Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 4:7 - ಕನ್ನಡ ಸಮಕಾಲಿಕ ಅನುವಾದ

7 “ಪರಾಕ್ರಮದ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬಯಲಾಗುವೆ. ಅವನು ಕಲಶದ ಕಲ್ಲನ್ನು ಸ್ಥಾಪಿಸಿ, ‘ದೇವರು ಇದನ್ನು ಆಶೀರ್ವದಿಸಲಿ! ದೇವರು ಇದನ್ನು ಆಶೀರ್ವದಿಸಲಿ!’ ಎಂದು ಘೋಷಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೊಡ್ಡ ಬೆಟ್ಟವೇ, “ನೀನು ಯಾರು? ಜೆರುಬ್ಬಾಬೆಲನ ಮುಂದೆ ನೆಲಸಮವಾಗುವಿ; ಅವನು ಕಲಶದ ಕಲ್ಲನ್ನು ಕೋಲಾಹಲದೊಡನೆ ಮೆರವಣಿಗೆ ಮಾಡುವನು; ಇದರ ಮೇಲೆ ದೇವರ ದಯೆಯಿರಲಿ” ಎಂಬ ಜನಘೋಷವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಡ್ಡಿ ಅಡಚಣೆಗಳು ಬೆಟ್ಟದಂತಿದ್ದರೂ ನೀನು ದೇವಾಲಯವನ್ನು ಕಟ್ಟುವೆ. ಅಂತ್ಯದಲ್ಲಿ ಕಲಶವನ್ನು ಸ್ಥಾಪಿಸುವಾಗ ಜನರು ‘ಎಷ್ಟು ರಮ್ಯ! ಎಷ್ಟು ಸುಂದರ!’ ಎಂದು ಉದ್ಗರಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಎಂಬೀ ಮಾತನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ. ದೊಡ್ಡ ಬೆಟ್ಟವೇ, ನೀನು ಯಾರು? ಜೆರುಬ್ಬಾಬೆಲನ ಮುಂದೆ ನೆಲಸಮವಾಗುವಿ; ಅವನು ಕಲಶದ ಕಲ್ಲನ್ನು ಕೋಲಾಹಲದೊಡನೆ ಮೆರವಣಿಗೆಮಾಡುವನು; ಇದರ ಮೇಲೆ ದೇವರ ದಯೆಯಿರಲಿ, ದೇವರ ದಯೆಯಿರಲಿ ಎಂಬ ಜನಘೋಷವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಉನ್ನತವಾದ ಶಿಖರವು ಜೆರುಬ್ಬಾಬೆಲನಿಗೆ ಸಮತಟ್ಟಾದ ನೆಲದಂತಿರುವುದು. ಅವನು ಆಲಯವನ್ನು ಕಟ್ಟುವನು. ಅದರ ಅತಿ ವಿಶೇಷವಾದ ಕಲ್ಲನ್ನಿಟ್ಟ ಬಳಿಕ ಜನರೆಲ್ಲರೂ, ‘ಬಹಳ ಚಂದ, ಬಹಳ ಚಂದ’ ಎಂದು ಆರ್ಭಟಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 4:7
38 ತಿಳಿವುಗಳ ಹೋಲಿಕೆ  

“ಲೋಕವನ್ನೆಲ್ಲಾ ನಾಶಮಾಡುವ ನಾಶಕ ಪರ್ವತವೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ” ಎಂದು ಯೆಹೋವ ದೇವರು ಹೇಳುತ್ತಾರೆ. “ನಿನ್ನ ಮೇಲೆ ನನ್ನ ಕೈಯನ್ನು ಚಾಚಿ, ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ, ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ.


“ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳೇ ಅದನ್ನು ಪೂರೈಸುವುವು. ಆಗ ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆಂದು ತಿಳಿಯುವಿರಿ.


ಅಂತ್ಯಕಾಲದಲ್ಲಿ, ಯೆಹೋವ ದೇವರ ಮಂದಿರದ ಪರ್ವತವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು, ಆಗ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು.


ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.


ಬೆಟ್ಟಗಳು ಟಗರುಗಳಂತೆ ಓಡಿತು, ಗುಡ್ಡಗಳು ಕುರಿಮರಿಗಳಂತೆಯೂ ಓಡಾಡಿದವು.


ಈಗ ನಂಬುವವರಾದ ನಿಮಗೆ ಈ ಕಲ್ಲು ಅಮೂಲ್ಯವಾದುದು. ನಂಬದವರಿಗಾದರೋ, “ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು,”


ಪವಿತ್ರ ವೇದದಲ್ಲಿ, “ ‘ಮನೆ ಕಟ್ಟುವವರಾದ ನೀವು ತಿರಸ್ಕರಿಸಿದ ಕಲ್ಲು ಮುಖ್ಯವಾದ ಮೂಲೆಗಲ್ಲಾಯಿತು,’ ಎಂದು ಬರೆದಿರುವುದು ಈ ಯೇಸುವಿನ ಬಗ್ಗೆಯೇ.


ಇಗೋ, ನಿನ್ನನ್ನು ಹದವಾದ, ಹೊಸ ಮೊನೆಹಲ್ಲಿನ ಹಂತೀಕುಂಟೆಯನ್ನಾಗಿ ಮಾಡುವೆನು. ನೀನು ಬೆಟ್ಟಗಳನ್ನು ಹೊಕ್ಕು, ಪುಡಿಪುಡಿಮಾಡಿ, ಗುಡ್ಡಗಳನ್ನು ಹೊಟ್ಟಿನಂತೆ ಮಾಡುವೆ.


ಬೆಟ್ಟಗಳೇ, ಟಗರುಗಳ ಹಾಗೆಯೂ; ಚಿಕ್ಕಗುಡ್ಡಗಳೇ, ನೀವು ಕುರಿಮರಿಗಳ ಹಾಗೆಯೂ ಹಾರಾಡುವುದೇಕೆ?


ಆ ಆಯ್ಕೆಯು ಕ್ರಿಯೆಗಳ ಆಧಾರದಿಂದಲ್ಲ, ಕೃಪೆಯಿಂದಲೇ ಆಗಿರುತ್ತದೆ. ಕ್ರಿಯೆಗಳಿಂದ ಅದು ಆಗಿದ್ದರೆ ಇನ್ನೆಂದಿಗೂ ಕೃಪೆಯಾಗಲಾರದು.


ಬೆಂಕಿಯ ಮುಂದೆ ಮೇಣದ ಹಾಗೆಯೂ ಇಳಿಜಾರಿನ ಸ್ಥಳದಲ್ಲಿ ರಭಸವಾಗಿ ಹರಿಯುವ ನೀರಿನ ಹಾಗೆಯೂ ಬೆಟ್ಟಗಳು ಆತನ ಕೆಳಗೆ ಕರಗುವುವು; ತಗ್ಗುಗಳು ಸೀಳುವುವು.


ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪರೀಕ್ಷಿತವಾಗಿಯೂ, ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ. ಭರವಸೆ ಇಡುವವನು ಆತುರಪಡನು.


ಆಗ ಪ್ರತಿಯೊಂದು ದ್ವೀಪಗಳು ಮರೆಯಾಗಿ ಹೋದವು, ಬೆಟ್ಟಗಳು ಕಾಣದಂತಾದವು.


ಕ್ರಿಸ್ತ ಯೇಸು ಎಂಬ ಮುಖ್ಯ ಮೂಲೆಗಲ್ಲಿನೊಂದಿಗೆ ಅಪೊಸ್ತಲರು ಹಾಗೂ ಪ್ರವಾದಿಗಳೆಂಬ ಅಸ್ತಿವಾರದ ಮೇಲೆ ನೀವು ಕಟ್ಟಲಾಗಿದ್ದೀರಿ.


ಆಗ ಯೇಸು ಅವರನ್ನು ದಿಟ್ಟಿಸಿ ನೋಡಿ, “ಹಾಗಾದರೆ, “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು,’ ಎಂದು ಪವಿತ್ರ ವೇದದಲ್ಲಿ ಬರೆದಿರುವುದರ ಅರ್ಥ ಏನು?


ಪ್ರತಿಯೊಂದು ಹಳ್ಳಕೊಳ್ಳಗಳೂ ಭರ್ತಿಯಾಗಬೇಕು, ಎಲ್ಲಾ ಬೆಟ್ಟಗುಡ್ಡಗಳು ನೆಲಸಮವಾಗಬೇಕು; ಡೊಂಕಾದ ರಸ್ತೆಗಳು ನೆಟ್ಟಗಾಗಬೇಕು, ಮತ್ತು ಕೊರಕಲಾದ ದಾರಿಗಳು ಸರಾಗವಾಗಬೇಕು;


ಯೇಸು ಅವರಿಗೆ, “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು. ಇದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾಗಿ ತೋರುತ್ತದೆ,’ ಎಂಬುದನ್ನು ನೀವು ಪವಿತ್ರ ವೇದದಲ್ಲಿ ಎಂದೂ ಓದಲಿಲ್ಲವೇ?


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.


ಈ ಪವಿತ್ರ ವಾಕ್ಯವನ್ನು ನೀವು ಓದಲಿಲ್ಲವೋ: “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.


ಯೇಸು ಉತ್ತರವಾಗಿ ಅವರಿಗೆ, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ಸಂದೇಹ ಪಡದೆ ನಂಬಿದರೆ, ನಾನು ಈ ಅಂಜೂರದ ಮರಕ್ಕೆ ಮಾಡಿದಂತೆಯೇ ನೀವೂ ಮಾಡುವಿರಿ. ಇದಲ್ಲದೆ ನೀವು ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೂ ಅದು ಹಾಗೆಯೇ ಆಗುವುದು.


ಅವರು ನಿಂತುಕೊಂಡು ಭೂಮಿಯನ್ನು ನಡುಗಿಸಿದರು. ಅವರು ನೋಡಿ ಜನಾಂಗಗಳನ್ನು ನಡುಗುವಂತೆ ಮಾಡಿದರು. ಪುರಾತನ ಪರ್ವತಗಳು ಸೀಳಿಹೋದವು. ಹಳೆಯ ಕಾಲದ ಗುಡ್ಡಗಳು ಬಿದ್ದು ಹೋದವು. ಅವರ ಮಾರ್ಗಗಳು ನಿತ್ಯವಾದವುಗಳೇ.


ಕಟ್ಟುವವರು ಯೆಹೋವ ದೇವರ ಮಂದಿರಕ್ಕೆ ಅಸ್ತಿವಾರ ಹಾಕಿದಾಗ ಇಸ್ರಾಯೇಲಿನ ಅರಸನಾದ ದಾವೀದನ ಕಟ್ಟಳೆಯ ಪ್ರಕಾರ ಯೆಹೋವ ದೇವರನ್ನು ಸ್ತುತಿಸುವುದಕ್ಕೆ ವಸ್ತ್ರಗಳನ್ನು ಧರಿಸಿಕೊಂಡವರಾಗಿ ತುತೂರಿಗಳನ್ನೂದುವ ಯಾಜಕರನ್ನೂ, ತಾಳಗಳನ್ನು ಬಡಿಯುವ ಆಸಾಫನ ಮಕ್ಕಳಾದ ಲೇವಿಯರನ್ನೂ ಸಿದ್ಧಪಡಿಸಿದರು.


ಯೆಹೋವ ದೇವರು ಸೂರ್ಯನಂತೆ ಪ್ರಕಾಶಿಸುವವವರೂ ಗುರಾಣಿಯೂ ಆಗಿದ್ದಾರೆ. ಯೆಹೋವ ದೇವರು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾರೆ. ನಿಷ್ಕಳಂಕವಾಗಿ ನಡೆದುಕೊಳ್ಳುವವರಿಗೆ ಅವರು ಒಳ್ಳೆಯದನ್ನು ಮಾಡಲು ಹಿಂದೆಗೆಯುವುದಿಲ್ಲ.


ಇದಲ್ಲದೆ ಯೆಹೋವ ದೇವರ ವಾಕ್ಯವು ನನಗೆ ಬಂದಿತು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು