ಜೆಕರ್ಯ 7:11 - ಕನ್ನಡ ಸಮಕಾಲಿಕ ಅನುವಾದ11 “ಆದರೆ ಅವರು ಕೇಳುವುದಕ್ಕೆ ನಿರಾಕರಿಸಿದರು. ಅವರು ಬೆನ್ನನ್ನು ತಿರುಗಿಸಿ, ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದ ಮಾಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ನಿಮ್ಮ ಪೂರ್ವಜರು ಕಿವಿಗೊಡದೆಹೋದರು: ಹಟಮಾರಿಗಳಾದರು; ಮಂದಮತಿಗಳಾದರು; ಅವರ ಹೃದಯ ಗೋರ್ಕಲ್ಲಿನಂತೆ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಿಮ್ಮ ಪಿತೃಗಳಾದರೋ ಗಮನಿಸಲೊಲ್ಲದೆ ಹೆಗಲುಕೊಡದೆ ಹೋದರು. ಕೇಳಬಾರದೆಂದು ಕಿವಿಮಂದ ಮಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದರೆ ಆ ಜನರು ಈ ಮಾತುಗಳನ್ನು ಕೇಳಲಿಲ್ಲ. ಆತನು ಹೇಳಿದ ಹಾಗೆ ನಡೆಯಲಿಲ್ಲ. ದೇವರು ಹೇಳುವುದು ತಮಗೆ ಕೇಳದಂತೆ ತಮ್ಮ ಕಿವಿಗಳನ್ನು ಮುಚ್ಚಿಕೊಂಡರು. ಅಧ್ಯಾಯವನ್ನು ನೋಡಿ |
ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳುಹಿಸುತ್ತಾ ಬಂದೆ. “ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ, ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ವಾಸಿಸುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ.” ಆದರೆ ನೀವು ಕೇಳಲಿಲ್ಲ. ಕಿವಿಗೊಡಲೂ ಇಲ್ಲ.
ಅವರು ನಿಮ್ಮ ಸ್ವರವನ್ನು ಕೇಳದೆಯೂ, ನೀವು ಅವರ ನಡುವೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕಮಾಡದೆ ಹೋದರು. ಅವರು ತಮ್ಮ ಹೃದಯವನ್ನು ಕಠಿಣ ಮಾಡಿಕೊಂಡು, ನಿಮಗೆ ಎದುರುಬಿದ್ದು, ತಮ್ಮ ದಾಸತ್ವಕ್ಕೆ ತಿರುಗಿ ಹೋಗುವಹಾಗೆ ನಾಯಕನನ್ನು ನೇಮಿಸಿಕೊಂಡರು. ಆದರೆ ನೀವು ಮನ್ನಿಸುವ ದೇವರಾಗಿಯೂ, ಕೃಪಾಪೂರ್ಣರೂ, ಅನುಕಂಪವುಳ್ಳವರೂ, ದೀರ್ಘಶಾಂತರೂ, ಪ್ರೀತಿಯಲ್ಲಿ ಸಮೃದ್ಧರೂ ಆಗಿರುವುದರಿಂದ ಅವರನ್ನು ಕೈಬಿಡಲಿಲ್ಲ.