿಕೊಳ್ಳುವನು, “ನಿನ್ನ ಯೆಹೋವ ದೇವರು ಎಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.


ಅವರು ಅಸ್ಸೀರಿಯ ದೇಶವನ್ನು ಖಡ್ಗದಿಂದಲೂ ನಿಮ್ರೋದನ ದೇಶವನ್ನು ಹಿಡಿದ ಖಡ್ಗದಿಂದಲೂ ಆಳುವರು. ಅಸ್ಸೀರಿಯವು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರದೇಶವನ್ನು ಮುತ್ತಿಗೆ ಹಾಕಿ ಪ್ರಾಂತಗಳಲ್ಲಿ ನಡೆಯುವಾಗ ಆತನು ನಮ್ಮನ್ನು ತಪ್ಪಿಸುವನು.


ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ. ಅವರು, “ಯೆರೂಸಲೇಮನ್ನು ಕೆಡಿಸೋಣ. ಚೀಯೋನಿನ ನಾಶನವನ್ನು ಕಣ್ಣಾರೆ ನೋಡೋಣ,” ಎಂದು ಹೇಳುತ್ತಾರೆ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅಮ್ಮೋನಿನ ಮಕ್ಕಳು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ತಮ್ಮ ಮೇರೆಯನ್ನು ವಿಸ್ತಾರ ಮಾಡುವುದಕ್ಕಾಗಿ, ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿಬಿಟ್ಟಿದ್ದಾರೆ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಎದೋಮಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ತನ್ನ ಸಹೋದರನನ್ನು ಖಡ್ಗವನ್ನು ಹಿಂಬಾಲಿಸಿದನು. ಮತ್ತು ದೇಶದ ಸ್ತ್ರೀಯರನ್ನು ಕೊಂದುಹಾಕಿದನು. ಏಕೆಂದರೆ ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು. ಆತನು ರೌದ್ರವನ್ನು ನಿತ್ಯವಾಗಿ ಇಟ್ಟುಕೊಂಡನು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಟೈರ್ ಪಟ್ಟಣದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಸಹೋದರರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೆ ಸೆರೆಯಾಳುಗಳ ಸಂಪೂರ್ಣ ಸಮುದಾಯಗಳನ್ನು ಎದೋಮಿಗೆ ಮಾರಿಬಿಟ್ಟರು.


“ ‘ನೀನು ಇಸ್ರಾಯೇಲರ ಮೇಲೆ ದೀರ್ಘ ದ್ವೇಷವಿಟ್ಟು ಅವರ ಅಪರಾಧದ ಕಾಲದಲ್ಲಿ ಅವರನ್ನು ಖಡ್ಗದ ಬಾಯಿಗೆ ಗುರಿಮಾಡಿದ ಕಾರಣ ಅವರ ಶಿಕ್ಷೆಯು ತಪ್ಪದು.


“ಮನುಷ್ಯಪುತ್ರನೇ, ಟೈರ್, ಯೆರೂಸಲೇಮಿನ ವಿಷಯವಾಗಿ, ‘ಆಹಾ, ಜನರ ದ್ವಾರವಾಗಿದ್ದದ್ದು ಮುರಿದುಹೋಯಿತು, ಅದು ನನ್ನ ಕಡೆಗೆ ತೆರೆದುಕೊಂಡಿದೆ. ಯೆರೂಸಲೇಮು ಹಾಳಾದದ್ದರಿಂದ ನಾನು ವೃದ್ಧಿಗೊಳ್ಳುವೆನು,’


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಫಿಲಿಷ್ಟಿಯರು ಮುಯ್ಯಿಗೆ ಮುಯ್ಯಿ ತೀರಿಸಿ, ಹಗೆಯುಳ್ಳ ಹೃದಯದಿಂದ ಸೇಡು ತೀರಿಸಿಕೊಂಡು ಪೂರ್ವದ ಕ್ರೋಧದಿಂದ ಯೆಹೂದವನ್ನು ಕೆಡಿಸಿದರು.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಏಕೆಂದರೆ ಎದೋಮು ಯೆಹೂದನ ಮನೆತನದವರಿಗೆ ಮುಯ್ಯಿಗೆ ಮುಯ್ಯಿ ತೀರಿಸಿದ್ದರಿಂದ ಅತಿ ಅಪರಾಧಮಾಡಿ ಅವರಲ್ಲಿ ಸೇಡು ತೀರಿಸಿಕೊಂಡಿತು.


ಯೆಹೋವ ದೇವರು ಬಾಬಿಲೋನಿಯರನ್ನೂ, ಅರಾಮ್ಯರನ್ನೂ, ಮೋವಾಬ್ಯರನ್ನೂ, ಅಮ್ಮೋನಿಯರನ್ನೂ ಅವನ ಮೇಲೆ ಕಳುಹಿಸಿದನು. ಯೆಹೋವ ದೇವರು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ, ಯೆಹೂದವನ್ನು ನಾಶಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು.


ಅದಕ್ಕೆ ದೇವರು ಕನಸಿನಲ್ಲಿ ಅವನಿಗೆ, “ಹೌದು, ನೀನು ಇದನ್ನು ಯಥಾರ್ಥವಾದ ಹೃದಯದಿಂದಲೇ ಮಾಡಿದ್ದೀಯೆ ಎಂದು ನನಗೂ ತಿಳಿದಿದೆ. ಆದ್ದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು, ಆಕೆಯನ್ನು ಮುಟ್ಟಗೊಡಿಸಲಿಲ್ಲ.


“ಆ ದಿವಸದಲ್ಲಿ ಅನೇಕ ಜನಾಂಗಗಳು ಯೆಹೋವ ದೇವರನ್ನು ಅಂಟಿಕೊಂಡು ನನ್ನ ಜನರಾಗುವರು, ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆಂದು ತಿಳಿದುಕೊಳ್ಳುವೆ.


ನಾನು ನನ್ನ ಕೈಯನ್ನು ಅವರ ಮೇಲೆ ಎತ್ತುವೆನು. ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ಕಳುಹಿಸಿದರೆಂದು ನೀವು ತಿಳಿಯುವಿರಿ.


“ಆಗ ನಾನು ಅವರಿಗೆ ಉತ್ತರವಾಗಿ, ‘ನಾನು ನಿಮಗೆ ಸತ್ಯವಾಗಿ ಹೇಳುವುದೇನೆಂದರೆ, ನೀವು ಇವರಲ್ಲಿ ಅತ್ಯಲ್ಪನಾದ ಒಬ್ಬನಿಗೆ ಏನೇನು ಮಾಡಲಿಲ್ಲವೋ ಅದನ್ನು ನನಗೂ ಮಾಡಲಿಲ್ಲ,’ ಎಂದು ಹೇಳುವೆನು.


ಅವನು ನೆಲದ ಮೇಲೆ ಬೀಳಲು, “ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿಸಿಕೊಂಡನು.


ಲೆಬನೋನಿನ ಮೇಲೆ ಮಾಡಿದ ಬಲಾತ್ಕಾರವು ನಿನ್ನನ್ನು ಚಕಿತಗೊಳಿಸುವುದು. ಮೃಗಗಳ ನಾಶವು ನಿನ್ನನ್ನು ಹೆದರಿಸುವುದು. ಏಕೆಂದರೆ ನೀನು ಮನುಷ್ಯರ ರಕ್ತ ಸುರಿಸಿದ್ದೀ; ನೀನು ನಾಡುಗಳನ್ನು, ಪಟ್ಟಣಗಳನ್ನು, ಅವುಗಳಲ್ಲಿರುವ ಎಲ್ಲವುಗಳನ್ನು ನಾಶಮಾಡಿದ್ದೀ.


ನನ್ನ ಆಜ್ಞೆಗಳನ್ನು ಅನುಸರಿಸಿ ಬಾಳು; ನಿನ್ನ ಕಣ್ಣುಗುಡ್ಡೆಯಂತೆ ನನ್ನ ಕಟ್ಟಳೆಗಳನ್ನು ಕಾಪಾಡು.


ಯೆಹೋವ ದೇವರ ಸ್ವಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸೊತ್ತಿಗೆ ಕೈಹಾಕುವ ಕೆಟ್ಟ ನೆರೆಯವರಿಗೆ ಕೊಟ್ಟ ಎಚ್ಚರಿಕೆ: “ಈ ನಾಡಿನವರನ್ನು ಅವರವರ ನಾಡಿನಿಂದಲೇ ಸಸಿಯಂತೆ ಕಿತ್ತುಬಿಡುವೆನು. ಯೆಹೂದ ವಂಶವನ್ನು ಅವರ ಮಧ್ಯೆಯಿಂದ ಕಿತ್ತುಬಿಡುವೆನು.


ಅವನ ದೇಶಕ್ಕೆ ನಿಯಮಿತ ಕಾಲ ಬರುವ ತನಕ, ಎಲ್ಲ ರಾಷ್ಟ್ರಗಳು ಅವನಿಗೂ, ಅವನ ಮಗನಿಗೂ, ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ, ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು,” ಎಂಬುದು.


ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವವುಳ್ಳವರ ಲೋಕದಲ್ಲಿ ನೆಲೆಗೊಳಿಸದೆ ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರೊಂದಿಗೆ ವಾಸಿಸುವಂತೆ ಸೇರಿಸುವೆನು.


“ಆದ್ದರಿಂದ ಮನುಷ್ಯಪುತ್ರನೇ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಗೋಗಿಗೆ ಪ್ರವಾದಿಸಿ ಹೇಳು, ನನ್ನ ಜನರಾದ ಇಸ್ರಾಯೇಲರು ಸುಖವಾಗಿ ವಾಸಿಸುವರೋ ಆ ದಿನದಲ್ಲಿ ಅದು ನಿನಗೆ ತಿಳಿಯುವುದಿಲ್ಲವೋ


“ಏಕೆಂದರೆ ನಿನ್ನ ಹಾಳಾದ ಸ್ಥಳಗಳೂ ನಿನ್ನ ಏಕಾಂತ ಸ್ಥಳಗಳೂ ಕೆಡವಿಬಿದ್ದ ನಿನ್ನ ದೇಶವೂ ಈಗ ನಿವಾಸಿಗಳಿಗೆ ಇಕ್ಕಟ್ಟಾಗುವುವು. ನಿನ್ನನ್ನು ನುಂಗಿದವರು ದೂರವಾಗುವರು.


ನಾನು ನಿಮ್ಮ ಮೇಲೆ ಮನುಷ್ಯರನ್ನೂ ಮೃಗಗಳನ್ನೂ ವೃದ್ಧಿಮಾಡುವೆನು. ಅವು ಹೆಚ್ಚಾಗಿ ನಿಮಗೆ ಫಲವನ್ನು ತರುವುವು. ನಾನು ನಿಮ್ಮನ್ನು ಮೊದಲಿನ ಸ್ಥಿತಿಗಿಂತ ಉತ್ತಮ ಸ್ಥಿತಿಗೆ ತರುವೆನು; ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.


ನೀವು ಹೇಳುವಿರಿ, “ಗೋಡೆಯಿಲ್ಲದ ಹಳ್ಳಿಗಳಿಲ್ಲದ ದೇಶದ ಮೇಲೆ ನಾನು ಆಕ್ರಮಣ ಮಾಡುತ್ತೇನೆ. ಪೌಳಿಗೋಡೆಗಳಿಲ್ಲದೆ ಇಲ್ಲವೆ ಬಾಗಿಲುಗಳು ಅಗುಳಿಗಳು ಇಲ್ಲದೆ ಅವರು ಶಾಂತಿಯುತ ಮತ್ತು ನಿರ್ಭಯವಾಗಿ ವಾಸಿಸುವವರ ಮೇಲೆ ದಾಳಿಮಾಡುತ್ತೇನೆ.


ಪಟ್ಟಣದ ಬೀದಿಗಳು ಆಡುವ ಬಾಲಕ ಬಾಲಕಿಯರಿಂದ ತುಂಬಿರುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು