Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 6:14 - ಕನ್ನಡ ಸಮಕಾಲಿಕ ಅನುವಾದ

14 ಆ ಕಿರೀಟಗಳು ಹೇಲೆಮ್, ತೋಬೀಯ, ಯೆದಾಯ ಮತ್ತು ಜೆಫನ್ಯನ ಮಗ ಹೇನ್ ಇವರ ಜ್ಞಾಪಕಾರ್ಥವಾಗಿ ಯೆಹೋವ ದೇವರ ಆಲಯದಲ್ಲಿ ಇರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “‘ಆ ಕಿರೀಟವು ಹೇಲೆಮ್, ತೋಬೀಯ, ಯೆದಾಯ, ಚೆಫನ್ಯನ ಮಗನಾದ ಯೋಷೀಯ ಇವರ ಜ್ಞಾಪಕಾರ್ಥವಾಗಿ ಯೆಹೋವನ ಆಲಯದಲ್ಲಿ ಇಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವರ ಕಿರೀಟವು ಹೇಲಮ್, ತೊಬೀಯ, ಯೆದಾಯ ಮತ್ತು ಜೆಫನ್ಯನ ಮಗ ಹೇನ್ - ಇವರ ಜ್ಞಾಪಕಾರ್ಥವಾಗಿ ಆಲಯದಲ್ಲೇ ಇರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆ ಕಿರೀಟವು ಹೇಲೆಮ್, ತೋಬೀಯ, ಯೆದಾಯ, ಚೆಫನ್ಯನ ಮಗನಾದ ಹೇನ್, ಇವರ ಜ್ಞಾಪಕಾರ್ಥವಾಗಿ ಯೆಹೋವನ ಆಲಯದಲ್ಲಿ ಇಟ್ಟಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಜನರು ಸ್ಮರಿಸಿಕೊಳ್ಳುವಂತೆ ಅವರು ಆ ಕಿರೀಟವನ್ನು ಆಲಯದೊಳಗೆ ಇಡುವರು. ಅದು ಹೆಲ್ದಾಯ, ತೋಬೀಯ, ಯೆದಾಯ ಮತ್ತು ಚೆಫನ್ಯನ ಮಗನಾದ ಹೇನ್‌ನಿಗೆ ಘನತೆಯನ್ನು ತರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 6:14
14 ತಿಳಿವುಗಳ ಹೋಲಿಕೆ  

ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಲೋಕದಾದ್ಯಂತ ಎಲ್ಲೆಲ್ಲಿ ಸುವಾರ್ತೆಯು ಸಾರಲಾಗುವದೋ, ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು,” ಎಂದರು.


ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಲೋಕದಾದ್ಯಂತ ಎಲ್ಲೆಲ್ಲಿ ಸುವಾರ್ತೆಯು ಸಾರಲಾಗುವದೋ, ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು,” ಎಂದರು.


“ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ನೀವು ಅದನ್ನು ಯೆಹೋವ ದೇವರಿಗೆ ಹಬ್ಬವಾಗಿ ತಲತಲಾಂತರಗಳಲ್ಲಿ ಆಚರಿಸಬೇಕು. ಅದನ್ನು ಶಾಶ್ವತ ನಿಯಮವೆಂದು ಎಂದೆಂದಿಗೂ ಆಚರಿಸಬೇಕು.


ಕೊರ್ನೇಲ್ಯನು ಭಯದಿಂದ ದೇವದೂತನನ್ನೇ ದೃಷ್ಟಿಸಿ ನೋಡಿ, “ಏನು ಸ್ವಾಮೀ?” ಎಂದು ಕೇಳಲು, “ನಿನ್ನ ಪ್ರಾರ್ಥನೆಗಳು, ಬಡವರಿಗೆ ನೀನು ಕೊಟ್ಟ ದಾನಗಳು ದೇವರ ಸನ್ನಿಧಿಗೆ ಜ್ಞಾಪಕಾರ್ಥ ಅರ್ಪಣೆಗಳಾಗಿ ಬಂದಿವೆ.


“ಆ ಸೆರೆಯವರಿಂದ, ಅಂದರೆ ಬಾಬಿಲೋನಿನಿಂದ ಬಂದಿರುವ ಹೆಲ್ದಾಯನಿಂದಲೂ, ತೋಬೀಯನಿಂದಲೂ, ಯೆದಾಯನಿಂದಲೂ ಬೆಳ್ಳಿಬಂಗಾರವನ್ನು ತೆಗೆದುಕೊಂಡು, ಅದೇ ದಿವಸದಲ್ಲಿ ನೀನು ಜೆಫನ್ಯನ ಮಗ ಯೋಷೀಯನ ಮನೆಗೆ ಹೋಗು.


“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ನೀವು ಅವರಿಗೆ, ‘ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ಯೊರ್ದನ್ ನದಿಯ ನೀರು ವಿಭಾಗವಾಯಿತು. ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿಯನ್ನು ದಾಟುವಾಗ, ಯೊರ್ದನ್ ನದಿಯ ನೀರು ನಿಂತುಹೋಯಿತು. ಈ ಕಲ್ಲುಗಳು ಇಸ್ರಾಯೇಲರಿಗೆ ಎಂದೆಂದಿಗೂ ಜ್ಞಾಪಕಾರ್ಥವಾದ ಗುರುತು,’ ಎಂದು ಉತ್ತರಕೊಡಬೇಕು,” ಎಂದನು.


ಆಗ ಮೋಶೆಯೂ, ಯಾಜಕನಾದ ಎಲಿಯಾಜರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತೆಗೆದುಕೊಂಡು, ಯೆಹೋವ ದೇವರ ಸಮ್ಮುಖದಲ್ಲಿ ಇಸ್ರಾಯೇಲರಿಗೆ ಜ್ಞಾಪಕಕ್ಕಾಗಿ ದೇವದರ್ಶನ ಗುಡಾರದೊಳಗೆ ತಂದರು.


ಆರೋನನ ಸಂತಾನವಲ್ಲದ ಪರಕೀಯನು ಯೆಹೋವ ದೇವರ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸಬಾರದು, ಅರ್ಪಿಸಿದರೆ ಕೋರಹ ಮತ್ತು ಅವನ ಸಮೂಹಕ್ಕೆ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವದಕ್ಕಾಗಿ ಅದು ಗುರುತಾಯಿತು.


“ಹೀಗೆ ಆರೋನನು ಪರಿಶುದ್ಧ ಸ್ಥಳಕ್ಕೆ ಬರುವಾಗ ಇಸ್ರಾಯೇಲರ ಹೆಸರುಗಳನ್ನು ಯಾವಾಗಲೂ ಯೆಹೋವ ದೇವರ ಮುಂದೆ ಜ್ಞಾಪಕ ಮಾಡುವುದಕ್ಕಾಗಿ ನ್ಯಾಯದ ಎದೆಪದಕವನ್ನು ತನ್ನ ಹೃದಯದ ಮೇಲೆ ಹೊರಬೇಕು.


ಆ ಎರಡು ರತ್ನಗಳನ್ನು ಏಫೋದಿನ ಹೆಗಲಿನ ಭಾಗದ ಮೇಲೆ ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು.


ಕಾವಲುಗಾರರ ಅಧಿಪತಿಯು ಮುಖ್ಯಯಾಜಕನಾದ ಸೆರಾಯನನ್ನೂ, ಎರಡನೆಯ ಯಾಜಕನಾದ ಚೆಫನ್ಯನನ್ನೂ, ಮೂವರು ದ್ವಾರಪಾಲಕರನ್ನೂ ಹಿಡಿದುಕೊಂಡು ಹೋದನು.


ಅಲ್ಲಿ ಬೆಳ್ಳಿ, ಬಂಗಾರವನ್ನು ತೆಗೆದುಕೊಂಡು, ಕಿರೀಟಗಳನ್ನು ಮಾಡಿ, ಅವುಗಳನ್ನು ಯೆಹೋಚಾದಾಕನ ಮಗ ಮತ್ತು ಮಹಾಯಾಜಕನಾದ ಯೆಹೋಶುವನ ತಲೆಯ ಮೇಲೆ ಇಟ್ಟು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು