Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 6:1 - ಕನ್ನಡ ಸಮಕಾಲಿಕ ಅನುವಾದ

1 ನಾನು ಕಣ್ಣೆತ್ತಿ ನೋಡಿದಾಗ, ನಾಲ್ಕು ರಥಗಳು ಎರಡು ಬೆಟ್ಟಗಳ ಮಧ್ಯದಿಂದ ಹೊರಟು ಬಂದವು. ಆ ಬೆಟ್ಟಗಳು ಕಂಚಿನ ಬೆಟ್ಟಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಂತರ ನಾನು ಕಣ್ಣೆತ್ತಿ ನೋಡಲು, ಇಗೋ, ಎರಡು ಬೆಟ್ಟಗಳ ನಡುವೆಯಿಂದ ಬರುತ್ತಿರುವ ನಾಲ್ಕು ರಥಗಳು ಕಾಣಿಸಿದವು. ಅ ಬೆಟ್ಟಗಳು ತಾಮ್ರದವುಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನನಗೆ ಇನ್ನೊಂದು ದರ್ಶನವಾಯಿತು: ಇಗೋ, ಎರಡು ಬೆಟ್ಟಗಳ ನಡುವೆ ಬರುತ್ತಿರುವ ನಾಲ್ಕು ರಥಗಳು ಕಾಣಿಸಿದವು. ಅವು ಕಂಚಿನ ಬೆಟ್ಟಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪುನಃ ನಾನು ಕಣ್ಣೆತ್ತಿನೋಡಲು ಇಗೋ, ಎರಡು ಬೆಟ್ಟಗಳ ನಡುವೆಯಿಂದ ಬರುತ್ತಿರುವ ನಾಲ್ಕು ರಥಗಳು ಕಾಣಿಸಿದವು, ಆ ಬೆಟ್ಟಗಳು ತಾಮ್ರದವುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ತಿರುಗಿ ಮೇಲಕ್ಕೆ ನೋಡಿದಾಗ ನಾಲ್ಕು ರಥಗಳು ನಾಲ್ಕು ಹಿತ್ತಾಳೆಯ ಪರ್ವತಗಳ ಮಧ್ಯೆ ಓಡುವುದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 6:1
22 ತಿಳಿವುಗಳ ಹೋಲಿಕೆ  

ಆ ಕೊಂಬು ಮುರಿದುಹೋದ ಮೇಲೆ, ಅದಕ್ಕೆ ಬದಲಾಗಿ ನಾಲ್ಕು ಕೊಂಬುಗಳು ಎದ್ದಂತೆಯೇ, ಆ ಜನಾಂಗದಿಂದ ನಾಲ್ಕು ರಾಜ್ಯಗಳು ಉದಯಿಸುವುವು. ಆದರೆ ಮೊದಲನೆಯ ಅರಸನಿಗೆ ಇದ್ದಷ್ಟು ಅಧಿಕಾರ ಅವರಿಗೆ ಇರುವುದಿಲ್ಲ.


ದೇವರ ಚಿತ್ತಾನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವ ಅವರ ಉದ್ದೇಶದ ಪ್ರಕಾರ ಕ್ರಿಸ್ತನಲ್ಲಿ ನಮ್ಮನ್ನು ಮೊದಲೇ ಆರಿಸಿಕೊಂಡರು.


ನಿಮ್ಮ ಶಕ್ತಿಯೂ ಚಿತ್ತವೂ ಮುಂಚಿತವಾಗಿಯೇ ಏನಾಗಬೇಕೆಂದು ನಿರ್ಣಯಿಸಿದ್ದನ್ನೇ ಅವರು ಮಾಡಿದರು.


ದೂತನು ನನಗೆ, “ಇವು ಸ್ವರ್ಗದ ನಾಲ್ಕು ಆತ್ಮಗಳು. ಇವು ಇಡೀ ಜಗತ್ತಿನ ಕಡೆಗೆ ಯೆಹೋವ ದೇವರ ಮುಂದೆ ನಿಂತಲ್ಲಿಂದ ಹೊರಟಿವೆ.


ಆಗ ನಾನು ತಿರುಗಿಕೊಂಡು ನನ್ನ ಕಣ್ಣುಗಳನ್ನೆತ್ತಿ ನೋಡಲು, ಹಾರುವ ಸುರುಳಿ ಕಾಣಿಸಿತು.


ದೇವರ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರೂ ಯಾವ ಮಹತ್ವವಿಲ್ಲದೆ ಶೂನ್ಯರಾಗಿದ್ದಾರೆ. ದೇವರು ಪರಲೋಕದ ಸೈನ್ಯದಲ್ಲಿಯೂ, ಭೂನಿವಾಸಿಗಳಲ್ಲಿಯೂ ತಮ್ಮ ಚಿತ್ತದ ಪ್ರಕಾರವೇ ಮಾಡುತ್ತಾರೆ. ಯಾರೂ ಅವರ ಹಸ್ತವನ್ನು ಹಿಂತೆಗೆಯಲಾರರು. “ನೀವು ಏನು ಮಾಡುತ್ತಿರುವಿರಿ?” ಎಂದು ದೇವರನ್ನು ಯಾರೂ ಕೇಳಲಾರರು.


ಆದರೆ ಅದರ ಬುಡವೂ, ಬೇರೂ, ಕಬ್ಬಿಣ, ಕಂಚಿನ ಕಟ್ಟುಳ್ಳದ್ದಾಗಿ ನೆಲದಲ್ಲಿ ಹೊಲದ ಹುಲ್ಲಿನಲ್ಲಿ ಇರಲಿ. “ ‘ಅವನು ಆಕಾಶದ ಮಂಜಿನಿಂದ ತೇವವಾಗಲಿ, ಭೂಮಿಯ ಗಿಡಗಳ ಮಧ್ಯದಲ್ಲಿರುವ ಮೃಗಗಳೊಂದಿಗೆ ಅವನು ವಾಸಿಸಲಿ.


ಹೌದು, ಅಂದಿನಿಂದಲೇ ನಾನಿದ್ದೇನೆ. ನನ್ನ ಕೈಯಿಂದ ಬಿಡಿಸುವವರು ಯಾರೂ ಇಲ್ಲ. ನನ್ನ ಕೆಲಸಕ್ಕೆ ಅಡ್ಡಿ ಬರುವವನಾರು?”


ಯೆಹೋವ ದೇವರಿಗೆ ವಿರೋಧವಾಗಿ ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ.


ನಿಮ್ಮ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿಮ್ಮ ನ್ಯಾಯತೀರ್ಪುಗಳು ಮಹಾ ಅಗಾಧವೇ. ಯೆಹೋವ ದೇವರೇ, ನೀವು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀರಿ.


ಆದರೆ ಯೆಹೋವ ದೇವರ ಆಲೋಚನೆಗಳು ಎಂದೆಂದಿಗೂ ಅವರ ಹೃದಯದ ಉದ್ದೇಶಗಳು ತಲತಲಾಂತರಕ್ಕೂ ನಿಲ್ಲುತ್ತವೆ.


ಆದರೆ ದೇವರು ಸುಮ್ಮನಿದ್ದರೆ ಅವರ ಮೇಲೆ, ತಪ್ಪುಹೊರಿಸುವವರು ಯಾರು? ದೇವರು ತಮ್ಮ ಮುಖವನ್ನು ವ್ಯಕ್ತಿಗಾಗಲಿ, ದೇಶಕ್ಕಾಗಲಿ ಮರೆಮಾಡಿದರೆ, ದೇವದರ್ಶನ ಪಡೆಯಬಲ್ಲವರು ಯಾರು?


ದೇವರು ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುತ್ತಾರೆ. ಭಿಕ್ಷುಕನನ್ನು ತಿಪ್ಪೆ ಗುಂಡಿಯಿಂದ ತೆಗೆದು ಉನ್ನತಕ್ಕೇರಿಸುವವರೂ ಆಗಿದ್ದಾರೆ. ಅವರನ್ನು ಪ್ರಧಾನರ ಮಧ್ಯದಲ್ಲಿ ಕೂಡ್ರಿಸುತ್ತಾರೆ. ಘನತೆಯ ಸಿಂಹಾಸನವನ್ನು ಬಾಧ್ಯವಾಗಿ ಕೊಡುತ್ತಾರೆ. “ಭೂಮಿಯ ಆಧಾರ ಸ್ತಂಭಗಳು ಯೆಹೋವ ದೇವರದ್ದೇ. ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾರೆ.


ಹೀಗೆ ದೇವರು ತಮ್ಮ ನಿತ್ಯ ಉದ್ದೇಶದ ಪ್ರಕಾರ ಇದನ್ನು ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ನೆರವೇರಿಸಿದರು.


ಆಗ ಎಲೀಷನು, “ಯೆಹೋವ ದೇವರೇ, ನೀವು ದಯಮಾಡಿ ಇವನು ಕಾಣುವ ಹಾಗೆ ಇವನ ಕಣ್ಣುಗಳನ್ನು ತೆರೆಯಿರಿ,” ಎಂದು ಪ್ರಾರ್ಥಿಸಿದನು. ಯೆಹೋವ ದೇವರು ಆ ಯುವ ಸೇವಕನ ಕಣ್ಣುಗಳನ್ನು ತೆರೆದಾಗ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ರಥಗಳೂ, ಕುದುರೆಗಳೂ ತುಂಬಿರುವುದನ್ನು ಅವನು ಕಂಡನು.


ಯೆಹೋವ ದೇವರು ಬೆಂಕಿಯೊಡನೆ ಬರುವರು. ಅವರ ರಥಗಳು ಬಿರುಗಾಳಿಯ ಹಾಗೆ ಇರುವುವು. ಕಠಿಣವಾದ ತಮ್ಮ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತಮ್ಮ ಗದರಿಕೆಯನ್ನೂ ಸಲ್ಲಿಸುವುದಕ್ಕಾಗಿಯೇ ಬರುವರು.


ಇಗೋ, ಮೇಘಗಳ ಹಾಗೆ ಏರಿ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವುವು. ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮ್ಮ ಗತಿಯನ್ನು ಏನು ಹೇಳೋಣ, ಏಕೆಂದರೆ ಹಾಳಾದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು