Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 6:15 - ಕನ್ನಡ ಸಮಕಾಲಿಕ ಅನುವಾದ

15 ದೂರದಲ್ಲಿರುವವರು ಬಂದು ಯೆಹೋವ ದೇವರ ಆಲಯವನ್ನು ಕಟ್ಟುವುದಕ್ಕೆ ಸಹಾಯ ಮಾಡುವರು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆಂದು ನೀವು ತಿಳಿಯುವಿರಿ. ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಜಾಗ್ರತೆಯಾಗಿ ಕಿವಿಗೊಟ್ಟರೆ, ಇದು ನೆರವೇರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದೂರದಲ್ಲಿರುವವರು ಬಂದು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಕೈಹಾಕುವರು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತನು ಸೇನಾಧೀಶ್ವರನಾದ ಯೆಹೋವನೇ ಎಂದು ನಿಮಗೆ ದೃಢವಾಗುವುದು. ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮನಃಪೂರ್ವಕವಾಗಿ ಕೇಳಿದರೆ ಇದೆಲ್ಲಾ ನೆರವೇರುವುದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದೂರದಲ್ಲಿ ವಾಸಿಸುವ ಜನರು ಅಲ್ಲಿಗೆ ಬಂದು ಸರ್ವೇಶ್ವರಸ್ವಾಮಿಯ ಆಲಯವನ್ನು ಕಟ್ಟುವುದಕ್ಕೆ ನೆರವಾಗುವರು. ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯೇ ಎಂಬುದು ನಿಮಗೆ ಮನದಟ್ಟಾಗುವುದು. ನಿಮ್ಮ ದೇವರಾದ ಆ ಸ್ವಾಮಿಯ ಮಾತನ್ನು ನೀವು ಮನಃಪೂರ್ವಕವಾಗಿ ಅನುಸರಿಸಿದರೆ ಇದೆಲ್ಲವೂ ಸರಿಯಾಗಿ ನೆರವೇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದೂರದಲ್ಲಿರುವವರು ಬಂದು ಯೆಹೋವನ ಆಲಯವನ್ನು ಕಟ್ಟುವದಕ್ಕೆ ಕೈಹಾಕುವರು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತನು ಸೇನಾಧೀಶ್ವರ ಯೆಹೋವನೇ ಎಂದು ನಿಮಗೆ ದೃಢವಾಗುವದು. ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮನಃಪೂರ್ವಕವಾಗಿ ಕೇಳಿದರೆ ಇದೆಲ್ಲಾ ನೆರವೇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದೂರದಲ್ಲಿ ವಾಸಿಸುವ ಜನರು ಬಂದು ಆಲಯವನ್ನು ಕಟ್ಟುವರು. ಆಗ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ನೀವು ತಿಳಿಯುವಿರಿ. ಯೆಹೋವನು ಹೇಳಿದಂತೆ ನೀವು ಮಾಡಿದರೆ ಇವೆಲ್ಲಾ ನೆರವೇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 6:15
20 ತಿಳಿವುಗಳ ಹೋಲಿಕೆ  

ಇದಲ್ಲದೆ ವಿದೇಶಿಯರು ನಿನ್ನ ಗೋಡೆಗಳನ್ನು ಕಟ್ಟುವರು. ಅವರ ಅರಸರು ಸಹ ನಿನಗೆ ಸೇವೆಮಾಡುವರು. ಏಕೆಂದರೆ ನನ್ನ ಬೇಸರದಲ್ಲಿ ನಿನ್ನನ್ನು ಹೊಡೆದೆನು. ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು.


“ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಗಳನ್ನು ಕೈಗೊಂಡರೆ, ಆಗ ನೀನು ನನ್ನ ಆಲಯಕ್ಕೂ ನ್ಯಾಯತೀರಿಸಿ, ನನ್ನ ಅಂಗಳಗಳನ್ನೂ ಕಾಯುವೆ. ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ಹಕ್ಕನ್ನು ನಿನಗೆ ಕೊಡುವೆನು.’


ಆದರೆ ನಿತ್ಯ ದೇವರು ಆಜ್ಞಾಪಿಸಿದಂತೆ ಈಗ ಪ್ರವಾದಿಗಳ ಗ್ರಂಥಗಳ ಮೂಲಕ ಮುಂತಿಳಿಸಿರುವಂತೆ, ಈ ಸಂದೇಶವು ಯೆಹೂದ್ಯರಲ್ಲದ ಜನರೆಲ್ಲರಿಗೂ ತಿಳಿಸಲಾಗಿದೆ. ಹೀಗೆ ಅವರು ನಂಬಿದ್ದರಿಂದ ವಿಧೇಯರಾಗುತ್ತಾರೆ.


ಈ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರ ಇರುವ ಎಲ್ಲರಿಗೂ ನಮ್ಮ ಕರ್ತದೇವರು ತಮ್ಮ ಕಡೆಗೆ ಕರೆಯುವ ಎಲ್ಲರಿಗಾಗಿಯೂ ಇರುವುದು,” ಎಂದನು.


ನಾನು ತುಟಿಗಳಿಗೆ ಸ್ತೋತ್ರವನ್ನು ಉಂಟುಮಾಡುವೆನು; ದೂರವಾದವನಿಗೂ ಸಮೀಪವಾದವನಿಗೂ ಸಮಾಧಾನವಿರಲಿ, ಸಮಾಧಾನವಿರಲಿ. ನಾನು ಅವರನ್ನು ಸ್ವಸ್ಥ ಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಅವನಿಗೆ ಹೇಳತಕ್ಕದ್ದೇನೆಂದರೆ: ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ರೆಂಬೆ,’ ಎಂದು ಹೆಸರುಳ್ಳ ಮನುಷ್ಯನು, ತನ್ನ ಸ್ಥಳದೊಳಗಿಂದ ರೆಂಬೆಯನ್ನು ತೆಗೆದುಹಾಕಿ, ಯೆಹೋವ ದೇವರ ಆಲಯವನ್ನು ಕಟ್ಟುವನು.


ಆದರೆ ನಾನು ಇದನ್ನು ಅವರಿಗೆ, “ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು; ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೆಯದಾಗುವಂತೆ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ,” ಎಂದು ಆಜ್ಞಾಪಿಸಿ ಹೇಳಿದೆನು.


ನೀತಿವಂತರಿಗೆ ನೀವು, “ಅವರಿಗೆ ಒಳ್ಳೆಯದಾಗಲಿ!” ಎಂದು ಹೇಳಿರಿ. ಏಕೆಂದರೆ ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.


ಆದರೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳಿ, ಈ ನಿಯಮದ ಗ್ರಂಥದಲ್ಲಿ ಬರೆದಿರುವ ಅವರ ಆಜ್ಞಾತೀರ್ಪುಗಳನ್ನು ಕಾಪಾಡಿ, ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಂಡರೆ, ನಿಮ್ಮಲ್ಲಿ ಸಂತೋಷಿಸುವರು.


ಇವರು ದೂರದಿಂದ ಬರುತ್ತಾರೆ. ಇವರು ಉತ್ತರದಿಂದ ಮತ್ತು ಪಶ್ಚಿಮದಿಂದ ಇವರು ಸೀನಿಮ್ ದೇಶದಿಂದ ಬರುತ್ತಿದ್ದಾರೆ.”


ಎಲ್ಲಾ ಮನುಷ್ಯರೇ, ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಅವರು ತಮ್ಮ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು