Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 6:11 - ಕನ್ನಡ ಸಮಕಾಲಿಕ ಅನುವಾದ

11 ಅಲ್ಲಿ ಬೆಳ್ಳಿ, ಬಂಗಾರವನ್ನು ತೆಗೆದುಕೊಂಡು, ಕಿರೀಟಗಳನ್ನು ಮಾಡಿ, ಅವುಗಳನ್ನು ಯೆಹೋಚಾದಾಕನ ಮಗ ಮತ್ತು ಮಹಾಯಾಜಕನಾದ ಯೆಹೋಶುವನ ತಲೆಯ ಮೇಲೆ ಇಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇವರಿಂದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಕಿರೀಟವನ್ನು ಮಾಡಿ ಯೆಹೋಚಾದಾಕನ ಮಗನೂ ಹಾಗೂ ಮಹಾಯಾಜಕನು ಆದ ಯೆಹೋಶುವನ ತಲೆಯ ಮೇಲೆ ಇಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವರಿಂದ ಪಡೆದ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡು ಒಂದು ಕಿರೀಟವನ್ನು ಮಾಡಿಸು. ಅದನ್ನು ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನ ತಲೆಗೆ ತೊಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇವರಿಂದ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡು ಕಿರೀಟವನ್ನು ರೂಪಿಸಿ ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನ ತಲೆಯ ಮೇಲೆ ಇಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಬೆಳ್ಳಿಬಂಗಾರಗಳಿಂದ ಒಂದು ಕಿರೀಟವನ್ನು ಮಾಡಿ ಯೆಹೋಶುವನ ತಲೆಯ ಮೇಲಿಟ್ಟು ಅವನಿಗೆ ಹೀಗೆ ಹೇಳಿರಿ: (ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಇವನ ತಂದೆ ಯೆಹೋಜಾದಾಕನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 6:11
18 ತಿಳಿವುಗಳ ಹೋಲಿಕೆ  

ಆತನು ನನಗೆ, ಯೆಹೋವ ದೇವರ ದೂತನ ಮುಂದೆ ನಿಂತಿರುವ ಮಹಾಯಾಜಕನಾದ ಯೆಹೋಶುವನನ್ನೂ, ಅವನ ಮೇಲೆ ದೂರು ಹೇಳುವುದಕ್ಕೆ ಅವನ ಬಲಗಡೆಯಲ್ಲಿ ನಿಂತ ಸೈತಾನನನ್ನೂ ತೋರಿಸಿದನು.


ನೀವು ಉತ್ತಮ ಆಶೀರ್ವಾದಗಳಿಂದ ಅರಸನನ್ನು ಸ್ವಾಗತಿಸಿದ್ದೀರಿ; ಚೊಕ್ಕ ಬಂಗಾರದ ಕಿರೀಟವನ್ನು ಆತನ ತಲೆಯ ಮೇಲಿಟ್ಟಿದ್ದೀರಿ.


ಚೀಯೋನಿನ ಪುತ್ರಿಯರೇ, ನೀವು ಹೊರಗೆ ಬನ್ನಿರಿ. ಅರಸನಾದ ಸೊಲೊಮೋನನನ್ನು ನೋಡಿರಿ. ಅವನ ಮದುವೆಯ ದಿನದಂದು, ಅವನ ಹೃದಯ ಸಂತೋಷಗೊಂಡ ದಿನದಲ್ಲಿ, ಅವನ ತಾಯಿ ಅವನಿಗೆ ತೊಡಿಸಿದ ಕಿರೀಟವನ್ನು ಅವನು ಧರಿಸಿರುವುದನ್ನು ಬಂದು ನೋಡಿರಿ.


ಆತನ ನೇತ್ರಗಳು ಬೆಂಕಿಯ ಜ್ವಾಲೆಯಂತಿದ್ದವು. ಆತನ ತಲೆಯ ಮೇಲೆ ಅನೇಕ ಮುಕುಟಗಳಿದ್ದವು. ಆತನಿಗೆ ಒಂದು ಹೆಸರು ಬರೆದು ಕೊಟ್ಟಿದೆ. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು.


ಆಗ ನಾನು, “ಅವನ ತಲೆಯ ಮೇಲೆ ಶುದ್ಧ ಮುಂಡಾಸನ್ನು ಇಡಿರಿ,” ಎಂದೆನು. ಆಗ ಸೇವಕರು ಯೆಹೋಶುವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಟ್ಟು, ಅವನಿಗೆ ವಸ್ತ್ರಗಳನ್ನು ಧರಿಸಿದರು. ಯೆಹೋವ ದೇವರ ದೂತನು ಪಕ್ಕದಲ್ಲಿ ನಿಂತಿದ್ದನು.


ಪಾರಸಿಯ ಅರಸ ದಾರ್ಯಾವೆಷನ ಆಳಿಕೆಯ ಎರಡನೆಯ ವರ್ಷದಲ್ಲಿ, ಆರನೇ ತಿಂಗಳಿನ ಮೊದಲನೇ ದಿವಸದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮುಖಾಂತರ, ಶೆಯಲ್ತಿಯೇಲನ ಮಗನು ಮತ್ತು ಯೆಹೂದದ ಅಧಿಪತಿ ಆದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನು ಮತ್ತು ಮಹಾಯಾಜಕನಾದ ಯೆಹೋಶುವನಿಗೂ ಬಂದಿತು:


ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು, ಆ ಮುಂಡಾಸದ ಮೇಲೆ ಅಂದರೆ ಅದರ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ, ಪವಿತ್ರವಾದ ಕಿರೀಟವನ್ನೂ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಇಟ್ಟನು.


ಶುದ್ಧ ಬಂಗಾರದಿಂದ ಪರಿಶುದ್ಧ ಕಿರೀಟದ ತಗಡನ್ನು ಮಾಡಿ, ಮುದ್ರೆ ಕೆತ್ತುವ ಪ್ರಕಾರ ಅದರಲ್ಲಿ, “ಯೆಹೋವ ದೇವರಿಗೆ ಪರಿಶುದ್ಧ,” ಎಂದು ಕೆತ್ತಿಸಿದರು,


ಆದರೂ ದೇವದೂತರಿಗಿಂತ ಸ್ವಲ್ಪಕಾಲ ಕಡಿಮೆಯಾಗಿ ಮಾಡಲಾದ ಆ ಒಬ್ಬಾತನು ಯೇಸುವೇ. ಈ ಯೇಸು ಬಾಧೆಪಟ್ಟು ಮೃತಪಟ್ಟಿದ್ದರಿಂದಲೇ ಮಹಿಮೆಯನ್ನೂ ಮಾನವನ್ನೂ ಕಿರೀಟವಾಗಿ ಹೊಂದಿದರೆಂದು ಎಂದು ನಾವು ಕಾಣುತ್ತೇವೆ. ದೇವರ ಕೃಪೆಯಿಂದಲೇ ಎಲ್ಲರಿಗೋಸ್ಕರ ಮರಣವನ್ನು ಈ ಯೇಸು ಅನುಭವಿಸಬೇಕಾಗಿತ್ತು.


ಯೆಹೋವ ದೇವರು ಶೆಯಲ್ತಿಯೇಲನ ಮಗ ಮತ್ತು ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನ ಆತ್ಮವನ್ನೂ, ಯೆಹೋಚಾದಾಕನ ಮಗ ಮತ್ತು ಮಹಾಯಾಜಕ ಯೆಹೋಶುವನ ಆತ್ಮವನ್ನೂ, ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಪ್ರೇರೇಪಿಸಿದರು. ಅವರು ಬಂದು ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೇ ವರ್ಷದ, ಆರನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿವಸದಲ್ಲಿ ತಮ್ಮ ದೇವರಾದ ಸೇನಾಧೀಶ್ವರ ಯೆಹೋವ ದೇವರ ಆಲಯದ ಕೆಲಸ ಪ್ರಾರಂಭಿಸಿದರು. ಅರಸನಾದ ದಾರ್ಯಾವೆಷನ ಎರಡನೇ ವರ್ಷದಲ್ಲಿ,


ಆದರೂ ಈಗ ಯೆಹೋವ ದೇವರು ಹೀಗೆ ಹೇಳಿದರು: ‘ಜೆರುಬ್ಬಾಬೆಲನೇ, ಬಲವಾಗಿರು. ಯೆಹೋಚಾದಾಕನ ಮಗ ಮತ್ತು ಮಹಾಯಾಜಕನಾದ ಯೆಹೋಶುವನೇ, ಬಲವಾಗಿರು. ದೇಶದ ಜನರೆಲ್ಲರೇ, ಬಲವಾಗಿರಿ,’ ಕೆಲಸಮಾಡಿರಿ. ‘ನಾನು ನಿಮ್ಮ ಸಂಗಡ ಇದ್ದೇನೆ’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ಆಗ ಯೋಚಾದಾಕನ ಮಗನಾದ ಯೇಷೂವನೂ, ಅವನ ಜೊತೆ ಯಾಜಕರೂ, ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಅವನ ಸಹಾಯಕರು ಎದ್ದು ದೇವರ ಮನುಷ್ಯನಾದ ಮೋಶೆಯ ನಿಯಮದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವುದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು.


ಅವನ ತಲೆಗೆ ಮುಂಡಾಸವನ್ನು ಇಟ್ಟು, ಮುಂಡಾಸದ ಮೇಲೆ ಪರಿಶುದ್ಧ ಪಟ್ಟವನ್ನು ಇಟ್ಟು,


ನಾನು ನೋಡಲು, ಇಗೋ ಒಂದು ಬಿಳಿ ಕುದುರೆ ಕಾಣಿಸಿತು. ಅದರ ಸವಾರಿ ಮಾಡುವವನು ಒಂದು ಬಿಲ್ಲನ್ನು ಹಿಡಿದಿದ್ದನು. ಅವನಿಗೆ ಒಂದು ಕಿರೀಟವು ಕೊಡಲಾಗಿತ್ತು. ಅವನು ಜಯಿಸುವವನಾಗಿ ಜಯಿಸುವುದಕ್ಕೊಸ್ಕರ ಹೊರಟನು.


ಇದಲ್ಲದೆ ದಾವೀದನು ಅಮ್ಮೋನಿಯರ ಅರಸನ ತಲೆಯ ಮೇಲೆ ಇದ್ದ ಕಿರೀಟವನ್ನು ಸಹ ತೆಗೆದುಕೊಂಡನು. ಅದು ಮೂವತ್ತೈದು ಕಿಲೋಗ್ರಾಂ ತೂಕದ್ದಾಗಿತ್ತು ಅದನ್ನು ಬಂಗಾರದಿಂದಲೂ, ಅಮೂಲ್ಯವಾದ ರತ್ನಗಳಿಂದಲೂ ಅಲಂಕರಿಸಲಾಗಿತ್ತು, ಆ ಕಿರೀಟವನ್ನು ದಾವೀದನ ಶಿರಸ್ಸಿನಲ್ಲಿ ಧರಿಸಲಾಯಿತು. ಆ ಪಟ್ಟಣದೊಳಗಿಂದ ಅತ್ಯಧಿಕವಾದ ಕೊಳ್ಳೆಯನ್ನೂ ತೆಗೆದುಕೊಂಡು ಬಂದನು.


ಯಾಜಕರ ವಂಶಜರಲ್ಲಿ ಅನ್ಯ ಸ್ತ್ರೀಯರನ್ನು ಮದುವೆ ಮಾಡಿಕೊಂಡವರು ಯಾರೆಂದರೆ: ಯೋಚಾದಾಕನ ಮಗ ಯೇಷೂವನು ಮತ್ತು ಅವನ ಸಹೋದರರಲ್ಲಿ: ಮಾಸೇಯನು, ಎಲೀಯೆಜೆರನು, ಯಾರೀಬನು, ಗೆದಲ್ಯನು.


ಆ ಕಿರೀಟಗಳು ಹೇಲೆಮ್, ತೋಬೀಯ, ಯೆದಾಯ ಮತ್ತು ಜೆಫನ್ಯನ ಮಗ ಹೇನ್ ಇವರ ಜ್ಞಾಪಕಾರ್ಥವಾಗಿ ಯೆಹೋವ ದೇವರ ಆಲಯದಲ್ಲಿ ಇರುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು