Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 5:11 - ಕನ್ನಡ ಸಮಕಾಲಿಕ ಅನುವಾದ

11 ದೂತನು ನನಗೆ, “ಶಿನಾರ್ ದೇಶದಲ್ಲಿ ಅದಕ್ಕೆ ಮನೆ ಕಟ್ಟುವುದಕ್ಕೆ ತೆಗೆದುಕೊಂಡು ಹೋಗುತ್ತಾರೆ. ಅಲ್ಲಿ ಅದು ಸ್ಥಾಪಿತವಾಗಿ, ತನ್ನ ಸ್ಥಾನದಲ್ಲಿ ಇರಿಸಲಾಗುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೂತನು ನನಗೆ, “ಶಿನಾರ್ ದೇಶದಲ್ಲಿ ಅವಳಿಗೆ ಮನೆಕಟ್ಟುವುದಕ್ಕಾಗಿ ಹೋಗುತ್ತಾರೆ. ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ವಂತ ಸ್ಥಾನದಲ್ಲಿ ಇರಿಸಲ್ಪಡುವುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದಕ್ಕೆ ಸೂತ್ರಧಾರಿಯಾದ ದೂತನು, “ಬಾಬಿಲೋನಿಯಾ ದೇಶಕ್ಕೆ: ಅಲ್ಲಿ ಅವಳಿಗೆ ಗುಡಿಕಟ್ಟುವುದಕ್ಕಾಗಿ ಹೋಗುತ್ತಿದ್ದಾರೆ. ಅದು ಸಿದ್ಧವಾದಾಗ ಅಲ್ಲಿನ ಪೀಠದ ಮೇಲೆ ಆ ಕೊಳಗವನ್ನು ಪ್ರತಿಷ್ಠಾಪಿಸಲಾಗುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನು ನನಗೆ - ಶಿನಾರ್ ದೇಶದಲ್ಲಿ ಅವಳಿಗೆ ಮನೆಕಟ್ಟುವದಕ್ಕಾಗಿ ಹೋಗುತ್ತಾರೆ; ಅದು ಸಿದ್ಧವಾದಾಗ ಆ ಸ್ವಂತ ಸ್ಥಳದಲ್ಲಿ ನಿಲ್ಲಿಸಲ್ಪಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಅವರು ಶಿನಾರಿನಲ್ಲಿ ಅದಕ್ಕೊಂದು ಮನೆ ಕಟ್ಟುವದಕ್ಕಿದ್ದಾರೆ. ಮನೆಕಟ್ಟಿದ ಬಳಿಕ ಆ ಬುಟ್ಟಿಯನ್ನು ಅವರು ಅದರೊಳಗಿಡುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 5:11
10 ತಿಳಿವುಗಳ ಹೋಲಿಕೆ  

ಜನರು ಪೂರ್ವದಿಕ್ಕಿಗೆ ಪ್ರಯಾಣ ಮಾಡುವಾಗ, ಶಿನಾರ್ ದೇಶದ ಬಯಲನ್ನು ಕಂಡು ಅಲ್ಲಿ ವಾಸಮಾಡಿದರು.


ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು ದೇವಾಲಯದ ಕೆಲವು ವಸ್ತುಗಳನ್ನು ಕೂಡ ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್ ದೇಶಕ್ಕೂ, ತನ್ನ ದೇವರ ಆಲಯಕ್ಕೂ ತಂದು, ಅವುಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.


ಶಿನಾರ್ ದೇಶದಲ್ಲಿರುವ ಬಾಬಿಲೋನ್, ಯೆರೆಕ್, ಅಕ್ಕದ್, ಕಲ್ನೇ ಎಂಬವು ಅವನ ರಾಜ್ಯದ ಪ್ರಾರಂಭದ ಕೇಂದ್ರಗಳು.


ಆ ದಿನದಲ್ಲಿ ಯೆಹೋವ ದೇವರು ಉಳಿದ ತಮ್ಮ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೇ ಸಾರಿ ಕೈಹಾಕಿ ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾತ್ ಮತ್ತು ಮೆಡಿಟರೇನಿಯನ್ ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವರು.


ಶಿನಾರಿನ ಅರಸ ಅಮ್ರಾಫೆಲನು ಎಲ್ಲಸಾರಿನ ಅರಸ ಅರಿಯೋಕನು, ಏಲಾಮಿನ ಅರಸ ಕೆದೊರ್ಲಗೋಮರನು, ಗೋಯಿಮದ ಅರಸ ತಿದ್ಗಾಲನು ಇವರ ದಿನಗಳಲ್ಲಿ ಆದದ್ದೇನೆಂದರೆ:


ಏಕೆಂದರೆ, ಅವನು ಸೆರೆಯು ಬಹಳ ದೀರ್ಘವಾಗುವುದು, ಮನೆಗಳನ್ನು ಕಟ್ಟಿ ವಾಸಮಾಡಿರಿ; ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ; ಎಂದು ನಮಗೆ ಬಾಬಿಲೋನಿಗೆ ಹೇಳಿ ಕಳುಹಿಸಿದ್ದಾನೆ.’ ”


ಇದಲ್ಲದೆ ಅವರು ಖಡ್ಗಕ್ಕೆ ತುತ್ತಾಗಿ ಬೀಳುವರು ಮತ್ತು ಸೆರೆಯಾಗಿ ಎಲ್ಲಾ ರಾಷ್ಟ್ರಗಳಲ್ಲಿ ಒಯ್ಯುವರು. ಯೆಹೂದ್ಯರಲ್ಲದವರ ಕಾಲ ಪರಿಪೂರ್ಣವಾಗುವವರೆಗೆ ಅವರು ಯೆರೂಸಲೇಮನ್ನು ತುಳಿದುಹಾಕುವರು.


ಇಸ್ರಾಯೇಲರು ಬಹಳ ದಿವಸಗಳವರೆಗೆ ಅರಸನಿಲ್ಲದೆ, ರಾಜಕುಮಾರನಿಲ್ಲದೆ, ಬಲಿ ಇಲ್ಲದೆ, ಪವಿತ್ರ ಕಲ್ಲುಗಳಿಲ್ಲದೆ, ಏಫೋದ್ ಇಲ್ಲದೆ ಮತ್ತು ವಿಗ್ರಹಗಳು ಇಲ್ಲದೆ ಇರುವರು.


ಯೆಹೋವ ದೇವರು ನಿಮಗೂ ನಿಮ್ಮ ಸಂತತಿಗೂ ಭಯಂಕರವಾದ ಉಪದ್ರವಗಳನ್ನು ಬರಮಾಡುವರು; ಅವು ಕಠಿಣವಾದ ಮತ್ತು ದೀರ್ಘಕಾಲದ ಬಾಧೆಗಳೂ ಘೋರವಾದ ಮತ್ತು ಗಂಭೀರವಾದ ರೋಗಗಳಾಗಿರುವವು.


ಆಗ ನಾನು ನನ್ನ ಸಂಗಡ ಮಾತನಾಡಿದ ದೂತನಿಗೆ, “ಇವರು ಅಳತೆಯ ಬುಟ್ಟಿಯನ್ನು ಎಲ್ಲಿಗೆ ಹೊತ್ತುಕೊಂಡು ಹೋಗುತ್ತಾರೆ?” ಎಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು