Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 2:9 - ಕನ್ನಡ ಸಮಕಾಲಿಕ ಅನುವಾದ

9 ನಾನು ನನ್ನ ಕೈಯನ್ನು ಅವರ ಮೇಲೆ ಎತ್ತುವೆನು. ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ಕಳುಹಿಸಿದರೆಂದು ನೀವು ತಿಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಆಹಾ, ನಾನು ಇವರ ಮೇಲೆ ಕೈಬೀಸುವೆನು; ಇವರು ತಮಗೆ ಅಡಿಯಾಳಾದವರಿಗೆ ಸೂರೆಯಾಗುವರು” ಎಂದು ಹೇಳುತ್ತಾನೆ. ಆಗ ಸೇನಾಧೀಶ್ವರ ಯೆಹೋವನು ನನ್ನನ್ನು ಕಳುಹಿಸಿದ್ದಾನೆಂಬುದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ‘ನಿಮ್ಮನ್ನು ಮುಟ್ಟುವವರು ನನ್ನ ಕಣ್ಮಣಿಯನ್ನೇ ಮುಟ್ಟಿದಂತೆ! ಇಗೋ, ನಾನು ಅವರ ಮೇಲೆ ಕೈಯೆತ್ತುವೆನು. ಅವರು ತಮ್ಮ ದಾಸರ ಕೈಯಿಂದಲೇ ಸೂರೆಯಾಗುವರು. ನನ್ನನ್ನು ಕಳುಹಿಸಿದವರು ಸೇನಾಧೀಶ್ವರ ಸರ್ವೇಶ್ವರ ಎಂಬುದು ಆಗ ನಿಮಗೆ ಗೊತ್ತಾಗುವುದು’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಹಾ, ನಾನು ಇವರ ಮೇಲೆ ಕೈಬೀಸುವೆನು; ಇವರು ತಮಗೆ ಅಡಿಯಾಳಾದವರಿಗೆ ಸೂರೆಯಾಗುವರು ಎಂದು ಹೇಳುತ್ತಾನೆ; ಆಗ ಸೇನಾಧೀಶ್ವರ ಯೆಹೋವನು ನನ್ನನ್ನು ಕಳುಹಿಸಿದ್ದಾನೆಂಬದು ನಿಮಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬಾಬಿಲೋನಿನ ಜನರು ನನ್ನ ಜನರನ್ನು ತೆಗೆದುಕೊಂಡು ಹೋಗಿ ತಮ್ಮ ಗುಲಾಮರನ್ನಾಗಿ ಮಾಡಿದರು. ಆದರೆ ನಾನು ಅವರನ್ನು ಹೊಡೆಯುವೆನು. ಅವರನ್ನು ನನ್ನ ಜನರ ಗುಲಾಮರನ್ನಾಗಿ ಮಾಡುವೆನು.” ಆಗ ಯೆಹೋವ ದೇವರು ನನ್ನನ್ನು ಕಳುಹಿಸಿದನೆಂಬುದು ನಿಮಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 2:9
30 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಈಜಿಪ್ಟಿನವರು ಹೆಂಗಸರ ಹಾಗೆ ಇರುವರು. ಸೇನಾಧೀಶ್ವರ ಯೆಹೋವ ದೇವರು ಅದರ ಮೇಲೆ ಎತ್ತಿದ ಕೈಯನ್ನು ಬೀಸುತ್ತಿರುವುದರಿಂದ ಅವರು ಹೆದರಿ ಭಯಪಡುವರು.


ದೂರದಲ್ಲಿರುವವರು ಬಂದು ಯೆಹೋವ ದೇವರ ಆಲಯವನ್ನು ಕಟ್ಟುವುದಕ್ಕೆ ಸಹಾಯ ಮಾಡುವರು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆಂದು ನೀವು ತಿಳಿಯುವಿರಿ. ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಜಾಗ್ರತೆಯಾಗಿ ಕಿವಿಗೊಟ್ಟರೆ, ಇದು ನೆರವೇರುವುದು.”


“ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳೇ ಅದನ್ನು ಪೂರೈಸುವುವು. ಆಗ ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆಂದು ತಿಳಿಯುವಿರಿ.


ಅದಕ್ಕಾಗಿ ಅವರು ಬಯಲಿನಿಂದ ಮರಗಳನ್ನು ತೆಗೆದುಕೊಳ್ಳುವುದಿಲ್ಲ ಅಥವಾ ಅರಣ್ಯಗಳಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವುದೂ ಇಲ್ಲ, ಅವರು ಆಯುಧಗಳನ್ನು ಬೆಂಕಿಗೆ ಸೌದೆಯಾಗಿ ಉಪಯೋಗಿಸುವರು. ಅವರು ಸೂರೆಯಾದವುಗಳನ್ನು ಸೂರೆ ಮಾಡುವರು ಮತ್ತು ಕೊಳ್ಳೆ ಹೊಡೆದವರನ್ನು ತಾವು ಕೊಳ್ಳೆಹೊಡೆಯುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ದೇಶಗಳು ಇನ್ನೊಮ್ಮೆ ಅವರನ್ನು ತೆಗೆದುಕೊಂಡು ಅವನ ಸ್ಥಳಕ್ಕೆ ಅವರನ್ನು ಬರಮಾಡುವರು. ಆಗ ಇಸ್ರಾಯೇಲಿನ ಮನೆತನದವರು ಯೆಹೋವ ದೇವರ ದೇಶದಲ್ಲಿ, ಆ ಜನಾಂಗದವರನ್ನು ಗಂಡು ಹೆಣ್ಣುಗಳನ್ನಾಗಿ ದಾಸದಾಸಿಯರನ್ನಾಗಿ ಇಟ್ಟುಕೊಳ್ಳುವರು. ತಮ್ಮನ್ನು ಸೆರೆಹಿಡಿದವರನ್ನು ಸೆರೆಹಿಡಿಯುವರು. ತಮ್ಮನ್ನು ದಬ್ಬಾಳಿಕೆಗಾರರ ಮೇಲೆ ಅಧಿಕಾರ ನಡೆಸುವರು.


ಯೆಹೋವ ದೇವರು ಈಜಿಪ್ಟಿನ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ತೆಗೆದುಹಾಕುವರು, ಅವರು ತಮ್ಮ ಉಷ್ಣಗಾಳಿಯಿಂದ ಯೂಫ್ರೇಟೀಸ್ ನದಿಯ ಮೇಲೆ ಕೈಯನ್ನು ಝಾಡಿಸಿ, ಅದನ್ನು ಏಳು ಹೊಳೆಗಳಾಗಿ ಒಡೆದು, ಮನುಷ್ಯರ ಕೆರಗಳು ನೆನೆಯದಂತೆ ದಾಟಿಸುವರು.


ಆದರೆ ಅವರ ಸಮಯ ಬಂದಾಗ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆಂದು ನೀವು ಜ್ಞಾಪಕ ಮಾಡಿಕೊಳ್ಳುವಂತೆ ಮುಂಚಿತವಾಗಿಯೇ ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡ ಇದ್ದುದರಿಂದ ಇವುಗಳನ್ನು ಪ್ರಾರಂಭದಲ್ಲೇ ನಿಮಗೆ ಹೇಳಲಿಲ್ಲ.


“ಅದು ಆಗುವುದು, ‘ನಾನೇ ಆತನು’ ಎಂದು ನೀವು ನಂಬುವಂತೆ ಅದು ಸಂಭವಿಸುವುದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತಿದ್ದೇನೆ.


ಏಕೆಂದರೆ ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, “ನಿಮ್ಮನ್ನು ಸುಲಿದುಕೊಂಡ ಜನಾಂಗಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ. ಏಕೆಂದರೆ ನಿಮ್ಮನ್ನು ಮುಟ್ಟುವವನು ಯೆಹೋವ ದೇವರ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.


ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಜೀವದಾಣೆ,” “ನಿಶ್ಚಯವಾಗಿ ಮೋವಾಬು ಸೊದೋಮಿನ ಅಮ್ಮೋನ್ಯರು ಗೊಮೋರದ ಹಾಗೆ ಆಗುವುದು. ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಳಿಗಳುಳ್ಳಂಥ ನಿತ್ಯವಾಗಿ ಹಾಳಾದ ಸ್ಥಳವಾಗುವರು. ನನ್ನ ಜನರಲ್ಲಿ ಉಳಿದವರು ಅವರನ್ನು ಸುಲಿದುಕೊಳ್ಳುವರು. ನನ್ನ ಜನರಲ್ಲಿ ಮಿಕ್ಕಾದವರು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.”


ಲೆಬನೋನಿನ ಮೇಲೆ ಮಾಡಿದ ಬಲಾತ್ಕಾರವು ನಿನ್ನನ್ನು ಚಕಿತಗೊಳಿಸುವುದು. ಮೃಗಗಳ ನಾಶವು ನಿನ್ನನ್ನು ಹೆದರಿಸುವುದು. ಏಕೆಂದರೆ ನೀನು ಮನುಷ್ಯರ ರಕ್ತ ಸುರಿಸಿದ್ದೀ; ನೀನು ನಾಡುಗಳನ್ನು, ಪಟ್ಟಣಗಳನ್ನು, ಅವುಗಳಲ್ಲಿರುವ ಎಲ್ಲವುಗಳನ್ನು ನಾಶಮಾಡಿದ್ದೀ.


ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ, ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು. ಏಕೆಂದರೆ ನೀನು ಮಾನವರ ರಕ್ತ ಸುರಿಸಿದ್ದಿ. ನಾಡುಗಳನ್ನು, ಪಟ್ಟಣಗಳನ್ನು, ಅವುಗಳಲ್ಲಿ ಇರುವುದೆಲ್ಲವನ್ನು ನಾಶಮಾಡಿದ್ದೀ.


ಸಮಾಧಾನವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ, ಆ ಪ್ರವಾದಿಯ ವಾಕ್ಯವು ಉಂಟಾಗುವಾಗ, ಅವನು ಯೆಹೋವ ದೇವರಿಂದ ನಿಜವಾಗಿ ಕಳುಹಿಸಲಾದ ಪ್ರವಾದಿ, ಎಂದು ತಿಳಿಯತಕ್ಕದ್ದು,” ಎಂದನು.


ಅವನ ದೇಶಕ್ಕೆ ನಿಯಮಿತ ಕಾಲ ಬರುವ ತನಕ, ಎಲ್ಲ ರಾಷ್ಟ್ರಗಳು ಅವನಿಗೂ, ಅವನ ಮಗನಿಗೂ, ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ, ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು,” ಎಂಬುದು.


ನಿನ್ನ ಹಗ್ಗಗಳು ಸಡಲಿ, ಸ್ತಂಭದ ಪಾದವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು. ಪಠವನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವುದಕ್ಕೆ ಆಸ್ಪದವಾಯಿತು. ಕುಂಟರೂ ಸುಲಿಗೆ ಮಾಡಿದರು.


ಹಾಳು ಮಾಡುತ್ತಿರುವವನೇ, ನಿನಗೆ ಕಷ್ಟ! ನಿನ್ನನ್ನು ಯಾರೂ ಸೂರೆಮಾಡದಿದ್ದರೂ ನೀನು ಸೂರೆಮಾಡುತ್ತಿರುವೆ; ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆ ಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳು ಮಾಡುತ್ತಿರುವ ನೀನು, ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.


ಶತ್ರುಗಳು ಬಂದು ಶ್ರೇಷ್ಠರ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ.


ಆ ದಿನದಲ್ಲಿ ಅವರು ನೋಬಿನಲ್ಲಿ ಇಳಿದುಕೊಳ್ಳುವರು. ಚೀಯೋನ್ ನಗರಿಯ ಪರ್ವತದ ಕಡೆಗೆ, ಯೆರೂಸಲೇಮಿನ ಬೆಟ್ಟದ ಕಡೆಗೆ ಕೈ ಬೀಸುತ್ತಾರೆ.


“ನನ್ನ ಸಮೀಪಕ್ಕೆ ಬಂದು ಇದನ್ನು ಕೇಳಿರಿ. “ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಭೂಮಿಯು ಉಂಟಾದಂದಿನಿಂದ ಅಲ್ಲಿ ನಾನು ಇದ್ದೇನೆ.” ಈಗ ಸಾರ್ವಭೌಮ ಯೆಹೋವ ದೇವರು ತಮ್ಮ ಪವಿತ್ರಾತ್ಮರ ಸಮೇತ ನನ್ನನ್ನು ಕಳುಹಿಸಿದ್ದಾರೆ.


“ಆ ದಿವಸದಲ್ಲಿ ಅನೇಕ ಜನಾಂಗಗಳು ಯೆಹೋವ ದೇವರನ್ನು ಅಂಟಿಕೊಂಡು ನನ್ನ ಜನರಾಗುವರು, ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆಂದು ತಿಳಿದುಕೊಳ್ಳುವೆ.


ಆಗ ಯೆಹೋವ ದೇವರು ಚೀಯೋನ್ ಪರ್ವತದ ಪ್ರತಿಯೊಂದು ನಿವಾಸದ ಮೇಲೂ, ಅದರ ಸಭೆಗಳ ಮೇಲೂ, ಹಗಲಿನಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಿನಲ್ಲಿ ಪ್ರಜ್ವಲಿಸುವ ಅಗ್ನಿಪ್ರಕಾಶವನ್ನು ಉಂಟುಮಾಡುವರು. ಏಕೆಂದರೆ ದೇವರ ಮಹಿಮೆ ಎಲ್ಲದರ ಮೇಲೆ ಚಪ್ಪರದಂತೆಯೂ ಆವರಿಸುವುದು.


ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ. ಏಕೆಂದರೆ, ಇಸ್ರಾಯೇಲಿನ ಪರಿಶುದ್ಧರು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವರಾಗಿದ್ದಾರೆ.”


ಆ ದಿವಸದಲ್ಲಿ ಯೆಹೂದ ದೇಶದಲ್ಲಿ ಈ ಹಾಡನ್ನು ಹಾಡುವರು: ನಮಗೆ ಬಲವಾದ ಪಟ್ಟಣವಿದೆ, ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ದೇವರು ಮಾಡುವರು.


ಅಲ್ಲಿ ಯೆಹೋವ ದೇವರು ನಮ್ಮ ಬಲಶಾಲಿಯಾಗಿರುತ್ತಾರೆ. ನದಿಸರೋವರಗಳಂತೆ ನಮ್ಮನ್ನು ಸುತ್ತುವರಿಯುವರು. ಹುಟ್ಟುಗೋಲಿನ ದೋಣಿಯಾಗಲಿ, ದೊಡ್ಡದಾದ ಹಡಗಾಗಲಿ ಅದನ್ನು ದಾಟುವುದಿಲ್ಲ.


ಬಲಾತ್ಕಾರವೂ, ನಿನ್ನ ದೇಶದೊಳಗೆ ಹಾಳಾದದ್ದೂ, ನಾಶವೂ, ನಿನ್ನ ಮೇರೆಗಳಲ್ಲಿ ಕೇಳಿಬರುವುದಿಲ್ಲ. ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ, ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿಡುವೆ.


ಇನ್ನು ಮೇಲೆ ಸೂರ್ಯನು ನಿನಗೆ ಹಗಲಿನಲ್ಲಿ ಬೆಳಕಾಗಿರುವುದಿಲ್ಲ. ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವುದಿಲ್ಲ. ಆದರೆ ಯೆಹೋವ ದೇವರು ನಿನಗೆ ನಿತ್ಯವಾದ ಬೆಳಕಾಗಿರುವರು. ನಿನ್ನ ದೇವರು ನಿನ್ನ ಬೆಳಗುವ ತೇಜಸ್ಸಾಗಿರುವರು.


ದೂರದೇಶದಿಂದ ನನ್ನ ಜನರು ಕೂಗುವ ಮೊರೆಯಿದು: “ಯೆಹೋವ ದೇವರು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ?” ಎಂಬುದೇ ಆದರೂ ಅವರು ತಮ್ಮ ವಿಗ್ರಹಗಳಿಂದಲೂ, ವಿಚಿತ್ರವಾದ ವ್ಯರ್ಥತ್ವಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಏಕೆ?


ನಾನೇ ಇಸ್ರಾಯೇಲಿನ ಮಧ್ಯೆ ನೆಲೆಯಾಗಿ ಇರುವವನು. ನಾನೇ ನಿಮ್ಮ ಯೆಹೋವ ದೇವರು, ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರು ಎಂದಿಗೂ ನಾಚಿಕೆಪಡರು.


ಯೆಹೋವ ದೇವರು ನಿನ್ನ ಶಿಕ್ಷೆಗಳನ್ನು ದೂರಮಾಡಿ ನಿನ್ನ ಶತ್ರುವನ್ನು ತೆಗೆದುಹಾಕಿದ್ದಾರೆ. ಇಸ್ರಾಯೇಲಿನ ಅರಸನಾದ ಯೆಹೋವ ದೇವರು ನಿನ್ನ ಮಧ್ಯದಲ್ಲಿ ಇದ್ದಾರೆ. ಇನ್ನು ಮೇಲೆ ನಿನಗೆ ಯಾವ ಕೇಡಿನ ಭಯವಿರುವುದಿಲ್ಲ.


ಸೇನಾಧೀಶ್ವರ ಯೆಹೋವ ದೇವರು ಅವರನ್ನು ಕಾಪಾಡುವರು. ಅವರು ನಾಶಮಾಡಿ, ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿಕೊಳ್ಳುವರು. ಕುಡಿದು, ದ್ರಾಕ್ಷಾರಸದಿಂದಾದ ಹಾಗೆ ತೂಗಾಡುವರು. ಅವರು ಬಲಿಪೀಠದ ಮೂಲೆಗಳಿಗೆ ಚಿಮುಕಿಸಲು ಬಳಸುವ ಪಾತ್ರೆಯ ಹಾಗೆಯೂ ತುಂಬಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು